ಹಾನಗಲ್- ಅದೇನು ನಿಷ್ಕರುಣೆಯೋ ಗೊತ್ತಿಲ್ಲ, ಅಥವಾ ಪೋಷಕರ ನಿರ್ಲಕ್ಷವೋ ಗೊತ್ತಿಲ್ಲ.. ಹಾಲುಗಲ್ಲದ ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದಾರೆ.. ಇದು ನಡೆದದ್ದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ನಾಲ್ಕರ ಕ್ರಾಸ್ ಬಳಿ.. ಮುದ್ದು ಕಂದನನ್ನು ಒಬ್ಬಂಟಿಯಾಗಿ ಹಡೆದ ತಾಯಿಯೊಬ್ಬಳು ಬಿಟ್ಟು ಹೋದ ಮನಕಲುಕುವ ಘಟನೆ ಇದು.. ಸುಮಾರು 8-10 ತಿಂಗಳ ಮುದ್ದಾದ ಗಂಡು ಮಗುವನ್ನು ಇಲ್ಲಿನ ಡಾಬಾ ವೊಂದರಲ್ಲಿ ಯಾರೋ ಅಪರಿಚಿತರು ಮಗುವನ್ನು ತಂದು ಆಟವಾಡಿಸುವ ನೆಪದಲ್ಲಿ ಬಿಟ್ಟು ಹೋಗಿದ್ದಾರೆ.. ಮುದ್ದಾದ ಗಂಡು ಮಗು ಕಂಡು ಸ್ಥಳೀಯರು ಮಮ್ಮಲು ಮರುಗಿದ್ದಾರೆ..ಇದನ್ನು ಗಮನಿಸಿದ ಸ್ಥಳೀಯರು ಹಾನಗಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಮಗು ಪೋಷಕರ ಬಳಿ ಇದ್ದುದರ ವಿಡಿಯೋ ಲಭ್ಯವಾಗಿದೆ… ಆದರೆ ಇದು ಅವಳ ಮಗುನಾ ಅಥವಾ ಕದ್ದಿರುವ ಮಗುನಾ ಎಂಬ ವಿಚಾರ ತಿಳಿಯುವುದಕ್ಕೂ ಮುನ್ನ ಆ ಮಹಿಳೆ ನಾಪತ್ತೆಯಾಗಿದ್ದಾಳೆ.. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹಾನಗಲ್ ಪೊಲೀಸ್ ರು ಹಾಗೂ ಹಾನಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷಕುಮಾರ್, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಇದೀಗ...
Top Stories
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಪುಟ್ಟ ಮಗು ಬಿಟ್ಟು ಹೋದ್ರಾ ಪೋಷಕರು..? ಹೆತ್ತಮ್ಮನಿಗಾಗಿ ಹಂಬಲಿಸುತ್ತಿದೆ ಕಂದಮ್ಮ.. ಅಕ್ಕಿ ಆಲೂರಿನಲ್ಲಿ ಮನಕಲಕುವ ಘಟನೆ
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ
ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರೋ ಶಿವರಾಮ್ ಹೆಬ್ಬಾರ್, ಶ್ರಿಪಾದ ನಾಯ್ಕರು ಶೀಘ್ರ ಗಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ..
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ, ಬಸವರಾಜ್ ಆಸ್ತಕಟ್ಟಿ, ಮರಿಯಪ್ಪ ಬೆನಕನಳ್ಳಿ, ಫಕ್ಕಿರಯ್ಯ ಹಿರೇಮಠ್, ಶೇಖಪ್ಪ ನಡುವಿನಮನಿ ಸೇರಿ ಹಲವರು ಉಪಸ್ಥಿತರಿದ್ದರು.. ಮುಂಡಗೋಡ ತಾಲೂಕಿನಲ್ಲಿ ಇಂದು ಲಾಡ್ ಪ್ರವಾಸ.. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ, ಮಾಜಿ ಸಚಿವ ಸಂತೋಷ್ ಲಾಡ್ ಇಂದು ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.. ಹುನುಗುಂದ ಗ್ರಾಮದಿಂದ ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಕಾರ್ಯಕರ್ತರನ್ನು ಭೇಟಿಯಾಗಲು...
ಹುನಗುಂದ ಗ್ರಾಮಕ್ಕೆ ಜಿಪಂ ಸಿಇಓ ಪ್ರಿಯಾಂಗಾ ಭೇಟಿ; ನರೇಗಾ ಕಾಮಗಾರಿಗಳ ವೀಕ್ಷಣೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು.. ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು.. ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು.. ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..
2019-20 ರಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ; 7.72 ಕೋಟಿ ರೂ. ಲಾಭ- ಸಚಿವ ಹೆಬ್ಬಾರ್
ಶಿರಸಿ : 2019 – 20 ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಈ ಬಾರಿ ಬ್ಯಾಂಕ್ ಒಟ್ಟು 7.72 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಅಂತಾ ಕಾರ್ಮಿಕ ಹಾಗು ಸಕ್ಕರೆ ಖಾತೆ ಸಚಿವ ಬ್ಯಾಂಕ್ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ರು.. ಅವರು ಇಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 2019 – 20 ಸಾಲಿನ ಬ್ಯಾಂಕ್ ನ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿ ಸಂಕ್ಷಿಪ್ತ ವರದಿಯನ್ನು ನೀಡಿ ಮಾತನಾಡುತ್ತಿದ್ದರು.. ಬ್ಯಾಂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ವಿವಿಧ ಕೃಷಿ ಉದ್ದೇಶಗಳಿಗೆ ಮಾಧ್ಯಮಿಕ ಸಾಲ ನೀಡುತ್ತಿದ್ದು , ನಮ್ಮ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಬೆಳೆಗಳ ಬಗ್ಗೆಯೂ ಸಹ ಸಾಲ ನೀಡಲಾಗುವುದು ಅಂತಾ ಘೋಷಿಸಿದ ಸಚಿವ್ರು, ಬ್ಯಾಂಕ್ ನ ಈ ಪ್ರಗತಿಗೆ ಕಾರಣವಾದ ಗ್ರಾಹಕರಿಗೆ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಮೋಹನ ನಾಯಕ ಹಾಗೂ...
ಮುಂಡಗೋಡ ಪೊಲೀಸರ ಮಿಂಚಿನ ಕಾರ್ಯ; ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಟೊ ಹಾಕಿದ್ದವ ಅಂದರ್
ಮುಂಡಗೋಡ- ತಾಲೂಕಿನ ಯುವತಿಯೋರ್ವಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಬರೆದು, ಅಶ್ಲೀಲ ವಿಡಿಯೋ, ಪೋಟೋಗಳನ್ನು ಹರಿಬಿಟ್ಟ ಬೆಂಗಳೂರಿನ ಯುವಕನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.. ದಿನಾಂಕ 14-12-2020 ರಂದು ಮುಂಡಗೋಡ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದ ಯುವತಿಯೋರ್ವಳು, ಯಾರೋ ಒಬ್ಬ ವ್ಯಕ್ತಿ ತನ್ನ ಬಗ್ಗೆ ಅಶ್ಲೀಲ ವಿಡಿಯೋ ಹಾಗೂ ಪೋಟೊಗಳನ್ನು ಫೇಸ್ ಬುಕ್, ವಾಟ್ಸ್ ಅಪ್, ಇನ್ ಸ್ಟ್ರಾಗ್ರಾಂ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.. ಇದ್ರಿಂದ ನನಗೆ ಹಾಗೂ ನನ್ನ ಕುಟುಂಬದ ತೇಜೋವಧೆಯಾಗುತ್ತಿದೆ.. ಹೀಗಾಗಿ, ಕ್ರಮ ಕೈಗೊಳ್ಳಿ ಅಂತಾ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಳು.. ಈ ಕುರಿತು ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸ್ ರು ಆರೋಪಿತನ ಪತ್ತೆಗೆ ಜಾಲ ಬೀಸಿದ್ರು.. ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಯನ್ನ ಬಂಧಿಸಿ ತಂದಿದ್ದಾರೆ.. ಜೀವನಕುಮಾರ ಧನಂಜಯ (21), ಬಂಧಿತ ಯುವಕನಾಗಿದ್ದು, ಬೆಂಗಳೂರಿನ ಭಾಷ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.. ಮೂಲತಃ ರಾಮನಗರ ಜಿಲ್ಲೆಯ ಅಂಚೀಪುರ ಕಾಲೋನಿ ಬೈರಮಂಗಲ ಗ್ರಾಮದವನಾಗಿದ್ದು, ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದ.. ಹೀಗಾಗಿ, ಬೆಂಗಳೂರಿನಿಂದಲೇ ಬಂಧಿಸಿ ಕರೆ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ ತುಕಾರಾಮ್ ಹೊನ್ನಳ್ಳಿ ನಾಮಪತ್ರ ಸಲ್ಲಿಸಿದ್ರು.. ಇಲ್ಲಿ ಬಹುತೇಕ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮದ್ಯೆ ನೇರ ಹಣಾಹಣಿ ನಡಿಯೋ ಸಾಧ್ಯತೆ ಇದ್ದು ತೀವ್ರ ಜಿದ್ದಾ ಜಿದ್ದು ಏರ್ಪಡುವ ಲಕ್ಷಣಗಳಿವೆ.. ಈಗಾಗಲೇ ಬಿಜೆಪಿ ಬೆಂಬಲಿತರಾಗಿ ನಾಮಪತ್ರ ಸಲ್ಲಿಸಿರೋ ವಿನೋದ್ ಬಿಸನಳ್ಳಿ ವಿರುದ್ಧ ತೊಡೆತಟ್ಟಿರೋ ತುಕಾರಾಮ್ ಹೊನ್ನಳ್ಳಿ ಅದ್ಯಾವ ಮಟ್ಟಿಗೆ ಠಕ್ಕರ್ ಕೊಡ್ತಾರೋ ಕಾದು ನೋಡಬೇಕಿದೆ.. ಈಶ್ವರಗೌಡ ವರ್ಸೆಸ್ ಮಹಾವೀರ್ ಇನ್ನು ಹುನಗುಂದ ಗ್ರಾಮ...
ವಿದ್ಯುತ್ ಅವಘಡ; ಭತ್ತದ ಮೇವು ತುಂಬಿದ್ದ ಟ್ರಾಕ್ಟರ್ ಗೆ ಬೆಂಕಿ, ಹಾನಿ
ಮುಂಡಗೋಡ- ಭತ್ತದ ಒಣಮೇವು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ತಾಲೂಕಿನ ಪಾಳಾದಲ್ಲಿ ನಡೆದಿದೆ.. ವಿದ್ಯತ್ ಕಂಬದ ಲೈನ್ ತಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು ಟ್ರಾಕ್ಟರ ನಲ್ಲಿ ಸಾಗಿಸುತ್ತಿದ್ದ 0.5 ಎಕರೆಯ, ಸುಮಾರು 50 ಸಾವಿರ ರೂ. ಮೌಲ್ಯದ ಬತ್ತದ ಮೇವು ಸುಟ್ಟು ಭಸ್ಮವಾಗಿದೆ.. ಅದೃಷ್ಟವಶಾತ್ ಟ್ರಾಕ್ಟರ್ ಗೆ ಯಾವುದೇ ಹಾನಿಯಾಗಿಲ್ಲ.. ಇಕ್ಬಾಲ್ ಬಾರಾಸಾಬ್ ಹೊಂಡದ ಎಂವುವವರಿಗೆ ಸೇರಿದ ಮೇವು ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಆಗಬಹುದಾಗಿದ್ದ ಹೆಚ್ಚಿನ ಹಾನಿ ತಡೆದಿದ್ದಾರೆ..