ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು ನನ್ನ ಜೊತೆ ಮಾತಾಡಿಲ್ಲ ಅಂದ್ರು. ಮೊದಲೇ ನಿಂಗೆ ಟಿಕೆಟ್ ಸಿಗಲ್ಲ ಅಂತಾ ಹೇಳಿದ್ದಿದ್ರೆ ನಾನು ಮನಸ್ಥತಿಯನ್ನು ಬದಲಾಯಿಸಿಕೊಳ್ತಿದ್ದೆ. ಆದ್ರೆ, ಕೊನೆ ಗಳಿಗೆವರೆಗೂ ಗುಟ್ಟು ಬಿಟ್ಟು ಕೊಡದೆ ನಂಗೆ ನೋವು ನೀಡಿದ್ರು ಅಂತಾ ಸವದಿ ಅಸಮಾಧಾನ ಹೊರ ಹಾಕಿದ್ರು.. ಬೊಮ್ಮಾಯಿ ಪಿಎಂ ಆಗ್ತಾರೆ..! ಇನ್ನು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಬೊಮ್ಮಾಯಿ ವಿರುದ್ದ ಆಕ್ರೋಶ ಹೊರಹಾಕಿದ್ದು, ಕಾಂಗ್ರೆಸ್ ಸೇರಲು ಹೊರಟಿದ್ದ ಬೊಮ್ಮಾಯಿವರನ್ನು ನಾನು,...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಅಗಡಿಯ 10 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ, ಕಮಲ ಮುಡಿದ ಕಾಂಗ್ರೆಸ್ ಮುಖಂಡನ ಸಹೋದರ..!
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸುಮಾರು ಹತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಯಲ್ಲಾಪುರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್.ಟಿ. ಪಾಟೀಲ್ ಸೇರಿದಂತೆ ಸಿದ್ದಪ್ಪ ಹಡಪದ್, ವಿವೇಕ್ ಹೆಬ್ಬಾರ್ ಕಾರ್ಯಕರ್ತರಿಗೆ ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡರು. ಅಗಡಿ ಗ್ರಾಮದ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ರ ಸಹೋದರ ಸುನೀಲ್ ನಾಯ್ಕ್ ಸೇರಿದಂತೆ ಸುಮಾರು ಹತ್ತು ಜನ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಇನ್ನು ಸಂಜು ನಾಯ್ಕ್, ಪ್ರಸನ್ನ ನಾಯ್ಕ್, ಮಾರುತಿ ವಾಲ್ಮೀಕಿ, ಶೇಖಪ್ಪ ಗಳಗಿ, ಗದಗಯ್ಯ ಹಿರೇಮಠ, ಕಲ್ಲಪ್ಪ ವಾಲ್ಮೀಕಿ, ಚನ್ನಪ್ಪ ಜಿನ್ನೂರ, ಮುತ್ತು ಕುಮ್ಮಣ್ಣಿ, ಸುಪುತ್ರಪ್ಪ ವಾಲ್ಮೀಕಿ ಬಿಜೆಪಿ ಸೇರಿದ್ದಾರೆ.
ಇಂದೂರು ಕೊಪ್ಪದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು..!
ಮುಂಡಗೋಡ: ತಾಲೂಕಿನ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಕೊಪ್ಪ ಗ್ರಾಮದಲ್ಲಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪಕ್ಷದ ಶಾಲು ಹೊದಿಸಿ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇಂದೂರಿನ ಬಿಜೆಪಿ ಮುಖಂಡ ಬಿ.ಕೆ.ಪಾಟೀಲ್, ಕೊಪ್ಪ ಗ್ರಾಮದ ಚನ್ನಬಸಪ್ಪ ಮುಂಗೈ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಹಿರಿಯ ದುರೀಣ ಎಚ್.ಎಂ.ನಾಯ್ಕ್, ಮಹ್ಮದ್ ರಫೀಕ್ ದೇಸಳ್ಳಿ, ಪಿ.ಜಿ.ತಂಗಚ್ಚನ್, ರಾಜಶೇಖರ್ ಪಾಟೀಲ್, ಯುವ ಕಾಂಗ್ರೆಸ್ ಮುಖಂಡರಾದ ಬಸನೂ ನಡುವಿನಮನಿ, ಬಸು ಹರಿಜನ, ಧರ್ಮರಾಜ್ ನಡಗೇರಿ, ಬಿಷ್ಟನಗೌಡ ಪಾಟೀಲ್, ಮಲ್ಲಿಕಾರ್ಜುನ ಸುಣಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ. ಹೀಗಾಗಿ, ಮನೆಯಲ್ಲಿ ಮಲಗಿದ್ದ ಯಂಕುಬಾಯಿ, ಶಾರದಾ ಅವ್ರ ಮೇಲೆ ಗೋಡೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾನಪ್ಪಿದ್ದಾರೆ. ಇನ್ನು, ಅಗ್ನಿಶಾಮಕ ದಳ ಸಿಬ್ಬಂದಿಗಳ ಸಾಹಾಯದಿಂದ ಶವಗಳನ್ನ ಹೊರತಗೆಯಲಾಗಿದ್ದು, ಬಾದಾಮಿ ತಾಲೂಕು ಆಸ್ಪತ್ರೆಯಲ್ಲಿ ಮೃತ ಮಹಿಳೆಯರ ಶವ ಪರೀಕ್ಷೆ ನಡೆದಿದೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!
ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್ ಅಮರೀಶ್ ಕುಮಾರ್ ಹಾಗೂ ಭಟ್ಕಳ ಮೂಲದ ಮಹ್ಮದ ಅಲಿ ಗಾಂಜಾ ಕೇಸಲ್ಲಿ ಅಂದರ್ ಆದ ಆರೋಪಿಗಳು. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಕ್ರೈಂ ಪಿಎಸ್ ಐ ಎನ್.ಡಿ. ಜಕ್ಕಣ್ಣನವರ್, ಪಿಎಸ್ಐ ಯಲ್ಲಾಲಿಂಗ ಕುನ್ನೂರು, ಸಿಬ್ಬಂದಿಗಳಾದ ಅನ್ವರ್ ಖಾನ್, ಕೊಟೇಶ್ ನಾಗರಳ್ಳಿ, ಅಣ್ಣಪ್ಪ ಬುಡಗೇರ, ಮಹಾಂತೇಶ್ ಮುದೋಳ್, ಸಂಜು ರಾಠೋಡ್, ಗಿರೀಶ್ ಹಾಗೂ ಶರತ್ ದಾಳಿಯಲ್ಲಿ ಭಾಗಿಯಾಗಿದ್ರು.
ನಂದಿಗಟ್ಟಾದಲ್ಲೂ ಶೃದ್ಧಾ ಭಕ್ತಿಯ ಹನುಮ ಜಯಂತಿ, ಅನ್ನ ಸಂತರ್ಪಣೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಹನುಮಭಕ್ತರಿಂದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬೆಳಗಿನಿಂದಲೂ ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ರಾಘು ಕಾಂಬಳೆ, ನವೀನ ಸವಣೂರು, ಸೋಮಶೇಖರ್, ದಿಲಿಪ್, ಕಿರಣ್ ಖಾರದ್, ಮಹದೇವ್ ಕಾಂಬ್ಳೆ, ಸುನಿಲ್ ಕೊಟಗುಣಸಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡಿನಲ್ಲಿ ಶೃದ್ಧಾ ಭಕ್ತಿಯ ಹನುಮ ಜಯಂತಿ, ಹಿಂದು ಕಾರ್ಯಕರ್ತರ ಸಂಭ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಹನುಮ ಜಯಂತಿಯ ಸಂಭ್ರಮ ಜೋರಾಗಿತ್ತು. ಇಲ್ಲಿನ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಓಣಿಯ ಹತ್ತಿರ ಇರೋ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಈ ವೇಳೆ ರವಿ ಗೌಡ ಪಾಟೀಲ್, ಫಣಿರಾಜ್ ಹದಳಗಿ, ಶೇಖರ್ ಲಮಾಣಿ, ಶಂಕರ್ ಲಮಾಣಿ, ರವಿ ಹಾವೇರಿ, ಮಂಜುನಾಥ್ ಹರಮಲ್ಕರ್, ಅಯ್ಯಪ್ಪ ಭಜಂತ್ರಿ, ಲಕ್ಷ್ಮಣ ಲಮಾಣಿ, ಉದಯ್ ಪಾಲೇಕರ್, ಬಸವರಾಜ ತನಿಕೆದಾರ್, ಶಂಭು ನಿಡಗುಂದಿ. ಪ್ರಕಾಶ ಬಡಿಗೇರ್, ಮಂಜು ಹರಿಜನ್, ವಿನಾಯಕ ರಾಯ್ಕರ್, ವಿಶ್ವ ನಾಯರ್, ರವಿ ನಿಡಗುಂದಿ, ವಿನೋದ್ ಲಮಾಣಿ, ವಿಷ್ಣು ರಾಠೋಡ್, ಮಹೇಶ್ ರಾಠೋಡ್, ವಿಷ್ಣು ಲಮಾಣಿ, ಷಣ್ಮುಖ ಕೋಳೂರು, ಬಸ್ಸು ಲಮಾಣಿ, ಗುರು ಕಾಮತ್ ಸೇರಿದಂತೆ ಹಲವು ಹಿಂದು ಕಾರ್ಯಕರ್ತರು ಉಪಸ್ಥಿತರಿದ್ದರು.
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು ಯಲ್ಲಾಪುರ ಕ್ಷೇತ್ರದ ಮುಂದಿನ ಅಭ್ಯರ್ಥಿಯಾಗೋದು ಪಕ್ಕಾ, ಯಾವುದೇ ಅಳುಕಿಲ್ಲದೇ ಪಕ್ಷ ಸೇರ್ಪಡೆಯಾಗಿ ಅಂತಾ ರಾಜ್ಯ ನಾಯಕರು ಇನ್ವೈಟ್ ಮಾಡಿದ್ರಂತೆ. ಹಾಗಂತ, ವಿ.ಎಸ್.ಪಾಟೀಲರ ಆಪ್ತ ಬಳಗ ಹೇಳಿಕೊಂಡಿದೆ. ಸದ್ಯ ಕಾಂಗ್ರೆಸ್ ಟಿಕೆಟ್ ಸಿಕ್ಕಿರೋದು ಕ್ಷೇತ್ರದಲ್ಲಿ ಮತ್ತೊಂದು ಸಂಚಲನಕ್ಕೆ ಕಾರಣವಾಗಿದೆ. ನೆಕ್ ಟೂ ನೆಕ್…! ಅಂದಹಾಗೆ, ಯಲ್ಲಾಪುರ ಕ್ಷೇತ್ರದಲ್ಲಿ ಈ ಬಾರಿ ಇನ್ನಿಲ್ಲದ ಜಿದ್ದಾ ಜಿದ್ದು ಏರ್ಪಡುವ ಎಲ್ಲಾ ಲಕ್ಷಣ ಇದೆ. ಅದ್ಯಾರೇ ಗೆದ್ರೂ ಸಾವಿರಗಳ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಹುಬ್ಬಳ್ಳಿಯ ಬಂಜಾರಾ ಪೀಠದ ಶ್ರೀಗಳಾದ ಶ್ರೀ ತಿಪ್ಪೇಶ್ವರ ಸ್ವಾಮೀಜಿಯವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದಲೇ ಕೆಳಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ರು. ಹೀಗಾಗಿ ಇದೇ ವೇಳೆ ಅಲ್ಲಿ ನೆರೆದಿದ್ದ ಸಮುದಾಯದ ಜನ ಶ್ರೀಗಳನ್ನು ತಕ್ಷಣವೇ ಕೆಳಗಿಳಿಸಲು ಪ್ರಯತ್ನಿಸಿದ್ರು. ಹೀಗಾಗಿ, ಈ ಘಟನೆ ಬಂಜಾರಾ ಸಮುದಾಯದವರಲ್ಲಿ ಸಾಕಷ್ಟು ಕಿಚ್ಚು ಹೊತ್ತಿಸಿದೆ. ಒಟ್ನಲ್ಲಿ, ಒಳಮೀಸಲಾತಿ ಬೇಗುದಿಯಲ್ಲಿ ಬೆಂದಿರುವ ಬಂಜಾರಾ ಸಮುದಾಯದವರು ರಾಜ್ಯ...









