ಹುಬ್ಬಳ್ಳಿ: ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ದ ಅಂತಾ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರು ಸಿಎಂ ರಾಜೀನಾಮೆ ಮಾತಿಗೆ ಹೇಳಿದ್ದಾದ್ರೂ ಏನು..? ತಿಳಿಬೇಕಾ ಈ ಕೆಳಗಿನ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿ.. ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ಆಗ್ತಿದೆ, ಪದೇ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಈ ರೀತಿ ಹೇಳಿರಬಹುದು. ಕೋವಿಡ್ ಸಮಯದಲ್ಲಿ ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ. ಹೈಕಮಾಂಡ್ ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಅಂತಾ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ನಂದಿಕಟ್ಟಾ ಗ್ರಾಮದ ಕೊರೋನಾ ಸೋಂಕು ಪೀಡಿತರ ಕುಟುಂಬಗಳಿಗೆ ದಿನಸಿ ಕಿಟ್..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಪೀಡಿತರ ಕುಟುಂಬಗಳಿಗೆ, ಗ್ರಾಮ ಪಂಚಾಯತಿ ಸದಸ್ಯರು ಆಹಾರದ ಕಿಟ್ ವಿತರಿಸಿದ್ರು. ಕೊರೋನಾ ಎರಡನೇ ಅಲೆಯ ಪರಿಣಾಮ ಲಾಕ್ ಡೌನ್ ಜಾರಿಯಾದ ಹಿನ್ನಲೆಯಲ್ಲಿ ನಂದಿಕಟ್ಟಾ ಗ್ರಾಮದ ಬಡ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಅದ್ರಲ್ಲೂ ಕೊರೋನಾ ಪಾಸಿಟಿವ್ ದೃಢಪಟ್ಟ ಕೆಲವು ಕುಟುಂಬಗಳ ಪಾಡು ಹೇಳತೀರದ್ದಾಗಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯ ಸಂತೋಷ ಭೋಸ್ಲೆ ಸೇರಿದಂತೆ ಹಲವು ಸದಸ್ಯರು ಅಂತಹ ಬಡ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ, ಸಂತೋಷಿ ಮಾತಾ ಕಾಳಿಕಾ ಮಠದಿಂದ ಆಹಾರ ಪೊಟ್ಟಣ ವಿತರಣೆ..!
ಹಳಿಯಾಳ : ಜೊಯಿಡಾ ತಾಲೂಕಿನ ಕ್ಯಾಸರಲಾಕ್ ಸಮೀಪದ ಕುಣಗಿನಿಯಲ್ಲಿರುವ ಶ್ರೀ ಸಂತೋಷಿ ಮಾತಾ ಕಾಳಿಕಾ ಮಠದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಆಶ್ರಮದ ಶ್ರೀ ರಘುವೀರ ಗುರೂಜಿಯವರು ಒಂದು ದಿನದ ಊಟದ ಪೊಟ್ಟಣವನ್ನು ವಿತರಿಸಿದರು. 150 ಕ್ಕೂ ಹೆಚ್ಚು ಊಟದ ಪೊಟ್ಟಣವನ್ನು ವಿತರಿಸಲಾಯ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಚವ್ವಾಣ, ಪ್ರಮುಖರಾದ ಮಾರುತಿ ನರಗುಂದಕರ, ಯಲ್ಲಪ್ಪಾ ಮಾಲವಣಕರ, ಯಶವಂತ ಪಟ್ಟೇಕರ, ಬಸವರಾಜ ಹಿರೆಮೊರಬ, ಆಶ್ರಮದ ರೂಪೇಶ ನಾಯ್ಕ, ಪಾಂಡುರಂಗ ಶೇಠ, ರಿಶ್ವಿತ್ ನಾಯ್ಕ, ಸಿದ್ದಾಂತ ಪರಬ ಮೊದಲಾದವರು ಇದ್ದರು.
ಮಳಗಿ: ಮೀನು ಹಿಡಿಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು..!
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ, ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಮೇಶ್ ಶಿವಪ್ಪ ಬೋವಿ(25) ಮೃತಪಟ್ಟ ಯುವಕನಾಗಿದ್ದಾನೆ. ಮಳಗಿ ಗ್ರಾಮದ ಸಿದ್ದಾಪುರ ಓಣಿಯ ನಿವಾಸಿಯಾಗಿರೊ ಯುವಕ ಶನಿವಾರ ಮದ್ಯಾನ ಮೀನು ಹಿಡಿಯಲೆಂದು ಕೆರೆಗೆ ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಅಂತಾ ಸಂಬಂಧಿ ಜಯಮ್ಮ ಹನ್ಮಂತ ಬೋವಿ ಎಂಬುವವರು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬನವಾಸಿ ಭಾಗದ ಗ್ರಾಮಗಳಿಗೆ ಸಚಿವ ಹೆಬ್ಬಾರ್ ಭೇಟಿ: ಕೋವಿಡ್ ನಿರ್ವಹಣೆ ಕುರಿತು ಚರ್ಚೆ..!
ಶಿರಸಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಇಂದು ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ ಹಾಗೂ ಸುಗಾವಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ಅನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಆಶಾ ಕಾರ್ಯಕರ್ತೆರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸಂಕಷ್ಟದಲ್ಲಿರೊ 21 ಬಡ ಕುಟುಂಬಗಳಿಗೆ ಧನಸಹಾಯ ಮಾಡಿದ ಟಿಬೇಟಿಯನ್ ಲಾಮಾ..!
ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬಗಳಿಗೆ ಟಿಬೇಟಿಯನ್ ಸಕ್ಯಾ ಪಾರ್ಟಿಯ ಬೌದ್ದ ಸನ್ಯಾಸಿ ಒಬ್ಬರು ಸಹಾಯ ಮಾಡಿದ್ದಾರೆ. ಸಂಕಷ್ಟದಲ್ಲಿದ್ದ 21 ಬಡ ಕುಟುಂಬಗಳಿಗೆ ತಲಾ 500 ರೂಪಾಯಿ ಹಣ ಸಹಾಯ ಮಾಡಿದ್ದು , ಹಣವನ್ನು ಇಂದು ಗ್ರಾಮ ಪಂಚಾಯತಿ ಸದಸ್ಯರು ವಿತರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು..
ಯಲ್ಲಾಪುರ: ಬಾವಿಗೆ ಹಾರಿದ ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!
ಯಲ್ಲಾಪುರ: ಬಾವಿಗೆ ಬಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಯಲ್ಲಾಪುರ ಪಟ್ಟಣದ ಉದ್ಯಮನಗರದಲ್ಲಿ ನಡೆದಿದೆ. ಸುನಂದ ಪಟಗಾರ್(34) ಅನ್ನೋ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಹೊರಬಂದ ಮಹಿಳೆ ಏಕಾ ಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿಯಲ್ಲಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದು ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದುದ್ದನ್ನು ಗಮನಿಸಿ ಹೊರಬಂದು ನೋಡಿದಾಗ, ಈಕೆ ಚೀರಾಡುವ ಧ್ವನಿ ಮನೆಯ ಜನರಿಗೆ ಕೇಳಿಸಿದೆ. ತಕ್ಷಣ ಬಾವಿ ಇಣುಕಿ ನೋಡಿದಾಗ ಈಕೆ ಬಾವಿಯಲ್ಲಿ ಬಿದ್ದಿರೋದು ಗಮನಕ್ಕೆ ಬಂದಿದೆ. ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ತಕ್ಷಣದಲ್ಲಿ ಕಾರ್ಯಾಚರಣೆ ನಡೆಸಿ ಬಾವಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ನೀರಿನಿಂದ ಹೊರಕ್ಕೆ ಕರೆತಂದಿದ್ದಾರೆ. ಕಾರ್ಯಾಚರಣೆಯಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ .ಭೀಮರಾವ್ ವಾಯು ಉಪ್ಪಾರ್, ಸಿಬ್ಬಂದಿಗಳಾದ ಹನುಮಂತನಾಯ್ಕ , ಉಲ್ಲಾಸ್ ವೈ ನಾಗೇಕರ್,...
ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ ಏರಿಕೆಯಾಗಿದೆ. ಅಂದಹಾಗೆ, ಇದುವರೆಗೂ ತಾಲೂಕಿನಲ್ಲಿ 3730 ಪ್ರಕರಣಗಳು ಪತ್ತೆಯಾಗಿದ್ದು ಅದ್ರಲ್ಲಿ,3374 ಸೋಂಕಿತರು ಗುಣಮುಖರಾಗಿದ್ದಾರೆ.
ಕಾರವಾರ ಜಿಪಂ ಅಭಿಲೇಖಾಲಯ ಕಛೇರಿಯಲ್ಲಿ ಬೆಂಕಿ ಅವಘಡ: 3 ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿದ ಬೆಂಕಿ..!
ಕಾರವಾರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಹೊತ್ತಿಕೊಂಡಿರೋ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಕಚೇರಿಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಡಿಸಿ ಮುಲೈ ಮುಹಿಲನ್, ಸಿಇಒ ಪ್ರಿಯಾಂಗ ಭೇಟಿ ನೀಡಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸನವಳ್ಳಿಯಲ್ಲಿ ಹಲವು ಮನೆಯೊಳಗೆ ಹೊಕ್ಕ ಮಳೆ ನೀರು: ರಾತ್ರಿಯಿಡೀ ಪರದಾಟ..!
ಮುಂಡಗೋಡ-ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿತ್ತು. ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಮಳೆಯ ಕಾರಣಕ್ಕೆ ಕೆಲವು ಗ್ರಾಮಸ್ಥರು ರಾತ್ರಿಯಿಡಿ ನಿದ್ದೆಗೆಡುವಂತಾಯಿತು. ಸನವಳ್ಳಿ ಗ್ರಾಮದಲ್ಲಿ ವ್ಯವಸ್ಥಿತವಾದ ಗಟಾರಗಳು ಇಲ್ಲದ ಕಾರಣ, ಗ್ರಾಮದ ಹಲವು ಮನೆಗಳಿಗೆ ಮಳೆಯ ನೀರು ಒಳಗೆ ನುಗ್ಗಿತ್ತು. ಹೀಗಾಗಿ, ಮನೆ ಮಂದಿಯೆಲ್ಲ ಮಳೆ ನೀರು ಹೊರಹಾಕಲು ಹರಸಾಹಸ ಪಡಬೇಕಾಯ್ತು. ಪುಟ್ಟ ಪುಟ್ಟ ಮಕ್ಕಳು ಸೇರಿದಂತೆ ಮನೆಯ ಮಂದಿಯೆಲ್ಲ ಮಳೆ ನೀರು ಹೊರ ಹಾಕುವಲ್ಲಿ ನಿರತರಾಗಿದ್ರು. ಇನ್ನು ಮಳೆ ನೀರು ಮನೆಯ ಒಳಗೆ ಹೊಕ್ಕ ಕಾರಣ ಮನೆಯಲ್ಲಿನ ಹಲವು ವಸ್ತುಗಳು ಮಳೆಯ ನೀರಲ್ಲಿ ನೆನೆದು ಹಾಳಾಗಿವೆ. ಹೀಗಾಗಿ ಸಮರ್ಪಕ ಗಟಾರು ವ್ಯವಸ್ಥೆ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುವಂತಾಗಿದೆ.