ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು ನಾಗಪ್ಪ ಕುಸುಗಲ್ ಅಂತ್ಯ ಸಂಸ್ಕಾರಕ್ಕಾಗಿ ಬುಧವಾರ ಬೆಳಿಗ್ಗೆ ಹುನಗುಂದ ಗ್ರಾಮಕ್ಕೆ ಬಂದಿದ್ದ. ಅಂತ್ಯ ಸಂಸ್ಕಾರ ಮುಗಿಸಿ ಹುಬ್ಬಳ್ಳಿ ಸಮೀಪದ ಶೆರೆವಾಡ ಗ್ರಾಮಕ್ಕೆ ತೆರಳಿದ್ದ. ಸಂಜೆ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇನ್ನು, ಮೃತ ಯುವಕನ ಪಾರ್ಥೀವ ಶರೀರವನ್ನು ಹುನಗುಂದ ಗ್ರಾಮಕ್ಕೆ ತರಲಾಗಿದ್ದು, ನಾಳೆ ಗುರುವಾರ ಹುನಗುಂದ ಗ್ರಾಮದಲ್ಲಿ ಶವ ಸಂಸ್ಕಾರ ನಡೆಯಲಿದೆ. ಈ ಒಂದೇ ವಾರದಲ್ಲಿ ಹುನಗುಂದ ಗ್ರಾಮದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದು ಗ್ರಾಮದಲ್ಲಿ...
Top Stories
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ ಬಂದಿದ್ದರು. ಆದ್ರೆ, ಗ್ರಾಮಸ್ಥರು ನಮಗೆ ಪಕ್ಕಾ ಭರವಸೆ ನೀಡುವಂತೆ ಪಟ್ಟು ಹಿಡಿದು ಸಂಜೆವರೆಗೂ ಮತದಾನ ಬಹಿಷ್ಕರಿಸಿಯೇ ಕುಳಿತಿದ್ರು. ಯಾವಾಗ, ಈ ಸುದ್ದಿ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿತೊ ಆವಾಗ ಶಿರಸಿ ಸಹಾಯಕ ಕಮೀಶನರ್ ರವರ ಮೂಲಕ ಗ್ರಾಮಸ್ಥರಿಗೆ ಖಚಿತ ಭರವಸೆ ಕೊಟ್ಟು ಮತದಾನ ಮಾಡುವಂತೆ ಮನ ಒಲಿಸಿದ್ರು. ನಂತರ 4.30 ನಂತರ ಗ್ರಾಮಸ್ಥರು ಮತದಾನಕ್ಕೆ ತೆರಳಿದ್ರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮದ್ಯಾನ 1 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರಿಗೆ ಮೊದಲು ಜೀವರಕ್ಷಣೆ ಗ್ಯಾರಂಟಿ ನೀಡುವುದು ಅವಶ್ಯವಿದೆ. ನೇಹಾ ಹಿರೇಮಠ ಹತ್ಯೆ ಮಾಡಿದವನಿಗೆ ಕಠಿಣ ಶಿಕ್ಷೆ ನೀಡುವ ಬದಲಾಗಿ ಕಾಂಗ್ರೆಸ್ ಅಪರಾಧಿಗೆ ರಕ್ಷಣೆ ನೀಡಿದೆ. ಮಹಿಳೆಯರಿಗೆ ಜೀವ ರಕ್ಷಣೆ ಇಲ್ಲ. ಹಿಂದು ಮುಸ್ಲಿಮರ ನಡುವೆ ಭೇದ ಹುಟ್ಟಿಸಿ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಓಲೈಕೆ ರಾಜಕಾರಣದಿಂದ ಕಾಂಗ್ರೆಸ್ ಜನರನ್ನು ಮರಳು ಮಾಡುತ್ತಿದ್ದಾರೆ. ಮೋದಿಯವರು ಬಂದ ನಂತರ ದೇಶ...
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಇನ್ನು ಕಾಂಗ್ರೆಸ್ ಪಕ್ಷದ ಮುಖಂಡರನ್ನೇ ಗುರಿಯಾಗಿಸಿ IT ದಾಳಿ ನಡಿದಿದೆಯಾ ಅನ್ನೋ ಪ್ರಶ್ನೆ ಎದುರಾಗಿದೆ.
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ
ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರ ಪರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರಚಾರ ನಡೆಸಲಿದ್ದಾರೆ. ಚುನಾವಣೆ ಉಸ್ತುವಾರಿ ಸಚಿವ ಕೆ. ಎ. ಜಾರ್ಜ್, ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ನಾವೇ ಗೆಲ್ತಿವಿ..! ಈ ಸಮಾರಂಭದಲ್ಲಿ ಇಪ್ಪತೈದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಓಡಾಡಿದ್ದೇನೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ....