ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!

ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!

Leopard Attack; ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್​ ಹೂವಣ್ಣ ಗೌಡ (24) ಎಂಬುವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್​ ಗೌಡ ಕೂಡ ಮನೆಯಿಂದ ಹೊರಬಂದಿದ್ದು, ಚಿರತೆ ದಾಳಿ ಮಾಡಿ ಓಡಿ ಹೆದರಿ ಓಡಿ ಹೋಗಿದೆ. ಸಂತೋಷ್ ಅವರ ಎರಡೂ ಕೈಗಳಿಗೆ ಪರಚಿದ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪಿಐ ಚಂದ್ರಶೇಖರ್​ ಮಠಪತಿ ಮತ್ತು ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!

ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!

Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರೋದ್ರಿಂದ ಸಂಚಾರಕ್ಕೆ ಕಿರಿಕಿರಿ ಆಗಿದೆ. ಇನ್ನು, ಗುಡ್ಡ ಕುಸಿತವಾಗಿ ರಸ್ತೆ ಮೇಲೆ ಬಿದ್ದಿರೊ ಮಣ್ಣು, ಕಲ್ಲು ತೆರವು ಕಾರ್ಯ ನಡೆದಿದೆ. ಆದ್ರೆ, ಶಿರಸಿ ತಾಲೂಕಿನ ಭಾಗದಲ್ಲಿ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗಿಲ್ಲ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ☝ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತದ ತೆರವು ಕಾರ್ಯ ಇದನ್ನೂ ಓದಿ👉 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ...

60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!

60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!

 Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60 ವಯಸ್ಸಿನ ಅಂಗವಿಕಲ ವೃದ್ದೆಯನ್ನು ಕಾಡಿನ ಪ್ರದೇಶಕ್ಕೆ ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದ. ವಿಷಯ ತಿಳಿದ ಸ್ಥಳೀಯರು ಅತ್ಯಾಚಾರಕ್ಕೊಳಗಾದ ವೃದ್ಧೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅತ್ಮಾಚಾರ ಮಾಡಿದ ಆರೋಪಿಯ ಭಾವಚಿತ್ರವನ್ನು ಪೊಲೀಸ್ರು ತೋರಿಸಿದಾಗ ಆರೋಪಿಯನ್ನು ಸಂತ್ತಸ್ಥ ವೃದ್ದೆ ಗುರುತಿಸಿದ್ದಾರೆ. ಹೀಗಾಗಿ, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ರು, ಕಳೆದ ಎರಡು ದಿನಗಳಿಂದ ಆರೋಪಿಗಾಗಿ ಬಲೆ ಬೀಸಿದ್ದರು. ಕುಳಗಿ ಅರಣ್ಯ ಪ್ರದೇಶದಲ್ಲಿ ಪಿಎಸ್ಐ ಕಿರಣ್ ಪಾಟೀಲ್...

ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!

ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!

Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕ,...

ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!

ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!

Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ‌ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ‌(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ‌, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ ಗೀತಾ,‌ ಸಿಪಿಐ ಶಶಿಕಾಂತ ವರ್ಮ ಮಾರ್ಗದರ್ಶನದಲ್ಲಿ, ಪಿಎಸ್ ಐ ನಾಗಪ್ಪ ‌ಬಿ. ಹನುಮಂತ ಕಬಾಡಿ ಹಾಗೂ ಸಿಬ್ಬಂದಿಗಳು ಗಾಂಜಾ ಆರೋಪಿಗಳನ್ನು ‌ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು ಜಾಗತಿಕ ರಾಜಕೀಯ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಮಧ್ಯಪ್ರಾಚ್ಯದಲ್ಲಿ ಎರಡು ಶಕ್ತಿಶಾಲಿ ಮಿಲಿಟರಿ ದೇಶಗಳ ನಡುವಿನ ಈ ಸಂಘರ್ಷವು ಜಗತ್ತಿನಾದ್ಯಂತ ಹೂಡಿಕೆದಾರರಿಗೆ ಚಿಂತೆ ಮೂಡಿಸಿದ್ದು, ಷೇರು ಮಾರಾಟಕ್ಕೆ ಪ್ರೇರೇಪಿಸಿದೆ. ಇದೇ ವೇಳೆಯಲ್ಲಿ ಚಿನ್ನ, ಬೆಳ್ಳಿ, ಬಾಂಡ್‌ಗಳಂತಹ ಸುರಕ್ಷಿತ ಹೂಡಿಕೆಯತ್ತ ಧಾವಿಸಿದ್ದಾರೆ. ಯುದ್ಧ ಅಷ್ಟೇ ಅಲ್ಲದೆ ಅಮೆರಿಕಾ-ಚೀನಾ ನಡುವಿನ ವ್ಯಾಪಾರ ಸಂಘರ್ಷ, ಸುಂಕಗಳ ಕುರಿತು ಅನಿಶ್ಚಿತತೆ ಮನೆ ಮಾಡಿರುವುದು ಸಹ ಹೂಡಿಕೆದಾರರ ಕಾರ್ಯತಂತ್ರವನ್ನು ಬದಲಿಸಿದೆ. ಯುಎಸ್...

ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!

ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!

BPL CARD NEWS; ಕಾರವಾರ; ರಾಷ್ಟ್ರೀಯ ಆಹಾರ ಭಧ್ರತಾ ಕಾಯ್ದೆ ಎನ್‌ಎಫ್‌ಎಸ್‌ಎ 2013 ರಡಿಯಲ್ಲಿ ಶೇ.100 ರಷ್ಟು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇಕೆವೈಸಿಯನ್ನು ಜೂ.30 ರೊಳಗಾಗಿ ಪೂರ್ಣಗೊಳಿಸ ಬೇಕಾಗಿರುವುದರಿಂದ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಯಾವುದೇ ಸದಸ್ಯರ ಇಕೆವೈಸಿ ಆಗದೇ ಇದ್ದಲ್ಲಿ ಅಂತಹ ಸದಸ್ಯರು ತಕ್ಷಣ ನಿಮ್ಮ ಪಡಿತರ ಚೀಟಿಯಲ್ಲಿ ನಮೂದಿಸಿದ ಹತ್ತಿರದ ನ್ಯಾಯಾಬೆಲೆ ಅಂಗಡಿಗೆ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯೊಂದಿಗೆ ಭೇಟಿ ನೀಡಿ ಬೆರಳಚ್ಚು ನೀಡುವ ಮೂಲಕ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸತಕ್ಕದ್ದು. ಇದು ಅಂತಿಮ ಅವಕಾಶವಾಗಿರುತ್ತದೆ. ಮುಂದಿನ ದಿನಗಳಲ್ಲಿ ಇಕೆವೈಸಿ ಆಗದೇ ಇರುವ ಸದಸ್ಯರ ಹೆಸರನ್ನು ಪಡಿತರ ಚೀಟಿಗಳಿಂದ ಕಡಿತಗೊಳಿಸಿದ್ದಲ್ಲಿ ಸಂಬಂಧಿಸಿದ ಪಡಿತರ ಚೀಟಿದಾರರೇ ಜವಾಬ್ದಾರರಾಗಿರುತ್ತಾರೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!

Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್‌ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್‌ ಸೂಚನೆ ಮೇರೆಗೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ನ್ಯಾಯಾಲಯದಲ್ಲಿ ಹಾಜರಿದ್ದ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡರು. ಯೋಗೇಶ ಗೌಡ...

ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!

ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!

Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ ಇಂದಿನಿಂದ ಗರಿಷ್ಠ ಒಂದು ತಿಂಗಳ ವರೆಗೆ ಮಾತ್ರ ಸೇವಾಸಿಂಧು ಮುಖೇನ ಸಂಸ್ಥೆಯ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸಲ್ಲಿಸಲಾದ ಸಕಾಲ ಅರ್ಜಿ ಸ್ವೀಕೃತಿ ಮತ್ತು ವಿದ್ಯಾರ್ಥಿ ಮೂಲ ಗುರುತಿನ ಚೀಟಿ (ಉದಾ: ಆಧಾರ/ಶಾಲಾ ಪ್ರಾಂಶುಪಾಲರ ಸಹಿ ಒಳಗೊಂಡ ಪೋಟೊ ಹೊಂದಿರುವ ಗುರುತಿನ ಚೀಟಿ/ದೃಢೀಕೃತ ದಾಖಲೆಗಳನ್ನು ತೋರಿಸಿ, ಸಕಾಲ ಸ್ವೀಕೃತಿಯಲ್ಲಿ ನಮೂದಿಸಿದ ಮಾರ್ಗದಲ್ಲಿ ಕಾರ್ಯಾಚರಿಸುವ ಸಂಸ್ಥೆಯ ನಗರ/ಉಪನಗರ/ಸಾಮಾನ್ಯ/ವೇಗದೂತ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ...

ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!

ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!

 Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ‌ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್‌ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ ಪವಾಡ ಶೆಟ್ಟರ್‌ ಹಾಗೂ ಶೇಖರ ಲಮಾಣಿ ಸಭೆಯಲ್ಲಿ ಆಗ್ರಹಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಮತ್ತೋರ್ವ ಸದಸ್ಯ ಫಣಿರಾಜ್ ಹದಳಗಿ, ಇದು ಸಾರ್ವಜನಿಕ ಸಮಸ್ಯೆಯಾಗಿದ್ದರೆ ಸಭೆಯಲ್ಲಿ ಚರ್ಚೆ ಮಾಡುವುದು ಬೇಡ. ಎಲ್ಲರೂ ಸೇರಿ ಪ್ರತಿಭಟನೆ ಮಾಡೋಣ. ಅದು ಬಿಟ್ಟು ಸಭೆಯ ವ್ಯಾಪ್ತಿಗೆ ಬರದ ವಿಷಯಗಳ ಬಗ್ಗೆ ಚರ್ಚೆ ಸರಿಯಲ್ಲವೆಂದರು. Mundgod Doctor News; ಈ ಆಸ್ಪತ್ರೆ ಪಟ್ಟಣ ವ್ಯಾಪ್ತಿಯಲ್ಲಿಯೇ ಬರುವುದರಿಂದ ಸದಸ್ಯರಿಗೆ ಕೇಳುವ...

error: Content is protected !!