ಸಿ.ಎಂ.ಉದಾಸಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿಗಳು..!

ಸಿ.ಎಂ.ಉದಾಸಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿಗಳು..!

ಹಾನಗಲ್: ಮಾಜಿ ಸಚಿವ, ಬಿಜೆಪಿ ಹಿರಿಯವಹಾಲಿ ಶಾಸಕ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆ ಅವ್ರ ಪಾರ್ಥೀವ ಶರೀರದ ದರ್ಶನಕ್ಕೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹಾನಗಲ್ ಕುಮಾರೇಶ್ವರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅಪಾರ ಅಭಿಮಾನಿಗಳು ತನ್ನ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಹೂಮಾಲೆ ಹಿಡಿದು ಸಾಲು ಸಾಲಾಗಿ ಬರುತ್ತಿರೋ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಇನ್ನು ಸಿ.ಎಂ.ಉದಾಸಿ ಪುತ್ರ ಸಂಸದ ಶಿವಕುಮಾರ್ ಉದಾಸಿ, ತಂದೆಯ ಪಾರ್ಥೀವ ಶರೀರದ ಪಕ್ಕದಲ್ಲೇ ನಿಂತು ಕಂಬನಿ ಮಿಡಿಯುತ್ತಿದ್ದಾರೆ.  

ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!

ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು. ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.. https://youtu.be/b6XTNoYGJdM

ಹಾವೇರಿಗೆ ಆಗಮಿಸಿದ ಉದಾಸಿ ಪಾರ್ಥೀವ ಶರೀರ, ಅಭಿಮಾನಿಗಳಿಂದ ಅಂತಿಮ ದರ್ಶನ..!

ಹಾವೇರಿಗೆ ಆಗಮಿಸಿದ ಉದಾಸಿ ಪಾರ್ಥೀವ ಶರೀರ, ಅಭಿಮಾನಿಗಳಿಂದ ಅಂತಿಮ ದರ್ಶನ..!

ಹಾವೇರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ. ಉದಾಸಿ ನಿಧನ ಹಿನ್ನಲೆ, ಹಾವೇರಿ ನಗರಕ್ಕೆ ಪಾರ್ಥೀವ ಶರೀರ ಆಗಮಿಸಿದೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ಶಾಸಕರು ಹಾಗೂ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ್ರು. ಹಾವೇರಿಯಲ್ಲಿ ನೂರಾರು ಆಭಿಮಾನಿಗಳ ಅಂತಿಮ ದರ್ಶನದ ಬಳಿಕ ಹಾನಗಲ್ ಕಡೆಗೆ ಪಾರ್ಥೀವ ಶರೀರ ಸಾಗಿಸಲಾಗುತ್ತಿದೆ.

ಸಿ.ಎಂ.ಉದಾಸಿ ವಿಧಿವಶ ಹಿನ್ನೆಲೆ: ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಇಂದು ಅಂತ್ಯಕ್ರಿಯೆ..!

ಸಿ.ಎಂ.ಉದಾಸಿ ವಿಧಿವಶ ಹಿನ್ನೆಲೆ: ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಇಂದು ಅಂತ್ಯಕ್ರಿಯೆ..!

ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ.ಉದಾಸಿ ನಿಧನರಾದ ಹಿನ್ನಲೆಯಲ್ಲಿ ಇಂದು ಹುಟ್ಟೂರು ಹಾನಗಲ್ಲಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ, ಅಂತ್ಯಕ್ರಿಯೆಯಲ್ಲಿ ವಿವಿಧ ಗಣ್ಯ ಮಠಾಧೀಶರು ಸಾನಿಧ್ಯವಹಿಸಲಿದ್ದಾರೆ. ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರಸಿದ್ದ ರಾಜಯೋಗೆಂದ್ರ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಣೆ, ಕ್ರೀಯಾ ಸಮಾಧಿಯ ವೇಳೆ ಮೋಕ್ಷ ಮಂತ್ರಪಠಣ ಉಚ್ಚರಿಸಲಿದ್ದಾರೆ. ಕುಮಾರೇಶ್ವರ ಮಠದ ಹಿಂಭಾಗದ ರುದ್ರಭೂಮಿಯಲ್ಲಿ ಸಿ.ಎಂ.ಉದಾಸಿ ಸಮಾಧಿ ಕಾರ್ಯ ನಡೆಯಲಿದ್ದು, ಸಮಾಧಿ ಗುಂಡಿಯೊಳಗೆ ವಿಭೂತಿ ಹಾಗೂ ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿವಿಧ ವಸ್ತುಗಳಿಂದ ಸಿಂಗರಿಸಲಾಗುತ್ತಿದೆ. ಮಠಾಧೀಶರ ಸಾನಿಧ್ಯದಲ್ಲಿ ವಿಶೇಷ ಪೂಜೆ, ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಅಂತಾ ಮೂಲಗಳು ಮಾಹಿತಿ ನೀಡಿವೆ. ****************** ಬೆಂಕಿಯ ಕೆನ್ನಾಲಿಗೆಗೆ ಬಡಕುಟುಂಬವೇ ಬೀದಿಗೆ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.. https://youtu.be/9EuO4Ibd8dU

ಬೆಂಗಳೂರಿನಿಂದ ಹಾನಗಲ್ ಗೆ ಬರುತ್ತಿರೋ ಉದಾಸಿ ಪಾರ್ಥೀವ ಶರೀರ..! ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ಧತೆ..!

ಬೆಂಗಳೂರಿನಿಂದ ಹಾನಗಲ್ ಗೆ ಬರುತ್ತಿರೋ ಉದಾಸಿ ಪಾರ್ಥೀವ ಶರೀರ..! ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ಧತೆ..!

ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಹಿರಿಯ ಶಾಸಕ ಸಿ. ಎಂ. ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಇಂದು ಹುಟ್ಟೂರು ಹಾನಗಲ್ ಗೆ ಪಾರ್ಥಿವ ಶರೀರ ಬರಲಿದೆ. ಈಗಾಗಲೇ ಬೆಳಿಗ್ಗೆ 6 ಗಂಟೆಗೆ ಬೆಂಗಳೂರು ಬಿಟ್ಟಿರುವ ಸಿ ಎಮ್ ಉದಾಸಿ ಪಾರ್ಥಿವ ಶರೀರ, ಜಿಲ್ಲೆಯ ಮೊದಲ ಗ್ರಾಮ ಕುಮಾರಪಟ್ಟಣಂ ಗೆ ಆಗಮಿಸಲಿದೆ. ಅಲ್ಲಿಯ ಕಾರ್ಯಕರ್ತರಿಂದ ಅಂತಿಮ ದರ್ಶನ, ನಂತರ ರಾಣೇಬೆನ್ನೂರು, ಮೋಟೆಬೆನ್ನೂರು, ಹಾವೇರಿಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಗ ಮಧ್ಯದ ಗ್ರಾಮಗಳ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇನ್ನು ಕೆಲವು ಕಡೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಲ್ಲಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ನಂತರ ಹಾನಗಲ್ ಗೆ 12 ಗಂಟೆಗೆ ಪಾರ್ಥಿವ ಶರೀರ ಆಗಮಿಸೋ ಸಾಧ್ಯತೆಯಿದ್ದು, ಮದ್ಯಾಹ್ನ 1 ಗಂಟೆಗೆ ಸ್ವಗೃಹಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರಿಂದ ಪೂಜೆ ಸಲ್ಲಿಸಿ, ಕುಟುಂಬಸ್ಥರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮದ್ಯಾಹ್ನ 2 ಗಂಟೆ ನಂತರ ಕುಮಾರೇಶ್ವರ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾನಗಲ್...

ಬಿಜೆಪಿ ಹಿರಿಯ ಶಾಸಕ ಉದಾಸಿ ಅಸ್ತಂಗತ: ಹಾನಗಲ್ ನಲ್ಲಿ ಬುಧವಾರ ಸಂಜೆ 4 ಕ್ಕೆ ಅಂತ್ಯಕ್ರಿಯೆ

ಬಿಜೆಪಿ ಹಿರಿಯ ಶಾಸಕ ಉದಾಸಿ ಅಸ್ತಂಗತ: ಹಾನಗಲ್ ನಲ್ಲಿ ಬುಧವಾರ ಸಂಜೆ 4 ಕ್ಕೆ ಅಂತ್ಯಕ್ರಿಯೆ

ಹಾನಗಲ್: ಬಿಜೆಪಿಯ ಹಿರಿಯ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆಯಲ್ಲಿ, ನಾಳೆ ಬುಧವಾರ ಸಂಜೆ 4 ಗಂಟೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ‌ ನಡೆಯಲಿದೆ ಅಂತಾ ಆಪ್ತ ಮೂಲಗಳು ತಿಳಿಸಿವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಆಗಮಿಸಲಿರೋ ಶಾಸಕ ಉದಾಸಿಯವರ ಪಾರ್ಥೀವ ಶರೀರವನ್ನು, ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರೋ ಅವರ ನಿವಾಸಕ್ಕೆ ತರಲಾಗುತ್ತದೆ. ಮದ್ಯಾಹ್ನ 2 ಗಂಟೆ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಲಿಂಗಾಯತ ವಿಧಿ ವಿಧಾನದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಅಂತಾ ಮಾಹಿತಿ ಲಭ್ಯವಾಗಿದೆ. ******************* ಪಬ್ಲಿಕ್ ಫಸ್ಟ್ ನ್ಯೂಸ್ ನ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.. https://youtu.be/9EuO4Ibd8dU

ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!

ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!

ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿ‌ಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆ ನಡೆದಿದ್ದು, ಸಧ್ಯ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದವಸ ಧಾನ್ಯಗಳೂ ಸುಟ್ಟು ಕರಕಲಾಗಿದ್ದು ಕುಟುಂಬಕ್ಕೆ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದೂರಿನ ಗಂಗಾಧರ ಬಡಿಗೇರ ಹಾಗೂ ಮಂಜುನಾಥ್ ನಡಗೇರಿ ಸಂಕಷ್ಟದಲ್ಲಿರೋ ಕುಟುಂಬಕ್ಕೆ ದಿನಸಿ ವಿತರಿಸಿದ್ದಾರೆ. ಮನೆ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ನೊಂದಿರೋ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ************************************** ಬೆಂಕಿಯ ಕೆನ್ನಾಲಿಗೆಗೆ ಇಡಿ ಕುಟುಂಬವೇ ಬೀದಿಗೆ.. ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.. 

ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!

ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!

ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ‌ ಮೇಲೆ‌ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು‌ ಜನ, ಸೋಂಕು ಇಳಿಮುಖ ಕಾಣ್ತಾ ಇದ್ದರೂ ನಿಲ್ಲದ ದುಗುಡ. ಇಷ್ಟು ದಿನ ದೊಡ್ಡವರನ್ನ ಕಾಡ್ತಿದ್ದ ಹೆಮ್ಮಾರಿ ಕಾಟ ಈಗ ಮಕ್ಕಳ ಮೇಲೆ ವಕ್ರ ದೃಷ್ಟಿ ಬೀರ್ತಿದೆ. ಮಕ್ಕಳ ಪೋಷಕರು ಅಕ್ಷರಶಃ ಬೆಚ್ವಿಬೀಳುವಂತಾಗಿದೆ. ಇಷ್ಟೆಲ್ಲ ಆತಂಕಕ್ಕೆ ಸಾಕ್ಷಿಯಾಗಿರೋದು ಬಾಗಲಕೋಟೆ ಜಿಲ್ಲೆ. ಹೌದು, ಕೋವಿಡ್ ನಿಂದ ಗುಣಮುಖರಾದ ಚಿಕ್ಕ ಮಕ್ಕಳಲ್ಲಿ ಈಗ MIS-C ಎನ್ನುವ ಕಾಯಿಲೆಯೊಂದು ಕಾಣಿಸಿಕೊಂಡಿದ್ದು ಪೋಷಕರನ್ನ ಆತಂಕಕ್ಕೆ ಈಡು ಮಾಡಿದೆ. ಈಗ ಬಾಗಲಕೋಟೆ...

ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!

ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!

ಹಾನಗಲ್- ಹಿರಿಯ ಬಿಜೆಪಿ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ(86) ವಿಧಿವಶವಾಗಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿಯವರನ್ನು ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಅಂತಲೇ ಖ್ಯಾತಿ ಪಡೆದಿದ್ದ ಸಿ.ಎಂ.ಉದಾಸಿಯ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5 ನ್ಯೂಸ್ ವೀಕ್ಷಿಸಲು ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/712rEAKhVeE

ಇಂದೂರಿನಲ್ಲಿ‌ ಮನೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಮನೆ, ಲಕ್ಷಾಂತರ ಹಾನಿ..!

ಮುಂಡಗೋಡ: ತಾಲೂಕಿನ ಇಂದೂರು ಗ್ರಾ‌ಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯೇ ಭಸ್ಮವಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇಂದೂರು ಗ್ರಾಮದ ದ್ಯಾಮವ್ವ ದೇವಿ ದೇವಸ್ಥಾನದ ಹಿಂದುಗಡೆ ಇರುವ ಗೂಡುಮನಿ ಅತ್ತಾರ್ ಎಂಬುವ ಮಹಿಳೆಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಾಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಕೆಲವೇ ಹೊತ್ತಲ್ಲಿ ಇಡೀ ಮನೆಗೆ ಆವರಿಸಿದೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5 ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ ಹೀಗಾಗಿ ಗ್ರಾಮಸ್ಥರು ತಕ್ಷಣವೇ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದ್ರೆ ಬೆಂಕಿ ತಹಬದಿಗೆ ಬರದೇ ಇದ್ದಾಗ, ಮುಂಡಗೋಡ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮದುವೆಗಾಗಿ ತಂದಿದ್ದ ವಸ್ತುಗಳು ಕರಕಲು: ಇನ್ನು ಬೆಂಕಿಯ ಕೆನ್ನಾಲಿಗೆಗೆ ಮಗಳ ಮದುವೆಗಾಗಿ ತಂದಿದ್ದ ಬಟ್ಟೆ ಬರೆಗಳು, ಪಾತ್ರೆಗಳು ಸುಟ್ಟು ಕರಕಲಾಗಿವೆ ಎನ್ನಾಲಾಗಿದ್ದು, 25 ಸಾವಿರ...

error: Content is protected !!