ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್ಗಾಗಿ ತೀವ್ರ ಶೋಧ ನಡೆಸಲಾಗಿತ್ತು. ನಿನ್ನೆಯಿಂದ ಉಡುಪಿಯ ಪರಿಣಿತ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನ ತಂದು ಗಂಗಾವಳಿ ನದಿಯಲ್ಲಿ ಶೋಧ ನಡೆಸಲಾಗಿತ್ತು. ಆದರೆ ಅದು ಎಷ್ಟೆ ಕಾರ್ಯಾಚರಣೆ ನಡೆಸಿದರೂ ಸಹ ನಾಪತ್ತೆ ಆದವರ ಹಾಗೂ ಲಾರಿ ಪತ್ತೆ ಆಗದೆ ಇರುವ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ ತಿಳಿಸಿದ್ದಾರೆ.
Top Stories
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ತಾಲೂಕಿನ ಬದ್ರಾಪುರದ ರವಿ ಮಾರುತಿ ಅಕ್ಕಸಾಲಿ(25) ಎಂಬುವವನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!
ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಂತರ, ಶಿಗ್ಗಾವಿ-ಸವಣೂರ ತಾಲೂಕಿನಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಹಾವೇರಿ ಜಿಲ್ಲಾ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಅನ್ನದಾನಿಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಾಗೂ ಸಾನಿದ್ಯವನ್ನು ಶ್ರೀ ಮ ನಿ ಪ್ರ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾದ್ಯಕ್ಷ ಸಿದ್ದಪ್ಪ ಹಡಪದ, ಜಿಲ್ಲಾ ಅದ್ಯಕ್ಷ ಷಣ್ಮುಖಪ್ಪ ಕಾಯಕದ, ಮಾಜಿ ಸಚಿವ ಅರ್ ಶಂಕರ್, ಸೋಮಣ್ಣ ಬೇವಿನಮರದ್, ಸಂಜೀವ ಕುಮಾರ ನೀರಲಗಿ, ಸಿ. ಎಂ. ಪೈಜ್, ಮೋಹನ ಚಂದಪ್ಪನವರ್, ಮಲ್ಲಿಕಾರ್ಜುನ ಹಡಪದ, ಹರೀಶ ಕ್ಷೌರದ್ ಉಪಸ್ಥಿತರಿದ್ದರು.
ಉತ್ತರ ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಕಡಿಮೆಯಾಗಿಲ್ಲ. ಜಿಲ್ಲಾಧ್ಯಂತ ಇನ್ನಿಲ್ಲದ ಸಂಕಷ್ಟ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಇಂದಿನ ಮಳೆಯ ಹಾನಿ ಇಷ್ಟು..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 1 ಮನೆ ಸಂಪೂರ್ಣ ಹಾನಿ, 3 ಮನೆಗಳಿಗೆ ತೀವ್ರ ಹಾನಿ,49 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2 , ಕುಮಟಾ ಮತ್ತು ಅಂಕೋಲಾದ ತಲಾ 1 ಸೇರಿದಂತೆ ಒಟ್ಟು 4...
ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ, ಜಲಾಶಯ ಉಬ್ಬು ಬಿದ್ದು, ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಬ್ರಿಡ್ಜ್ ಮೇಲೆ ಮೂರು ಅಡಿಗಳಷ್ಟು ನೀರು ಹರಿಯುತ್ತಿರೊ ಕಾರಣ ರಸ್ತೆ ಸಂಚಾರ ಸ್ಥಗಿತವಾದಂತಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಧರ್ಮಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಮಳಗಿ ಬನವಾಸಿ ರಸ್ತೆಯ ದಾಸನಕೊಪ್ಪ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.
ಉ.ಕನ್ನಡದಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಕಾರಣದಿಂದ, ಜಿಲ್ಲಾಧ್ಯಂತ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 26 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಮೂಡಸಾಲಿಯ ಯುವಕನ ಶವ ಪತ್ತೆಯಾಗಿದೆ. ಮಾರಿಕಾಂಬಾ ಲೈಫ್ ಗಾರ್ಡ್ ಹಿರೇಕಲ್ ನ ಗೋಪಾಲ್ ನಾರಾಯಣ್ ಗೌಡಾರವರು ಶವ ಪತ್ತೆ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರ ಜಂಟೀ ಕಾರ್ಯಾಚರಣೆಯಲ್ಲಿ ಶವ ಹೊರ ತೆಗೆಯಲಾಗಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಹೀಗಾಗಿ, ನಿನ್ನೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದತ್ತು. ಇಂದು ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಂಡಗೋಡ ಪಿಎಸ್ಐ ಪರಶುರಾಮ್ ಹಾಗೂ ಅವರ ಸಿಬ್ಬಂದಿಗಳು, ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪ್ರವಾಸಿಗರಿಗೆ ನಿರ್ಬಂಧ..! ಇನ್ನು ಮಳಗಿ ಧರ್ಮಾ ಜಲಾಶಯದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕಾಡಳಿತ ಆದೇಶ ಹೊರಡಿಸಿದೆ. ಜಲಾಶಯದಲ್ಲಿ ಅಪಾಯ ಇರುವ ಕಾರಣ ಸದ್ಯ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ.
ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು ಬಂದಿದ್ದರು. ಈ ವೇಳೆ ಜಲಾಶಯದ ಉಬ್ಬಿನ ಹತ್ತರಿ ಹೋದಾಗ ಏಕಾಏಕಿ ಇಬ್ಬರು ಯುವಕರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅದ್ರಲ್ಲಿ, ಓರ್ವ ಯುವಕನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಆದ್ರೆ, ಶ್ರೀನಾಥ್ ಹರಿಜನ್ ನೀರಲ್ಲಿ ನಾಪತ್ತೆಯಾಗಿದ್ದಾನೆ. ಸದ್ಯ, ಸ್ಥಳಕ್ಕೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್, ಕ್ರೈಂ ಪಿಎಸ್ಐ ಗುಡಗುಂಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದಿಳಿದಿದ್ದಾರೆ. ಯುವಕನ...
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!
ಮುಂಡಗೋಡ ತಾಲೂಕಿನ ಕಲಕೇರಿಯಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.. ಗದ್ದೆಯಲ್ಲಿ ಭತ್ತದ ನಾಟಿ ಕೆಲಸದ ತಯಾರಿ ನಡೆದಿತ್ತು. ಎತ್ತುಗಳ ಜೊತೆಯಲ್ಲಿ ರೈತ ರಾಜಣ್ಣ ಮುಕ್ಕನಕಟ್ಟಿ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಎತ್ತು ವಿದ್ಯುತ್ ಕಂಬದ ಹತ್ತಿರ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ. ಹೀಗಾಗಿ, ತಕ್ಷಣವೇ ವಿದ್ಯುತ್ ಪ್ರವಹಿಸಿ ಹೋರಿ ಮೃತಪಟ್ಟಿದೆ. ಬಚಾವ್ ಮಾಡಲು ಹೋದ ರೈತನಿಗೂ ವಿದ್ಯುತ್ ಸಂಚಾರದ ಅನುಭವವಾಗಿದೆ. ಅದೃಷ್ಟವಶಾತ್ ರೈತನ ಸಮಯ ಪ್ರಜ್ಞೆಯಿಂದ ಅವ್ರಿಗೆ ಏನೂ ಆಗಿಲ್ಲ. ತಕ್ಷಣವೇ ಅಲ್ಲಿಂದ ಮತ್ತೊಂದು ಎತ್ತನ್ನು ಎಳೆದುಕೊಂಡು ಹೊರಗಡೆ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.