ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.. ಅಂತಹ ಮಹಾದಂಡನಾಯಕ ಈಗ ಅಕ್ಷರಶಃ ಮೌನಿಯಾಗಿದ್ದಾನೆ.. ಸದಾ ಘರ್ಜನೆಯಲ್ಲಿದ್ದ ಆತ ಈಗ ನಿರ್ಲಿಪ್ತವಾಗಿದ್ದಾನೆ.. ಅಂದಹಾಗೆ, ನಾವಿಲ್ಲಿ ಹೇಳಹೊರಟಿರೋದು ಯಾವುದೇ ರಾಜಕಾರಣಿಯ ಕತೆಯನ್ನಲ್ಲ.. ಯಾವುದೇ ಸಿನಿಮಾ ನಟನ ಸ್ಟೋರಿನೂ ಅಲ್ಲ.. ಬದಲಾಗಿ ಮುಗ್ದ ಮನಸ್ಸಿನ, ಮೂಕ ಭಾವಗಳಲ್ಲೇ ಅಭಿಮಾನಿಗಳನ್ನ ತನ್ನತ್ತ ಸೆಳೆದ ಭಯಂಕರ ಚತುರ, ಮುಟ್ಟಿದರೆ ಮುನಿದು ಚಿಮ್ಮುವ ತಾಕತ್ತಿನ ಸರದಾರ, ಮಾಸೂರಿನ ಮಹಾದಂಡನಾಯಕ ಚಾಮುಂಡಿ ಮೂಕಾಂಬಿಕಾ ಎಕ್ಸಪ್ರೆಸ್ ಪೀ ಪೀ ಸ್ಪರ್ಧಾ ಹೋರಿಯ...

ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ‌ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದು‌ಕ್ಷಣ ದಿಗಿಲಾಗತ್ತೆ. ಅಂತಹ‌ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ ಪ್ರೆಂಡ್ ರಿಕ್ವೆಸ್ಟ್ ಬಂದ್ರೆ ಸಾಕು ಕ್ಷಣಮಾತ್ರದಲ್ಲೇ ಅಕ್ಸೆಪ್ಟು ಮಾಡಿಕೊಳ್ಳುವ ಆಸೆ ಹುಟ್ಟೇ ಬಿಟ್ಟಿರತ್ತೆ. ಅಂತಹದ್ದೊಂದು ಮಾಯಾಜಾಲ ಹೆಣೆದಿದ್ದ ಆ ಲೇಡಿ ಅನಾಮತ್ತಾಗಿ ಲಕ್ಷ ಲಕ್ಷ ಹಣ ಎಗರಿಸಿದ್ದಾಳೆ. ಹಾಗೆ ಆತನ ಬಲೆಗೆ ಬಿದ್ದಿದ್ದ ಅಬನೊಬ್ಬ ಆಕೆಯ ಡಿಪಿ ಪೋಟೊ ನೋಡಿ ಕ್ಲೀನ್ ಬೋಲ್ಡ್ ಆಗಿದ್ದ. ಪ್ರೆಂಡ್ ರಿಕ್ವೆಸ್ಟ್ ಕಳಿಸಿದ ತಕ್ಷಣವೇ ಅಕ್ಸೆಪ್ಟು ಮಾಡಿಕೊಙಡಿದ್ದ. ಅವಳೊಂದಿಗೆ ಮುಂದೆ ಚಾಟಿಂಗ್ ಮಾಡಲೂ ಆರಂಭಿಸಿದ್ದ.. ಸ್ನೇಹ, ಪ್ರೀತಿ...

ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು

ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು

ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಮುಂಡಗೋಡ ಪೊಲೀಸರು ಫೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದರು. ಫೋಕ್ಸೋ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ಬಲಿಷ್ಟ ಆರೋಪ ಪಟ್ಟಿ ಸಲ್ಲಿಸಿದ್ದರು‌. ಇನ್ನು ಈ ಪ್ರಕರಣದಲ್ಲಿ ಶುಭಾ ಗಾಂವಕರ್ ವಾದ ಮಂಡಿಸಿದ್ದರು.

ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?

ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?

ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ‌. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ‌ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮ‌ಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ ನೆನಪಿರಲಿ, ಅವತ್ತು ಅಕ್ಟೋಬರ್ ಒಂದನೇ ತಾರೀಖಿನ ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿತ್ತು. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ಬೆಳಗಾವಿಯ ಆ ಇಬ್ಬರೂ ಯಲ್ಲಾಪುರದ ಅರಬೈಲ್ ಘಾಟಿನಲ್ಲಿ ಬರುತ್ತಿದ್ದಂತೆ, ಥೇಟು ಸಿನಿಮಾ ಸ್ಟೈಲಿನಲ್ಲೇ ಎರಡು ಕಾರುಗಳಲ್ಲಿ ಬಂದು ಅಡ್ಡ ಹಾಕಿದ್ದರು ಖದೀಮರು. ತಕ್ಷಣವೇ ಆರೇಳು ಜನ ದರೋಡೆಕೋರರ...

ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ

ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ

ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ ಕೂಡ ಪರದಾಡುತ್ತಿದ್ದ ಬಾಲಕರಿಗೆ ಪೊಲೀಸ್ ಇಲಾಖೆಯಿಂದ ನೆರವು ನೀಡಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿ ಇಡೀ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಬಡ ಬಾಲಕರ ನೆರವಿಗೆ ಬಂದಿದ್ದಾರೆ.

ಹುನಗುಂದದಲ್ಲಿ ಬೋರವೆಲ್ ನಿಂದ ವಿದ್ಯುತ್ ಪ್ರವಹಿಸಿ ಯುವಕನ ದಾರುಣ ಸಾವು..! ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ..!

ಹುನಗುಂದದಲ್ಲಿ ಬೋರವೆಲ್ ನಿಂದ ವಿದ್ಯುತ್ ಪ್ರವಹಿಸಿ ಯುವಕನ ದಾರುಣ ಸಾವು..! ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಕಂಡಿದ್ದಾನೆ. ಜೊತೆಗೆ ತನ್ನ ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನೇತ್ರದಾನ ಮಾಡಿದ ಯುವಕನಾಗಿ ಪ್ರೇರಕ ಶಕ್ತಿಯಾಗಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬುವ ಯುವಕನೇ ದಾರುಣ ಸಾವು ಕಂಡಿದ್ದು, ಇಂದು ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಹಿಡಿದು ವಿದ್ಯುತ್ ಪ್ರವಹಿಸಿದೆ. ಹೀಗಾಗಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನಿಗೆ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ‌ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸಾವಿನಲ್ಲೂ ಸಾರ್ಥಕತೆ..! ಇನ್ನು, ಯುವಕ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ನಂತರ ಆತನ ನೇತ್ರದಾನ ಮಾಡಲು ಶಿರಸಿಯ ಲಯನ್ಸ್ ನಯನ ನೇತ್ರ ಭಂಡಾರಕ್ಕೆ ಸಂಪರ್ಕಿಸಿದ್ದಾರೆ....

ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!

ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!

ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ‌. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ ಪ್ರಸಾರ ಮಾಡಿತ್ತು. ನಿನ್ನೆಯಿಂದಲೂ..! ಅವ್ರು ಅಕ್ಷರಶಃ ಅನಾಥ ಸ್ಥಿತಿಯಲ್ಲಿರೋ ಬಾಲಕರು, ತಾಯಿ ಕಳೆದ ವರ್ಷವಷ್ಟೇ ಹೃದಯಾಘಾತದಿಂದ ತೀರಿಕೊಂಡಿದ್ದಾರೆ. ಅಪ್ಪ ಅನ್ನಿಸಿಕೊಂಡ ವ್ಯಕ್ತಿ ಮಕ್ಕಳ ಬಗ್ಗೆ ಕಣ್ಣೆತ್ತಿಯೂ ನೋಡಲ್ಲ. ಹೀಗಾಗಿ, ಇದೇ ವೇಳೆ ನಾಯಿಗಳ ದಾಳಿಗೆ ತುತ್ತಾದ ಏಳು ವರ್ಷದ ಕಂದಮ್ಮನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲೂ ದುಡ್ಡಿಲ್ಲ. ಬಾಲಕನ ಅಣ್ಣ 17 ವರ್ಷದ ನಾಗರಾಜ ತನ್ನ ತಮ್ಮನ ಚಿಕಿತ್ಸೆಗಾಗಿ ಅಲೆಯುತ್ತಿದ್ದ. ಇದೇ ವೇಳೆ ಪೊಲೀಸಪ್ಪನ...

ಸನವಳ್ಳಿಯ ಬಡ ಬಾಲಕರ ಕಷ್ಟಕ್ಕೆ ಹೃದಯವಂತರ ಸ್ಪಂಧನೆ, ಮಾನವೀಯತೆ ತೋರಿದ್ರು ಅಧಿಕಾರಿಗಳು..!

ಸನವಳ್ಳಿಯ ಬಡ ಬಾಲಕರ ಕಷ್ಟಕ್ಕೆ ಹೃದಯವಂತರ ಸ್ಪಂಧನೆ, ಮಾನವೀಯತೆ ತೋರಿದ್ರು ಅಧಿಕಾರಿಗಳು..!

ನಿಜಕ್ಕೂ ನನ್ನ ಕಣ್ಣಂಚಲ್ಲಿ ಹನಿಗಳು ಜಿನುಗುತ್ತಿದೆ. ಸನವಳ್ಳಿಯ ಬಾಲಕರ ಕರುಣಾಜನಕ ಕತೆ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರ ಆಗಿದ್ದೇ ತಡ, ಹತ್ತಾರು ಪೋನ್ ಕಾಲ್ ಗಳು, ನೂರಾರು ಮೆಸೇಜ್ ಗಳು, ಅಣ್ಣಾ ಆ ಬಾಲಕರಿಗೆ ನಾವೂ ನಮ್ಮ ಕೈಲಾದಷ್ಟು ಸಹಾಯ ಮಾಡ್ತಿವಿ ದಯವಿಟ್ಟು ಅವ್ರ ಅಕೌಂಟ್ ನಂಬರ್ ಕಳಿಸಿ ಅಂತಾ ಬೆಂಗಳೂರು ಸೇರಿ ರಾಜ್ಯದ ಹಲವೆಡೆಯಿಂದ ಹೃದಯವಂತರು ಕೇಳಿಕೊಳ್ತಿದಾರೆ. ಆ ಬಡ ಬಾಲಕರ ಜೊತೆ ನಾವಿದ್ದೇವೆ ಏನು ಕಳಿಸಬೇಕು ಹೇಳಿ ಕಳಿಸಿ ಕೊಡ್ತಿವಿ ಅಂತಾ ಹೃದಯ ತುಂಬಿದ ಭಾವುಕ ನುಡಿಗಳನ್ನ ಆಡಿದ್ದಾರೆ ಹಲವ್ರು. ಹೀಗಾಗಿ ಸದ್ಯ ಆ ಬಾಲಕರಿಗೆ ಸಹಾಯ ಮಾಡುವ ಮನಸ್ಸುಳ್ಳ ಹೃದಯವಂತರಿಗೆ ನನ್ನದೊಂದು ಬಿಗ್ ಸಲಾಂ..! ********************** ಸಹಾಯ ಮಾಡಲು ಬಯಸುವವರು ಈ ನಂಬರ್ ಗೆ ಪೋನ್ ಪೇ ಮಾಡಬಹುದು.. ಪೋನ್ ಪೇ ನಂ. 9741198875 ಗೆ ಹಣ ಕಳಿಸಬಹುದು. ಅಥವಾ ಅಕೌಂಟ್ ನಂಬರ್: Account no:32371005770 IFSC: SBIN0040613 Bank:SBI mundgod Name:Sampthkumar s kyamanakeri...

ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!

ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!

ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ ಅಣ್ಣ ಚಂದ್ರು ಆತನ ವಯಸ್ಸು 14 ಹೀಗಿರೋ ಇವ್ರೇಲ್ಲರ ಕತೆಯೂ ಅಷ್ಟೇ, ಇವ್ರೇಲ್ಲ ಈಗ ಅಕ್ಷರಶಃ ಅನಾಥರು. ಹೀಗಿರೋವಾಗಲೇ ಆ ಬಾಲಕನಿಗೆ ನಾಯಿಗಳ ಹಿಂಡು ದಾಳಿ ಮಾಡಿದೆ. ದುರಂತ ಅಂದ್ರೆ ಇದೇ ಅಲ್ವಾ..? ಹೀಗಿದ್ದಾಗಲೇ ಆ ಮೂಕ ಬಾಲಕ 7 ವರ್ಷ ವಯಸ್ಸಿನ ಗುತ್ತೆಪ್ಪನಿಗೆ ನಿನ್ನೆ ಬೀದಿನಾಯಿಗಳ ಹಿಂಡು ಮನಸೋ ಇಚ್ಚೆ ಕಚ್ಚಿ ಗಾಯಗೊಳಿಸಿವೆ. ಆಟವಾಡುತ್ತಿದ್ದಾಗ ದಾಳಿ ಮಾಡಿರೋ ನಾಯಿಗಳು ಬಡಬಾಲಕನಿಗೆ ಇನ್ನಿಲ್ಲದಂತೆ...

ನೌಕರರ ವರ್ಗಾವಣೆಯಲ್ಲಿ ಪತಿ, ಪತ್ನಿಯರಿಗಷ್ಟೇ ಅಲ್ಲ ಪೊಲೀಸರಿಗೂ ವಿನಾಯಿತಿ ನೀಡಿ, 16A ತಿದ್ದುಪಡಿ ವಿರುದ್ಧ ಪೊಲೀಸ್ ಪೇದೆಗಳ ಮೂಕರೋಧನ..!

ನೌಕರರ ವರ್ಗಾವಣೆಯಲ್ಲಿ ಪತಿ, ಪತ್ನಿಯರಿಗಷ್ಟೇ ಅಲ್ಲ ಪೊಲೀಸರಿಗೂ ವಿನಾಯಿತಿ ನೀಡಿ, 16A ತಿದ್ದುಪಡಿ ವಿರುದ್ಧ ಪೊಲೀಸ್ ಪೇದೆಗಳ ಮೂಕರೋಧನ..!

ಇದು ಸರ್ಕಾರಿ ನೌಕರರಿಗೆ ಬಹುದೊಡ್ಡ ಆಘಾತ ಅಂತಲೇ ಹೇಳಲಾಗ್ತಿದೆ. ಅದ್ರಲ್ಲೂ ನಮ್ಮ ರಕ್ಷಣೆಗಾಗಿ ಹಗಲಿರುಳು ರಜೆಯಿಲ್ಲದೇ ದುಡಿಯೋ ಪೊಲೀಸರಿಗೆ ಸರ್ಕಾರದ ಅದೊಂದು ಕಾನೂನು ಇಡಿ ಇಡಿಯಾಗಿ ನೋವು ಮತ್ತು ಆತಂಕಕ್ಕೆ ದೂಡಿದೆ ಅಂತಾ ಖುದ್ದು ಪೊಲೀಸ್ ಇಲಾಖೆಯ ಅಸಂಖ್ಯ ಪೇದೆಗಳು ಅಲವತ್ತುಕೊಂಡಿದ್ದಾರೆ. ರಾಜ್ಯ ಸರ್ಕಾರ ಸದ್ಯ 16 A ಕಾಲಂ ನ್ನು ತಿದ್ದುಪಡಿ ಮಾಡಿರೋದು ಸಾಕಷ್ಟು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಏನದು ತಿದ್ದುಪಡಿ..? ಈ ಹಿಂದೆ 16A ಕಾಲಂ ಅಡಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಬಲಿಷ್ಟ ಕಾನೂನು ಇತ್ತು. ಅದರ ಪ್ರಕಾರ ಅದ್ಯಾವುದೇ ಜಿಲ್ಲೆಯಲ್ಲಿ 7 ವರ್ಷ ಕಾರ್ಯನಿರ್ವಹಿಸಿದ್ರೆ ಆ ನಂತರದಲ್ಲಿ ತಮ್ಮ ಸ್ವಂತ ಜಿಲ್ಲೆ ಅಥವಾ ತಮಗಿಷ್ಟವಾದ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದಿತ್ತು. ಆದ್ರೆ, ಸದ್ಯ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರೋ ಕಾನೂನಿನ ಪ್ರಕಾರ ಇನ್ಮೇಲೆ ಪೊಲೀಸರು ಅದೇಲ್ಲಿ ನಿಯುಕ್ತಿ ಹೊಂದಿ ನೌಕರಿ ಪ್ರಾರಂಭಿಸಿದ್ದರೋ ಅದೇ ಜಿಲ್ಲೆಯಲ್ಲಿ ನಿವೃತ್ತಿ ಹೊಂದಬೇಕಿದೆ. ಹೀಗಾಗಿ, ದೂರದ ಜಿಲ್ಲೆಗಳಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸ್ತಿರೋ...

error: Content is protected !!