ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಅಂಗನವಾಡಿ ಕಾರ್ಯಕರ್ತೆ ಯಾಗಿ ಕೆಲಸ ಮಾಡುತ್ತಿದ್ದರು. ಜಿಪಂ ಸದಸ್ಯರಾದ ನಂತರ ಜನವರಿ 2011 ರಿಂದ ನವಂಬರ್ 2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಸರ್ಕಾರದಿಂದ ಗೌರವಧನ ರೂ. 88,630 ಸ್ವೀಕರಿಸಿ ಸರ್ಕಾರಕ್ಕೆ ಮೋಸ ಮಾಡಿದ್ದಾಗಿ ಆರೋಪಿಸಲಾಗಿತ್ತು. ಉಷಾ ಅವರು ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಕಾರ್ಯನಿರ್ವಹಿಸಿ ಜಿಲ್ಲಾ ಪಂಚಾಯತ್ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೆ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಿರದೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ...
Top Stories
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡಸಿ ಗಾಯಗೊಳಿಸಿದ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ ದುರ್ಗಪ್ಪ ಲಕ್ಮಾಪುರ (45)ಎಂಬವನೆ ಗಾಯಗೊಂಡ ರೈತನಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಿಂದಿನಿಂದ ಬಂದ ಕರಡಿಯೊಂದು ದಾಳಿ ನಡೆಸಿ ಹಿಂಬದಿ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ರೈತ ತೀವ್ರ ಚೀರಾಟ ನಡೆಸಿದಾಗ ಕರಡಿ ಅಲ್ಲಿಂದ ಓಡಿ ಹೋಗಿದೆ. ಗಾಯಗೊಂಡ ರೈತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!
ಮುಂಡಗೋಡಿನಲ್ಲಿ ಅಕ್ಟೊಬರ್ 16 ರಂದು ನಡೆಯುತ್ತಿರೋ ಮುಂಡಗೋಡ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಎಸ್. ಪಕ್ಕೀರಪ್ಪ ಆಯ್ಕೆಯಾಗಿದ್ದಾರೆ. ಹೀಗಾಗಿ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಕಾರ್ಯಕಾರಿ ಸಮಿತಿಯಿಂದ ಅಧಿಕೃತ ಅಹ್ವಾನ ನೀಡಲಾಯಿತು. ತಾಲೂಕಾ ಕಸಾಪ ಅಧ್ಯಕ್ಷ ವಸಂತ ಕೋಣಸಾಲಿ ತಮ್ಮ ಸದಸ್ಯರುಗಳೊಂದಿಗೆ ಸೇರಿ ಎಸ್. ಪಕ್ಕೀರಪ್ಪ ರವರಿಗೆ ಸನ್ಮಾನಿಸಿ ಆಮಂತ್ರಣ ಕೋರಿದ್ರು. ಈ ವೇಳೆ ಎಸ್.ಬಿ.ಹೂಗಾರ, ಸುಭಾಸ್ ವಡ್ಡರ್, ಸಂಗಪ್ಪ ಕೋಳೂರು, ಶ್ರೀಮತಿ ಶಾರದಾ ರಾಠೋಡ, ಎಸ್. ಕೆ. ಬೋರಕರ, ಮಾಜಿ ಸಮ್ಮೇಳನ ಸರ್ವಾಧ್ಯಕ್ಷರು ಹಾಗೂ ಪತ್ರಕರ್ತರಾದ ರಾಜಶೇಖರ ನಾಯ್ಕ, ಶಿವಾನಂದ ವಾಲಿಶೆಟ್ಟರ, ನಾಗರಾಜ ಅರ್ಕಸಾಲಿ, ಮಲ್ಲಮ್ಮ ನೀರಲಗಿ, ಆನಂದ ಹೊಸೂರು,ಕು. ಸ್ನೇಹಾ ಹೊಸಮನಿ, ಸಾನಿಯಾ ಹೊಸಮನಿ ಹಾಗೂ ಪಕ್ಕೀರಪ್ಪರವರ ಧರ್ಮ ಪತ್ನಿ ಗಂಗಾ ಹೊಸಮನಿ, ಶೀಲಾ ರಾಠೋಡ ಮುಂತಾದವರು ಹಾಜರಿದ್ದರು. ಗೌರವ ಕಾರ್ಯದರ್ಶಿ ವಿನಾಯಕ. ಶೇಟ್ ಸ್ವಾಗತಿಸಿದರು, ಎಸ್ ಡಿ. ಮುಡೆಣ್ಣವರ ವಂದಿಸಿದರು.
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ. ನಂತರ ಭೀಮನಗೌಡ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಕಾರವಾರ : ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಣಕೋಣ ಸಾಂತೇರಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ವಿನಾಯಕ ನಾಯ್ಕ(58) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ ಇನ್ನೂ ಆತನ ಪತ್ನಿ ವಿಶಾಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದಾಳೆ. ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇತ್ತಿಚೇಗೆ ಹಣಕೋಣದ ಸಾಂತೇರಿ ದೇವರ ಜಾತ್ರೆಗಾಗಿ ಊರಿಗೆ ಬಂದಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗಿನ ಜಾವ 5ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ವಿನಾಯಕ ನಾಯ್ಕ ಮನೆಯ ಕೋಣೆಯಲ್ಲೇ ಪ್ರಾಣಬಿಟ್ಟಿದ್ದಾನೆ. ಇನ್ನೂ ಆತನ ಪತ್ನಿ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಚಿತ್ತಾಕುಲ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ. ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಇಂದೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಆಯ್ಕೆಯಾಗಿದ್ದಾರೆ. ಅಸಲು, ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ ಆಗಿರೋದು ವಿಶೇಷ. ಶಶಿಧರ್ ಪರವಾಪುರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅಂದಹಾಗೆ, 16 ಸದಸ್ಯ ಬಲದ ಇಂದೂರು ಗ್ರಾಮ ಪಂಚಾಯತಿಯಲ್ಲಿ ನಾಲ್ಕನೇ ಅವಧಿಗೆ ಫಕ್ಕಿರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗ್ತಿದಾರೆ. ವಿಚಿತ್ರ ಅಂದ್ರೆ ಈ ಹಿಂದೆ ಇದೇ ಗ್ರಾಮ ಪಂಚಾಯತಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬಿಜೆಪಿ ಬೆಂಬಲಿತರು ಕೇವಲ ನಾಲ್ಕೇ ಸದಸ್ಯ ಬಲಕ್ಕೆ ಕುಸಿದಿದ್ದು, ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ಕೂಡ ಸಲ್ಲಿಸಿಲ್ಲ. ಹೀಗಾಗಿ, ಫಕ್ಕಿರೇಶ್ ತಾವರಗೇರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಯ ಕಿಮ್ಸ್ ಗೆ ರವಾನಿಸಲಾಗಿದೆ. ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಈ ವೇಳೆ, ಉಪಾಧ್ಯಕ್ಷ ಕಸ್ತೂರಿ ಹರಿಜನ, ಸದಸ್ಯರ ಕಲ್ಲಪ್ಪ ಸುಣಗಾರ್, ಫಕ್ಕಿರೇಶ್ ತಾವರಗೇರಿ, ರೇಣುಕಾ ಕುರಿ, ಪ್ರಭಾವತಿ ಇಂಗಳೆ ಮುಖಂಡರಾದ ಬಸವರಾಜ್ ಹೊಂಡದಕಟ್ಟಿ, ಅಂದಾನಿ ಸೂರಣ್ಣವರ್, ಮಲ್ಲಿಕಾರ್ಜುನ ಸುಣಗಾರ ಸೇರಿದಂತೆ ಹಲವರು ಹಾಜರಿದ್ದರು.
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಮುಂಡಗೋಡ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರ ಶ್ರೀಗಂಧ ಮರ ಕಳ್ಳತನ ವಿಫಲ ಯತ್ನ ನಡೆದಿದೆ. ಎಸ್.ನಾರಾಯಣರಾವ್ ಎಂಬುವವರ ಮನೆ ಆವರಣದಲ್ಲಿ ಘಟನೆ ನಡೆದಿದ್ದು ಮರ ಕಡಿದು ಸಾಗಿಸಲಾಗದೇ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂದಹಾಗೆ, ಇದೇ ಸ್ಥಳದಲ್ಲಿ ಈ ಹಿಂದೆಯೂ ಶ್ರೀಗಂಧದ ಮರಗಳ ಕಳ್ಳತನದ ವಿಫಲ ಯತ್ನಗಳು ನಡೆದಿತ್ತು. ಆದ್ರೆ, ಇವತ್ತು ನಡೆದಿರೋ ಘಟನೆ ಖಚಿತತೆಯಿಂದಲೇ ಕಳ್ಳರು ಬಂದು, ಇನ್ನೇನು ಸಾಗಿಸುವ ಹಂತದಲ್ಲಿ ಅರ್ದಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮತ್ತದೇ ಪ್ರಕರಣ ದಾಖಲಿಸಿಕೊಂಡು ಮುಂದಿನ “ಕಠಿಣ” ಕ್ರಮಕ್ಕೆ ಮುಂದಾಗಿದ್ದಾರೆ.