ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!

ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ, ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!

ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು‌.

ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!

ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.‌ ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು. ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ. ಇದೇ ವೇಳೆ ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡಿದ್ದಾರೆ....

ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ‌ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ ಕಮ್ಮಾರ್ ಉಪಸ್ಥಿತರಿದ್ದರು

SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು ಕೊರೊನಾ ಸೋಂಕಿನ ನಡುವಲ್ಲೇ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಗೆ ಮನವಿ‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ...

ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!

ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!

ಮುಂಡಗೋಡ-ತಾಲೂಕಿನಲ್ಲಿ ಇಂದು 58 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 87 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 384 ಸಕ್ರೀಯ ಪ್ರಕರಣಗಳಿದ್ದು, 114 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 43 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ತಾಲೂಕಿನ ಇಂದಿರಾನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಕ್ಕೆ ಏರಿಕೆಯಾಗಿದೆ. ಅಂದಹಾಗೆ, ಇದುವರೆಗೂ ತಾಲೂಕಿನಲ್ಲಿ 3616 ಪ್ರಕರಣಗಳು ಪತ್ತೆಯಾಗಿದ್ದು ಅದ್ರಲ್ಲಿ,3174 ಸೋಂಕಿತರು ಗುಣಮುಖರಾಗಿದ್ದಾರೆ.

ಕಾರವಾರ: ಜಿಲ್ಲೆಯಲ್ಲಿ E- ಹಾಸ್ಪಿಟಲ್ ಅಡಿ ನೇಮಕಗೊಂಡಿದ್ದ, 25 ಹೊರಗುತ್ತಿಗೆ ಸಿಬ್ಬಂದಿಗಳ ದಿಢೀರ್ ವಜಾ..!

ಕಾರವಾರ: E-ಹಾಸ್ಪಿಟಲ್ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಸುಮಾರು 25 ಸಿಬ್ಬಂದಿಗಳನ್ನು ಇಂದಿನಿಂದ ಕೈ ಬಿಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಸಿಬ್ಬಂದಿಗಳು ದಿಢೀರ್ ವಜಾದಿಂದ ದಿಕ್ಕು ತೋಚದಂತಾಗಿದ್ದಾರೆ. ಸರ್ಕಾರ ಕಳೆದ ಒಂದು ತಿಂಗಳ ಹಿಂದೆ E-ಹಾಸ್ಪಿಟಲ್ ಅಡಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕ ಮಾಡಿಕೊಂಡಿತ್ತು. ಆಯಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ನಿರ್ದಿಷ್ಟ ಮೊತ್ತಕ್ಕೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶದಂತೆ ಆಸ್ಪತ್ರೆಗಳು ಡಾಟಾ ಎಂಟ್ರಿ ಸಿಬ್ಬಂದಿಗಳ ನೇಮಕ ಮಾಡಿಕೊಂಡಿದ್ದವು. ಈ ಸಿಬ್ಬಂದಿಗಳಿಂದಾಗಿ ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಸಹಾಯ ಕೂಡ ಆಗಿತ್ತು. ಆದ್ರೆ ಈಗ ಸರ್ಕಾರ ದಿಢೀರ್ ಆದೇಶ ಹೊರಡಿಸಿದ್ದು, ಇಂದಿನಿಂದ ಸಿಬ್ಬಂದಿಗಳನ್ನು ಕೈ ಬಿಡಬೇಕು ಅಂತ ಆದೇಶದಲ್ಲಿ ತಿಳಿಸಿದೆ. ಇದರಿಂದಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ವ್ಯಾಕ್ಸಿನೇಷನ್ ಕಾರ್ಯದಲ್ಲಿ ವ್ಯತ್ಯಯವಾಗಿದೆ. ಸರ್ಕಾರಿ ಆಸ್ಪತ್ರೆಗಳು ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ಕೆ ತೊಂದರೆಯಾಗಲಿದೆ ಅಂತ ಆಯಾ ತಹಶೀಲ್ದಾರರುಗಳಿಗೆ ಪತ್ರವನ್ನ ಸಹ ಬರೆದಿದ್ದಾರೆ. ಆದ್ರೆ ಸರ್ಕಾರ ಮುಂದೆ...

ರಾಜ್ಯದಲ್ಲಿ ಮುಂದುವರಿಯತ್ತಾ ಲಾಕ್ ಡೌನ್..? ತಜ್ಞರ ಸಮಿತಿ ಸರ್ಕಾರಕ್ಕೆ ಕೊಟ್ಟ ವರದಿಯಲ್ಲಿ ಏನಿದೆ..?

ರಾಜ್ಯದಲ್ಲಿ ಮುಂದುವರಿಯತ್ತಾ ಲಾಕ್ ಡೌನ್..? ತಜ್ಞರ ಸಮಿತಿ ಸರ್ಕಾರಕ್ಕೆ ಕೊಟ್ಟ ವರದಿಯಲ್ಲಿ ಏನಿದೆ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರ ಸಂಕಷ್ಟ ತಂದಿದೆ. ನಿತ್ಯ ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ. ರಾಜ್ಯದ ಬಹುತೇಕ ಗ್ರಾಮೀಣ ಭಾಗಕ್ಕೂ ಸೋಂಕು ಹೊಕ್ಕು ಹಿಂಡಿ ಹಿಪ್ಪೆ ಮಾಡಿದೆ. ಹೀಗಾಗಿ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇಕಡಾ 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಅಂತಾ ತಜ್ಞರ ಸಮಿತಿ ಸಲಹೆ ನೀಡಿದೆ. ಅಂದಹಾಗೆ, ಈಗ ರಾಜ್ಯ ಸರ್ಕಾರ ಹಲವು ನಿಯಮಾವಳಿಗಳ ಜೊತೆ ವಿಧಿಸಿರುವ ಸೆಮಿ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ರವಿವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿದೆ. ಸೋಮವಾರ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ 13.57 ರಷ್ಟಿದ್ದರೇ, ಮರಣ ಪ್ರಮಾಣ ಶೇಕಡಾ 2.47 ರಷ್ಟಿದೆ. ಈ ಪ್ರಮಾಣ ಶೇಕಡಾ 5 ಮತ್ತು 1 ಕ್ಕಿಂತ ಕಡಿಮೆ ಬರುವರೆಗೂ ಲಾಕ್ ಡೌನ್ ಮುಂದುವರಿಸುವುದು ಸೂಕ್ತ ಎಂದು ಕೋವಿಡ್...

ಮುಂಡಗೋಡ: ಹೊಟ್ಟೆನೋವು ತಾಳದೆ ಕಾಡಿನಲ್ಲಿ ವ್ಯಕ್ತಿ ನೇಣಿಗೆ ಶರಣು..!

ಮುಂಡಗೋಡ: ಹೊಟ್ಟೆನೋವು ತಾಳದೆ ಕಾಡಿನಲ್ಲಿ ವ್ಯಕ್ತಿ ನೇಣಿಗೆ ಶರಣು..!

ಮುಂಡಗೋಡ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೋರ್ವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮುಂಡಗೋಡ-ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ. ಮುಂಡಗೋಡ ಗಣೇಶ ನಗರದ, ಬಸವರಾಜ್ ಬಾಲಪ್ಪ ಗೌಳಿ(36) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಹೈನುಗಾರಿಕೆ ಮಾಡುತ್ತಿದ್ದ ವ್ಯಕ್ತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ, ಹೀಗಾಗಿ ಸಾಕಷ್ಟು ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಿರಲಿಲ್ಲ. ಹೀಗಾಗಿ, ಅದನ್ನೇ ಮನಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮೃತನ ಸಹೋದರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಂದಿರಾನಗರಕ್ಕೂ ವಕ್ಕರಿಸಿದ ಕೊರೋನಾ..! ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತಿಮ ಸಂಸ್ಕಾರ..!!

ಮುಂಡಗೋಡ-ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಇಂದಿರಾನಗರದಲ್ಲಿ ಕೊರೋನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚಿದೆ. ಅಂದಹಾಗೆ, ಇದುವರೆಗೂ ಒಂದೇ ಒಂದು ಪಾಸಿಟಿವ್ ಪ್ರಕರಣ ದಾಖಲಾಗದೇ ಸುರಕ್ಷಿತವಾಗಿದ್ದ ಹಳ್ಳಿಯಲ್ಲಿ ಈಗ ಕೊರೋನಾದಿಂದಲೇ ಒಂದು ಸಾವು ಸಂಭವಿಸಿದೆ. ನಿನ್ನೆ ಈ ಹಳ್ಳಿಯ 76 ವರ್ಷ ವಯಸ್ಸಿನ ವೃದ್ದ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವದ್ದನನ್ನು ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಮೃತಪಟ್ಟಿದ್ದಾನೆ. ಹೀಗಾಗಿ, ಸೋಂಕಿತ ವೃದ್ಧನ ಅಂತಿಮ ಸಂಸ್ಕಾರ ಕೋವಿಡ್ ನಿಯಮಾನುಸಾರ, ಇಂದಿರಾನಗರದಲ್ಲಿ ನೆರವೇರಿಸಲಾಯಿತು. ಪಿಪಿಇ ಕಿಟ್ ಧರಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

error: Content is protected !!