ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ ಅಷ್ಪಕ್ ಬೇಲಿಯನ್ನು ಮುಟ್ಟಿದ್ದಾನೆ. ಈ ವೇಳೆ ತಕ್ಷಣವೇ ಆತನಿಗೆ ವಿದ್ಯುತ್ ಪ್ರವಹಿಸಿ ವಿಲ ವಿಲ ಒದ್ದಾಡಿದ್ದಾನೆ‌. ಅದನ್ನ ಕಂಡು ಅವನ ಜೊತೆಗೆ ಇದ್ದ ಮತ್ತೊಬ್ಬ ಬಾಲಕ ಆತನನ್ನು ಮುಟ್ಟಿದ್ದಾನೆ. ಹೀಗಾಗಿ ಆತನಿಗೂ ವಿದ್ಯುತ್ ಪ್ರವಹಿಸಿದೆ. ಅಷ್ಟೊತ್ತಿಗಾಗಲೇ ಇದನ್ನೇಲ್ಲ ಗಮನಿಸಿದ ಜನ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹೀಗಾಗಿ, ಮತ್ತೊರ್ವ ಬಾಲಕ ಬಚಾವ್ ಆಗಿದ್ದಾನೆ. ಅಷ್ಟೊತ್ತಿಗಾಗಲೇ ಅಷ್ಪಕ್ ಎನ್ನುವ ಬಾಲಕನಿಗೆ ವಿದ್ಯುತ್ ಪ್ರವಹಿಸಿ ಸಂಪೂರ್ಣ...

ಸನವಳ್ಳಿಯಲ್ಲಿ ಗದ್ದೆಯ ಬೇಲಿಗೆ ಕೊಂಬು ಸಿಲುಕಿಸಿಕೊಂಡು ಅಪಾಯದಲ್ಲಿದ್ದ ಜಿಂಕೆಯ ರಕ್ಷಣೆ..!

ಸನವಳ್ಳಿಯಲ್ಲಿ ಗದ್ದೆಯ ಬೇಲಿಗೆ ಕೊಂಬು ಸಿಲುಕಿಸಿಕೊಂಡು ಅಪಾಯದಲ್ಲಿದ್ದ ಜಿಂಕೆಯ ರಕ್ಷಣೆ..!

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಗದ್ದೆಯಲ್ಲಿ ಬೇಲಿಗೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಗಂಡು ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಸನವಳ್ಳಿ ಗ್ರಾಮದ ರೈತ ಕೃಷ್ಣಪ್ಪ ಎಲಿವಾಳ ಎಂಬುವವರ ಜಮೀನಿನ‌ ಬೇಲಿಗೆ ಜಿಂಕೆ ತನ್ನ ಕೊಂಬು ಸಿಲುಕಿಸಿಕೊಂಡು ಜೀವ ಕಳೆದುಕೊಳ್ಳುವ ಅಪಾಯದಲ್ಲಿತ್ತು. ಹೀಗಾಗಿ, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ರಕ್ಷಕ ಶ್ರೀಧರ್ ಭಜಂತ್ರಿ ಸ್ಥಳಕ್ಕೆ ಆಗಮಿಸಿ ಅಪಾಯದಲ್ಲಿದ್ದ ಗಂಡು ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬೇಲಿಯಿಂದ ಕೊಂಬು ಬಿಡಿಸಿದ ತಕ್ಷಣವೇ ಬದುಕಿದೆಯಾ ಬಡಜೀವ ಅಂತಾ ಜಿಂಕೆ ಅಲ್ಲಿಂದ ಕಾಡಿನೊಳಕ್ಕೆ ಕಾಲ್ಕಿತ್ತಿದೆ. ಜಿಂಕೆಯ ರಕ್ಷಣಾ ಕಾರ್ಯದಲ್ಲಿ ಅರಣ್ಯ ರಕ್ಷಕ ಶ್ರೀಧರ ಭಜಂತ್ರಿಯವರಿಗೆ, ಅರಣ್ಯ ರಕ್ಷಕರುಗಳಾದ ರಾಜು ಪರೀಟ, ಸಾಗರ ಕೊಣ್ಣೂರ, ಅರಣ್ಯ ವೀಕ್ಷಕ ರುದ್ರಪ್ಪ ಸಹಾಯ ಮಾಡಿದ್ದಾರೆ.

ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?

ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?

ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆ‌ಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ‌ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..! ಹೀಗಾಗಿನೇ, ನಿನ್ನೆಯಿಂದ ದಲಿತ ಸಂಘಟನೆ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಎದುರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಮಾಡಬೇಕಾಯ್ತಾ..? ಸಹಜ ತಾನೇ..? ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಹುದ್ದೆ ಪಡೆದಿರೋ ಆರೋಪ ಕೇಳಿ ಬಂದ ಹಿನ್ನೆಲೆ, ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಅವ್ರನ್ನ ಬಂಧಿಸಲು ಬಂದಿದ್ರು. ಆ ಹೊತ್ತಲ್ಲಿ ಇಡೀ ತಾಲೂಕಿನ...

ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್ ಮಾಹಿತಿ ಕೇಳಿದ್ದ ಜೆ.ಪಿ. ನಡ್ಡಾ ಕಚೇರಿಗೆ ರಾಜ್ಯ ಬಿಜೆಪಿ ಸಂಪೂರ್ಣ ವರದಿ ರವಾನಿಸಿದೆ. ಹೀಗಾಗಿ, ಇಂದು ಸಂಜೆಯಷ್ಟೊತ್ತಿಗೆ ಸಚಿವ ಈಶ್ವರಪ್ಪರ ತಲೆದಂಡವಾಗೋದು ಬಹುತೇಕ ಖಚಿತ ಅನ್ನೋ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮೈಸೂರಿನಲ್ಲಿರೋ ಸಚಿವ ಈಶ್ವರಪ್ಪಗೆ ಸಿಎಂ ದೂರವಾಣಿ ಕರೆ ಮಾಡಿ ಬೆಂಗಳೂರಿಗೆ ಬರಲು ತಿಳಿಸಿದ್ದಾರೆ ಎನ್ನಲಾಗಿದೆ‌. ಮಂಗಳೂರು ಪ್ರವಾಸದಲ್ಲಿರೋ ಸಿಎಂ ಬಸವರಾಜ್ ಬೊಮ್ಮಾಯಿ ಮದ್ಯಾಹ್ನದ ಹೊತ್ತಿಗೆ ಬೆಂಗಳೂರು ತಲುಪೊ ಸಾಧ್ಯತೆಯಿದ್ದು, ಈಶ್ವರಪ್ಪ ಜೊತೆ...

ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!

ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ‌. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂಡಗೋಡ ತಾಲೂಕಿ‌ನ ಹಲವೆಡೆ ಆಲಿಕಲ್ಲು, ಗಾಳಿ ಸಮೇತ ಭಾರೀ ಮಳೆ..!

ಮುಂಡಗೋಡ ತಾಲೂಕಿ‌ನ ಹಲವೆಡೆ ಆಲಿಕಲ್ಲು, ಗಾಳಿ ಸಮೇತ ಭಾರೀ ಮಳೆ..!

ಮುಂಡಗೋಡ: ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ಮತ್ತೆ ತಂಪೆರೆದಿದ್ದಾನೆ. ಮಳೆಯ ದೃಷ್ಯ ಕ್ಯಾಮೆರಾ ಕಣ್ಣಲ್ಲಿ.. ಅಲಿಕಲ್ಲು ಮಳೆ..! ಅಂದಹಾಗೆ, ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ನಂತರ ಧಾರಾಕಾರ ಆಲಿಕಲ್ಲು ಬಿದ್ದಿವೆ. ಪರಿಣಾಮ ತಾಲೂಕಿನ ಮಾವು ಬೆಳೆಗಾರರಿಗೆ ತೀವ್ರ ಸಂಕಷ್ಟ ಎದುರಾದಂತೆ ಆಗಿದೆ‌. ಇನ್ನು ಭಾರೀ ಗಾಳಿ, ಮಳೆಯ ಕಾರಣಕ್ಕೆ ತಾಲೂಕಿನಾಧ್ಯಂತ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಎಲ್ಲೆಲ್ಲಿ ಮಳೆ ಅರ್ಭಟ..? ಮುಂಡಗೋಡ ಪಟ್ಟಣ, ಬಾಚಣಕಿ, ಅರಶಿಣಗೇರಿ, ಕೊಪ್ಪ ಇಂದೂರು, ನಂದಿಕಟ್ಟಾ, ಟಿಬೇಟಿಯನ್ ಕಾಲೋನಿ ಸೇರಿದಂತೆ ಹಲವೆಡೆ ಆಲಿಕಲ್ಲು ಸಮೇತ ಮಳೆಯಾಗಿದೆ.

ಕಾತೂರು ಬಳಿ ಉರುಳಿಗೆ ಸಿಕ್ಕು ಒದ್ದಾಡುತ್ತಿದ್ದ ಕರಡಿ, ಜೀವದ ಹಂಗು ತೊರೆದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ಕಾತೂರು ಬಳಿ ಉರುಳಿಗೆ ಸಿಕ್ಕು ಒದ್ದಾಡುತ್ತಿದ್ದ ಕರಡಿ, ಜೀವದ ಹಂಗು ತೊರೆದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ಮುಂಡಗೋಡ: ತಾಲೂಕಿನ ಕಾತೂರ ವಲಯದ, ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ಉರುಳಿಗೆ ಸಿಕ್ಕು ಬಿದ್ದಿದ್ದ ಕರಡಿಯನ್ನು ಅರಣ್ಯ ಸಿಬ್ಬಂದಿಗಳು ಜೀವದ ಹಂಗು ತೊರೆದು ರಕ್ಷಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಉರುಳಿಗೆ ಸಿಕ್ಕು ಪ್ರಾಣ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ಕರಡಿಯನ್ನು, ಒರಲಗಿ ಅರಣ್ಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ‌. ಹೀಗಾಗಿ, ಪಶುವೈದ್ಯ ಜಯಚಂದ್ರ ಹಾಗೂ ಅರಣ್ಯ ರಕ್ಷಕ ಶ್ರೀಧರ ಭಜoತ್ರಿ ಅವರನ್ನು ಕರೆಸಿ, ಕರಡಿಗೆ ಅರಿವಳಿಕೆ ಮದ್ದು ನೀಡಿ ಕರಡಿಯನ್ನು ಬಚಾವ್ ಮಾಡಲಾಗಿದೆ‌. ಅಂದಹಾಗೆ, ಕರಡಿಗೆ ಎಚ್ಚರವಾಗುವ ಮುನ್ನವೇ ರಕ್ಷಿಸುವ ಕೆಲಸ ಮಾಡಿ ಸುರಕ್ಷಿತವಾಗಿ ಅರಣ್ಯಕ್ಕೆ ತೆರಳುವಂತೆ ವ್ಯವಸ್ಥೆ ಮಾಡಿದ್ದಾರೆ. ಈ ವೇಳೆ ಮುಂಡಗೋಡ ಎಸಿಎಫ್ ಎಸ್.ಎಂ. ವಾಲಿ ಹಾಗೂ ಆರ್ ಎಫ್ ಓ ಅಜಯ್ ನಾಯ್ಕ್ ಮಾರ್ಗದರ್ಶನದಲ್ಲಿ , ಅರಣ್ಯ ಅಧಿಕಾರಿಗಳಾದ ಶಿವಪ್ಪ ಹಾಗೂ ಪಾಳ ಶಾಖೆಯ ಉಪವಲಯ ಅರಣ್ಯಾಧಿಕಾರಿ ಚಂದ್ರಕಾಂತ M, ಅರಣ್ಯ ರಕ್ಷಕ ಮಂಜುನಾಥ್ D, ವಾಹನ ಚಾಲಕ ಕೃಷ್ಣ ಹಾಗೂ ಪಾಳ...

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ ರವೀಂದರ್ ದಾದಾಸಾಹೇಬ್ ಕದಮ್ (40) ಸ್ಥಿತಿ ಗಂಭೀರವಾಗಿದ್ದು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 108 ತಂತ್ರಜ್ಞ ಧನರಾಜ್ ಹಾಗೂ ಚಾಲಕ ಕೆಂಚೇಶ್ ಗಾಯಾಳುಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರೀಶಿಲಿಸಿದ್ದಾರೆ..

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸೇವೆ ಸಲ್ಲಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಅಲ್ದೆ ಈ ಕುರಿತು ಈಗಾಗಲೇ ಅವ್ರನ್ನ ಬಂಧಿಸಲು ಪೊಲೀಸರು ಬಂದಿದ್ರು. ಆದ್ರೆ ಆ ಹೊತ್ತಲ್ಲಿ ಮನೆಯಿಂದ ಹೊರಗೆ ಬರದೆ, ಒಳಗೇ ಕುಳಿತು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ರು. ಹೀಗಾಗಿ, ಬಂಧನದಿಂದ ಬಚಾವ್ ಆಗಿದ್ದಾರೆ. ಕಳೆದ 3 ವರ್ಷಗಳಿಂದ ಮುಂಡಗೋಡ ತಾಲೂಕಾ ದಂಡಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರೊ ಅವರ ಮೇಲೆ ಫೆ.12ರಂದು ಯಲಬುರ್ಗಾ ಪೊಲೀಸ್...

ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು‌. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ ನೆಲಸಿ ತಂಪಾದ ವಾತಾವರಣ ನಿರ್ಮಾಣವಾಗಲಿದೆ ಅನ್ನೋದು ತಾತ್ಪರ್ಯ‌. ಇದೊಂದು ನಂಬಿಕೆ‌‌..! ಅಂದಹಾಗೆ, ಸಾವಿರಾರು ಜನರ ನಡುವೆ ಬಿಲ್ಲನ್ನೇರಿ ಆಕಾಶದತ್ತ ದೃಷ್ಟಿ ನೆಟ್ಟು, ಕಾರಣೀಕ ನುಡಿಯುವ ವೃತಾಧಾರಿ ಗೊರವಪ್ಪ, ಕಾರಣೀಕ ನುಡಿದ ನಂತರ ಬಿಲ್ಲಿನಿಂದಲೇ ಕೆಳಗಡೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಜಾರಿ ಬೀಳುತ್ತಾರೆ. ಅಲ್ಲದೇ ಮೈಲಾರಲಿಂಗಸ್ವಾಮಿಯ ಕಾರಣೀಕ ನುಡಿ ಕೇಳಲು ಭಕ್ತರು ಕಾತರಿಸುತ್ತಾರೆ. ಯಾಕಂದ್ರೆ, ರೈತರಿಗೆ ಮೈಲಾರಲಿಂಗನ ಕಾರಣೀಕ ನುಡಿಗಳು ಪ್ರಸಕ್ತ ವರ್ಷದ ಕೃಷಿಯ ಆಗು...

error: Content is protected !!