ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ ಒಳ ಒಪ್ಪಂದಗಳಾಗಿದ್ದವು. ಅದ್ರಂತೆ ಬಹುತೇಕ 15-15 ರ ಮಾತುಕತೆ ಆಗಿದ್ದವು. ಆದ್ರೆ, ಹಾಗೆ ಒಪ್ಪಂದಗಳಿಗೆ ಒಳಪಟ್ಟು ಅಧ್ಯಕ್ಷ ಪದವಿಗೆ ಏರಿದ್ದ ಅಧ್ಯಕ್ಷರುಗಳು 15 ತಿಂಗಳು ಕಳೆದು ಹಳೇ ಮಾತಾದ್ರೂ, ಅಧಿಕಾರ ಹಸ್ತಾಂತರಿಸುವ ಗೋಜಿಗೇ ಹೋಗಿರಲಿಲ್ಲ. ಹೀಗಾಗಿ, ಆಯಾ ಗ್ರಾಮ ಪಂಚಾಯತಿಗಳಲ್ಲಿ ಪಟ್ಟಕ್ಕೇರಿದ್ದ ಬಿಜೆಪಿ ಬೆಂಬಲಿತರಲ್ಲೇ ಕಚ್ಚಾಟಗಳು ಹಾದಿ ಬೀದಿಗೆ ಬಂದಿದ್ದವು. ಕೆಲವು ಕಡೆ ಕೋರ್ಟ್ ಅಂಗಳಕ್ಕೂ ಹೋಗಿ ತಡೆಯಾಜ್ಞೆ, ತೆರವು ಆಜ್ಞೆ ಅಂತೇಲ್ಲ...

ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

 ಮುಂಡಗೋಡ: ತಾಲೂಕಿನ ಮಜ್ಜಿಗೇರಿ ಬಳಿಯ ಕಾಡಿನಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಅನುಮಾನ ದಟ್ಟವಾಗಿದೆ. ಕಾಡಿನಲ್ಲಿ ಮೇಯಲು ಹೋಗಿದ್ದ ಬರೋಬ್ಬರಿ 12 ಕುರಿಗಳನ್ನು ಚಿರತೆ ಕೊಂದು ಹಾಕಿದೆ ಅಂತಾ ಹೇಳಲಾಗ್ತಿದೆ. ಮಜ್ಜಿಗೇರಿ ಗ್ರಾಮದ ಬರಮಣ್ಣ ಉಗ್ರಾಣಿ ಎಂಬುವವರಿಗೆ ಸೇರಿದ 10 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ನಿನ್ನೆ ಸಂಜೆ 4 ಗಂಟೆಯ ಹೊತ್ತಿನಲ್ಲಿ ಚಿರತೆಯನ್ನು ಬರಮಣ್ಣ ನೋಡಿದ್ದಾರೆ ಎನ್ನಲಾಗಿದೆ. ಆದ್ರೆ, ಹಾಗೆ ಚಿರತೆ ಕಂಡ ತಕ್ಷಣವೇ ಭಯದಿಂದ ಕಾಲ್ಕಿತ್ತಿರೊ ಬರಮಣ್ಣ ಉಗ್ರಾಣಿಯವರ 10 ಕುರಿಗಳು ಹಾಗೆ ಬೇರೆಯವರ 2 ಕುರಿಗಳು ನಾಪತ್ತೆಯಾಗಿವೆ. ರಾತ್ರಿ ಹುಡುಕಾಡಿದ್ರೂ ಕುರಿಗಳು ಪತ್ತೆಯಾಗಿರಲಿಲ್ಲ. ಆದ್ರೆ, ಬೆಳಿಗ್ಗೆ ಕಾಡಿನಲ್ಲಿ ಕುರಿಗಳು ಮೃತಪಟ್ಟಿರೋದು ಪತ್ತೆಯಾಗಿದೆ. 6 ಕುರಿಗಳ ಮೃತದೇಹಗಳು ಪತ್ತೆಯಾಗಿವೆ. ಹೀಗಾಗಿ, ಚಿರತೆಯೇ ಕುರಿಗಳನ್ನು ತಿಂದು ಹಾಕಿದೆ ಅನ್ನೋ ಅನುಮಾನ ಶುರುವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಗಮನಿಸಬೇಕಿದೆ.

ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ: ನಾಳೆ ಶುಕ್ರವಾರ ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಆದೇಶ ನೀಡಿರುವಂತೆ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!

ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!

 ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ಬೇಡ ಜಂಗಮ, ಬುಡ್ಗ ಜಂಗಮ, ಮಾಲ ಜಂಗಮದವರಾದ ನಮಗೆ ಸಂವಿಧಾನಾತ್ಮಕವಾಗಿ ಸಿಗುವ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಂಗಮ ಸಮುದಾಯದಿಂದ ಮನವಿ ನೀಡಲಾಯಿತು. ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ. ಸತ್ಯ ಪ್ರತಿಪಾದನಾ ಸತ್ಯಾಗ್ರಹದ ನೇತೃತ್ವ ವಹಿಸಿರುವ ನ್ಯಾಯವಾದಿ ಬಿ. ಡಿ. ಹಿರೇಮಠ ಅವರು ಬೇಡ ಜಂಗಮ ಸಮುದಾಯದ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನಮ್ಮೇಲ್ಲರ ಬೆಂವಲವಿದೆ ಅಂತಾ‌ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ವೇಳೆ, ರುದ್ರಮನಿ ಶಾಸ್ತ್ರಿಗಳು, ಬಸಯ್ಯ ಶಾಸ್ತ್ರಿಗಳು, ಮಂಜುನಾಥ್ ಹಿರೇಮಠ, ಶಿವಯೋಗಿ ಕೂಡಲಮಠ, ಚನ್ನಬಸಯ್ಯ ಹಿರೇಮಠ, ನಿಂಗಯ್ಯ ಸುರಗಿ ಮಠ,...

ಬೋಟ್ ನಲ್ಲಿ ನದಿ ದಾಟುತ್ತಿದ್ದ ವೇಳೆ ನದಿಯಲ್ಲೇ ಸಿಲುಕಿದ ಐವರ ರಕ್ಷಣೆ..!

ಬೋಟ್ ನಲ್ಲಿ ನದಿ ದಾಟುತ್ತಿದ್ದ ವೇಳೆ ನದಿಯಲ್ಲೇ ಸಿಲುಕಿದ ಐವರ ರಕ್ಷಣೆ..!

ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ.  ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಈ ತಾತ್ಕಾಲಿಕ ಸೇತುವೆಯ ಮೇಲೂ ನೀರು ಹರಿದು ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕ ಕಡಿತಗೊಂಡಿದ್ದು, ಹತ್ತಾರು ಹಳ್ಳಿಗಳ ಜನತೆ ನಡುಗಡ್ಡೆಯಲ್ಲಿ ಜೀವನ ನಡೆಸುವಂತಾಗಿದೆ. ಈ ಎರಡೂ ಗ್ರಾಮಗಳ ನಡುವೆ ಓಡಾಟಕ್ಕೆ ಸದ್ಯ ಬೋಟನ್ನು ಬಳಸಲಾಗುತ್ತಿದ್ದು, ಹೀಗೆ ಗುಳ್ಳಾಪುರದಿಂದ ಡೋಂಗ್ರಿಗೆ ಬೋಟಿನಲ್ಲಿ ತೆರಳುತ್ತಿದ್ದ ಐವರು ರಭಸದ ಗಂಗಾವಳಿ ನದಿಯ ನಡುವೆ ಸಿಲುಕಿದ್ದಾರೆ. ಈ ಬೋಟು ಈ ಮೊದಲು ಹಾಳಾಗಿತ್ತು. ನಿನ್ನೆಯಷ್ಟೆ ದುರಸ್ತಿ ಮಾಡಿ ನದಿಗೆ ಇಳಿಸಲಾಗಿತ್ತು...

ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?

ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?

ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು.  ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ ಪ್ರದೇಶಕ್ಕೆ ಆಗಮಿಸಿರುವ ಕಾಳಿಂಗ ಸರ್ಪ ಕಂಡು ಸ್ಥಳೀಯರು ಆತಂಕಗೊಂಡಿದ್ದರು. ಹೀಗಾಗಿ, ಕಾಳಿಂಗ ಸರ್ಪ ರಕ್ಷಣೆ ಬಳಿಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು, ಸೆರೆಹಿಡಿದ ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗಳು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.

ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!

ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!

ಧಾರವಾಡ – ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆಗೆ ಬಂದಿದ್ದ ಶ್ರೀಗಳ ಕಾರು ಅಪಘಾತವಾಗಿದೆ. ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾಗಿದೆ. ಆದ್ರೆ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಗಳ ಕಾಲಿಗೆ ಚಿಕ್ಕಪುಟ್ಟ ಗಾಯವಾಗಿದೆ. ಸದ್ಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರು ಕಾರಿನಲ್ಲಿದ್ದರು. ಎಲ್ಲರಿಗೂ ಸಣ್ಣ ಪುಟ್ಟ ಗಾಯ ಹೊರತುಪಡಿಸಿದರೆ ಯಾವುದೇ ಗಂಭೀರ ಪ್ರಮಾಣದ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗಡಿಭಾಗದಲ್ಲಿ ಅಪಾರ ಭಕ್ತ ಸಮೂಹ ಹೊಂದಿರುವ ಶ್ರೀಗಳು, ಸರಳತೆಯ ಮೂಲಕ ಉತ್ತರ ಕರ್ನಾಟಕದ ನಡೆದಾಡುವ ದೇವರು ಅಂತಲೇ ಪ್ರಖ್ಯಾತಿ ಪಡೆದಿದ್ದಾರೆ. ಹೀಗಾಗಿ, ಜಗದ್ಗುರು ಪಂಚಮ ಶಿವಲಿಂಗೇಶ್ವರ ಕಾರು ಅಪಾಘತವಾಗಿರುವ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ...

21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?

21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?

 ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇ‌ಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕರೆತರಲಾಯಿತು.

ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!

ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ‌ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ‌ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ‌ಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.

ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!

ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು. ವಿವಿಧ ವೇಷ ಭೂಷಣಗಳೊಂದಿಗೆ ದಲೈ ಲಾಮಾರವರ ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು.

error: Content is protected !!