ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ ಹಡಪದ. ಖಜಾಂಚಿಯಾಗಿ ಕೊಪ್ಪಳದ ಮಂಹಪ್ಪ ಹಡಪದ, ಕಾನೂನು ಸಲಹೆಗಾರರಾಗಿ ಹಾವೇರಿಯ ನಾಗರಾಜ ಕಾಯಕದ್ ಆಯ್ಕೆಯಾಗಿದ್ದಾರೆ. ಇವತ್ತು ಹಾವೇರಿಯ ಗುರುಭವನದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ತಂಗಡಗಿಯ ಅನ್ನದಾನಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಮಾಜದ ಅಧ್ಯಕ್ಷರು ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ ಎತ್ತುವಳಿ ದಂಧೆಯಂತೆ. ಪ್ರಿಯ ಓದುಗರೇ, ನೀವಂದುಕೊಂಡಂತೆ ಅರಣ್ಯ ಉತ್ಪನ್ನಗಳ ತಪಾಸಣೆಗಾಗೇ ಇರೋ ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಯಾವ ಉತ್ಪನ್ನಗಳ ತಪಾಸಣೆಯೂ ನಡಿಯಲ್ಲ. ಇಲ್ಲಿನ ಸಿಬ್ಬಂದಿಗಳು ನಿತ್ಯವೂ ಚಾಚೂ ತಪ್ಪದೇ ಕೆಲಸ ನಿರ್ವಹಿಸ್ತಾರೆ ನಿಜ, ಆದ್ರೆ, ಇವ್ರ ಕೆಲಸವೇ ಬೇರೆ, ಇವರ ಕೆಲಸದ ಸ್ಟೈಲೇ ಬೇರೆ. ಯಾಕಂದ್ರೆ ಇಲ್ಲಿ ನಿತ್ಯವೂ ಗರಿ ಗರಿ ನೋಟುಗಳು ಕುಣಿದಾಡುತ್ತವೆ.. ಅದೇಂತದ್ದೇ ವಾಹನ ಬರಲಿ, ಆ ವಾಹನದಲ್ಲಿ...
ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 8 ಮತ್ತು 9ರಂದು ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು ಭಾಗವಹಿಸೋದು ಅವರ ಸಹಬಾಳ್ವೆಗೆ ಸಾಕ್ಷಿಯಾಗಿದೆ.
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.!
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಲೋಸಾರ್ ಹಬ್ಬದ ಸಂಭ್ರಮದಲ್ಲಿ ಕ್ಯಾಂಪ್ ನಂಬರ್ 3 ರ ಮೈದಾನದಲ್ಲಿ ವಿಶೇಷ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಟಿಬೇಟಿಯನ್ನರ ತಂಡಗಳ ನಡುವೆ ವಿವಿಧ ಸ್ಪರ್ಧೆಗಳು ಏರ್ಪಟ್ಟವು.. ಇಂದು ಟಿಬೇಟಿಯನ್ ಮಹಿಳೆಯರಿಗೆಂದೇ ವಿಶೇಷ ಹಗ್ಗ ಜಗ್ಗಾಟದ ಸ್ಪರ್ದೆ ನಿಜಕ್ಕೂ ರೋಮಾಂಚಕ ಅನುಭವ ನೀಡಿತು.. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಹಗ್ಗಜಗ್ಗಾಟದ ರಣರೋಚಕ ಸ್ಪರ್ಧೆಯನ್ನ ನೋಡಿ ಸಂಭ್ರಮಿಸಿದ್ರು. ಗೆದ್ದ ತಂಡಗಳಿಗೆ ಆಕರ್ಶಕ ಬಹುಮಾನ ವಿತರಿಸಲಾಯಿತು..
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು ಕಾಣಿಸಿತು. ಆಗ ವಾಹನವನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಅದರಲ್ಲಿದ್ದ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಬಳೂರು, ಚಾಲಕ ಕೆಂಚೇಶ್ ಅವರು ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಕಿಮ್ಸ್ ಗೆ ದಾಖಲಿಸಲಾಗಿದೆ.