ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ ಇಂದೂರಿನ ಪ್ರೌಢಶಾಲೆಯಲ್ಲಿ ಮತ್ತೆ ಹೈಸ್ಕೂಲು ಶಿಕ್ಷಣ ಮುಗಿಸಿಕೊಂಡಿದ್ದಾನೆ. ಕಳೆದ ವರ್ಷ SSLC ಪರೀಕ್ಷೆಯಲ್ಲಿ ಪಾಸ್ ಆಗಿ ಇನ್ನೇನು ಕಾಲೇಜಿಗೆ ಹೋಗಲು ರೆಡಿಯಾಗಿದ್ದಾನೆ. ಆದ್ರೆ, ಸದ್ಯ SSLC ಅಂಕಪಟ್ಟಿಯಲ್ಲಿ ಈತನ ಹೆಸರೇ ಬದಲಾಗಿ ಹೋಗಿದೆ. ಮಾಂತೇಶ್ ಅಂತಾ ಇದ್ದ ಈ ವಿದ್ಯಾರ್ಥಿಯ ಹೆಸರು ಈಗ “ಮಾಲತೇಶ್” ಅಂತಾ ಬದಲಾಗಿದ್ದು, ಯಾವ ಕಾಲೇಜಿನಲ್ಲೂ ಪ್ರವೇಶಾತಿ ಸಿಗದೇ ಪರದಾಡುವಂತಾಗಿದೆ. ಮೂಲ ದಾಖಲೆಗಳೇ ಬೇರೆ..! ಅಸಲು, ಈ ವಿದ್ಯಾರ್ಥಿಯ...
Top Stories
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ ಕಾರ್ಯಕ್ರಮದಲ್ಲಿ ನಮ್ಮ ಯುವಕರು ಭಾಗಿಯಾಗಿದ್ದು ಮುಂಡಗೋಡಿಗರ ಹೆಮ್ಮೆಗೆ ಕಾರಣವಾಗಿದೆ. ಹೀಗಾಗಿ, ನಮ್ಮ ಹುಡುಗರ ಡ್ಯಾನ್ಸ್ ಕಣ್ತುಂಬಿಕೊಳ್ಳಲು ಮುಂಡಗೋಡಿಗರ ಕಾತರ ಹೆಚ್ಚಾಗಿದೆ. ಅಂದಹಾಗೆ, ಇವತ್ತು “ಚೆಲ್ಲಿದರು ಮಲ್ಲಿಗೆಯಾ” ಗೀತೆಗೆ ಹೆಜ್ಜೆ ಹಾಕಲಿದ್ದಾರೆ ನಮ್ಮ ಮಾಸ್ ಹುಡುಗರು. ನೀವೂ ತಪ್ಪದೇ ನೋಡ್ತಿರಾ ಅಲ್ವಾ..?
ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್ ದುಂಡಸಿ , ಸೋನು ವರಕ, ಮುನೀರ್ ಮಖಾನ್ ಪಠಾಣ, ಪರಶುರಾಮ ಉಪ್ಪಾರ, ಸುನಿಲ್ ವೆರ್ಣೇಕರ, ಆರ್. ಆರ್. ವಾಲ್ಮೀಕಿ, ಮಂಜಣ್ಣ ಮುತಗಿ, ಬಸಣ್ಣ ಗರಗದ, ಎಲ್ಲಾ ಸಹಕಾರ ಸಂಘದ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತ ಬಾಂಧವರು ಉಪಸ್ಥಿತರಿದ್ದರು.
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ. ಈ ಕಾರಣಕ್ಕಾಗಿ ಅದೇಷ್ಟೋ ಬಾರಿ ವಿದ್ಯಾರ್ಥಿಗಳು ಶಾಲೆ ಬಿಟ್ಟು ಮನೆಯಲ್ಲಿಯೇ ಕುಳಿತುಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ, ಈ ಸಮಸ್ಯೆಯ ಕುರಿತು ಹಲವು ಬಾರಿ ಯಲ್ಲಾಪುರ ಡೀಪೋ ಮ್ಯಾನೇಜರ್ ಗಮನಕ್ಕೆ ತರಲಾಗಿದೆ. ಅಲ್ಲದೇ, ಅಧ್ಯಕ್ಷ ವಿ.ಎಸ್.ಪಾಟೀಲರಿಗೂ ಮನವಿ ನೀಡಲಾಗಿದೆ. ಆದ್ರೆ, ಇದ್ತಾವುದಕ್ಕೂ ಅವರು ಕ್ಯಾರೇ ಅಂದಿಲ್ಲ. ಹೀಗಾಗಿ, ಸದ್ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆ. ಬಸ್ ತಡೆದು ಪ್ರತಿಭಟಿಸಿದ್ದಾರೆ. ಅಧಿಕಾರಿ ಭೇಟಿ..! ಇನ್ನು, ಬಸ್...
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ ಚೂರು ಹಾಕಿದ್ರೂ ಇಡೀ ಕೊಪ್ಪರಿಗೆ ಹಾಲೇ ಕೆಟ್ಟು ಹೋಗತ್ತೆ ಹೀಗಾಗಿ, ನಮ್ಮ ಪಕ್ಷದ ಹಾಲಿಗೆ ಉಪ್ಪು ಬೆರೆಸೋರು ನಮಗೆ ಬೇಕಾಗಿಲ್ಲ, ಪಕ್ಷದ ಸಂಘಟನೆ ದೃಷ್ಟಿಯಿಂದ ನಮಗೆ ಅಂತಹ ಕಾರ್ಯಕರ್ತರು, ಮುಖಂಡರು ಬೇಡವೇ ಬೇಡ. ನಾವೇಲ್ಲರೂ ಎಲ್ಲವನ್ನೂ ನಿಭಾಯಿಸಿಕೊಳ್ಳುತ್ತೇವೆ ಅಂತಾ ರವಿಗೌಡ ಪಾಟೀಲ್ ಖಡಕ್ಕಾಗಿ ನುಡಿದ್ರು. ಇದಕ್ಕೂ ಮುನ್ನ ಮಾತನಾಡಿದ, ಸಿದ್ದಪ್ಪ ಹಡಪದ, ಪಕ್ಷಕ್ಕಾಗಿ ದುಡಿದವರ ಬಗ್ಗೆ ಹಿರಿಯರು ಯೋಚಿಸಬೇಕಿದೆ. ಕಿವಿ ಕಚ್ಚುವವರನ್ನು...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ ಅದರದ್ದೇ ಆದ ಸಿದ್ಧಾಂತಗಳಿವೆ. ಆ ಸಿದ್ಧಾಂತಗಳನ್ನು ಒಪ್ಪಿ ಕೋಟ್ಯಾಂತರ ಜನ ಕಾರ್ಯಕರ್ತರು ಆಯಾ ಪಕ್ಷಗಳ ಜೊತೆಗೆ ಬೆನ್ನೆಲುಬಾಗಿ ನಿಂತಿರ್ತಾರೆ. ಅದು ಅವರವರ ಸಿದ್ಧಾಂತಗಳು, ಅವರವರ, ಆಯ್ಕೆ.. ಆದ್ರೆ, ಯಾವುದೋ ಒಂದು ವಿಭಿನ್ನ ನಿಲುವಿನ, ವಿಶಿಷ್ಟ ಸಂಪ್ರದಾಯಗಳ, ವಿಶೇಷ ಕಾಳಜಿ ಇರುವ ಸಂಘಟನೆಯೊಂದರ ಅಧ್ಯಕ್ಷರಾಗಿದ್ದು ಮತ್ಯಾವುದೋ ಪಕ್ಷದ ಜೊತೆ ಜೋತು ಬೀಳೋದು ಸರಿನಾ..? ಈ ಪ್ರಶ್ನೆ ಸದ್ಯ ಮುಂಡಗೋಡಿನ ಪ್ರಜ್ಞಾವಂತ ಸಾಹಿತ್ಯಾಭಿಮಾನಿಗಳದ್ದು. ಅವ್ರು ಸಹದೇಪ್ಪ...
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ. ರಸ್ತೆಯೋ ಕೆರೆಯೋ..? ಅಸಲು, ಇಂದು ಸಂಜೆ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ. ಹೀಗಾಗಿ, ಇದೇನು ರಸ್ತೆಯೋ ಕೆರೆಯೋ ಎಂಬ ಅನುಮಾನದಲ್ಲೇ ವಾಹನ ಸವಾರರು ಪರದಾಡುವಂತಾಗಿದೆ. ಹೀಗಾಗಿ, ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕ್ತಿದಾರೆ ಇಲ್ಲಿನ ಜನ.. ಅವೈಜ್ಞಾನಿಕ ಕಾಲುವೆ..! ಅಸಲು,...
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಮಲುಗಿದ್ದಾಗ ಗುಡ್ಡ ಕುಸಿದು ನಾಲ್ವರು ಮನೆಯ ಅಡಿಯಲ್ಲ ಸಿಲುಕಿದ್ದರು, ಹೀಗಾಗಿ, ಸದ್ಯ ಇಬ್ಬರ ಶವವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಗಿದ್ದಾರೆ. ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿತ ವಾಗಿತ್ತು. ಲಕ್ಷ್ಮೀ ನಾಯ್ಕ, ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ, ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಗುಡ್ಡ ಕುಸಿತದಿಂದ ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಮಹಿಳೆ, ಓರ್ವ ಪುರುಷನ ಶವ ಹೊರತೆಗೆಯಲಾಗಿದೆ.