ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..! ಇನ್ನು ಅಪಘಾತ ಸಂಭವಿಸಿದ ನಂತರ ಶಿರಸಿ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳು ಬಳಿ ಇದ್ದ ಬ್ಯಾಗ್ ಹಾಗೂ ಮೊಬೈಲ್ ಮುಂಡಗೋಡ ಪೊಲೀಸರಿಗೆ 108 ಸಿಬ್ಬಂದಿ ಹಸ್ತಾಂತರ ಮಾಡಿದ್ದಾರೆ.
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!
ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ ಹಣ ಕೊಡುವ ವಿಡಿಯೋ ಮಾಡಿ ಮೇಲಧಿಕಾರಿಗಳಿಗೆ ಕಳುಹಿಸಿದ್ದಾನೆ. ಈ ವಿಡಿಯೋ ಆಧರಿಸಿ ಡಿಸಿಪಿ ಶ್ರೀನಾಥ್ ಜೋಷಿ ಅವರಿಗೆ ಕಮಿಷನರ್ ಕಮಲ್ ಪಂತ್ ವರದಿ ಕೇಳಿದ್ದರು. ಡಿಸಿಪಿ ವರದಿ ಆಧರಿಸಿ ಕಮಲ್ ಪಂತ್ ಅವರು ಇನ್ಸ್ಪೆಕ್ಟರ್ ಸುನೀಲ್ ನಾಯಕ್ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ ಹಿರಿಯ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ರು.
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!
ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!
ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀಪಿನಲ್ಲಿ ಚಾಲಕ ಮತ್ತು ಪಿ.ಎಸ್.ಐ. ಇಬ್ಬರೇ ಇದ್ದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.
ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!
ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.
ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?
ಮುಂಡಗೋಡ: ನಭದಲ್ಲಿ ಕಾಣಿಸಿಕೊಂಡ ಸಾಲುಸಾಲು ತಾರೆಗಳು.. ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳು.. ಆಗಸದಲ್ಲಿ ನಡೆದ ಈ ವಿಸ್ಮಯವನ್ನು ಕಂಡು ಬೆರಗಾಗಿರುವ ತಾಲೂಕಿನ ಜನತೆ.. ಹೌದು, ಮುಂಡಗೋಡ ತಾಲೂಕಿನಲ್ಲಿ ರಾತ್ರಿ ಆಕಾಶದಲ್ಲಿ ವಿಸ್ಮಯ ನಡೆದಿದೆ. ಮುಂಡಗೋಡ ತಾಲೂಕಿನಾದ್ಯಂತ ಆಗಸದಲ್ಲಿ ಚುಕ್ಕಿಗಳ ಸಾಲು ಸಾಲು ಚಿತ್ತಾರಗಳು, ಬೆಳಕಿನ ಆಟಗಳು ನಡೆದಿದೆ. ಆದ್ರೆ ಇದು ಕೃತಕ ಉಪಗ್ರಹಗಳ ಚಲನೆ ಅಂತಾ ಖಗೋಳತಜ್ಞರು ಸ್ಪಷ್ಟಪಡಿಸಿದ್ದಾರೆ. ಅಸಲು ಏನ್ ಗೊತ್ತಾ..? ನಿಜ ಅಂದ್ರೆ, ಹಾಗೆ ನಮಗೇಲ್ಲ ಕಂಡ ಚುಕ್ಕಿಗಳ ಸಾಲುಗಳು ಎಲಾನ್ ಮಸ್ಕ್ ಮಾಲೀಕತ್ವದ ಬಾಹ್ಯಾಕಾಶ ಸಂಸ್ಥೆ, ಅಮೆರಿಕದ ಸ್ಪೇಸ್ ಎಕ್ಸ್ ಉಡಾವಣೆ ಮಾಡಿದ ಸರಣಿ ಉಪಗ್ರಹಗಳ ಮಾಲೆಯಿದು. ಸ್ಟಾರ್ ಲಿಂಕ್ ಎಂಬ ಯೋಜನೆಯಡಿ 1,800ಕ್ಕೂ ಹೆಚ್ಚು ಉಪಗ್ರಹಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ಅವುಗಳಲ್ಲಿ 1,732 ಉಪಗ್ರಹಗಳು ತಮ್ಮ ನಿಗದಿತ ಕಕ್ಷೆಯಲ್ಲಿ ಭೂಮಿಯನ್ನು ಸುತ್ತುತ್ತಿವೆ. 2018ರ ಫೆ.22ರಂದು ಆರಂಭವಾದ ಈ ಯೋಜನೆಯಲ್ಲಿ ಬೇರೆ ಬೇರೆ ಹಂತಗಳಲ್ಲಿ ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ. ಅವುಗಳಲ್ಲಿ ಒಂದು ಗುಂಪಿನ ಉಪಗ್ರಹಗಳು ಸಾಗುತ್ತಿದ್ದುದು...
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ದ್ವಂಸ ಮಾಡಿರುವುದು ಖಂಡನೀಯ. ಪದೇ ಪದೇ ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರು ಈ ರೀತಿ ಕೃತ್ಯಗಳನ್ನು ಮಾಡುವ ಮೂಲಕ ಕನ್ನಡ ನೆಲದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇದರಿಂದ ನಮ್ಮ ಕನ್ನಡ ನಾಡಿಗೆ ಧಕ್ಕೆ ಉಂಟಾಗುತ್ತಿದೆ. ಇಂತಹ ಕೃತ್ಯಗಳನ್ನು ನೋಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೌನಕ್ಕೆ ಜಾರಿರುವುದು ಸರಿಯಲ್ಲ. ಕೂಡಲೇ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವುದರ ಜೊತೆಗೆ ಎಂಇಎಸ್...
ಎಂಇಎಸ್ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧ ಮುತ್ತಿಗೆ ಯತ್ನ, ತಡೆದ ಪೊಲೀಸರು..!
ಬೆಳಗಾವಿ: ಇಂದು ಕನ್ನಡಪರ ಸಂಘಟನೆಗಳ ಬೃಹತ್ ಹೋರಾಟ ಹಿನ್ನೆಲೆಯಲ್ಲಿ, ನಾಡದ್ರೊಹಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲಾಗಿದೆ. ಹಿರೇಬಾಗೇವಾಡಿ ಟೊಲ್ ಗೇಟ್ ಬಳಿ ಹೋರಾಟಗಾರರನ್ನ ತಡೆದಿರೊ ಪೊಲೀಸರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕನ್ನಡಪರ ಹೋರಾಟಗಾರ ವಶಕ್ಕೆ ಪಡೆದಿದ್ದಾರೆ. ಪ್ರವಿಣ ಶೆಟ್ಟಿ ಬಣದ ಕಾರ್ಯಕರ್ತರನ್ನು ನೂರಾರು ಕಾರ್ಯಕರ್ತರನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ.. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.