ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್‌ ಅಲರ್ಟ್‌ ಹಾಗೂ ಜೂನ್‌ 1ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. Rain Alert News: ಮಂಗಳವಾರ ಪ್ರಮುಖವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಗಾಳಿಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು,...

ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ವಿಶೇಷವಾಗಿ ಮಕ್ಕಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಹೀಗಾಗಿ ಪೋಷಕರು ಜ್ವರ, ಶೀತ ಇರುವವರನ್ನು ಶಾಲೆಗೆ ಕಳುಹಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಅಂತಹ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಗಳು ರಜೆ ನೀಡುವಂತೆ ಅಧಿಕೃತವಾಗಿ ನಿರ್ದೇಶನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು. ಪರೀಕ್ಷಾ ಕಿಟ್ ವಿತರಣೆ..! ಕೊರೋನಾ ಮುನ್ನೆಚ್ಚರಿಕೆ...

ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್‌ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್‌ ಸೋಂಕಿರತರಿದ್ದು, ಇದರಲ್ಲಿ 752 ಪ್ರಕರಣಗಳು ಇತ್ತೀಚಿನದ್ದಾಗಿವೆ. ಕೇರಳದಲ್ಲಿ ಅತಿಹೆಚ್ಚು 430 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮಹಾರಾಷ್ಟ್ರದಲ್ಲಿ 209, ದೆಹಲಿಯಲ್ಲಿ 104, ಕರ್ನಾಟಕದಲ್ಲಿ 47 ಸೋಂಕಿತರಿದ್ದಾರೆ. ಇದನ್ನೂ ಓದಿ👉ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..! ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರಗಳಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳು ವರದಿಯಾಗಿಲ್ಲ’ ಎಂದು ತಿಳಿಸಿದೆ. ಇದನ್ನೂ...

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್‌, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್‌ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ ( ಪ್ರತಿ 50 ಕೆಜಿ ಚೀಲಕ್ಕೆ) ಅರೇಬಿಕಾ ಕಾಫಿ- 14,500 ಅರೇಬಿಕಾ ಪಾರ್ಚ್‌ಮೆಂಟ್ -26,400 ರೊಬಸ್ಟ ಕಾಫಿ – 10,400 ರೂ. ರೊಬಸ್ಟ ಪಾರ್ಚ್‌ಮೆಂಟ್ – 20,900 ರೂ. ಮೆಣಸು ಮೆಣಸು( ಕೆಜಿಗೆ) 1.ಮೂಡಿಗೆರೆ ಭವೆರಲ್ ಜೈನ್ – 665 2.ಚಿಕ್ಕಮಗಳೂರು – 660 3. ಗೋಣಿಕೊಪ್ಪ – 660 4.ಕುಣಿಗೇನಹಳ್ಳಿ – 660 6. ಮಂಗಳೂರು- 680 7. ಮೂಡಿಗೆರೆ A1- 660...

ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

Banking News:ಭಾರತದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್‌ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ನಿಮ್ಮ ಕ್ರೆಡಿಟ್‌ ಸ್ಕೋರ್ ಮತ್ತಷ್ಟು ಹೆಚ್ಚಿಸಲು ಐದು ಸಲಹೆಗಳನ್ನ ತಿಳಿಯುವ ಮೊದಲು, ಎಷ್ಟು ಸ್ಕೋರ್ ಇದ್ರೆ, ಏನೆಂದು ಪರಿಗಣಿಸಲಾಗುತ್ತದೆ ಎಂಬುದನ್ನು ಮೊದಲು ಈ ಕೆಳಗೆ ತಿಳಿಯಿರಿ. ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಹೆಚ್ಚಿಸಲು 5 ಸರಳ ಮಾರ್ಗಗಳು: 1. ಸಕಾಲಿಕ ಪಾವತಿ: ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್‌ಗಳು ಮತ್ತು ಸಾಲದ EMIಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ. ಆಟೋ ಪೇಮೆಂಟ್ ಆಯ್ಕೆ ಬಳಸಿದರೆ, ತಪ್ಪಿಸಿಕೊಳ್ಳುವ...

ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

Uttar Kannada Rain Damage: ಕಾರವಾರ: ಉತ್ತರ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೊ ಮಳೆ ಇನ್ನಿಲ್ಲದ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಹಾನಿಗಳಿಗೂ ಕಾರಣವಾಗಿದೆ. ಅಂದಹಾಗೆ, ಇವತ್ತಿನವರೆಗೂ ಜಿಲ್ಲೆಯಲ್ಲಿ ಸುರಿದ ಮಳೆಯ ತಾಲೂಕಾವಾರು ಪ್ರಮಾಣ‌ ಎಷ್ಟು..? ಹಾನಿಯ ವಿವರ ಏನು..? ಇಲ್ಲಿದೆ ಮಾಹಿತಿ. ಮಳೆಯ ವಿವರ..! ಅಂದಹಾಗೆ, ಜಿಲ್ಲೆಯಲ್ಲಿ ಮೇ 26 ಸೋಮವಾರ ಬೆಳಗ್ಗೆ 8.30 ರ ವರೆಗೆ, ಅಂಕೋಲಾದಲ್ಲಿ-17.6 ಮಿಮೀ, ಭಟ್ಕಳದಲ್ಲಿ- 17.6, ಹಳಿಯಾಳ-8.5 ಹೊನ್ನಾವರ -69.3, ಕಾರವಾರ -27, , ಕುಮಟಾ -13.2, ಮುಂಡಗೋಡ- 12, ಸಿದ್ದಾಪುರ- 39.2 , ಶಿರಸಿ -17.7 , ಸೂಪಾ- 14.9 ಯಲ್ಲಾಪುರ -12.9, ದಾಂಡೇಲಿಯಲ್ಲಿ- 14.1 ಮಿಲಿ ಮೀಟರ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 21.7 ಮಿಮಿ ಮಳೆ ಸುರಿದಿದೆ. ಹಾನಿಯ ವಿವರ..! ಜಿಲ್ಲೆಯಲ್ಲಿ ಎಪ್ರಿಲ್ 2025 ನಿಂದ ಮೇ 26 ರ ಸಂಜೆ 5 ಗಂಟೆಯವರೆಗೆ ಮಳೆಯಿಂದಾಗಿ, 1 ಜೀವಹಾನಿ, 5 ಪಶು...

ಪ್ಲೇಆಫ್​ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್​ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!

ಪ್ಲೇಆಫ್​ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್​ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!

IPL RCB Team: ಐಪಿಎಲ್​ 18ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಪ್ಲೇಆಫ್​ಗೆ ತಲುಪಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಾಳೆ ತನ್ನ ಕೊನೆಯ ಲೀಗ ಹಂತದ ಪಂದ್ಯವನ್ನು ಆಡಲಿದೆ. ಇದರಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಪ್ಲೇಆಫ್​ ಪಂದ್ಯಗಳನ್ನು ಆಡಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಫೆವರೀಟ್​ ತಂಡಗಳಲ್ಲಿ ಆರ್​ಸಿಬಿ ಕೂಡ ಒಂದಾಗಿರುವ ಕಾರಣ ತಂಡದ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ. ಏತನ್ಮಧ್ಯೆ, ಪ್ಲೇಆಫ್​ ಪಂದ್ಯಗಳಿಗೂ ಮುಂಚಿತವಾಗಿ ಬೆಂಗಳೂರು ತಂಡ ಹೊಸ ದಾಖಲೆ ಬರೆದಿದೆ. ಇದರೊಂದಿಗೆ, ಈ ಸಾಧನೆ ಮಾಡಿದ ಮೊದಲ ಐಪಿಎಲ್ ಫ್ರಾಂಚೈಸಿ ಎನಿಸಿಕೊಂಡಿದೆ. ಆರ್‌ಸಿಬಿ ತಂಡವು ಇಲ್ಲಿಯವರೆಗೆ ಒಂದೇ ಒಂದು ಪ್ರಶಸ್ತಿಯನ್ನು ಗೆದ್ದಿಲ್ಲವಾದರೂ, ತಂಡಕ್ಕೆ ಅಭಿಮಾನಿಗಳ ಕೊರತೆಯೇನು ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುತ್ತದೆ. ದಾಖಲೆ ಬರೆದ RCB..! ಹೌದು, ಇನ್​ಸ್ಟಾಗ್ರಾಮ್​ನಲ್ಲಿ (RCB Instagram) ಅತೀ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತಂಡವಾಗಿ ಚರಿತ್ರೆ ಸೃಷ್ಟಿಸಿದೆ. ಇದರೊಂದಿಗೆ ಐದು ಬಾರಿ ಚಾಂಪಿಯನ್ಸ್​ ತಂಡಗಳಾದ ಮುಂಬೈ ಇಂಡಿಯನ್ನು ಮತ್ತು...

ಅಲೆಗಳ ಅಬ್ಬರ; ಮುರ್ಡೇಶ್ವರ ಕಡಲಲ್ಲಿ ಪ್ರವಾಸಿಗರಿಗೆ ನೋ ಎಂಟ್ರಿ..!

ಅಲೆಗಳ ಅಬ್ಬರ; ಮುರ್ಡೇಶ್ವರ ಕಡಲಲ್ಲಿ ಪ್ರವಾಸಿಗರಿಗೆ ನೋ ಎಂಟ್ರಿ..!

Murdeshwara Rain News:ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರ ಮಧ್ಯೆಯೂ ಪ್ರವಾಸಿಗರು ಈಜಾಡಲು ಸಮುದ್ರಕ್ಕಿಳಿಯತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಮುದ್ರಕ್ಕೆ ಹೋಗುವ ದಾರಿಯನ್ನು ಬಂದ್ ಮಾಡಿ ಪೊಲೀಸ್ ಕಾವಲು ಹಾಕಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 2 – 3 ದಿನಗಳ ಕಾಲ ಭಾರೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಮಳೆಯಾಗುವ ಸಂಭವ ಇದೆ. ಸಮುದ್ರದಲ್ಲಿ ಅಲೆಗಳು ಎತ್ತರಕ್ಕೆ ಏರುವ ಕಾರಣ ಮೀನುಗಾರಿಕೆಗೆ ಹಾಗೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆಯ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ:👉ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..! ಮುರ್ಡೇಶ್ವರದಲ್ಲಿ ಮಾತ್ರ ಇದ್ಯಾವುದೂ ನಮಗೆ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದು ಮೋಜು- ಮಸ್ತಿಗಿಳಿದಿದ್ದರು. ಜಿಲ್ಲೆಯ ಮಾಜಾಳಿಯಿಂದ ಗೊರಟೆಯ ತನಕ ಸಮುದ್ರದಲ್ಲಿ ಮೀನುಗಾರಿಕೆ ಹಾಗೂ ಸಮುದ್ರದಲ್ಲಿಯ ಎಲ್ಲ ಚಟುವಟಿಕೆ ರದ್ದು ಮಾಡುವಂತೆ ಜಿಲ್ಲಾಡಳಿತ ಆದೇಶ ನೀಡಲಾಗಿದ್ದರು ಸಹ ಮುರ್ಡೇಶ್ವರದಲ್ಲಿ ಕೆಲವು ಪ್ರವಾಸಿಗರು ಸಮುದ್ರಕ್ಕೆ ಇಳಿದು ಮೋಜು-...

ಜೂನ್‌ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ..!

ಜೂನ್‌ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ..!

Tourism News:ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣದ ವೀಕ್ಷಣೆಗೆ (vidhana soudha tour) ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯಿಂದ ಗೈಡೆಡ್ ಟೂರ್‌ಗೆ (Guided tour) ಚಾಲನೆ ನೀಡಲಾಗಿದ್ದು, ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 8ರಿಂದ ಸಂಜೆ 5 ಗಂಟೆ ವರೆಗೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಇದಕ್ಕೆ ಸಮಯ ಹಾಗೂ ಶುಲ್ಕ (Fees) ನಿಗದಿ ಮಾಡಲಾಗಿದೆ. ಜೂನ್ 1ರಿಂದ ವಿಧಾನಸೌಧ ಟೂರ್ ಗೈಡ್ ಪ್ರಾರಂಭವಾಗಲಿದೆ. ವಯಸ್ಕರಿಗೆ 16 ವರ್ಷ ಮೇಲ್ಪಟ್ಟ ವಯಸ್ಕರಿಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ. 15 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ. ಇದಕ್ಕಾಗಿ https://kstdc.co/activities ವೆಬ್‌ಸೈಟ್ ನಲ್ಲಿ ಮುಂಚಿತವಾಗಿಯೇ ಟಿಕೆಟ್‌ ಬುಕ್ ಮಾಡಿಕೊಳ್ಳಬೇಕು. 30 ಜನರನ್ನು ಒಳಗೊಂಡ ಗ್ರೂಪ್‌ನ್ನು ಪ್ರತಿ ಪ್ರವಾಸಕ್ಕೆ ನಿಗದಿ ಮಾಡಲಾಗುತ್ತದೆ. ಒಂದು ಗ್ರೂಪ್‌ಗೆ 90 ನಿಮಿಷಗಳ ಅವಧಿ ಇರಲಿದ್ದು, ಒಂದು ದಿನಕ್ಕೆ 300...

ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!

ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!

Police News Karwar: ಕಾರವಾರ: ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಅಮೀತ್ ಸಿಂಗ್ ಹೇಳಿದರು. ಅವರು ಸೋಮವಾರ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂಚಾರ ಜಾಗೃತಿ ಕೆಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಯುವ ನಿಟ್ಟಿನಲ್ಲಿ, ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ವಾಹನ ಚಾಲಾಯಿಸಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಸಂಚಾರ ಜಾಗೃತಿ ಕೇಂದ್ರಕ್ಕೆ ಸಾರ್ವಜನಿಕರನ್ನು ಕರೆತಂದು ಮಾಹಿತಿ ಮತ್ತು ಅರಿವು ಮೂಡಿಸಬೇಕು. ರಸ್ತೆ ಸಂಚಾರ ನಿಯಮಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಮಾಡಬೇಕು. ಸಾಮಾಜಿಕ ಜಾಲತಾಣ, ಟಿವಿ, ಪತ್ರಿಕೆಗಳಲ್ಲಿ ಇದರ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದರು. ಇದನ್ನೂ ಓದಿ👉ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ :...

error: Content is protected !!