ಕಾರವಾರ: ರಾಜ್ಯದ ಗೃಹ ಸಚಿವ ಡಾ: ಜಿ. ಪರಮೇಶ್ವರ ಅವರು ಮಾರ್ಚ್ 26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸದ ವಿವರಗಳು ಇಂತಿವೆ.. ಕಾರವಾರದಲ್ಲಿ.. ಮಾರ್ಚ್ 26 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಎಸ್.ಪಿ. ಕಚೇರಿಯಲ್ಲಿ ವಿಧಾನಸಭಾ/ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಖರೀದಿಸಿ ಪೊಲೀಸ್ ಇಲಾಖೆಗೆ ನೀಡಿರುವ ಹೊಸ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯ ವಿದ್ಯುಕ್ತ ಚಾಲನೆ (Through WEBCAST), ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ಚಿತ್ರಿಸಲಾಗಿರುವ ವಿಡಿಯೋಗಳ ಬಿಡುಗಡೆ, ರೂ.1,15,00,000/- ವೆಚ್ಚದಲ್ಲಿ ನವೀಕರಿಸಲಾದ ಜಿಲ್ಲಾ ಪೊಲೀಸ್ ಕಛೇರಿಯ ವಿವಿಧ ವಿಭಾಗಗಳ ಉದ್ಘಾಟನೆ ನೆರವೇರಲಿದೆ. 1 ಗಂಟೆಯಿoದ 2 ಗಂಟೆಯವರೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ವಾಸ್ತವ್ಯ ಮಾಡುವರು. ಮಾರ್ಚ್ 27...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಸನ್ಮಾನ್ಯ ಶಿಕ್ಷಕರಿಗೆ ನೋಟೀಸು ಜಾರಿಯಾಗಿದೆ. ಜೊತೆಗೆ ಲೊಯೊಲಾ ಸಂಸ್ಥೆಯ ಆಡಳಿತ ಮಂಡಳಿಗೂ ಈ ಕುರಿತು ನೋಟೀಸಿನ ಪ್ರತಿ ರವಾನಿಸಲಾಗಿದೆ. ಹೀಗಾಗಿ, ನಾಳೆಯೊಳಗಾಗಿ ನೋಟೀಸಿಗೆ ಸಮರ್ಪಕ ಉತ್ತರ ನೀಡಬೇಕಿರೋದು ಆ ಶಿಕ್ಷಕರ ಕೆಲಸವಾಗಿದೆ. ಹಾಗೆ ಅವ್ರು ನೀಡಿದ ಉತ್ತರದ ಆಧಾರದಲ್ಲಿ ಮುಂದಿನ ಕ್ರಮ ಜರುಗಿಸಲಾಗತ್ತೆ ಅಂತಾ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಕ್ಷೇತ್ರ ಸಮನ್ವಯಾಧಿಕಾರಿ ಉತ್ತರಿಸಿದರೆ..? ಇನ್ನು, ಖಾಸಗಿ ಫೈನಾನ್ಸ್ ಗಳ ಬಗೆಗೆ...
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಎದುರಾಗುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ದಂಧೆಗೆ ಕಡಿವಾಣ ಹಾಕಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರಂತೆ. ಐಪಿಎಲ್ ಬಂತೆಂದರೆ ಸಾಕು 2 ತಿಂಗಳ ಕಾಲ ಯುವಕರು ಫುಲ್ ಬ್ಯುಸಿ. ಹಳ್ಳಿ ಹಳ್ಳಿಗಳಲ್ಲೂ ಬೆಟ್ಟಿಂಗ್ದೇ ಮಾತು. ಬೆಟ್ಟಿಂಗ್ ದಂಧೆಗೆ ಬಲಿಯಾಗಿ ಯುವಕರು ತಮ್ಮ ಹಣ ಮಾತ್ರವಲ್ಲ ಭವಿಷ್ಯವನ್ನೇ ಕಳೆದುಕೊಳ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಣದ ವ್ಯವಹಾರ ನಡೆಯುವ ಈ ಬೆಟ್ಟಿಂಗ್ ದಂಧೆಗೆ ಕಡಿವಾಣ...
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಈ ಸುದ್ದಿ ಬರೆಯುವ ಮುನ್ನ.. ನನ್ನ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ ವೃಂದಕ್ಕೆ ನಾನು ತಲೆ ಬಾಗಿ ನಮನ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ. ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ ಆಕ್ರೋಶ, ನೋವು, ಸಂಕಟ ಹೇಳಿಕೊಂಡಿದ್ದಿರಿ… ಹೀಗಾಗಿ ಇಲ್ಲಿ ಪಬ್ಲಿಕ್ ಫಸ್ಟ್ ತಮ್ಮ ದನಿಯಾಗಲು ರೆಡಿಯಾಗಿದೆ ಅಷ್ಟೆ..! ಪವಿತ್ರ ಶಿಕ್ಷಕ ವೃತ್ತಿಯ ಹೆಸರಲ್ಲಿನ ಕೆಲವರ ಅಟ್ಟಹಾಸಗಳಿಗೆ ಕೊನೆ ಹಾಡಬೇಕಿದೆ..! ಜೊತೆಯಾಗಿರಿ ಅಷ್ಟೆ..! ಈಗ ವಿಷಯಕ್ಕೆ ಬರೋಣ..! ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..? ಮುಂಡಗೋಡಿನಲ್ಲಿ ಮಂಗಳವಾರ ನಡೆದ ಖಾಸಗಿ ಗೋಲ್ಡ್ ಲೋನ್ ಫೈನಾನ್ಸ್...
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ 125 ಸರಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದರು. CCTV ಕಣ್ಗಾವಲು..! ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಿದ್ದು, ರಾಜ್ಯ ಮತ್ತು ಜಿಲ್ಲಾ ಹಂತಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಎಲ್ಲಾ ಸಿಸಿಟಿವಿಗಳ ವೆಬ್ ಕಾಸ್ಟಿಂಗ್ನ್ನು ಡ್ರೈರನ್ ಮಾಡಲಾಗಿದ್ದು, ಜಿಲ್ಲಾ ಪಂಚಾಯತ್ ನಲ್ಲಿ ಇದಕ್ಕಾಗಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿದ್ದು, ತಾಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯಲ್ಲಿ...
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಅಂದಹಾಗೆ, ಸರ್ಕಾರಿ ಸೇವೆಯಲ್ಲಿರೋ ಅಧಿಕಾರಿಗಳು ತಮ್ಮ ಕರ್ತವ್ಯದ ಸಂರ್ಭದಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುಂತಿಲ್ಲ, ಹಾಗೊಂದು ವೇಳೆ ಭಾಗವಹಿಸುವ ಅನಿವಾರ್ಯತೆ ಇದ್ರೆ ರಜೆ ಪಡೆದು ಭಾಗವಹಿಸಬಹುದು ಅಂತಾ ಬಿಇಓ ಸುಮಾ ಜಿ. ಮೇಡಂ ತಿಳಿಸಿದ್ದಾರೆ.
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್ ಆಗಿದ್ದಾರೆ. ಬೇಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಕ್ಟಿವ್ ಆಗಿದ್ದ ಕಳ್ಳಿಯರ ಖರ್ತನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೂವರು ಖರ್ತನಾಕ್ ಕಳ್ಳಿಯರ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ನಿವಾಸಿಗಳಾದ ಅನೀತಾ ಚೌಗಲೆ 58, ನಿಶಾ ಲೊಂಡೆ 25, ಗಿಡ್ಡಿ ಲೊಂಡೆ 35 ಅರೇಸ್ಟ್ ಆದ ಆರೋಪಿಗಳು. ಆರೋಪಿಗಳಿಂದ 12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನದ ಒಡವೆ ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿ ಮೂಲದ ಕಾಂಚನ್ ಗೌಡರ ಎಂಬುವರ ಚಿನ್ನ ಕಳ್ಳತನ ಆಗಿತ್ತು. ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಾಂಚನಾ ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡ ಮಾರ್ಕೆಟ್ ಪೊಲೀಸರು ಕಳ್ಳಿಯರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ. ಅಷ್ಟೇಅಲ್ಲ PSI ತಿರುಮಲೇಶಗೂ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ದಾರೆ.
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಕಾರವಾರ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ (ಪಿಎಂಎಫ್ಎಂಇ) ಯೋಜನೆಯು ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಯೋಜನೆಯ ಸೌಲಭ್ಯ ಪಡೆಯಲು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಲು ಜನರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಬ್ಯಾಂಕ್ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪಿಎಂಎಫ್ಎಂಇ ಯೋಜನೆಯಡಿ ಸೌಲಭ್ಯ ಪಡೆಯಲು ಕಡಿಮೆ ಪ್ರಮಾಣ ಅರ್ಜಿಗಳು ಬ್ಯಾಂಕ್ಗಳಿಗೆ ಸಲ್ಲಿಕೆಯಾಗಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಜನರಿಗೆ ಜಾಗೃತಿ ಮೂಡಿಸಬೇಕು. ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ. 35 ಮತ್ತು ರಾಜ್ಯ ಸರ್ಕಾರದಿಂದ ಶೇ.15 ಸೇರಿದಂತೆ ಶೇ.50 ರಷ್ಟು ಸಬ್ಸಿಡಿ ಸೌಲಭ್ಯವಿದ್ದು, ಇದರ ಪ್ರಯೋಜನವನ್ನು ಜಿಲ್ಲೆಯ ಜನತೆ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದರು....
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ , ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು. ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು. ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ,...