ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಪ್ರೌಢಶಾಲೆಯ ಬಳಿ ಮೇವಿನ ಬಣಿವೆಗೆ ಬೆಂಕಿ ತಗುಲಿದೆ. ಮದ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಇಂದೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಯ್ಕರ್ ರವರಿಗೆ ಸೇರಿದ ಮೇವಿನ ಬಣವಿ ಇದಾಗಿದ್ದು, ಜಾನುವಾರುಗಳ ಪಾಲನೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಕರಿಗೆ ಭಾರೀ ನಷ್ಟವಾಗಿದೆ. ಮದ್ಯಾಹ್ನದ ಸಮಯದಲ್ಲಿ ಬೆಂಕಿಯು ಕೆನ್ನಾಲಿಗೆ ಚಾಚಿದ್ದು, ಅಕ್ಕಪಕ್ಕದ ಮನೆಗಳಿಗೂ ಹರಡುವ ಸಾಧ್ಯತೆ ಇತ್ತು, ಆದ್ರೆ ಅದೃಷ್ಟವಶಾತ್ ಬೆಂಕಿ ಹತೋಟಿಗೆ ತರುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆ.
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್ ಎಂಬುವ ಪ್ರಿಯಕರನ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಆದ್ರೆ, ಇವತ್ತು ಶವ ದೊರೆತ ಹಿನ್ನೆಲೆಯಲ್ಲಿ ಪ್ರೇಮಿಗಳ ಆತ್ಮಹತ್ಯೆ ಖಾತ್ರಿಯಾದಂತಾಗಿದೆ. ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ ಶೋಧ ನಡೆಸಲಾಗಿತ್ತು. ನಿನ್ನೆಯಿಂದಲೂ ವಿದ್ಯಾರ್ಥಿಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು.
“ಹರ್ಷನ ಹತ್ಯೆ” ಮುಂಡಗೋಡಿನಲ್ಲಿ ಮೇಣದ ಬತ್ತಿ ಬೆಳಗಿಸಿ ಹಿಂದುಗಳಿಂದ ಶೃದ್ಧಾಂಜಲಿ..!
ಮುಂಡಗೋಡ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದು ಯುವಕ, ಭಜರಂಗದಳ ಕಾರ್ಯಕರ್ತ ಹರ್ಷ ಸಾವಿಗೆ ಮುಂಡಗೋಡಿನ ಹಿಂದುಪರ ಸಂಘಟನೆಗಳು ತೀವ್ರ ಸಂತಾಪ ಸೂಚಿಸಿವೆ. ಪಟ್ಟಣದ ಶಿವಾಜಿ ವೃತ್ತದಲ್ಲಿ ಮಂಗಳವಾರ ಸಂಜೆ ಹರ್ಷ ಭಾವಚಿತ್ರಕ್ಕೆ ವಿಶೇಷ ಗೌರವ ಸಲ್ಲಿಸಿದ್ರು. ಮೇಣದ ಬತ್ತಿ ಬೆಳಗಿಸಿ ಶೃದ್ಧಾಂಜಲಿ ಅರ್ಪಿಸಿದ್ರು. ಹಿಂದು ಕಾರ್ಯಕರ್ತನಿಗೆ ಚಿರಶಾಂತಿ ಸಿಗಲಿ ಅಂತಾ ಮೌನಾಚರಣೆ ಮಾಡಿದ್ರು. ಶೀಘ್ರವೇ ಹತ್ಯೆಯ ಆರೋಪಿಗಳನ್ನು ಹೆಡೆಮುರಿ ಕಟ್ಟುವಂತೆ ಸರ್ಕಾರಕ್ಕೆ ಆಗ್ರಹಿಸಿದ್ರು. ಮತ್ತೊಮ್ಮೆ ಹುಟ್ಟಿ ಬಾ “ಹಿಂದು ಕಂದ” ಅಂತಾ ಹಾರೈಸಿದ್ರು. ಈ ವೇಳೆ ಮುಂಡಗೋಡಿನ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ರು.
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ ಶೋಧ ನಡೆಸಲಾಗಿತ್ತು. ನಿನ್ನೆಯಿಂದಲೂ ವಿದ್ಯಾರ್ಥಿಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಈಜು ತಜ್ಞರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದ್ರೆ ಇದುವರೆಗೂ ಆ ವಿದ್ಯಾರ್ಥಿ ಏನಾದ ಅನ್ನೊ ಯಾವುದೇ ಸುಳಿವು ಇನ್ನೂ ಪತ್ತೆಯಾಗಿಲ್ಲ.
ಹರ್ಷ ಕೊಲೆಯ ಕಿಚ್ಚು..! ಮುಂಡಗೋಡಿನಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಶ್ರೀರಾಮ ಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ಬೀದಿಗಿಳಿದಿದ್ದವು. ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೀತು. ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಕೈಗೊಂಡ ಹಿಂದು ಕಾರ್ಯಕರ್ತರು ಶೀಘ್ರವೇ ಹಿಂದು ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳನ್ನ ಬಂಧಿಸಿ, ಅವ್ರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಂತಾ ಅಗ್ರಹಿಸಿದ್ರು. ಈ ವೇಳೆ ನೂರಾರು ಸಂಖ್ಯೆಯ ಹಿಂದು ಕಾರ್ಯಕರ್ತರು ಭಾಗಿಯಾಗಿದ್ರು. ಪ್ರತಿಭಟನೆಗೆ ಗೋ ಮಾತೆ ಸಾಥ್..! ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗೋಮಾತೆಯೊಂದು ಪ್ರತಿಭಟನಾ ಸ್ಥಳಕ್ಕೆ ಬಂದು ನಿರ್ಭಿಡೆಯಿಂದ ಪ್ರತಿಭಟನೆಗೆ ಸಾಥ್ ನೀಡಿತು. ಇದನ್ನು ಕಂಡ ಹಿಂದು ಕಾರ್ಯಕರ್ತರು ಸಂತಸಗೊಂಡರು.
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?
ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ ಬೀಳುವಂತೆ ಮಾಡಿದೆ. ಅಷ್ಟಕ್ಕೂ ಬಾಚಣಕಿ ಜಲಾಶಯದ ಅಂಗಳದಲ್ಲಿ ಮಟ ಮಟ ಮದ್ಯಾಹ್ನ ಹಾಗೆ ಶವವಾಗಿ ಸಿಕ್ಕವಳ ಜೊತೆ ಪ್ರೇಮ್ ಕಹಾನಿಯಿತ್ತಾ..? ಅಷ್ಟಕ್ಕೂ ಜೊತೆಗೇ ಆ ಹುಡುಗನೂ ಬಲಿಯಾಗಿದ್ದಾನಾ..? ಇದೇಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಬಹುಶಃ ಹುಡುಗನ ಶವ ಪತ್ತೆಯಾದ ಮೇಲೆಯೇ ಉತ್ತರ ಸಿಗಬಹುದೆನೋ..? ಹಾಗಾದ್ರೆ ಪ್ರೀತಿಗೆ ಬಲಿಯಾಯ್ತಾ ಜೋಡಿ..? ಅವ್ರದ್ದು ಮೂರು ವರ್ಷದ ಪ್ರೀತಿಯಂತೆ..? ಅಂದಹಾಗೆ, ಇವತ್ತು ಬಾಚಣಕಿ ಜಲಾಶಯದ ನೀರಿನಲ್ಲಿ ಉಸಿರು...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ. ಯುವಕನ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆದಿದೆ. ಅಂದಹಾಗೆ ಹುಡುಗ ಮುಂಡಗೋಡ ತಾಲೂಕಿನ ಹನುಮಾಪುರದವನು ಅಂತಾ ಹೇಳಲಾಗಿದೆ.
ಮುಂಡಗೋಡಿನ ಅಮ್ಮಾಜಿ ಕೆರೆ ಮೇಲೆ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಯ್ಯ ಜಂಬಯ್ಯನವರ್ (45) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಾಲೂಕಿನಲ್ಲಿ ಕುದುರೆ ಕಳ್ಳರ ಗ್ಯಾಂಗ್ ಆ್ಯಕ್ಟಿವ್ ಆಗಿದೆಯಾ..?
ಮುಂಡಗೋಡ: ತಾಲೂಕಿನಲ್ಲಿ ಕುದುರೆ ಕಳ್ಳರು ಬಂದಿದ್ದಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ಇಲ್ಲಿ ಎಲ್ಲಿಂದಲೋ ಬಂದು ವಾಹನ ತಂದು ಕುದುರೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಸಂಚಾರಿ ಕುರುಬರು ಎಲ್ಲೆಂದರಲ್ಲಿ ಬಿಟ್ಟು ಹೋಗುತ್ತಿರೋ ಕುದುರೆಗಳನ್ಬು ಕಳವು ಮಾಡಿಕೊಂಡು ಹೋಗುವ ಗ್ಯಾಂಗ್ ಬಂದಿದೆಯಾ ಅನ್ನೋ ಅನುಮಾನಗಳು ಶುರುವಾಗಿದೆ. ಯಾಕಂದ್ರೆ ತಾಲೂಕಿನ ಟಿಬೇಟಿಯನ್ ಕಾಲೊನಿ ಸೇರಿದಂತೆ ಎಲ್ಲೆಂದರಲ್ಲಿ ತಿರುಗಾಡುವ ಕುದುರೆಗಳನ್ನು ಕಳ್ಳರು ಹಾಡಹಗಲೆ ಎತ್ತಾಕೊಂಡು ಹೋಗ್ತಿದಾರಾ ಅನ್ನೊ ಅನುಮಾನಗಳು ಶುರುವಾಗಿದೆ. ಹೀಗಾಗಿ, ಹಾಗೆ ಕಳ್ಳರ ಕೃತ್ಯಗಳನ್ನು ಕೆಲ ಯುವಕರ ಪಡೆ ನಿಯಂತ್ರಿಸಲು ಪಣ ತೊಟ್ಟು ನಿಂತಿದೆ.
ಮುಂಡಗೋಡಿನ ನ್ಯಾಸರ್ಗಿ ಬಳಿ ಭೀಕರ ಅಪಘಾತ, ಮರಕ್ಕೆ ಡಿಕ್ಕಿ ಹೊಡೆದ ಕಾರು, ಓರ್ವ ಗಂಭೀರ..!!
ಮುಂಡಗೋಡ; ತಾಲೂಕಿನ ನ್ಯಾಸರ್ಗಿ ಬಳಿ ಭೀಕರ ಅಪಘಾತವಾಗಿದೆ. ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ನ್ಯಾಸರ್ಗಿಯ ಅನ್ವರ್ ಷಹಜಹಾನ್ ದೊಡ್ಮನಿ(26) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ನ್ಯಾಸರ್ಗಿಯಿಂದ ಮುಂಡಗೋಡಿಗೆ ಕಾರಲ್ಲಿ ಬರುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮುಂಡಗೋಡಿನ 108 ಅಂಬ್ಯಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಕಾಲಿಗೆ ಭಾರೀ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. 108 ಅಂಬ್ಯುಲೆನ್ಸ್ ನ ಧನರಾಜ್ ಹಾಗೂ ಚಾಲಕ ಕೆಂಚೇಶ್ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ರು. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.