ಸವಣೂರು: ನಡು ರಸ್ತೆಯಲ್ಲೇ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆಯಾಗಿದೆ. ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ, ಅಲಿಯಾಸ್ ಟೈಗರ್ ರಪೀಕ್, ಮಾಮಿನ್ (40) ಬರ್ಬರವಾಗಿ ಹತ್ಯೆಯಾಗಿರೋ ರೌಡಿಶೀಟರ್. ಗೋವಾದಲ್ಲಿ ವಾಸವಾಗಿದ್ದ ರೌಡಿಶೀಟರ್ ನನ್ನು ಇಮ್ರಾನ್ ಎನ್ನುವ 28 ವರ್ಷದ ವ್ಯಕ್ತಿ, ಭೀಕರವಾಗಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಹತ್ಯೆ ಮಾಡಿದ್ದಾನೆ ಅಂತಾ ತಿಳಿದು ಬಂದಿದೆ. ಮೃತ ರೌಡಿಶೀಟರ್ ಹಪ್ತಾ ವಸೂಲಿ ಮಾಡಲು ಸವಣೂರಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಹಪ್ತಾ ವಸೂಲಿಯ ಸಲುವಾಗಿ ಆರೋಪಿ ಇಮ್ರಾನ್ ಹಾಗೂ ರೌಡಿಶೀಟರ್ ಅನ್ವರ್ ಶೇಖ್ ನಡುವೆ ಜಗಳ ನಡೆದಿದೆ. ಹಾಗೇ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಪರಿಣಾಮ ಕೊಡಲಿಯಿಂದ ಕೊಚ್ಚಿ ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ ಅಂತಾ ಪ್ರಾಥಮಿಕ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. ಇನ್ನು, ಘಟನೆ ನಡೆದು ಕೇವಲ ಒಂದು ಗಂಟೆಯಲ್ಲೇ ಆರೋಪಿ ಅರೆಸ್ಟ್...
Top Stories
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
ಹಾಡಹಗಲೇ ನಡುರಸ್ತೆಯಲ್ಲೇ ಬಿತ್ತು ರೌಡಿಶೀಟರ್ ಹೆಣ..! ಭೀಕರ ಹತ್ಯೆ ಕಂಡು ಬೆಚ್ಚಿಬಿದ್ದ ಸವಣೂರಿನ ಜನ..!!
ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!
ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದಲ್ಲಿ ನಿನ್ನೆ ಬಂಧಿಸಿದ್ದ ಶಂಕಿತ ಭಯೋತ್ಪಾದಕನನ್ನು ಇಂದು ಪೊಲೀಸರು, ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರೋ ಮಾಹಿತಿ ಲಭ್ಯವಾಗಿದೆ. ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ NIA ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಜುಫ್ರಿ, ಐಸೀಸ್ ಮಾಸಿಕ ಪತ್ರಿಕೆ “ವಾಯ್ಸ್ ಆಫ್ ಹಿಂದ್” ನ್ನು ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ. ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಹೀಗಾಗಿ, ಖಚಿತ ಮಾಹಿತಿ ಮೇರೆಗೆ ನಿನ್ನೆ ಶಂಕಿತ ಭಯೋತ್ಪಾದಕನನ್ನು ಎನ್.ಐ.ಎ ಅಧಿಕಾರಿಗಳು ಹಾಗೂ ರಾಜ್ಯ ಪೊಲೀಸರು ವಶಕ್ಕೆ ಪಡೆದಿದ್ದರು. ಇನ್ನು ಮತ್ತೊಬ್ಬ ಶಂಕಿತ ಅಮೀನ್ ಜುಹೈಬ್ ಎನ್ನುವವನ್ನು ವಿಚಾರಣೆ ನಡೆಸಿರೋ NIA ಅಧಿಕಾರಿಗಳು ಸದ್ಯ ಆತನನ್ನು ಬಿಟ್ಟು ಕಳಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್
ಉಡುಪಿ: ಕರಾವಳಿ ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಹಿಂದೂ ಸಂಘಟನೆಗಳ ಒತ್ತಾಯ ಸರಿಯಾಗಿದೆ, ನಾನೂ ಲೋಕಸಭಾ ಸದಸ್ಯರ ಜೊತೆ ಮಾತನಾಡುತ್ತೇನೆ, ಮಂಗಳೂರು ಭಾಗದಲ್ಲಿ ಶಾಶ್ವತ NIA ಕೇಂದ್ರ ಸ್ಥಾಪನೆಗ ಸೂಕ್ತ ಕ್ರಮ ಕೈಗೊಳ್ಳಲು ಕೋರುತ್ತೇನೆ ಅಂತಾ ಉಡುಪಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಈ ಹಿಂದಿನಿಂದಲೂ ಅಂತಹ ಅನೇಕ ಘಟನೆಗಳು ನಡೆದಿವೆ. ಸಿರಿಯಾ ಜೊತೆ ಕರಾವಳಿ ಸಂಪರ್ಕ ಅತ್ಯಂತ ಅಚ್ಚರಿ ತಂದಿದೆ ಇದು ಅತ್ಯಂತ ಖಂಡನೀಯ ವಾದ ಸಂಗತಿ ಭಯೋತ್ಪಾಧಕ ಕೃತ್ಯಕ್ಕೆ ಸಹಕಾರ ಕೊಟ್ಟವರ ಸಂಪೂರ್ಣ ವಿಚಾರಣೆ ಯಾಗಬೇಕು ಅಂತಾ ಸುನೀಲ್ ಕುಮಾರ್ ಒತ್ತಾಯಿಸಿದ್ರು. ಇನ್ನು ಈ ಕುರಿತು ರಾಜ್ಯ ಸರ್ಕಾರದಿಂದ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸುತ್ತೇನೆ, ಕರ್ನಾಟಕದಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸೋದಕ್ಕೆ ಬಿಡೋದಿಲ್ಲ ಅಂತಾ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ರು.
ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!
ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ. ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಭಟ್ಕಳದಲ್ಲಿ ಮತ್ತೆ NIA ದಾಳಿ; ಶಂಕಿತ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..!
ಭಟ್ಕಳ: ಪಟ್ಟಣದಲ್ಲಿ ಮತ್ತೆ ಎನ್ಐಎ ದಾಳಿ ನಡೆದಿದೆ. ಭಯೋತ್ಪಾದನೆ ನಂಟಿನ ಆರೋಪದಡಿ ಇಲ್ಲಿನ ಉಮರ್ ಸ್ಟ್ರೀಟ್, ತೆಂಗಿನಗುಂಡಿ, ಸಾಗರ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿರೋ NIA ತಂಡ ಮೂವರನ್ನು ವಶಕ್ಕೆ ಪಡೆದಿದೆ. ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಕೃತ್ಯದಲ್ಲಿ ತೋಡಗಿದ್ದವನ ಸಹೋದರನನ್ನು NIA ಟೀಂ ವಶಕ್ಕೆ ಪಡೆದ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ದಾಳಿ ನಡೆಸಿರುವ ಎನ್ಐಎ ವಶಕ್ಕೆ ಪಡೆದಿರುವ ಶಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನು, ಇಂತಹದ್ದೊಂದು ದಾಳಿ ವೇಳೆ ಜಿಲ್ಲಾ ಪೊಲೀಸರು ಸಾಥ್ ನೀಡಿದ್ದು, ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ದಾಳಿ ಹಿನ್ನಲೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದ್ದ ಪುಟ್ಟ ಬಾಲಕಿ ಗಟಾರಿನಲ್ಲಿ ಬಿದ್ದು ಒದ್ದಾಡಿದ ಘಟನೆಗೆ ಸಂಬಂಧಿಸಿದಂತೆ ಇಂದು ನಂದಿಕಟ್ಟಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದ್ರೆ ಪಿಡಿಓ ಸಾಹೇಬ್ರು ಮಾತ್ರ ಪಂಚಾಯತಿಗೆ ಬಂದರೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ ತೋರಿದ್ದಾರೆ ಅಂತಾ ಕೆಲವ್ರು ಅಸಮಾಧಾನ ಹೊರ ಹಾಕಿದ್ರು. ಅವೈಜ್ಞಾನಿಕ ಗಟಾರು ನಿರ್ಮಾಣ..! ಇನ್ನು ಗಟಾರಗಳ ಅವ್ಯವಸ್ಥೆ ಕಣ್ಣಾರೆ ಕಂಡ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ತಕ್ಷಣವೇ ಗಟಾರದ ಅವ್ಯವಸ್ಥೆ ಸರಿಪಡಿಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ 4 ಲಕ್ಷ ರೂ. ವೆಚ್ಚದಲ್ಲಿ ಮಾಡಲಾಗಿದ್ದ ಪಕ್ಕಾ ಗಟಾರ ಕಾಮಗಾರಿ ಬಹುತೇಕ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರೋದೇ ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ ಅಂತಾ ಸದಸ್ಯರು ತಿಳಿಸಿದ್ದಾರೆ. ಹೀಗಾಗಿ ನಾಳೆ ಸಂಬಂಧಪಟ್ಟ ಇಂಜಿನೀಯರ್ ರವರನ್ನು ಕರೆಯಿಸಲು ತೀರ್ಮಾನಿಸಿದ್ದಾರೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರೋ ಗಟಾರನ್ನು ಅವಶ್ಯವಿದ್ದಲ್ಲಿ ಅಗೆದು ತೆರವುಗೊಳಿಸಿ ಮತ್ತೊಮ್ಮೆ ನಿರ್ಮಿಸಲು ಮುಂದಾಗಿದ್ದಾರೆ. ಅಂದಹಾಗೆ ಇದು ಪಬ್ಲಿಕ್ ಫಸ್ಟ್...
ಬೈಕ್ ಅಪಘಾತ: ಕುಬಿಹಾಳ ಗ್ರಾಮ ಪಂಚಾಯತ ಪಿಡಿಓ ಸಾವು..!
ಹುಬ್ಬಳ್ಳಿ: ಬೈಕ್ – ಕಾರ್ ನಡುವೆ ಮುಖಾ-ಮುಖಿಯಾಗಿ ಪಿಡಿಓ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರ ಬ್ರಿಡ್ಜ್ ಬಳಿ ನಡೆದಿದೆ. ಕುಂದಗೋಳ ತಾಲೂಕಿನ ಸಂಶಿ ನಿವಾಸಿಯಾದ ಪ್ರಭುಗೌಡ ಬಸನಗೌಡ ತೇಂಬದಮನಿ ಮೃತ ಪಿಡಿಓ ಆಗಿದ್ದಾರೆ. ಕುಬಿಹಾಳ ಗ್ರಾಮ ಪಂಚಾಯತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಇವತ್ತು ಸಂಜೆ ಕೆಲಸ ಮುಗಿಸಿ ಊರ ಕಡೆ ಹೋಗುವಾಗ ಎದುರಿಗೆ ಬಂದ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮನೆಯ ಮುಂದೆ ಇರೋ ಗಟಾರಿನಲ್ಲಿ ಬಿದ್ದು ಬಿಟ್ಟಿದೆ ಕಂದಮ್ಮ. ಸಂಪೂರ್ಣ ಕೊಳಚೆ ನೀರು ತುಂಬಿಕೊಂಡಿರೋ ಗಟಾರದಲ್ಲಿ ಇನ್ನೇನು ಮುಳುಗುವ ಹಂತದಲ್ಲಿದ್ದ ಪುಟ್ಟ ಮಗುವಿನ ಚೀರಾಟ ಮನೆಯೊಳಗೆ ಇದ್ದ ಅಜ್ಜಿಗೆ ಕೇಳಿಸಿದೆ. ತಕ್ಷಣವೇ ಧಾವಿಸಿ ಬಂದ ಅಜ್ಜಿ ತನ್ನ ಮೊಮ್ಮಗುವನ್ನು ಎತ್ತಿಕೊಂಡಿದ್ದಾರೆ. ಹೀಗಾಗಿ, ಕೊಳಚೆ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದ ಬಾಲಕಿ, ಇನ್ನೇನು ನಿಸ್ತೇಜ ಸ್ಥಿತಿಗೆ ಬರುವ ಹಂತದಲ್ಲಿತ್ತು. ತಕ್ಷಣವೇ ಮಗುವನ್ನು ನೀರಿನಿಂದ...
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?
ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇಂದೂರಿನಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದು ಚಿರತೆ ಮರಿನಾ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಇಬ್ಬರು ಮಹಿಳೆಯರ ಮೇಲೆ ಚಿರತೆ ಮರಿ ದಾಳಿ ಮಾಡಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಗದ್ದೆಯ ಕೆಲಸಕ್ಕಾಗಿ ಹೋಗುತ್ತಿದ್ದ ವೇಳೆ ಎರಡು ಮರಿಗಳೊಂದಿಗೆ ಚಿರತೆ ಅಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಆ ವೇಳೆ ತಾಯಿ ಚಿರತೆ ಮುಂದೆ ಹೋಗಿದೆ. ಆದ್ರೆ ಚಿರತೆ ಮರಿಗಳು ಮಾತ್ರ ಮಹಿಳೆಯರ ಮೇಲೆ ಅಟ್ಯಾಕ್ ಮಾಡಿವೆ ಎನ್ನಲಾಗಿದೆ. ಇಬ್ಬರು ಮಹಿಳೆಯರ ಮೇಲೆ ಮರಿ ದಾಳಿ ಮಾಡಿದೆ ಆದ್ರೆ, ಅದ್ರಲ್ಲಿ ಓರ್ವ ಮಹಿಳೆ ಗೀತಾ ನಾಗಪ್ಪ ದೊಡ್ಮನಿ ಎಂಬುವವರಿಗೆ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ದಾಳಿ ಮಾಡಿದ ವೇಳೆ ಮಹಿಳೆಯರು ಕಿರುಚಾಡಿದ್ದಾರೆ. ಹೀಗಾಗಿ ಅಲ್ಲೇ ಇದ್ದ ಸಾರ್ವಜನಿಕರು ಬಂದು ಮರಿ ಯನ್ನೂ ಅಲ್ಲಿಂದ ಓಡಿಸಿದ್ದಾರೆ ಎನ್ನಾಲಾಗಿದೆ. ಘಟನೆಯಲ್ಲಿ ಓರ್ವ ಮಹಿಳೆಯ ಮುಖಕ್ಕೆ ಹಾಗೂ ಮೂಗಿಗೆ ಗಾಯವಾಗಿದ್ದು. ಚಿಕಿತ್ಸೆಗಾಗಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.