ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು ತಮ್ಮನ್ನು ತಾವು ನೋಡಿಕೊಳ್ಳಬಹುದು ಎಂದು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಹೇಳಿದ್ದೆವು” ಎಂದು ಟ್ರಂಪ್ ಮೇ 15 ರಂದು ಕತಾರ್ನ ದೋಹಾದಲ್ಲಿ ನಡೆದ ವ್ಯವಹಾರ ಕಾರ್ಯಕ್ರಮದಲ್ಲಿ (business event) ಹೇಳಿದರು ಎಂದು ಬ್ಲೂಮ್ಬರ್ಗ್ ವರದಿ ತಿಳಿಸಿದೆ. ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..! ಟಿಮ್ ಕುಕ್ ಅವರೊಂದಿಗೆ “ಸಣ್ಣ ಸಮಸ್ಯೆ” ಇದೆ. “ಅವರು ನನ್ನ ಸ್ನೇಹಿತ, ನಾನು ಅವರಿಗೆ ಹೇಳಿದೆ, ನಾನು ನಿಮ್ಮನ್ನು ತುಂಬಾ ಚೆನ್ನಾಗಿ ನಡೆಸಿಕೊಳ್ಳುತ್ತಿದ್ದೇನೆ. ನೀವು $500 ಬಿಲಿಯನ್ ಗಳಿಸುತ್ತೀರಿ, ಆದರೆ...
Top Stories
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ..!
“ಬೆಸ್ಟ್ ಪಿಡಿಓ ಆಪ್ ದ ಮಂತ್” ಪ್ರಶಸ್ತಿಗೆ ಉಮೇಶ ಡಿ. ಗೌಡರ ಭಾಜನ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ ಪೊಲೀಸರು ಇಬ್ಬರ ವಿರುದ್ಧ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಆನಂದ ಗುರೂಜಿ ಅವರು ವೀಡಿಯೊ ಹಾಗೂ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದು, ಆದರೂ, ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ...
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ; ಬಿಬಿಎಂಪಿ..!
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ,...
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!
ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಮೇ 1ರಂದು ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ಸುಹಾಸ ಶೆಟ್ಟಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈದಿದ್ದರು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರು ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ....
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 31 ಮಟ್ಕಾ ಪ್ರಕರಣಗಳಲ್ಲಿ 86 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ಹಾಗೂ ಯಾವುದೇ ಅನಧಿಕೃತ ಲಾಟರಿ ಹಾವಳಿ ಪ್ರಕರಣಗಳು ದಾಖಲಾಗದೇ ಇರುವ ಬಗ್ಗೆ ಮಾಹಿತಿ ಪಡೆದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೈಯಿಂಗ್ ಸ್ಕ್ಯಾಡ್ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ವಾಣಿಜ್ಯ ತೆರಿಗೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.99.91 ರಷ್ಟು ಸಾಧನೆ ಮಾಡಿದ್ದು, ಇದುವರೆಗೆ 1095.03 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ 25,676 ಮಂದಿ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿದ್ದು , ಬಾಕಿ ಉಳಿದ ಅರ್ಹ 3,35,805 ಪಡಿತರ ಚೀಟಿಗಳಲ್ಲಿ 3,35,498 ಮಂದಿಯನ್ನು ಯೋಜನೆಗೆ ಯಶಸ್ವಿಯಾಗಿ ನೋಂದಾಯಿಸಿ ಶೇ.99.91 ಸಾಧನೆ ಮಾಡಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಗೃಹಲಕ್ಷ್ಮಿ ಯೋಜನೆಗೆ ಅನರ್ಹರಾಗಿರುವವರಲ್ಲಿ 10,377 ಮಂದಿ ಆದಾಯ ತೆರಗೆ ಮತ್ತು ಜಿ.ಎಸ್.ಟಿ ಪಾವತಿದಾರರು, 4875 ಮಂದಿ ಮರಣ ಹೊಂದಿರುವವರು, 7503 ಮಂದಿ ವಲಸೆ...
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್
ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ ಫಲಕಗಳು ಹಾಗೂ ಪೊಲೀಸ್ ಚೌಕಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಗೋಕರ್ಣವು ನೈಸರ್ಗಿಕ ಕಡಲ ತೀರಗಳು, ಕಡಿಮೆ ಜೀವನದ ವೆಚ್ಚ, ರಮಣೀಯ ಪರಿಸರ ವೈವಿದ್ಯಮಯವನ್ನು ಹೊಂದಿದ್ದು, ಪ್ರವಾಸಿಗರ ನೆಚ್ಚಿನ ಪ್ರವಾಸಿ ತಾಣವಾಗಿದೆ. ಇಲ್ಲಿಗೆ ಪ್ರತಿ ವಷÀð 1.5 ಲಕ್ಷ ಪ್ರವಾಸಿಗರು ಆಗಮಿಸುತ್ತಾರೆ ಮತ್ತು 8 ರಿಂದ 10 ವಿದೇಶಿಗರು ಪ್ರತಿ...
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರ- ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಆ ಕಾಲೋನಿಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು ವರದಿ ನೀಡುವಂತೆ ತಿಳಿಸಿದ ಅವರು, ಈ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಆದ್ಯತೆಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!...
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಹಾಗೂ ಅದೊಂದು ಕುಟುಂಬದ ನಡುವೆ ಗಲಾಟೆ ನಡೆದಿದೆ. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..! ಇದೆ ವೇಳೆ ನನ್ನ ಮೇಲೂ ಹಲ್ಲೆ ನಡೆದಿದೆ, ಅಲ್ದೆ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆಗೆ ದಾಖಲಾಗಿರೊ ಹಲ್ಲೆಗೊಳಗಾದವ ಆರೋಪಿಸಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು...