Uttar Kannada alert: ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿದ್ದು, ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲೆಯ ಹೆದ್ದಾರಿಗಳಲ್ಲಿ ಸುರಕ್ಷಿತ ಸಂಚಾರ ಕುರಿತಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಎಲ್ಲಾ ಸೇತುವೆಗಳ ದೃಢತೆಯ ಕುರಿತಂತೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂದಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು. ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹೆದ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ..! ಜಿಲ್ಲೆಯಲ್ಲಿನ...
Top Stories
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..! ಹೈ ವೇವ್ ಅಲರ್ಟ್..! ಉತ್ತರ ಕನ್ನಡ, ಜಿಲ್ಲೆಯ ಕರಾವಳಿ ಗುಂಟ ಮಾಜಾಳಿಯಿಂದ ಭಟ್ಕಳದವರೆಗೆ ಹೈ ಟೈಡ್ ಎಚ್ಚರಿಕೆ ನೀಡಲಾಗಿದೆ. ಮೇ 24 ರಂದು...
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – 03 ದಿನಗಳ ಕಾಲ – ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
Uttar Kannada Rain News: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿದಿಂದ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ, ನೆರವು ನೀಡಲಾಗುತ್ತಿದೆ. ತುರ್ತು ನಿರ್ವಹಣಾ ಕೇಂದ್ರಕ್ಕೆ ಬರುವ ಎಲ್ಲಾ ರೀತಿಯ ಕರೆಗಳ ಮತ್ತು ವಾಟ್ಸಾಪ್ ಮೂಲಕ ದಾಖಲಾಗುವ ಸಮಸ್ಯೆಗಳನ್ನು ದಾಖಲಿಸಿಟ್ಟುಕೊಂಡು ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ, ಆ ಸಮಸ್ಯೆಗಳಿಗೆ ಪರಿಹಾರ ಒಗದಿಸುವ ಕಾರ್ಯವನ್ನು ಅತ್ಯಂತ ಕ್ಷಿಪ್ರಗತಿಯಲ್ಲಿ ಮಾಡುತ್ತಿದ್ದು, ಹಲವು ಸಮಸ್ಯೆಗಳಿಗೆ ಕನಿಷ್ಠ 20 ನಿಮಿಷದಿಂದ 1 ಗಂಟೆಯ ಒಳಗೆ ಪರಿಹಾರವನ್ನು ಒದಗಿಸಲಾಗಿದೆ. ಮೇ 22 ರಂದು ಭಟ್ಕಳದ ಯಲ್ವಡಿಕರ್ ನಲ್ಲಿ ಮನೆ ಹಾನಿಯಾದ ಕುರಿತಂತೆ ಬೆಳಗ್ಗೆ 11.10 ಕ್ಕೆ ದೂರು ಸ್ವೀಕಾರವಾಗಿದ್ದು, ತಕ್ಷಣವೇ ಅದನ್ನು ಭಟ್ಕಳ ತಹಸೀಲ್ದಾರ್ ಅವರಿಗೆ ವರ್ಗಾಯಿಸಲಾಗಿದ್ದು, 11.30 ಕ್ಕೆ ಆ ಸ್ಥಳಕ್ಕೆ ಬೇಟಿ ನೀಡಿದ ಕಂದಾಯ ನಿರೀಕ್ಷಕರು ಮತ್ತು ಗ್ರಾಮ...
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ********* ಸಾರಿಗೆ ಅದಾಲತ್ ಕಾರ್ಯಕ್ರಮ..! ಕಾರವಾತ; ಕಾರವಾರ ವ್ಯಾಪ್ತಿಯಲ್ಲಿರುವ ವಾಹನ ಮಾಲೀಕರು, ಚಾಲಕರು ಹಾಗೂ ಸಾರಿಗೆ ಇಲಾಖೆಯ ಸೇವೆ ಪಡೆಯುತ್ತಿರುವ ಸಾರ್ವಜನಿಕರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಮೇ. 28 ರಂದು ಮಧ್ಯಾಹ್ನ 12 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸೇವಾ ನ್ಯೂನತೆ ಮತ್ತು ಇನ್ನಿತರ ಸಮಸ್ಯೆಗಳಿದ್ದರೆ ಸಾರ್ವಜನಿಕರು ಖುದ್ದಾಗಿ ಹಾಜರಾಗಿ ಪರಿಹರಿಸಿಕೊಳ್ಳುವಂತೆ...
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Hostel application: ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್ ಸೋಪ್ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ ಮೆಚ್ಚಿನ ಸೋಪುಗಳಲ್ಲಿ ಒಂದಾಗಿದ್ದು, ಬಹುಬೇಡಿಕೆಯ ಸೋಪ್ ಆಗಿದೆ. ಇದೀಗ ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯು ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್ಗೆ ಹೊಸ ರಾಯಭಾರಿಯನ್ನಾಗಿ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ ಉತ್ಪನ್ನಗಳ ನೂತನ ರಾಯಭಾರಿ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ...
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
DC Order News: ಕಾರವಾರ: 2024 ನೇ ಸಾಲಿನಲ್ಲಿ ದಿನಾಂಕ 19-07-2024 ರಂದು ಅಂಕೋಲಾ ತಾಲೂಕಿನ ಬಳಲೆ ಹೋಬಳಿ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-66 ಶಿರೂರು ಗ್ರಾಮ ವ್ಯಾಪ್ತಿಯ 147+300 ರಿಂದ ಕೋಡ್ಸಣಿ ಗ್ರಾಮದ ವ್ಯಾಪ್ತಿಯ 148+800 ಚೈನೆಜ್ ನಡುವೆ ಭಾರಿ ಗುಡ್ಡ ಕುಸಿತ ಉಂಟಾಗಿ 10 ಜನ ಮೃತಪಟ್ಟಿದ್ದು ಇಬ್ಬರು ಕಾಣೆಯಾಗಿದ್ದು, ಈ ಸ್ಥಳವು ಭೂಕುಸಿತ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಪ್ರಸ್ತುತ ವರ್ಷದ ಮಳೆಗಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ ಅಂಕೋಲಾ ರವರು ಸ್ಥಳ ಪರಿಶೀಲನೆ ಕೈಗೊಂಡ ಅವಧಿಯಲ್ಲಿ ಗುಡ್ಡದ ಕೆಲವು ಭಾಗಗಳಲ್ಲಿ ಮಣ್ಣು ಸಡಿಲುಗೊಂಡು ನೆಲಕ್ಕೆ ಉರುಳುತ್ತಿರುವುದು ಕಂಡುಬಂದಿದ್ದು, ಈ ವರ್ಷವು ಸಹ ಈ ಪ್ರದೇಶದಲ್ಲಿ ಭೂ ಕುಸಿತ ಉಂಟಾಗುವ ಎಲ್ಲಾ ಸಾಧ್ಯತೆಗಳು ಇರುತ್ತದೆ. ಪ್ರಸ್ತುತ ಈ ಸ್ಥಳದಲ್ಲಿ ಹಲವಾರು ಟ್ರಕ್ಗಳು ಹಾಗೂ ಕೆಲ ಪ್ರವಾಸಿಗರು ಈ ಪ್ರದೇಶದಲ್ಲಿ ನಿಂತು ಫೋಟೋಗಳನ್ನು ತೆಗೆಯುವುದು ನದಿಯ ನೀರಿನಲ್ಲಿ ಸ್ನಾನ ಮಾಡುವುದು ಅಥವಾ ವಾಹನ ನಿಲ್ಲಿಸಿ ಅದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂಗಾರು ಪೂರ್ವ ಮಳೆ...
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
Rain Effect Minister Meeting: ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು. ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರ್ಚುಚಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..! ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ಬಳಿ ಇರುವ ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಈ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೆ ಪರ್ಯಾಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು, ಅರಣ್ಯ ಇಲಾಖೆವತಿಯಿಂದ ಅಪಾಯಕಾರಿ...
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
Poor CIBIL Score: ಅನೇಕ ಬ್ಯಾಂಕುಗಳು ಸುಲಭದಲ್ಲಿ ವೈಯಕ್ತಿಕ ಸಾಲ ನೀಡುತ್ತದೆ. ಆದರೆ, ಸಾಲ ನೀಡುವಾಗ CIBIL ಸ್ಕೋರ್ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ಕ್ರೆಡಿಟ್ ಸ್ಕೋರ್ ಇದ್ದರೆ, ಸುಲಭವಾಗಿ ಹಾಗೂ ಕಡಿಮೆ ಬಡ್ಡಿಗೆ ಸಾಲ ದೊರೆಯುತ್ತದೆ. ಆದರೆ, ಸಿಬಿಲ್ ಸ್ಕೋರ್ ಕಡಿಮೆ ಇದ್ದರೂ ಚಿಂತಿಸಬೇಕಿಲ್ಲ. ಕಡಿಮೆ CIBIL ಸ್ಕೋರ್ನೊಂದಿಗೆ ₹3 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಬಹುದು. ಯಾವುದೇ ತುರ್ತು ಹಣಕಾಸಿನ ಅಗತ್ಯಗಳನ್ನು ಪೂರೈಕೊಳ್ಳಲು ಬಹುತೇಕರು ವೈಯಕ್ತಿಕ ಸಾಲದ ಮೊರೆ ಹೋಗುತ್ತಾರೆ. ಸಾಮಾನ್ಯವಾಗಿ ಬ್ಯಾಂಕುಗಳು ಸಾಲ ನೀಡುವಾಗ ಸಾಲಗಾರನ ಸಿಬಿಲ್ ಸ್ಕೋರ್ ಅನ್ನು ಚೆಕ್ ಮಾಡುತ್ತವೆ. ಕ್ರೆಡಿಟ್ ಸ್ಕೋರ್ ಉತ್ತಮವಾಗಿದ್ದರೆ, ಸಾಲ ನೀಡಲು ತುದಿಗಾಲಲ್ಲಿ ನಿಂತಿರುತ್ತವೆ. ಒಂದು ವೇಳೆ ಸಿಬಿಲ್ ಸ್ಕೋರ್ ಕಡಿಮೆ ಇದ್ದರೆ, ಸಾಲ ಪಡೆಯುವುದು ಸ್ವಲ್ಪ ಕಷ್ಟವಾಗಬಹುದು. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..! Poor CIBIL Score ಸಾಮಾನ್ಯವಾಗಿ ಸಿಬಿಲ್ ಸ್ಕೋರ್ 750ಕ್ಕಿಂತ ಹೆಚ್ಚಿದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 500ರ ಆಸುಪಾಸಿನಲ್ಲಿದ್ದರೆ,...