ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!

ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!

ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ ಹಿರೇಮಠ್ ಸೇರಿದಂತೆ ಹಲವರು ಉಪಸ್ಥಿತರು.

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ; ಹೈಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ; ಹೈಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು

ಬೆಂಗಳೂರು: ಹಿಜಾಬ್ ವಿವಾದದ ಕುರಿತು ಹೈಕೋರ್ಟ ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ಪ್ರಕಟವಾಗಿದೆ. ಹಿಜಾಬ್ ಅನ್ನೋದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವೇ ಅಲ್ಲ ಅಂತಾ ಮಹತ್ವದ ಆದೇಶ ನೀಡಿದೆ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ‌. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ‌. ಮಹತ್ವದ ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ.

ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?

ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?

ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ‌ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ‌ ಮೇಲೆ ಅದೇಲ್ಲೆಲ್ಲೋ ಹೋಗಿ ಗಂಟೆಗಟ್ಟಲೇ ಚರ್ಚೆಗಳಿಗಾಗೇ ಮೀಟಿಂಗು, ಈಟಿಂಗು ಎಲ್ಲಾ ಚಾಲ್ತಿಯಲ್ಲಿವೆಯಂತೆ. ಅದರ ಭಾಗವಾಗೇ‌ ಕಳೆದ ನಾಲ್ಕು ದಿನದ ಹಿಂದೆ ಶಿರಸಿ ಸಮೀಪದ ಆಲೆಮನೆಯಲ್ಲಿ ಭರ್ಜರಿ ಮೀಟಿಂಗು ನಡೆದಾಗಿದೆ. ಅಂದಹಾಗೆ, ಆ ಮೀಟಿಂಗ್ ನಲ್ಲಿ ಬೆಲ್ಲದ ಪಾಕದ ಸವಿಯೊಂದಿಗೆ ಬಿಜೆಪಿಯ ಒಳಮಸಲತ್ತುಗಳ ಖಡಕ್ಕು “ಖಾರ” ಮೇಳೈಸಿ ಚಹಾದ ಜೊತೆ ಚೂಡ್ಹಾ ತಿಂದಂಗೆ ಆಗಿದೆ. ಹಾಗಂತ, ಅದೇ ಸಭೆಯ ಬೆಲ್ಲದ ಪಾಕದಲ್ಲಿ ಮಿಂದೆದ್ದು ಬಂದವರೇ ಹೇಳ್ತಿದಾರೆ....

“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!

“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!

ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು‌. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ  ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ ಪ್ರಕಾರ, ಈ ವರ್ಷ ಬರಪೂರ ಮಳೆ ಬಂದು, ಬೂಮಿ ತಾಯಿಯ ಉಡಿ ತುಂಬುವುದು ಅಂತಾ ಕಾರಣೀಕ ಹೊರಬಿದ್ದಿದ್ದು ಸಂತೃಪ್ತಿದಾಯಕ ಮಳೆ ಹಾಗೂ ಸಮೃದ್ಧ ಬೆಳೆಯ ಭವಿಷ್ಯ ನುಡಿಯಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!

ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್‌‌ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್‌ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್‌ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ‌. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.‌!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.‌!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ‌. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ

ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ

ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ‌. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಡಪದ ಅಪ್ಪಣ್ಣ ಸಮಾಜದ ನೂತನ  ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!

ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!

ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ ಹಡಪದ. ಖಜಾಂಚಿಯಾಗಿ ಕೊಪ್ಪಳದ ಮಂಹಪ್ಪ ಹಡಪದ, ಕಾನೂನು ಸಲಹೆಗಾರರಾಗಿ ಹಾವೇರಿಯ ನಾಗರಾಜ ಕಾಯಕದ್ ಆಯ್ಕೆಯಾಗಿದ್ದಾರೆ. ಇವತ್ತು ಹಾವೇರಿಯ ಗುರುಭವನದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ತಂಗಡಗಿಯ ಅನ್ನದಾನಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಮಾಜದ ಅಧ್ಯಕ್ಷರು ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.

ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?

ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?

ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್‌ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ ಎತ್ತುವಳಿ ದಂಧೆಯಂತೆ. ಪ್ರಿಯ ಓದುಗರೇ, ನೀವಂದುಕೊಂಡಂತೆ ಅರಣ್ಯ ಉತ್ಪನ್ನಗಳ ತಪಾಸಣೆಗಾಗೇ ಇರೋ ವಡಗಟ್ಟಾ ಚೆಕ್‌ ಪೊಸ್ಟ್ ನಲ್ಲಿ ಯಾವ ಉತ್ಪನ್ನಗಳ ತಪಾಸಣೆಯೂ ನಡಿಯಲ್ಲ. ಇಲ್ಲಿನ ಸಿಬ್ಬಂದಿಗಳು ನಿತ್ಯವೂ ಚಾಚೂ ತಪ್ಪದೇ ಕೆಲಸ ನಿರ್ವಹಿಸ್ತಾರೆ ನಿಜ, ಆದ್ರೆ, ಇವ್ರ ಕೆಲಸವೇ ಬೇರೆ, ಇವರ ಕೆಲಸದ ಸ್ಟೈಲೇ ಬೇರೆ. ಯಾಕಂದ್ರೆ ಇಲ್ಲಿ ನಿತ್ಯವೂ ಗರಿ ಗರಿ ನೋಟುಗಳು ಕುಣಿದಾಡುತ್ತವೆ.. ಅದೇಂತದ್ದೇ ವಾಹನ ಬರಲಿ, ಆ ವಾಹನದಲ್ಲಿ...

ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!

ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 8 ಮತ್ತು 9ರಂದು ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ‌.  

error: Content is protected !!