ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಅಂಕೋಲಾ: ಉದ್ಯಮಿ ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ‌‌‌.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ, 16ನೇ ಆರೋಪಿ ಉತ್ತರ ಕನ್ನಡದ ಆನಂದ ನಾಯಕ್ ದೋಷಮುಕ್ತರಾಗಿದ್ದಾರೆ. ಉಳಿದಂತೆ 9 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದ್ದು, ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ...

ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!

ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಇಂದು ಭಾರತ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗದ ಸದಸ್ಯೆ, ಶ್ರೀಮತಿ ರಿಂಚನ್ ಲಾಮೊ ಭೇಟಿ ನೀಡಿದ್ಧಾರೆ. ಎರಡು ವಾರಗಳ ಕಾಲ ಕರ್ನಾಟಕದ ಪ್ರವಾಸದಲ್ಲಿರೋ ರಿಂಚನ್ ಲಾಮೊ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದಹಾಗೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕವಾಗಿ ಆಗಮಿಸಿದ ರಿಂಚನ್ ಲಾಮೊರನ್ನು ಮುಂಡಗೋಡ ತಾಲೂಕಾಡಳಿತದಿಂದ ತಾಲೂಕಿನ ಗಡಿ ಭಾಗ ವಡಗಟ್ಟಾದ ಚೆಕ್ ಪೊಸ್ಟ್ ಬಳಿ ಸ್ವಾಗತಿಸಲಾಯಿತು. ಈ ವೇಳೆ ಮುಂಡಗೋಡ ಉಪತಹಶೀಲ್ದಾರ್ ಸೇರಿ ಹಲವರು ಸ್ವಾಗತಿಸಿಕೊಂಡ್ರು. ಇನ್ನು ಎಪ್ರಿಲ್ 1 ರ ವರೆಗೂ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಪ್ರವಾಸ ಕೈಗೊಂಡಿರೋ ಶ್ರೀಮತಿ ರಿಂಚನ್ ಲಾಮೊ ಇಂದು ಸಂಜೆ 4 ಗಂಟೆಗೆ ಟಿಬೇಟಿಯನ್ ಕಾಲೋನಿಯ ಡ್ರೆಪುಂಗ್ ಮಾನಸ್ಟ್ರಿಯಲ್ಲಿ, ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಸ್ಯೆಗಳ ಕುರಿತು ಚರ್ಚೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಮುಖ್ಯಸ್ಥರು/ಅಲ್ಪಸಂಖ್ಯಾತರ ಸಮುದಾಯಗಳ ವಿವಿಧ ಒಕ್ಕೂಟಗಳ ಮುಖಂಡರೊಂದಿಗೆ ಸಭೆ...

ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಈ ದಿನದ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಈ ದಿನದ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ👇 https://youtu.be/b-rV2wH9Cwc  

ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!

ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!

ಮುಂಡಗೋಡ: ಪಟ್ಟಣದಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ರು. ಪ್ರತಿಭಟನೆಯ ವಿಡಿಯೊ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.https://youtu.be/_9sHGn2Dwnk ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿದ್ದ ಪ್ರತಿಭಟನಾ ಮೆರವಣಿಗೆ, ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಂದು, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು‌. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಅರ್ಪಿಸಿದ್ರು‌. ಇನ್ನು ಪ್ರತಿಭಟನಾ ನಿರತರು ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ದ ಕಾರಣಕ್ಕೆ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಹನಗಳು ಸಂಚರಿಸಲಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ‌ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ‌. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿರಸಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮದ್ಯೆಯೇ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದ್ದು, ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಇಂದಿನ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಇಂದಿನ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಈ ಲಿಂಕ್ ಕ್ಲಿಕ್ ಮಾಡಿ.. ಇಂದಿನ ಸುದ್ದಿ ನೋಡಿ.. https://youtu.be/C5ay3WGDUZk

ಮುಂಡಗೋಡಿನಲ್ಲಿ “ಅಪ್ಪು” ಅಭಿಮಾನದ ಮೆರವಣಿಗೆ..!

ಮುಂಡಗೋಡಿನಲ್ಲಿ “ಅಪ್ಪು” ಅಭಿಮಾನದ ಮೆರವಣಿಗೆ..!

ಮುಂಡಗೋಡ: ಪಟ್ಟಣದಲ್ಲಿ ಇಂದು ದಿ.ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಲವು ಸಂಘಟನೆ ಕಾರ್ಯಕರ್ತರು ಅಭಿಮಾನಿಗಳು ಪುನಿತ್ ಹುಟ್ಟುಹಬ್ಬದ ನಿಮಿತ್ತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು‌. ಅದ್ರಂತೆ ಸಂಜೆಯಿಂದ ಇಲ್ಲಿನ ಮಾರಿಕಾಂಬಾ ದೇವಾಲಯದ ಆವರಣದಿಂದ ಪುನಿತ್ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಪುನಿತ್ ರಾಜಕುಮಾರ್ ಅಭಿಮಾನಿಗಳು ಪುನಿತ್ ಪರವಾಗಿ ಘೋಷಣೆ ಕೂಗಿದ್ರು https://youtu.be/G7KlEBOg4d8  

ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ..

ಮುಂಡಗೋಡಿನಲ್ಲಿ “ಅಪ್ಪು” ಜನ್ಮದಿನದ ಸಂಭ್ರಮಕ್ಕೆ ನೇತ್ರದಾನದ ಕೊಡುಗೆ..!

ಮುಂಡಗೋಡಿನಲ್ಲಿ “ಅಪ್ಪು” ಜನ್ಮದಿನದ ಸಂಭ್ರಮಕ್ಕೆ ನೇತ್ರದಾನದ ಕೊಡುಗೆ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಇಂದು ದಿ. ನಟ ಪುನಿತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ರೇಣುಕಾ ಮೆಮೊರೆಬಲ್ ಟ್ರಸ್ಟ್, ಹಾಗೂ ಆಟೋ ಚಾಲಕರ ಸಂಘ ಒಕ್ಕೂಟ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಶಿಬಿರ ನಡೆಯುತ್ತಿದೆ. ಪುನಿತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಅಯ್ಯಪ್ಪ ಬಜಂತ್ರಿ, ಪಣಿರಾಜ್ ಹದಳಗಿ, ಡಾ. ಎಚ್.ಎಫ್. ಇಂಗಳೆ, ಗುಡ್ಡಪ್ಪ ಕಾತೂರ್, ಎನ್.ಎಂ.ನಂದಿಕಟ್ಟಿ, ಕೆಂಜೋಡಿ ಗಲಬಿ, ಮಂಜುನಾಥ್ ನಡಿಗೇರ್, ಮಂಜುನಾಥ್ ಗಣೇಶಪುರ, ಗುಡ್ಡಪ್ಪ ಸುಣಗಾರ, ಸುನಿಲ್ ಲಮಾಣಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ‌. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.

error: Content is protected !!