ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್‌ ಸೋಪ್‌ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ ಮೆಚ್ಚಿನ ಸೋಪುಗಳಲ್ಲಿ ಒಂದಾಗಿದ್ದು, ಬಹುಬೇಡಿಕೆಯ ಸೋಪ್‌ ಆಗಿದೆ. ಇದೀಗ ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯು ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯನ್ನಾಗಿ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ ಉತ್ಪನ್ನಗಳ ನೂತನ ರಾಯಭಾರಿ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ...

ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ  ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

DC Order News: ಕಾರವಾರ: 2024 ನೇ ಸಾಲಿನಲ್ಲಿ ದಿನಾಂಕ 19-07-2024 ರಂದು ಅಂಕೋಲಾ ತಾಲೂಕಿನ ಬಳಲೆ ಹೋಬಳಿ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-66 ಶಿರೂರು ಗ್ರಾಮ ವ್ಯಾಪ್ತಿಯ 147+300 ರಿಂದ ಕೋಡ್ಸಣಿ ಗ್ರಾಮದ ವ್ಯಾಪ್ತಿಯ 148+800 ಚೈನೆಜ್ ನಡುವೆ ಭಾರಿ ಗುಡ್ಡ ಕುಸಿತ ಉಂಟಾಗಿ 10 ಜನ ಮೃತಪಟ್ಟಿದ್ದು ಇಬ್ಬರು ಕಾಣೆಯಾಗಿದ್ದು, ಈ ಸ್ಥಳವು ಭೂಕುಸಿತ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಪ್ರಸ್ತುತ ವರ್ಷದ ಮಳೆಗಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ ಅಂಕೋಲಾ ರವರು ಸ್ಥಳ ಪರಿಶೀಲನೆ ಕೈಗೊಂಡ ಅವಧಿಯಲ್ಲಿ ಗುಡ್ಡದ ಕೆಲವು ಭಾಗಗಳಲ್ಲಿ ಮಣ್ಣು ಸಡಿಲುಗೊಂಡು ನೆಲಕ್ಕೆ ಉರುಳುತ್ತಿರುವುದು ಕಂಡುಬಂದಿದ್ದು, ಈ ವರ್ಷವು ಸಹ ಈ ಪ್ರದೇಶದಲ್ಲಿ ಭೂ ಕುಸಿತ ಉಂಟಾಗುವ ಎಲ್ಲಾ ಸಾಧ್ಯತೆಗಳು ಇರುತ್ತದೆ. ಪ್ರಸ್ತುತ ಈ ಸ್ಥಳದಲ್ಲಿ ಹಲವಾರು ಟ್ರಕ್‌ಗಳು ಹಾಗೂ ಕೆಲ ಪ್ರವಾಸಿಗರು ಈ ಪ್ರದೇಶದಲ್ಲಿ ನಿಂತು ಫೋಟೋಗಳನ್ನು ತೆಗೆಯುವುದು ನದಿಯ ನೀರಿನಲ್ಲಿ ಸ್ನಾನ ಮಾಡುವುದು ಅಥವಾ ವಾಹನ ನಿಲ್ಲಿಸಿ ಅದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂಗಾರು ಪೂರ್ವ ಮಳೆ...

ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

Rain Effect Minister Meeting: ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು. ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರ್ಚುಚಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡಿಮೆ CIBIL ಸ್ಕೋರ್‌ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..! ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ಬಳಿ ಇರುವ ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಈ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೆ ಪರ್ಯಾಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು, ಅರಣ್ಯ ಇಲಾಖೆವತಿಯಿಂದ ಅಪಾಯಕಾರಿ...

ಕಡಿಮೆ CIBIL ಸ್ಕೋರ್‌ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!

ಕಡಿಮೆ CIBIL ಸ್ಕೋರ್‌ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!

Poor CIBIL Score: ಅನೇಕ ಬ್ಯಾಂಕುಗಳು ಸುಲಭದಲ್ಲಿ ವೈಯಕ್ತಿಕ ಸಾಲ ನೀಡುತ್ತದೆ. ಆದರೆ, ಸಾಲ ನೀಡುವಾಗ CIBIL ಸ್ಕೋರ್ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ಕ್ರೆಡಿಟ್ ಸ್ಕೋರ್‌ ಇದ್ದರೆ, ಸುಲಭವಾಗಿ ಹಾಗೂ ಕಡಿಮೆ ಬಡ್ಡಿಗೆ ಸಾಲ ದೊರೆಯುತ್ತದೆ. ಆದರೆ, ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೂ ಚಿಂತಿಸಬೇಕಿಲ್ಲ. ಕಡಿಮೆ CIBIL ಸ್ಕೋರ್‌ನೊಂದಿಗೆ ₹3 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಬಹುದು. ಯಾವುದೇ ತುರ್ತು ಹಣಕಾಸಿನ ಅಗತ್ಯಗಳನ್ನು ಪೂರೈಕೊಳ್ಳಲು ಬಹುತೇಕರು ವೈಯಕ್ತಿಕ ಸಾಲದ ಮೊರೆ ಹೋಗುತ್ತಾರೆ. ಸಾಮಾನ್ಯವಾಗಿ ಬ್ಯಾಂಕುಗಳು ಸಾಲ ನೀಡುವಾಗ ಸಾಲಗಾರನ ಸಿಬಿಲ್‌ ಸ್ಕೋರ್‌ ಅನ್ನು ಚೆಕ್‌ ಮಾಡುತ್ತವೆ. ಕ್ರೆಡಿಟ್‌ ಸ್ಕೋರ್‌ ಉತ್ತಮವಾಗಿದ್ದರೆ, ಸಾಲ ನೀಡಲು ತುದಿಗಾಲಲ್ಲಿ ನಿಂತಿರುತ್ತವೆ. ಒಂದು ವೇಳೆ ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ, ಸಾಲ ಪಡೆಯುವುದು ಸ್ವಲ್ಪ ಕಷ್ಟವಾಗಬಹುದು. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..! Poor CIBIL Score ಸಾಮಾನ್ಯವಾಗಿ ಸಿಬಿಲ್‌ ಸ್ಕೋರ್‌ 750ಕ್ಕಿಂತ ಹೆಚ್ಚಿದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 500ರ ಆಸುಪಾಸಿನಲ್ಲಿದ್ದರೆ,...

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!

Crime News:ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ.ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು. ಇದಾದ ಬಳಿಕ ನಟ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ಹೇಳಲಾಗಿದೆ. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು (Madenur Manu) ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಮನುವನ್ನು ಬಂಧಿಸಲಾಗಿದೆ

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

Terrorist Arrest News:ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತೊಂದು ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸಿತ್ತು. ಕೇಂದ್ರೀಯ ಸಂಸ್ಥೆಗಳು ಪಾಕಿಸ್ತಾನದ ದೆಹಲಿ ಮೂಲದ ಗುಪ್ತಚರ ಸಂಸ್ಥೆ ಐಎಸ್‌ಐನ ಸ್ಲೀಪರ್ ಸೆಲ್ ಜಾಲವನ್ನು ಭೇದಿಸಿವೆ. 3 ತಿಂಗಳಿಗಿಂತ ಹೆಚ್ಚು ಕಾಲ ನಡೆದ ಈ ಕಾರ್ಯಾಚರಣೆಯ ನಂತರ, ಏಜೆನ್ಸಿಗಳು ನೇಪಾಳಿ ಮೂಲದ ಐಎಸ್‌ಐ ಏಜೆಂಟ್‌ನನ್ನು ದೆಹಲಿಯಿಂದ ಬಂಧಿಸಿವೆ. ಆರೋಪಿಯಿಂದ ಭಾರತೀಯ ಸೇನೆ ಮತ್ತು ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಕೇಂದ್ರೀಯ ಸಂಸ್ಥೆ ವಶಪಡಿಸಿಕೊಂಡಿದೆ. ದೆಹಲಿ ವಿಮಾನ ನಿಲ್ದಾಣದಿಂದ ಪಾಕಿಸ್ತಾನಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಈತ ಸಿಕ್ಕಿಬಿದ್ದಿದ್ದಾನೆ. ನೇಪಾಳ ಮೂಲದ...

ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

Gold Price Today; ಆಭರಣ ಪ್ರಿಯರಿಗೆ ಮತ್ತೊಮ್ಮೆ ಬಿಗ್ ಶಾಕ್ ತಟ್ಟಿದೆ. ಇತ್ತೀಚೆಗೆ ಸ್ವಲ್ಪ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಎರಡೇ ದಿನದಲ್ಲಿ ₹4000 ಏರಿಕೆಯಾಗಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ ಇದು ತನ್ನ ಗರಿಷ್ಠ ಮಟ್ಟದಿಂದ ₹7000 ಇಳಿಕೆ ಕಂಡಿತ್ತು. ಆದರೆ, ಕಳೆದ ಎರಡು ದಿನಗಳಿಂದ ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದು, ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟ ಸಮೀಪಿಸಿದೆ. ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಇನ್ನೂ ಮುಂದುವರಿದಿದೆ. ಡಾಲರ್ ಮೌಲ್ಯ ಕಡಿಮೆಯಾಗುತ್ತಿದೆ, ರಷ್ಯಾ-ಉಕ್ರೇನ್ ಉದ್ವಿಗ್ನತೆ ಹೆಚ್ಚುತ್ತಿದೆ.ಇದಷ್ಟೇ ಅಲ್ಲದೆ...

ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..? ಈತ ಕಳೆದ ವರ್ಷ ಪೆರೋಲ್ ಪಡೆದ ನಂತರ ತಲೆಮರೆಸಿಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಾಧಿ ರಾಜಸ್ಥಾನದ ದೌಸಾದಲ್ಲಿರುವ ಆಶ್ರಮದಲ್ಲಿ ನಕಲಿ ಹೆಸರಿನಲ್ಲಿ ಅರ್ಚಕನಂತೆ ನಟಿಸುತ್ತಿದ್ದ ಈತನನ್ನು ಸೋಮವಾರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ. ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ...

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ‌ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ ದೂರವಾಣಿ ಸಂಖ್ಯೆ: 08301-222122 ಆಗಿರುತ್ತದೆ. ಸದರಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಸಮಸ್ಯೆಗಳನ್ನು,ದೂರುಗಳನ್ನು ಗಮನಕ್ಕೆ ತರಬಹುದಾಗಿದೆ. ತಮ್ಮ ಸಮಸ್ಯೆ, ದೂರುಗಳಿಗೆ ತಕ್ಷಣ ಸ್ಪಂದಿಸಲಾಗುವುದು ಅಂತಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..! ಉಣಕಲ್ ಕೆರೆ ಮೈದುಂಬಿದೆ. ಪ್ರತಿವರ್ಷ ಕೋಡಿ ಹರಿದಾಗಲೂ ಜನರು ತಂಡಗಳಲ್ಲಿ ಬಂದು, ವೀಕ್ಷಿಸುತ್ತಾರೆ. ಆದರೆ, ಕೆರೆಯಲ್ಲಿ ಸಂಗ್ರಹವಾದ ತ್ಯಾಜ್ಯ ಕೋಡಿ ಹರಿವ ನೀರಿನ ಮೂಲಕ ರಾಜಕಾಲುವೆ ಸೇರುತ್ತಿದೆ. ರಾಜಕಾಲುವೆ ತುಂಬಿದರೆ, ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಬಹುತೇಕ ಕಡೆಯಲ್ಲಿ ರಾಜಕಾಲುವೆ ಸಂಪೂರ್ಣ ಕಸದಿಂದ ತುಂಬಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

error: Content is protected !!