ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗೃಹಿಣಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮೃತ ಸ್ವಾತಿ ಪತಿ ಹಾಗೂ ಅತ್ತೆಯ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬುಧವಾರ ರಾತ್ರಿ ಸ್ವಾತಿ ಮಂಜುನಾಥ ಹೊಸೂರ (26) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳವಾ..? ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡಿರೋ ಗೃಹಿಣಿ ಸ್ವಾತಿಗೆ ಮೂವರು ಹೆಣ್ಣುಮಕ್ಕಳು ಜನಿಸಿದ್ದಾರೆ. ಹೀಗಾಗಿ, ಬರೀ ಹೆಣ್ಣುಮಕ್ಕಳನ್ನೇ ಹೆತ್ತಿದ್ದಿಯಾ, ಅಲ್ದೆ ಮದುವೆಯಲ್ಲಿ ವರದಕ್ಷಿಣೆ ಕೂಡ ನೀಡಿಲ್ಲ ಅಂತಾ ಪತಿ ಮಂಜುನಾಥ್ ಹಾಗೂ ಅತ್ತೆ ತಾಯವ್ವ, ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ರು ಅಂತಾ ಆರೋಪಿಸಲಾಗಿದೆ. ಮೃತಳ ತಾಯಿಯಿಂದ ದೂರು..! ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿರೋ ಮೃತ ಗೃಹಿಣಿಯ ತಾಯಿ ಮಲ್ಲವ್ವ ಕಬ್ಬೇರ್, ನನ್ನ ಮಗಳ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಕೇಸು ದಾಖಲಿಸಿದ್ದಾರೆ. ಇನ್ನು ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. *************************”...
Top Stories
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ..!
“ಬೆಸ್ಟ್ ಪಿಡಿಓ ಆಪ್ ದ ಮಂತ್” ಪ್ರಶಸ್ತಿಗೆ ಉಮೇಶ ಡಿ. ಗೌಡರ ಭಾಜನ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
ಬೆಂಗಳೂರು ಕ್ರಿಕೆಟ್ ಕಾಲ್ತುಳಿತ ಘಟನೆ ಯಲ್ಲಿ ಮೃತ ಅಕ್ಷತಾ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ವಿತರಣೆ..!
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!
KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
ಚೌಡಳ್ಳಿ ಹುಡುಗರ ಸಾಹಸ, ಕಿರುಚಿತ್ರ ರಚಿಸಿದ್ದೇ ರೋಚಕ..!!
ಮುಂಡಗೋಡ: ಅದೊಂದು ಪುಟ್ಟಗ್ರಾಮ ಆ ಗ್ರಾಮದಲ್ಲಿ ಅನೇಕ ಜನಪದ, ಸಾಂಸ್ಕೃತಿಕ, ನಾಟಕ ಸೇರಿ ಹಲವು ಪ್ರಕಾರಗಳ ಕಲಾವಿಧರಿದ್ದಾರೆ. ಸಾಕಷ್ಟು ಪ್ರತಿಭಾನ್ವಿತ ಮಕ್ಕಳಿದ್ದಾರೆ. ಹಾಗಿರೋ ಚೌಡಳ್ಳಿ ಗ್ರಾಮದಲ್ಲಿ ಈ ಯುವಕರು ಹೊಸ ಸಾಹಸ ಮಾಡಿದ್ದಾರೆ. ಅಪ್ಪಟ ಜವಾರೀ ಕಲಾವಿಧರಾಗಿರೋ ರೈತನ ಮಕ್ಕಳೇ ಕಿರು ಚಿತ್ರ ರಚಿಸಿದ್ದಾರೆ. ಅಚ್ಚರಿಯೆಂದ್ರೆ ಹಾಗೆ ರಚಿಸಿರೋ ಕಿರುಚಿತ್ರದ ಚಿತ್ರೀಕರಣ, ಯಾವುದೇ ತಂತ್ರಜ್ಞಾನದ ಸಹಾಯದಿಂದಲ್ಲ, ಯಾವುದೇ ಡಿಸಿಟಲ್ ಕ್ಯಾಮೆರಾಗಳಿಂದಲ್ಲ, ಬದಲಾಗಿ ತಾವೇ ನಿರ್ಮಿಸಿಕೊಂಡ ಪರಿಕರಗಳಿಂದ.. ಹಾಗಾದ್ರೆ ಹೇಗಿದೆ ಆ ಅನ್ನದಾತನ ಮಕ್ಕಳ ಮೇಕಿಂಗ್ ಕಹಾನಿ..? ಇಲ್ಲಿದೆ ನೋಡಿ.. ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/YA1p_snqzoQ
ಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”
ಮುಂಡಗೋಡ: ತಾಲೂಕಿನ ಹುನಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು. ಕೋವಿಡ್ ಸಂಕಷ್ಟದಿಂದ ಈಗಷ್ಟೆ ಹೊರ ಬಂದಿರೋ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಶಿಕ್ಷಣ ಪ್ರಾರಂಭವಾಗುತ್ತಿದೆ. ಅಲ್ದೆ, ಚಂದನ ವಾಹಿನಿಯ ಸಂವೇದ ಕಾರ್ಯಕ್ರಮದ ಮೂಲಕ ಇಂದಿನಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಗಳ ತರಗತಿಗಳು ಪ್ರಾರಂಭವಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು ಶಿಕ್ಷಕರು ಈಗಾಗಲೇ ಕಳಿಸಿರೋ ಮಾರ್ಗಸೂಚಿಗಳನ್ನು ಪಾಲಿಸಿ ಪಾಠ ಕೇಳಬೇಕು ಅಂತಾ ಶಿಕ್ಷಕರು ತಿಳಿಸಿದ್ದಾರೆ.
ಸಚಿವ ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ..!!
ಅದ್ಯಾಕೋ ಗೊತ್ತಿಲ್ಲ, ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ಅವ್ರು ಯಾವ ಪಕ್ಷದಲ್ಲಿದ್ದಾರೆ..? ಯಾವ ಹುದ್ದೆಯಲ್ಲಿದ್ದಾರೆ..? ಅಂತೇಲ್ಲ ನೋಡಿ ಬಕೀಟು ಹಿಡಿಯೋ ಸಲುವಾಗಿ ಹೊಗಳುವ, ಅಥವಾ ಅವ್ರಿಂದ ಬೆನ್ನು ತಟ್ಟಿಸಿಕೊಳ್ಳೊ ಇರಾದೆಯ ಜಾಯಮಾನವಂತೂ ನಮಗೆ ಖಂಡಿತ ಇಲ್ಲ. ಆದ್ರೆ, ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಒಬ್ಬ ಉತ್ತುಂಗದ ಮಾನವೀಯ ಮೌಲ್ಯಗಳನ್ನ ಮೈಗೂಡಿಸಿಕೊಂಡ ಪಕ್ಷಾತೀತ ನಾಯಕನಾಗಿ ಕಾಣ್ತಾರೆ. ಆ ಕಾರಣಕ್ಕೆ ಅವ್ರನ್ನ ಬಹುಶಃ ಕಾಂಗ್ರೆಸ್ಸಿನ ಅದೇಷ್ಟೋ ಕಾರ್ಯಕರ್ತರೂ ಇಷ್ಟ ಪಡ್ತಾರೆ. ಅಹಂ ಸುಳಿಯಲ್ಲ..! ನಿಜ, ಶಿವರಾಮ್ ಹೆಬ್ಬಾರ್, ಎರಡು ಬಾರಿ ಶಾಸಕರಾಗಿ ಆಯ್ಕೆಯಾದವರು. ಅವ್ರ ರಾಜಕೀಯ ಜೀವನದ ಹಾದಿ ಅಷ್ಟೊಂದು ಸುಲಭವಾಗಿದ್ದಲ್ಲ. ಶಾಸಕರಾಗಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸೋ ಗಳಿಗೆವರೆಗೂ ಅವ್ರು ಕ್ಷೇತ್ರದಲ್ಲಿ ಪಟ್ಟ ಶ್ರಮ, ಕಾರ್ಯಕರ್ತರೊಂದಿಗಿನ ಅವಿನಾಭಾವ ಸಂಬಂಧ, ಅದೇಂತದ್ದೇ ಸಂದರ್ಭ ಬಂದರೂ ಕ್ಷೇತ್ರದ ಜನತೆಯೊಂದಿಗೆ ಸ್ಪಂಧಿಸುವ ಮನೋಭಾವ, ಇದೇಲ್ಲ ಶಿವರಾಮ್ ಹೆಬ್ಬಾರ್ ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಮನೆ ಮಾತಾಗುವಂತೆ ಮಾಡಿದೆ. ಹೆಬ್ಬಾರ್ ಸಾಹೇಬ್ರು ಸಚಿವರಾದ ಮೇಲೆ ಕ್ಷೇತ್ರದ ಜನರ...
ಕಳ್ಳತನದ ಆರೋಪ ಹೊರಿಸಿದ ಮನೆ ಮಾಲೀಕ..! ಗೋವಾಕ್ಕೆ ದುಡಿಯಲು ಹೋಗಿದ್ದ ಮೂವರೂ ಹೆಣವಾದರು..!! ಅಯ್ಯೋ ವಿಧಿಯೇ..!
ಕಾರವಾರ: ಕರ್ನಾಟಕದಿಂದ ಹೊಟ್ಟೆ ಪಾಡಿಗಾಗಿ ದುಡಿಯಲು ಗೋವಾಕ್ಕೆ ಹೋಗಿದ್ದ ಒಂದೇ ಕುಟುಂಬದ ಮೂವರು ಗೋವಾದಲ್ಲೇ ನೇಣಿಗೆ ಶರಣಾಗಿರೋ ಮನಕಲುಕುವ ಘಟನೆ ನಡೆದಿದೆ. ಗೋವಾದ ಜುವಾರಿ ನಗರದ ಎಂಇಎಸ್ ಕಾಲೇಜಿನ ಆವರಣದ ಬಾಡಿಗೆ ಮನೆಯೊಂದರಲ್ಲಿ ಘಟನೆ ನಡೆದಿದ್ದು ಇಡೀ ಗೋವಾ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಹೊಟ್ಟೆಪಾಡಿಗಾಗಿ ಹೋಗಿದ್ರು..! ಕಳೆದ ಹಲವು ವರ್ಷಗಳಿಂದೇ ಕೂಲಿ ಮಾಡಿ ಬದುಕುವ ಉದ್ದೇಶದಿಂದ ಗೋವಾದಲ್ಲೇ ಬದುಕು ಸಾಗಿಸುತ್ತಿದ್ದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಲ್ತಾನಪುರ ಗ್ರಾಮದ ಹುಲಗಪ್ಪ ಅಂಬಿಗೇರ(35), ಪತ್ನಿ ದೇವಮ್ಮ ಅಂಬಿಗೇರ(28) ಹಾಗೂ 29 ವರ್ಷದ ಸಹೋದರ ಗಂಗಪ್ಪ ಅಂಬಿಗೇರ ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳು ನೇಣಿನ ನಿರ್ಧಾರ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಘಟನೆ ಏನು..? ಕಳೆದ 4-5 ದಿನಗಳಿಂದಷ್ಟೇ ಗೊವಾದ ಜುವಾರಿ ನಗರದ ಶಮಶುದ್ದಿನ್ ಎಂಬ ಮಾಲೀಕನ ಮನೆಯಲ್ಲೇ ದುರ್ದೈವಿಗಳು ವಾಸವಿದ್ದರು, ಮಾಲೀಕ ಶಮಶುದ್ದಿನ್ ನೇಣಿಗೆ ಶರಣಾದವರ ಮೇಲೆ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟ ಬಂಗಾರ ಹಾಗೂ ಹಣದ ಒಟ್ಟು ಮೊತ್ತ ಸುಮಾರು 15...
ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ..? ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳಿಂದ ಎಸಿಗೆ ಮನವಿ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲ ನಿವಾಸಿಗಳು ಶಿರಸಿ ಉಪ ವಿಭಾಗಾಧಿಕಾರಿಗಳ ಕಚೇರಿ ಮೆಟ್ಟಿಲೇರಿದ್ದಾರೆ. ತಮಗೆ ಸರ್ಕಾರ ನೀಡಿದ್ದ ನಿವೇಶನಗಳನ್ನು ವಾಪಸ್ ಕೊಡಿಸುವಂತೆ ಕೋರಿ ಶಿರಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಮನವಿಯಲ್ಲೇನಿದೆ..? ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51(1-18-0) ರಲ್ಲಿ 16 ನಿವೇಶನಗಳನ್ನ ಹಂಚಿತ್ತು. ಹಾಗೆ ಹಂಚಿದ್ದ ನಿವೇಶನಗಳನ್ನು ಪಕ್ಕದ ಜಮೀನು ಅಂದ್ರೆ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಮನವಿಯಲ್ಲಿ ಆರೋಪಿಸಿದ್ದಾರೆ. ಕೇಳಿದ್ರೆ ಹಲ್ಲೆಗೆ ಬರ್ತಾರಂತೆ..! ಹಾಗೇ, ಹಂಚಿಕೆ ಮಾಡಿದ್ದ ನಿವೇಶನಗಳನ್ನು ಅತಿಕ್ರಮಣ ಮಾಡಿಕೊಂಡಿದ್ದನ್ನು ಬಿಟ್ಟುಕೊಡಿ ಅಂತಾ ಸಾಕಷ್ಟು ಬಾರಿ ಮನವಿ ಮಾಡಿದ್ರೂ ಅವ್ರು ಕ್ಯಾರೇ ಅಂತಿಲ್ಲವಂತೆ, ಅಲ್ದೇ ಹಾಗೆ ಕೇಳಿದ್ರೆ ಮಚ್ಚು, ಕೊಡಲಿಗಳನ್ನ ತಂದು ಹಲ್ಲೆಗೆ ಬರ್ತಾರೆ ಅಂತಾ ಮನವಿಯಲ್ಲಿ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ತಹಶೀಲ್ದಾರರಿಂದಲೂ ಕ್ರಮವಿಲ್ಲ..! ಇನ್ನು ಇಂತಹದ್ದೊಂದು ಅತಿಕ್ರಮಣ ಆರೋಪ ಮಾಡಿ ಈಗಾಗಲೇ ಮುಂಡಗೋಡ ತಾಹಶೀಲ್ದಾರರಿಗೆ...
ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರ: ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಅಗಡಿ ಸಮೀಪದ ಶಾಂತಾ ದುರ್ಗಾ ರೈಸ್ ಮಿಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಶಿಗ್ಗಟ್ಟಿ ಗ್ರಾಮದ ಶೇಖಪ್ಪಾ ಲಮಾಣಿ ಗಾಯಗೊಂಡ ಬೈಕ್ ಸವಾರ ಅಂತಾ ತಿಳಿದು ಬಂದಿದೆ. ಬೈಕ್ ನ ಹಿಂದಿನ ಗಾಲಿ ಪಂಕ್ಚರ್ ಆಗಿದ್ದ ಕಾರಣಕ್ಕೆ ಸ್ಕಿಡ್ ಆಗಿ ಬಿದ್ದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಹೀಗಾಗಿ, ಸ್ಥಳೀಯರು ಕೂಡಲೇ ಅಂಬ್ಯುಲೆನ್ಸ್ ತರಿಸಿ ಗಾಯಗೊಂಡ ಬೈಕ್ ಸವಾರನನ್ನು ಕಲಘಟಗಿ ತಾಲೂಕಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಶಿಗ್ಗಾವಿ:ಐತಿಹಾಸಿಕ ನಾಗನೂರು ಕೆರೆಯ ಸುತ್ತಮುತ್ತ ಪುರಸಭೆ ಅಧ್ಯಕ್ಷರು, ಸದಸ್ಯರಿಂದ ಸ್ವಚ್ಚತಾ ಕಾರ್ಯ..!
ಶಿಗ್ಗಾವಿ : ಪಟ್ಟಣದ ಐತಿಹಾಸಿಕ ನಾಗನೂರ ಕೆರೆಯ ಸುತ್ತಮುತ್ತಲೂ ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ ಹಾಗೂ ಉಪಾದ್ಯಕ್ಷ ಮಂಜುನಾಥ ಬ್ಯಾಹಟ್ಟಿ ಮತ್ತು ಸಿಬ್ಬಂದಿ ಸೇರಿದಂತೆ ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯ ಕೈಗೊಂಡರು. ನಾಗನೂರ ಕೆರೆಯ ಸ್ವಚ್ಚತಾ ಕಾರ್ಯದಲ್ಲಿ ತೊಡಗಿ ಮಾತನಾಡಿದ ಪುರಸಭೆ ಅದ್ಯಕ್ಷ ಮತ್ತು ಉಪಾಧ್ಯಕ್ಷರು, ಕೆರೆಯ ದಂಡೆಯಲ್ಲಿ ಗಣೇಶನ ದೇವಸ್ಥಾನವಿದೆ ಈ ಪ್ರದೇಶವು ಪುರಸಭೆಯವರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಸಾರ್ವಜನಿಕರ ಜವಾಬ್ದಾರಿ ಸಹ ಅದನ್ನು ಮನಗಂಡು ತಾವು ಕೂಡ ಯಾರೇ ಕಲುಷಿತ ಮಾಡಿದರೂ ಸಹಿತ ನೋಡಿ ಸುಮ್ಮನೇ ಇರಬಾರದು ಅಂತ ವಿಷಯ ಇದ್ದರೆ ಪುರಸಭೆಯ ಸಹಾಯವಾಣಿಗೆ ತಿಳಿಸಿ ಮತ್ತು ಇಲ್ಲಿ ಹುಟ್ಟು ಹಬ್ಬ ಆಚರಿಸುವುದಾಗಲಿ, ಮದ್ಯಪಾನ ಮಾಡುವದಾಗಲಿ ಕಂಡು ಬಂದರೆ ಅವರು ಶಿಕ್ಷೆಗೆ ಗುರಿ ಮಾಡಲಾಗುವುದು ಎಂದರು. ಜೊತೆಗೆ ಪಟ್ಟಣದ ರಾಚನಕಟ್ಟೆ ಕೆರೆಗೆ ತಡೆಗೋಡೆ ಕಟ್ಟಿಸುವುದು ಅವಶ್ಯವಿದ್ದು ಪಟ್ಟಣದ ಜನರು ಕುಡಿಯಲು ಬಳಸುವ ಗಂಗಾಮಾತೆ ಇದಾಗಿದೆ ಎಂದರು. ಬೆಳಗ್ಗೆ 6 ಗಂಟೆಗೆ ಆಗಮಿಸಿ ಕೆರೆಯ ದಡದಲ್ಲಿ ಹಾಕಲಾಗಿರುವ ತ್ಯಾಜ್ಯ, ಬಿಯರ್ ಬಾಟಲ್...
ಕಬನೂರು ಗ್ರಾಪಂ ನಲ್ಲಿ ಏನಿದು ವಾಸನೆ..? ಸದಸ್ಯರೇ ಮಾಡಿರೋ ಆರೋಪಗಳು ಸತ್ಯವಾ..?
ಶಿಗ್ಗಾವಿ : ತಾಲೂಕಿನ ಕಬನೂರ ಪಂಚಾಯತಿಯ ನೂತನ ಅದ್ಯಕ್ಷರು ಮತ್ತು ಪಿಡಿಓ ಸೇರಿದಂತೆ ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ವಿರುದ್ದ ಪಂಚಾಯತಿಯ ಕೆಲ ಸದಸ್ಯರುಗಳು ಸಿಡಿದೆದ್ದಿದ್ದಾರೆ. ಯಾರವರು..? ಗ್ರಾಮ ಪಂಚಾಯತಿ ಸದಸ್ಯರಾದ ಕೋಟೆಪ್ಪ ಕಮ್ಮಾರ್, ಅನ್ನಪೂರ್ಣ ಓಲೇಕಾರ, ಹಲೀಮಾ ಕಾಳಂಗಿ ಅವರುಗಳು ತಮ್ಮದೇ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಪಿಡಿಓರವರ ಮೇಲೆ ಆರೋಪ ಮಾಡ್ತಿದಾರೆ. ಹೌದು, ಶಿಗ್ಗಾವಿ ಪಟ್ಟಣದ ಪತ್ರಕರ್ತರ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಗೈದಿದಾರೆ. ಏನದು ಆರೋಪ..? 15 ನೇ ಹಣಕಾಸಿನ ಯೋಜನೆಯಲ್ಲಿ ಎಸ್,ಟಿ ಸಮುದಾಯದವರಿಗೆ ಅನ್ಯಾಯವಾಗಿದೆಯಂತೆ. ಅಭಿವೃದ್ದಿ ವಿಷಯದಲ್ಲಿ ರಾಜಕಾರಣ ಮಾಡ್ತಿದಾರಂತ, ಸದಸ್ಯರ ಕಡೆಗಣನೆ ಮಾಡಿದ್ದಾರೆ ಅಂತಾ ಅರೋಪಿಸಿದ್ದಾರೆ. ಇನ್ನು, ಇನ್ನುಳಿದ ಸದಸ್ಯರ ಮಧ್ಯ ಸಾಮರಸ್ಯದ ಕೊರತೆ ಇದೆ, ಗ್ರಾಪಂ ಅಧ್ಯಕ್ಷರಿಂದ ಜಾತಿ ನಿಂದನೆ ಮಾತುಗಳು ಕೇಳ್ತಿವೆ. ಗ್ರಾಮ ಪಂಚಾಯತಿಯಲ್ಲಿ ಖರ್ಚಿನ ಲೆಕ್ಕ ಕೇಳಿದರೆ ಜಗಳಕ್ಕೆ ಅಧಿಕಾರಿಗಳು ಜಗಳಕ್ಕೇ ಬರ್ತಾರಂತೆ, 6 ಸದಸ್ಯರು ಸೇರಿ ಅಧ್ಯಕ್ಷರಿಂದ ಸರ್ವಾಧಿಕಾರಿ ಧೋರಣೆ, ಇದ್ಯೋಗ ಖಾತ್ರಿ ಯೋಜನೆ ಕಾಮಗಾರಿಯಲ್ಲಿ ಭಾರಿ...