ಮುಂಡಗೋಡ: ತಾಲೂಕಿನ ಸಿದ್ದನಕೊಪ್ಪದಲ್ಲಿ ವಿಶೇಷ ಹುಟ್ಟುಹಬ್ಬ ಆಚರಿಸಲಾಗಿದೆ. ಸ್ಪರ್ಧಾ ಹೋರಿಗೆ ಜನ್ಮ ದಿನ ಆಚರಣೆ ಮಾಡಲಾಗಿದೆ.. ಹೋರಿಗೆ ವಿಶೇಷ ಅಲಂಕಾರ ಮಾಡಿ, ಕೇಕು ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ. ನೂರಾರು ಜನರು ಸೇರಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಹೋರಿಯ ಗುಣಗಾನ ಮಾಡಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಹೋರಿಯ ಮಾಲೀಕರು ಕುಣಿದು ಕುಪ್ಪಳಿಸಿದ್ರು.. ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.. ಈ ಸಂದರ್ಭದಲ್ಲಿ ಮಳಗಿಯ ಬಿಜೆಪಿ ಮುಖಂಡ ಸಂತೋಷ ಶೇಟ್ ರಾಯ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಕಂಚಿನ ಪುತ್ಥಳಿ ಸ್ಥಾಪನೆಗೆ ಲಕ್ಷ ರೂ. ದೇಣಿಗೆ..!
ಮುಂಡಗೋಡ: ತಾಲೂಕಿನ ಕಲಕೇರಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲು ಬಿಜೆಪಿ ಯುವ ಧುರೀಣ ಸಂತೋಷ ರಾಯ್ಕರ ಅವರು ಒಂದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಬಳಿಕ ಮಾತನಾಡಿದ ಸಂತೋಷ ರಾಯ್ಕರ, ಹಿಂದೂ ಧರ್ಮದ ರಕ್ಷಣೆಗಾಗಿ ಶಿವಾಜಿ ಮಹಾರಾಜರ ಪುತ್ಥಳಿ ಪ್ರತಿಷ್ಠಾಪಿಸುವ ಮೂಲಕ ಅವರ ಆದರ್ಶ, ತತ್ವ ಸಿದ್ಧಾಂತ ಮತ್ತು ಇತಿಹಾಸವನ್ನು ಜನರಲ್ಲಿ ಮನವರಿಕೆ ಮಾಡಿಕೊಡಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿ ವತಿಯಿಂದ ಸಂತೋಷ ರಾಯ್ಕರ ಅವರನ್ನು ಗೌರವಿಸಲಾಯಿತು. ಟ್ರಸ್ಟ್ನ ಅಧ್ಯಕ್ಷ ಕಾಳೇಶ ಕ್ಯಾತ್ನಳ್ಳಿ, ಗಣಪತಿ ನಸರೇಕರ, ಅನಿಲ ಕಟ್ಟಿಮನಿ, ಮಹಾಂತೇಶ ಚಿಗಪ್ಪನವರ, ಫಕ್ಕೀರೇಶ ಮುಕ್ಕನಕಟ್ಟಿ, ಮಹಾಂತೇಶ ಕಾತಿ, ಮಾರುತಿ ಬೆಂಡಿಗೇರಿ, ಬಸವರಾಜ ಬೆಂಡಿಗೇರಿ, ಕೇಶವ ಬೆಂಡಿಗೇರಿ, ನಾರಾಯಣ ಗುರಪ್ಪನವರ, ಕರಿಯಣ್ಣ ಪಾಟೀಲ, ನಾರಾಯಣ ಕ್ಯಾಟ್ನಳ್ಳಿ, ಮಾರುತಿ ಬನವಾಸಿ, ಭಾಷಾ ಎಳವಟ್ಟಿ, ಖಾಸೀಮ್ ಅತ್ತಾರ ಉಪಸ್ಥಿತರಿದ್ದರು.
ಮುಂಡಗೋಡಿನಲ್ಲಿ ಟಿಬೇಟಿಗನ ಪರ್ಸು, ಮೊಬೈಲು ಕಿತ್ತು ಎಸ್ಕೇಪ್ ಆದ ಯುವಕ..! ಬೆನ್ನತ್ತಿ ಹಿಡಿದ ಜನ..!
ಮುಂಡಗೋಡ; ಪಟ್ಟಣದಲ್ಲಿ ಇಂದು ಯುವಕನೋರ್ವ ಟಿಬೇಟಿಯನ್ ವ್ಯಕ್ತಿಯ ಪರ್ಸ್ ಹಾಗೂ ಮೊಬೈಲ್ ಎಗರಿಸಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರ ಕೈಯಲ್ಲಿ ತಗಲಾಕ್ಕೊಂಡು ಪಜೀತಿ ಪಟ್ಟ ಘಟನೆ ನಡೆದಿದೆ. ಸೋಮವಾರ ಸಂತೆ ದಿನವಾದ ಕಾರಣ ಜನಜಂಗುಳಿ ಸೇರಿದ್ದು, ಇದೇ ವೇಳೆ ಪಟ್ಟಣದ ಅಕ್ಷಯ ಲಾಡ್ಜ್ ಬಳಿ, ಟಿಬೇಟಿಯನ್ ವ್ಯಕ್ತಿಯ ಪರ್ಸ್ ಮೇಲೆ ಕಣ್ಣಿಟ್ಟಿದ್ದ ಯುವಕ ಏಕಾಏಕಿ ಪರ್ಸ್ ಹಾಗೂ ಮೊಬೈಲ್ ಗೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಹೀಗಾಗಿ, ತಕ್ಷಣವೇ ಎಚ್ಚೆತ್ತ ಟಿಬೇಟಿಗ ಚೀರಾಡಿದ್ದಾನೆ. ಹೀಗಾಗಿ, ಸಾರ್ವಜನಿಕರು ಪರ್ಸ್ ಕದ್ದೊಯ್ಯುತ್ತಿದ್ದ ಆರೋಪಿಯನ್ನು ತಕ್ಷಣವೇ ಹಿಡಿದಿದ್ದಾರೆ. ಒಂದೆರಡು ಧರ್ಮದೇಟು ನಿಡಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!
ಮುಂಡಗೋಡ: ತಾಲೂಕಿನ ಅಗಡಿ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆದ್ರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹಳಿಯಾಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್, ರಸ್ತೆಗಳ ಗುಂಡಿಗಳಲ್ಲಿ ನಿಯಂತ್ರಣ ತಪ್ಪಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿ, ರಸ್ತೆಗಳ ಅವ್ಯವಸ್ಥೆಗೆ ಜನರು ಹಿಡಿಶಾಪ ಹಾಕುವಂತಾಗಿದೆ. ಅಂದಹಾಗೆ, ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಕಬ್ಬು ಸಾಗಿಸುತ್ತಿವೆ. ಈ ವೇಳೆ ರಸ್ತೆಗಳ ಗುಂಡಿಗಳಿಂದ ಇನ್ನಿಲ್ಲದ ಕಿರಿಕಿರಿಯಾಗುತ್ತಿದೆ. ಸಂಬಂದಪಟ್ಟ ಇಲಾಖೆ ಈ ಕಡೆ ಸ್ವಲ್ಪ ಗಮನ ಹರಿಸಲಿ ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.
ಅಮ್ಮಾಜಿ ಕೆರೆಗೆ ಕಾರು ಬಿದ್ದ ಕೇಸ್; ಮೃತರ ಅಂತಿಮ ದರ್ಶನ ಪಡೆದ ಸಚಿವ ಹೆಬ್ಬಾರ್..!
ಮುಂಡಗೋಡ : ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ಅರಶಿಣಗೇರಿ ಗ್ರಾಮದ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ದಂಪತಿಗಳು ಮೃತಪಟ್ಟ ಅಹಿತಕರ ಘಟನೆ ಸಂಭವಿಸಿದ್ದು. ಘಟನೆ ಬಗ್ಗೆ ತಿಳಿದ ತಕ್ಷಣ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಮುಂಡಗೋಡದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಪ್ರಮುಖರಾದ ಉಮೇಶ್ ಬಿಜಾಪುರ, ಕೆ.ಸಿ.ಗಲಭಿ, ಸಂಜೀವ್ ಪೀಶೆ ಹಾಗೂ ಪ್ರಮುಖರು ಹಾಜರಿದ್ದರು.
ಮುಂಡಗೋಡ ಅಮ್ಮಾಜಿ ಕೆರೆಯಲ್ಲಿ ಕಾರು ದುರಂತ, ವಿಧಿಯಾಟಕ್ಕೆ ಬಲಿಯಾದವರು ಅರಶಿಣಗೇರಿ ದಂಪತಿಗಳು..!
ಮುಂಡಗೋಡ: ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ದಾರುಣ ಸಾವು ಕಂಡಿದ್ದಾರೆ. ನಸುಕಿನ ಜಾವ ಸಂಭವಿಸಿರಬಹುದಾದ ಘಟನೆ ಅಂತಾ ಹೇಳಲಾಗ್ತಿರೋ ಅಪಘಾತ ನಡೆದಿರೊದೇ ವಿಚಿತ್ರ. ಅಷ್ಟಕ್ಕೂ ಈ ಸಾವು ಅನ್ನೋದು ಇಷ್ಟು ಸಲೀಸಾ ಅನ್ನೋದೇ ಬಹುದೊಡ್ಡ ವಾಸ್ತವ..! ಮೃತರು ದಂಪತಿಗಳು..! ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ಸ್ವಿಪ್ಟ್ ಕಾರು ಇದಾಗಿದ್ದು, ಮೂಲತಃ ಮುಂಡಗೋಡ ತಾಲೂಕಿನ ಅರಶಿಣಗೇರಿಯವರಾದ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳಾಗಿದ್ದಾರೆ. ಕರವಳ್ಳಿಯಲ್ಲಿ ಸಂಬಂಧಿಯೊಬ್ಬರು ಅಸು ನೀಗಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಬೆಂಗಳೂರಿನಿಂದ ಕರವಳ್ಳಿಗೆ ಬರುತ್ತಿದ್ದರು ಎನ್ನಲಾಗಿದೆ. ಆದ್ರೆ ದಾರಿಮದ್ಯೆ ಇಂತಹದ್ದೊಂದು ದುರಂತ ಸಂಭವಿಸಿದೆ. ಇದು ವಿಚಿತ್ರ ಅಲ್ವಾ..? ಹಾಗೆ ನೋಡಿದ್ರೆ, ಅಮ್ಮಾಜಿ ಕೆರೆಯಲ್ಲಿ ಕಾರು ಬಿದ್ದ ಜಾಗ ನೋಡಿದಾಗ ವಿಚಿತ್ರ ಅನಿಸ್ತಿದೆ. ಕಾರು ಬಿದ್ದ ಜಾಗದಲ್ಲಿ ಅಬ್ಬಬ್ಬಾ ಅಂದ್ರೆ ನಾಲ್ಕು ಅಡಿಯಷ್ಟು ನೀರಿನ ಆಳವಿದೆ. ಹೀಗಾಗಿ ಕಾರು ಸಂಪೂರ್ಣವಾಗಿ ನೀರಲ್ಲಿ ಮುಳುಗೇ ಇಲ್ಲ. ಹೀಗಿದ್ದಾಗ್ಯೂ ಏಕಾ ಏಕಿ ಸಾವು ಸಂಭವಿಸುವಷ್ಟು ಘನಘೋರವಂತೂ ಅಲ್ಲವೇ ಅಲ್ಲ....
ಮುಂಡಗೋಡ ಬಳಿ ಭಾರೀ ಅಪಘಾತ, ಕೆರೆಯಲ್ಲಿ ಮುಳಗಿದ ಕಾರು, ಓರ್ವನ ಶವ ಪತ್ತೆ, ಹಲವರು ಸಿಲುಕಿರೋ ಶಂಕೆ..!
ಮುಂಡಗೋಡ ಪಟ್ಟಣದ ಹೊರವಲಯದ ಯಲ್ಲಾಪುರ ರಸ್ತೆಯ ಕೆರೆಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಕೆರೆಗೆ ನುಗ್ಗಿ, ಕಾರು ಸಂಪೂರ್ಣ ಮುಳಗಡೆಯಾಗಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು ಶವ ಕೆರೆಯಲ್ಲಿ ತೇಲಾಡುತ್ತಿತ್ತು, ಶವ ಹೊರ ತೆಗೆಯಲಾಗಿದೆ. ಇನ್ನು ಕಾರಲ್ಲಿ ಹಲವರು ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಾರು ಸಂಪೂರ್ಣವಾಗಿ ನೀರಲ್ಲಿ ಮುಳುಗಿದೆ. ಮೃತರು ಎಲ್ಲಿಯವರು, ಯಾವಾಗ ಘಟನೆ ಆಯ್ತು, ತಿಲಕಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, 108 ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಶವ ಹೊರತೆಗೆಯುವ ಕಾರ್ಯ ಮಾಡಿದ್ದಾರೆ.
ನಂದಿಕಟ್ಟಾದ ತೋಟದ ಮನೆಯಲ್ಲಿ ಹೆಣವಾಗಿ ಬಿದ್ದ ಮಾಲೀಕ, ಸಾವಿನ ಸುತ್ತ ಹಲವು ಅನುಮಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ನಂದಿಕಟ್ಟಾ ಗ್ರಾಮದ ಬಾಬು ನವಲೆನವರ್ ಎಂಬ ವ್ಯಕ್ತಿಯು ಅವರ ತೋಟದ ಮನೆಯಲ್ಲಿಯೇ ಹೆಣವಾಗಿ ಬಿದ್ದಿದ್ದಾನೆ. ಶನಿವಾರ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತನ ಬಾಯಲ್ಲಿ ರಕ್ತ ಬಂದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಧ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆಯ ನಂತರವಷ್ಟೇ ಅಸಲಿ ಸಂಗತಿ ಹೊರಬರುವ ಸಾಧ್ಯತೆ ಇದೆ.
ಇಂದೂರು ವಿದ್ಯಾರ್ಥಿಗಳಿಗೆ ಬಸ್ಸುಗಳೇ ಇಲ್ಲ..! ಅಧ್ಯಕ್ಷ ವಿ.ಎಸ್.ಪಾಟೀಲರೇ ಎಲ್ಲಿದ್ದೀರಿ..? ವಿದ್ಯಾರ್ಥಿಗಳ ಗೋಳು ಕಾಣ್ತಿಲ್ವಾ..?
ಮುಂಡಗೋಡ ತಾಲೂಕಿನಲ್ಲಿ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳ ಗೋಳು ಕೇಳೋರೇ ಇಲ್ವಾ..? ಪ್ರತಿನಿತ್ಯವೂ ಶಾಲಾ ಕಾಲೇಜಿಗೆ ಹೋಗಲು ಬಸ್ ಗಳಿಲ್ಲದೇ ಪರದಾಡುವಂತಾಗಿದೆ. ಹೀಗಾಗಿನೇ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪಾಲಕರ ಆಕ್ರೋಶದ ಕಟ್ಟೆ ಒಡೆದಿದೆ. ಇಂದೂರಿನಲ್ಲಿ ಪ್ರತಿಭಟನೆ..! ಈ ಕಾರಣಕ್ಕಾಗೇ, ಇಂದೂರಿನಲ್ಲಿ ಇಂದು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ್ರು. ಇಂದೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಕೈಗೊಂಡ ವಿದ್ಯಾರ್ಥಿಗಳಿಗೆ ಪಾಲಕರು ಹಾಗೂ ಗ್ರಾಮಸ್ಥರು ಸಾಥ್ ನೀಡಿದ್ರು. ಪ್ರತಿನಿತ್ಯ ಕಾಲೇಜಿಗೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲ, ಕೆಲವು ಬಸ್ ಗಳಿವೆ ಆದ್ರೆ ಅವುಗಳು ಎಲ್ಲೇಂದರಲ್ಲಿ ಕೆಟ್ಟು ನಿಲ್ಲುತ್ತವೆ. ಹೀಗಾಗಿ, ನಮಗೆ ಕಾಲೇಜಿಗೆ ಹೋಗಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು. ಅಧ್ಯಕ್ಷ ವಿ.ಎಸ್.ಪಾಟೀಲರೇ ಎಲ್ಲಿದ್ದೀರಿ..? ಇದು ನಿಜಕ್ಕೂ ನಾಚಿಗ್ಗೇಡಿನ ಸಂಗತಿ, ವಾಯುವ್ಯ ಕರ್ನಾಟಕ ಸಾರಿಗೆ...
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ; ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್..!
ಶಿವಮೊಗ್ಗ: ಚಲಿಸುವ ರೈಲಿನಿಂದ ಏಕಾಏಕಿ ಕೆಳಗೆ ಬಿದ್ದ ಮಹಿಳೆಯೋರ್ವಳು ಅದೃಷ್ಟವಶಾತ್ ಬಚಾವ್ ಆಗಿದ್ದಾಳೆ. ಶಿವಮೊಗ್ಗದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೆಳ್ಳಂ ಬೆಳಿಗ್ಗೆ 7 ಗಂಟೆಗೆ ತಾಳಗುಪ್ಪ- ಬೆಂಗಳೂರು ಇಂಟರ್ ಸಿಟಿ ರೈಲು ಹೊರಡುವಾಗ, ಕುಟುಂಬದವರನ್ನು ಕಳಿಸಲು ಬಂದಿದ್ದ ಮಹಿಳೆ, ರೈಲು ಹೊರಟ ನಂತರ ಇಳಿಯಲು ಯತ್ನಿಸಿದ್ದಾಳೆ.ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಅಲ್ಲೇ ಕರ್ತವ್ಯದಲ್ಲಿದ್ದ ರೇಲ್ವೇ ಪೊಲೀಸ್ ಸಮಯಪ್ರಜ್ಞೆ ತೋರಿದ್ದಾರೆ. ಹೀಗಾಗಿ, ಆ ಮಹಿಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೇಲ್ಲ ದೃಷ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.