ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ. ಬಂಧಿತ ಅಂತರ್ ಜಿಲ್ಲಾ ಕಳ್ಳನಿಂದ ಪೇನಾಸಾನಿಕ್ ಎ.ಜಿ.ಎಸ್.ಸಿ-90 ವಿಡಿಯೋ ಕ್ಯಾಮರಾ, ನಿಕಾನ್ ಡಿ- 3500 ಡಿ.ಎಸ್.ಎಲ್.ಆರ್ ಫೋಟೋ ಕ್ಯಾಮರಾ, 20 ಮೊಬೈಲ್ ಗಳು ಹಾಗೂ ಮೊಬೈಲ್ ನ ಬಿಡಿ ಭಾಗಗಳು ಸೇರಿ, ಸುಮಾರು ಒಂದೂವರೇ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಡಿವೈಎಸ್ಪಿ ರವಿ ನಾಯ್ಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪಿಐ ಸಿದ್ಧಪ್ಪ ಎಸ್. ಸಿಮಾನಿ ರವರ ನೇತೃತ್ವದಲ್ಲಿ ಪಿಎಸ್ಐ ಬಸವರಾಜ ಮಬನೂರ, ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಧರ್ಮರಾಜ, ಸುರೇಶ್ ವಿ, ವಿನೋದಕುಮಾರ, ಅರುಣಕುಮಾರ ಬಿ,...
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ, ತಹಶೀಲ್ದಾರ ಕಚೇರಿಯೆದರು ಪ್ರತಿಭಟನೆ..!
ಮುಂಡಗೋಡ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ರು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಕರ್ತರು, 2ಎ ಮೀಸಲಾತಿಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು, ಆ ವೇಳೆ, ಸಿಎಂ ಆಗಿದ್ದ ಯಡಿಯೂರಪ್ಪ ಅವರು 2ಎ ಮೀಸಲಾತಿ ನೀಡಲು ಆರು ತಿಂಗಳು ಸಮಯ ಕೇಳಿದ್ದರು, ಆದ್ರೆ ಈಗ ಯಡಿಯೂರಪ್ಪರ ಸಮಯದ ಅವಧಿ ಮುಗಿದಿದೆ. ಈಗ ನೂತನವಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ, ಕೂಡಲೇ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಸಂಘದ ಮುಖಂಡರು ಹಾಗೂ ಸಮಾಜದ ಬಾಂಧವರು ಸರ್ಕಾರಕ್ಕೆ ಒತ್ತಾಯಿಸಿದ್ರು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಅಂತಾ ಇದೇ ವೇಳೆ ಎಚ್ಚರಿಸಿದ್ರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ರಾಮಣ್ಣ ಕುನ್ನೂರ್, ಗುಡ್ಡಪ್ಪ ಕಾತೂರು, ಶಿವಾನಂದ್ ನಿಡಗುಂದಿ, ಶೇಕಪ್ಪ ಹೊನ್ನಳ್ಳಿ, ಚಂದ್ರು ಹಡಪದ, ವಿನೋದ್ ಬಿಸನಳ್ಳಿ, ಮಲ್ಲಿಕಾರ್ಜುನ್ ಗೌಳಿ, ಸುರೇಶ್ ಗೌಳಿ,...
ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ದಾವಣಗೇರೆಯಲ್ಲಿ ಮನಕಲುಕುವ ದೃಷ್ಯ..!
ಬೆಂಗಳೂರು ಆತ್ಮಹತ್ಯೆ ಘಟನೆ ಮಾಸುವ ಮುನ್ನವೆ ದಾವಣಗೆರೆಯಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿದ್ದಾರೆ. ದಾವಣಗೆರೆಯ ಭಾರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಕೃಷ್ಣಾನಾಯ್ಕ್ (35)ಆತನ ಪತ್ನಿ ಸರಸ್ವತಿ ಬಾಯಿ, ಎಂಟು ವರ್ಷದ ಮಗು ಧ್ರುವ ಮೃತಪಟ್ಟವರು. ಭಾರತ್ ಕಾಲೋನಿ ಶೇಖರಪ್ಪ ಬಿ ಬ್ಲಾಕ್ ನಲ್ಲಿ ವಾಸವಾಗಿದ್ದ ಕೃಷ್ಣನಾಯ್ಕ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರು. ಕೃಷ್ಣಾನಾಯ್ಕ್ ರಿಗೆ ಸಹ ಆರೋಗ್ಯ ಸಮಸ್ಯೆ ಇತ್ತು, ಕೃಷ್ಣನಾಯ್ಕ್ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು.ಅನಾರೋಗ್ಯ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಓದುತ್ತಿದ್ದ ಎಂಟು ವರ್ಷ ವಯಸ್ಸಿನ ಧ್ರುವ ಹಾಗೂ ತಾಯಿ ಸರಸ್ವತಿ ಮಲಗಿದ್ದ ಸ್ಥಿತಿಯಲ್ಲೇ ಶವವಾಗಿದ್ದಾರೆ. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕೃಷ್ಣಾನಾಯ್ಕ್ ಶವ ಪತ್ತೆಯಾಗಿದೆ. ಮನೆ ಕಡೆ ಆರ್ಥಿಕವಾಗಿ ಚೆನ್ನಾಗಿದ್ದರೂ ಆರೋಗ್ಯ ಕೈಕೊಟ್ಟ ಹಿನ್ನೆಲೆ ಈ ನಿರ್ಧಾರ ಕೈಗೊಂಡ್ರಾ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು ಜಿಲ್ಲೆಗೆ ಬಿಜೆಪಿ ರಾಜ್ಯ, ಹಾಗೂ ರಾಷ್ಟ್ರ ನಾಯಕರ ದಂಡೆ ಹರಿದು ಬರಲಿದೆ. ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಹಾಗೂ ಮುಂಬರುವ 2023 ರ ವಿಧಾನ ಸಭಾ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಬೂತ್ ಮಟ್ಟದಿಂದ ಪಕ್ಷವನ್ನ ಬಲ ಪಡಿಸಲು ಈಗಲೇ ತಂತ್ರ ಹೆಣೆಯುತ್ತಿದ್ದಾರೆ. ಬೆಣ್ಣೆ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಕಾರ್ಯ ಕಾರಿಣಿ ಸಭೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿ...
ಸಿನಿಮೀಯ ರೀತಿಯಲ್ಲಿ ಕಳ್ಳನ ಕೈಚಳಕ, ಜ್ಯುವೇಲ್ಲರಿ ಮಾಲೀಕನಿಂದ ಚಿನ್ನದ ಸರ ಕಸಿದು ಪರಾರಿ..!
ಶಿರಸಿ: ಸಿನಿಮೀಯ ರೀತಿಯಲ್ಲಿ ಚಿನ್ನದ ಸರ ಅಪಹರಣ ಮಾಡಿದ ಘಟನೆ, ಶಿರಸಿಯ ರತ್ನದೀಪ ಜ್ಯುವೆಲರ್ಸ್ ನಲ್ಲಿ ನಡೆದಿದೆ. ಚಿನ್ನದ ಸರ ಖರೀದಿಯ ನೆಪದಲ್ಲಿ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ ವ್ಯಕ್ತಿ, ಚಿನ್ನದ ಸರ ತೋರಿಸುವಂತೆ ಕೇಳಿದ್ದಾನೆ. ಅಂಗಡಿಯಾತ ಚಿನ್ನದ ಸರ ತೋರಿಸುತ್ತಿದ್ದಾಗಲೇ ಸರ ಕಸಿದುಕೊಂಡ ಕಳ್ಳ ಕಾಲ್ಕಿತ್ತಿದ್ದಾನೆ. ಚಿನ್ನದ ಸರದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾನೆ. ಕಳ್ಳನ ಸಂಪೂರ್ಣ ಕೃತ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಚಾಲಾಕಿ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.
ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!
ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು. ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.
ಯಲ್ಲಾಪುರದ ತುಡುಗುಣಿ ಕಾಡು ಮನೆಯಲ್ಲಿ ಮಹಿಳೆಯ ಭೀಕರ ಹತ್ಯೆ..! ಅಷ್ಟಕ್ಕೂ ಹಂತಕನ ನೆರಳು ಅದೇನಾ..?
ಯಲ್ಲಾಪುರ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೀಕರ ಹತ್ಯೆಯಾಗಿದೆ. ಮಹಿಳೆಯೋರ್ವಳನ್ನ ಆಗಂತುಕರು ಭೀಕರವಾಗಿ ಹತ್ಯೆ ಮಾಡಿ ಹೋಗಿದ್ದಾರೆ. ಯಲ್ಲಾಪುರ-ಶಿರಸಿ ಗಡಿಭಾಗದ ತುಡುಗುಣಿಯಲ್ಲಿ ಇಂತಹದ್ದೊಂದು ಹತ್ಯೆ ನಡೆದಿದ್ದು, ಇಡೀ ಯಲ್ಲಾಪುರ ತಾಲೂಕೇ ಬೆಚ್ಚಿ ಬೀಳುವಂತೆ ಮಾಡಿದೆ. ಅಂದಹಾಗೆ, ಇಲ್ಲಿ ಹೀಗೆ ಭೀಕರ ಹತ್ಯೆಯಾಗಿ ಬಿದ್ದವಳ ಹೆಸರು, ಸರೋಜಾ ನಾಯರ್, ವಯಸ್ಸು ಈಗಿನ್ನು 35 ರ ಆಸು ಪಾಸು. ತುಡುಗುಣಿಯ ಕಾಡಿನಲ್ಲಿರೋ ಮನೆಯಲ್ಲಿ ವಾಸವಿದ್ದ ಈಕೆಯನ್ನ ನಿನ್ನೆ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ನಿಮಗೆ ಗೊತ್ತಿರಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಕ್ಷ ಪೊಲೀಸ್ ಪಡೆ ಇದೆ. ಕೊಲೆಯ ರಹಸ್ಯ ಕೆಲವೇ ಗಂಟೆಗಳಲ್ಲಿ ಬಟಾಬಯಲಾಗಲಿದೆ. ಅದ್ಯಾವನೇ ಇರಲಿ, ಅದೇಂತವನೇ ಹಂತಕ ಇದ್ರೂ ಕೆಲವೇ ಗಂಟೆಗಳಲ್ಲಿ ಹೆಡೆಮುರಿ ಕಟ್ಟೋದು ಮಾತ್ರ ಪಕ್ಕಾ. ಅನೈತಿಕ ಮರ್ಡರಾ.? ಹಾಗೆ, ಕಾಡಿನಲ್ಲಿರೋ ಮನೆಯಲ್ಲಿ ಮಹಿಳೆಯೊಬ್ಬಳ ಭೀಕರ ಹತ್ಯೆಯಾಗಿದೆ ಅಂದ್ರೆ, ಅದರ ಹಿಂದೆ ಅದ್ಯಾವನೋ ಎಡಬಿಡಂಗಿ, ಪಾಗಲ್ ಪ್ರೇಮಿಯ ಹುಚ್ಚುತನ ಕೆಲಸ...
ಕಟ್ಟಿಗೆ ತುಂಬಿದ್ದ ಲಾರಿ ಪಲ್ಟಿ, ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ..!
ಯಲ್ಲಾಪುರ: ಕಟ್ಟಿಗೆ ತುಂಬಿದ್ದ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿ, ವಾಹನ ದಟ್ಟಣೆ ಹೆಚ್ಚಿದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾದ ಘಟನೆ, ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ. ಅಂಕೋಲಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಲಾರಿ, ಘಟ್ಟದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಗೆ ಪಲ್ಟಿಯಾದ ಲಾರಿ ಎದುರಲ್ಲೇ ಮತ್ತೊಂದು ಲಾರಿ, ಕೆಟ್ಟು ನಿಂತಿದೆ. ಪರಿಣಾಮ, ಅರಬೈಲ್ ಘಟ್ಟದಲ್ಲಿ ಸರಕು ಸಾಗಣೆ ಲಾರಿಗಳು ಸಾಲುಗಟ್ಟಿ ನಿಂತಿವೆ. ಮಳೆಯ ಅಬ್ಬರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಂಕೋಲಾ ಯಲ್ಲಾಪುರ ಮಾರ್ಗವಾಗಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ.
ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!
ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ. ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!
ಕುಮಟಾ: ನಾಯಿ ಬೇಟೆಯಾಡಲು ಬಂದ ಚಿರತೆಯೊಂದು, ತಾನೆ ನಾಯಿ ಬಲೆಯಲ್ಲಿ ಸಿಲಕಿದ ಘಟನೆ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಯ ಹತ್ತಿರ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ಚಿರತೆ, ನಾಯಿಯ ಬೋನಿನೋಳಗೆ ಹೋಗಿದೆ. ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲೀಕರು, ತಕ್ಷಣ ಬೋನ್ ಲಾಕ್ ಮಾಡಿದ್ದಾರೆ. ಹೀಗಾಗಿ, ನಾಯಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಲು ಬಂದಿದ್ದ ಚಿರತೆ ಈಗ ನಾಯಿ ಬೋನಲ್ಲೇ ಬಲೆ ಬಿದ್ದಿದೆ. ಹೀಗಾಗಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭವಾಗಿದೆ.