ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

 ಶಿಕಾರಿಪುರ: ಯಡಿಯೂರಪ್ಪ ಅವರ ಮಗ ವಿಜಯೇಂದ್ರರವರು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದಾಗ ತಾಂಡಾದ ಜನರಿಂದ ಬಹಿಷ್ಕರಿಸಲಾಯಿತು, ಹಾಗೂ ತಾಂಡಾ ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಲಾಯಿತು. ಪ್ರಚಾರಕ್ಕೆಂದು ತಾಂಡಾಕ್ಕೆ ಬಂದಿದ್ದ ಬಿ.ವೈ. ವಿಜಯೇಂದ್ರರವರಿಗೆ ತಾಂಡಾದಲ್ಲಿ ಮಹಿಳೆಯರೂ ಸೇರಿದಂತೆ ಯುವಕರು ಧಿಕ್ಕಾರಗಳ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳಲ್ಲೂ ಈ ರೀತಿ ಮಾಡಿದರೆ ಮಾತ್ರ ನಮ್ಮ ಬಂಜಾರರ ಒಗ್ಗಟ್ಟು ಏನೆಂಬುದನ್ನು ಅರ್ಥೈಸಬಹುದು. ನಮ್ಮ ಏಳಿಗೆಗೆ ಮುಂದಿನ ಪೀಳಿಗೆಗೆ ಕೊಳ್ಳಿ ಇಟ್ಟ ಸರ್ಕಾರಕ್ಕೆ ಗೊತ್ತಾಗುವುದು ಅಂತಾ ಆಕ್ರೋಶ ಹೊರಹಾಕಿದ್ರು. ಒಗ್ಗಟ್ಟು ಪ್ರದರ್ಶನ ಮಾಡಿ ಪ್ರಚಾರ ಮಾಡದಂತೆ ತಡೆ ನೀಡಿದ್ರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಅಂತಾ ತಿಳಿಸಿದ್ದಾರೆ.  ಸ್ಪರ್ಧೆ ಖಚಿತ..! ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ....

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರ ಅಸ್ವಸ್ಥಗೊಂಡಿದ್ದರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರ;  ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ. ಹೀಗಾಗಿ, ಮೊದಲೇ ಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿರೋ ಜೆಡಿಎಸ್ ಇದ್ದವರಲ್ಲೇ ಒಡೆದು ಹೋಳಾಗಿದ್ದಾರೆ. ಇನ್ನು ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸಂತೋಷ ರಾಯ್ಕರ್ ಮಳಗಿ ಮುಂದಿನ ನಡೆ ಏನು ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸದ್ಯ ಘಟಪ್ರಭಾದ KHA ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಮೃತ ಯುವಕರು ಘಟಪ್ರಭಾದಲ್ಲಿ ಬಾರ್ ನಲ್ಲಿ ಕೆಲಸಕ್ಕೆಂದು ಹೋಗಿದ್ದರು ಎನ್ನಲಾಗಿದೆ. ಇಂದು ಸ್ನಾನಕ್ಕೆ ನದಿಗೆ ಇಳಿದಾಗ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್ ಬೆಂಬಲಿಗರನ್ನು ಪೊಲೀಸರು ತಡೆಯಲು ಮುಂದಾಗಿದ್ದಾರೆ. ಆದ್ರೆ, ಆಕ್ರೋಶಗೊಂಡಿರೋ ಬೆಂಬಲಿಗರು ರೆಬೆಲ್ ಶಾಸಕ ನೆಹರೂ ಓಲೇಕಾರ್ ನೇತೃತ್ವದಲ್ಲಿ ಬಿಜೆಪಿ ವಿರಿದ್ಧ ಕಿಡಿ ಕಾರಿದ್ದಾರೆ. ಹಾವೇರಿ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನಲೆ. ಬುಗಿಲೆದ್ದಿರುವ ನೇಹರು ಓಲೇಕಾರ ಅಸಮಾಧಾನಗೊಂಡಿದ್ದಾರೆ, ಅನ್ಯಾಯ ಅನ್ಯಾಯ ನೆಹರು ಓಲೇಕಾರ ಗೆ ಅನ್ಯಾಯ ಎಂದು ಘೋಷಣೆ ಕೂಗುತ್ತ, ಬೇಕೆ ಬೇಕೆ ಟಿಕೆಟ್ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ‌. ಹಿಗಾಗಿ, ಸಿಎಂ ಭಾವಚಿತ್ರಕ್ಕೆ ಚಪ್ಪಲಿ...

ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶೋಭಾ ಗೋಪಾಲ ನಾಯಕ (28) ಎಂಬಾಕೆಯೆ ಮೃತಪಟ್ಟ ದುರ್ದೈವಿಯಾಗಿದ್ದಾಳೆ, ಮೃತ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಈಕೆ ಪತಿಯ ಜೊತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಟೋ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಬದಿಗೆ ಬಂದು ಅಪಘಾತ ಪಡಿಸಿದ್ದಾನೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಮಹಿಳೆಯ ತಲೆಗೆ ಗಂಭೀರವಾಗಿ ಗಾಯಗೊಂಡು. ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಪಘಾತವಾಗಿರುವುದನ್ನ ಗಮನಿಸಿದ ಚಾಲಕ ಸ್ಥಳದಲ್ಲಿ ನಿಲ್ಲಿಸದೆ ಆಟೋದೊಂದಿಗೆ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!

ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!

 ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ‌. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ ಸರಕಾರಿ ಸರಹದ್ದಿನ ರಸ್ತೆ (ದಾರಿ) ಇದೆ. ಅಂದಹಾಗೆ, ಈ ರಸ್ತೆಯನ್ನು ಶ್ರೀಮತಿ, ಲಕ್ಷ್ಮೀಬಾಯಿ ಕೋಂ ವಾದಿರಾಜ ಶೆಟ್ಟಿ ಮತ್ತು ಅವರ ಮಗ ನರಹರಿ ವಾದಿರಾಜ ಕಟ್ಟಿ, ಎಂಬುವವರು ತಮ್ಮ ಜಮೀನಿನ ಚಾಕಾಪೂರ ಗ್ರಾಮದ ರಿ.ಸ.ನಂ: 18/1 ರಲ್ಲಿ ಪೆಟ್ರೋಲ್‌ ಬಂಕ್ ನ್ನು 2006 ರಲ್ಲಿ ಸ್ಥಾಪಿಸಿದ್ದಾರೆ. ಅದು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡಿದೆ. ಹೀಗಿರೋ ಪೆಟ್ರೋಲ್‌ ಬಂಕನ ಪಶ್ಚಿಮ ದಿಕ್ಕಿನಲ್ಲಿ, ಉತ್ತರದಿಂದ...

ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

 ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು ನನ್ನ ಜೊತೆ ಮಾತಾಡಿಲ್ಲ ಅಂದ್ರು. ಮೊದಲೇ ನಿಂಗೆ ಟಿಕೆಟ್ ಸಿಗಲ್ಲ ಅಂತಾ ಹೇಳಿದ್ದಿದ್ರೆ ನಾನು ಮನಸ್ಥತಿಯನ್ನು ಬದಲಾಯಿಸಿಕೊಳ್ತಿದ್ದೆ. ಆದ್ರೆ, ಕೊನೆ ಗಳಿಗೆವರೆಗೂ ಗುಟ್ಟು ಬಿಟ್ಟು ಕೊಡದೆ ನಂಗೆ ನೋವು ನೀಡಿದ್ರು ಅಂತಾ ಸವದಿ ಅಸಮಾಧಾನ ಹೊರ ಹಾಕಿದ್ರು.. ಬೊಮ್ಮಾಯಿ ಪಿಎಂ ಆಗ್ತಾರೆ..! ಇನ್ನು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಬೊಮ್ಮಾಯಿ ವಿರುದ್ದ ಆಕ್ರೋಶ ಹೊರಹಾಕಿದ್ದು, ಕಾಂಗ್ರೆಸ್ ಸೇರಲು ಹೊರಟಿದ್ದ ಬೊಮ್ಮಾಯಿವರನ್ನು ನಾನು,...

ಅಗಡಿಯ 10 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ, ಕಮಲ ಮುಡಿದ ಕಾಂಗ್ರೆಸ್ ಮುಖಂಡನ ಸಹೋದರ..!

ಅಗಡಿಯ 10 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ, ಕಮಲ ಮುಡಿದ ಕಾಂಗ್ರೆಸ್ ಮುಖಂಡನ ಸಹೋದರ..!

ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸುಮಾರು ಹತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಯಲ್ಲಾಪುರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್.ಟಿ. ಪಾಟೀಲ್ ಸೇರಿದಂತೆ ಸಿದ್ದಪ್ಪ ಹಡಪದ್, ವಿವೇಕ್ ಹೆಬ್ಬಾರ್ ಕಾರ್ಯಕರ್ತರಿಗೆ ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡರು. ಅಗಡಿ ಗ್ರಾಮದ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ರ ಸಹೋದರ ಸುನೀಲ್ ನಾಯ್ಕ್ ಸೇರಿದಂತೆ ಸುಮಾರು ಹತ್ತು ಜನ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ‌. ಇನ್ನು ಸಂಜು ನಾಯ್ಕ್, ಪ್ರಸನ್ನ ನಾಯ್ಕ್, ಮಾರುತಿ ವಾಲ್ಮೀಕಿ, ಶೇಖಪ್ಪ ಗಳಗಿ, ಗದಗಯ್ಯ ಹಿರೇಮಠ, ಕಲ್ಲಪ್ಪ ವಾಲ್ಮೀಕಿ, ಚನ್ನಪ್ಪ ಜಿನ್ನೂರ, ಮುತ್ತು ಕುಮ್ಮಣ್ಣಿ, ಸುಪುತ್ರಪ್ಪ ವಾಲ್ಮೀಕಿ ಬಿಜೆಪಿ ಸೇರಿದ್ದಾರೆ.

error: Content is protected !!