ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಕುಂದಾನಗರಿ 12ನೇ ಅಧಿವೇಶನಕ್ಕೆ ಸಜ್ಜುಗೊಂಡಿದೆ. ಹೀಗಾಗಿ, ಬೆಳಗಾವಿ ನಗರ ಸೇರಿದಂತೆ, ಸುವರ್ಣ ವಿಧಾನಸೌಧದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಅಧಿವೇಶನದ ಭದ್ರತೆಗೆ ಐದು ಸಾವಿರ ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಡಿಸಿಪಿ, 5ಜನ ಎಸ್‌ಪಿ, 12 ಎಎಸ್‌ಪಿ, 42 ಡಿವೈಎಸ್‌ಪಿ, 100 ಸಿಪಿಐ, 250 ಪಿಎಸ್ಐ, ಮೂರುವರೆ ಸಾವಿರ ಪೇದೆಗಳು, 35 ಕೆಎಸ್ಆರ್‌ಪಿ ತುಕಡಿ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ನಿಯೋಜನೆ ಮಾಡಲಾಗಿದೆ. ಇನ್ನು, ಸುವರ್ಣ ವಿಧಾನಸೌಧದ ಒಂದು ಕಿಮೀ ವ್ಯಾಪ್ತಿಯಲ್ಲಿ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೇ 250ಕ್ಕೂ ಹೆಚ್ಚು ಕಡೆಗಳಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಅಳವಡಿಸಲಾಗಿದೆ. ಮೊದಲ ದಿನವೇ ಪ್ರತಿಭಟನೆ ಬಿಸಿ..! ಅಂದಹಾಗೆ, ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ರೈತರ ಬೃಹತ್ ಪ್ರತಿಭಟನೆ...

ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!

ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!

ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ‌ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು. ಶರಣರ ವಚನಗಳನ್ನು ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು ಅಂತಾ ಆಶಿಸಿದ್ರು. ಬಸವಧಾಮದ ಮಾತೆ ಬಸವೇಶ್ವರಿಯವರಿಗೆ ವಚನ ಸಾಹಿತ್ಯ ಹರಡಲು ಎಲ್ಲರೂ ಕೈ ಜೋಡಿಸಬೇಕು ಅಂತಾ ಕರೆ ನೀಡಿದ್ರು. ಇನ್ನು ಗದುಗಿನ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ್ರು. ಅದ್ರಂತೆ, ಬಸವಧಾಮದ ಮಾತೆ ಬಸವೇಶ್ವರಿಯವರು ಆಶೀರ್ವಚನ ನೀಡಿದ್ರು. ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಸುಮಂಗಲಾ ಅಂಗಡಿ ಅಧ್ಯಕ್ಷೀಯ ಭಾಷಣ...

ನಂದಿಕಟ್ಟಾ, ಹುಲಿಹೊಂಡ ಭಾಗದಲ್ಲಿ ಕಾಡಾನೆಗಳ ಹಿಂಡು, ರೈತರ ತೋಟ, ಗದ್ದೆಗಳಲ್ಲಿ ಹಾನಿ..!

ನಂದಿಕಟ್ಟಾ, ಹುಲಿಹೊಂಡ ಭಾಗದಲ್ಲಿ ಕಾಡಾನೆಗಳ ಹಿಂಡು, ರೈತರ ತೋಟ, ಗದ್ದೆಗಳಲ್ಲಿ ಹಾನಿ..!

 ಮುಂಡಗೋಡ ತಾಲೂಕಿನ ಹುಲಿಹೊಂಡ, ಬಸಾಪುರ, ನಂದಿಕಟ್ಟಾ ಭಾಗದಲ್ಲಿ ಕಾಡಾನೆಗಳು ಹಿಂಡು ದಾಂಗುಡಿ ಇಟ್ಟಿದೆ. ಕಾಡಂಚಿನ ಗ್ರಾಮಗಳ ರೈತರ ಗದ್ದೆಗಳು, ತೋಟಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡಿವೆ. ಶನಿವಾರ ರಾತ್ರಿ ಹುಲಿಹೊಂಡ ಗ್ರಾಮದ ಕಾಡಂಚಿನ ಗದ್ದೆ ತೋಟಗಳಿಗೆ ದಾಳಿ ಮಾಡಿರೋ ಗಜರಾಜನ ಹಿಂಡು, ರೈತರ ಅಡಿಕೆ ಗಿಡ, ಕಬ್ಬು, ಬಾಳೆ ಫಸಲನ್ನು ತಿಂದು, ತುಳಿದು ಹಾನಿಮಾಡಿವೆ. ಹುಲಿಹೊಂಡ ಗ್ರಾಮದ ನಾಗಪ್ಪ ಅಲ್ಲಾಪುರ, ರಾಜು ಕಂಬಾರ, ಮಂಜುನಾಥ್ ರಾಯ್ಕರ್, ಈಶ್ವರ ಅಲ್ಲಾಪುರ ಎಂಬುವ ರೈತರ ಕಬ್ಬಿನ ಬೆಳೆ ಹಾಳು ಮಾಡಿವೆ. ಅದ್ರಂತೆ, ರಾಜು ವೆಂಕಪ್ಪ ಹರಿಕೇರಿ ಎಂಬುವವರ ಅಡಿಕೆ ತೋಟದಲ್ಲಿ 10 ಸಸಿಗಳನ್ನು ನೆಲಸಮ ಮಾಡಿವೆ. ಹಾಗೇ ಉಳುವಪ್ಪ ಯಲ್ಲಪ್ಪ ಅಲ್ಲಾಪುರ ಎಂಬುವವರ ಅಡಿಕೆ ತೋಟಕ್ಕೆ ನುಗ್ಗಿ 40 ರಿಂದ 50 ಅಡಿಕೆ ಸಸಿಗಳನ್ನು ನೆಲಸಮ ಮಾಡಿವೆ. ಆದ್ರೆ ಇಷ್ಟೇಲ್ಲ ಆದ್ರೂ ಅರಣ್ಯ ಅಧಿಕಾರಿಗಳು ಮಾತ್ರ ಯಾರೂ ಇತ್ತ ಸುಳಿದೇ ಇಲ್ಲ ಅಂತಿದಾರೆ ಅನ್ನದಾತರು.

ಗೋಂಜ್ಯಾಳ ಬೆಳೆದ ರೈತನಿಗೆ ಮಹಾಮೋಸ, ಅರಶಿಣಗೇರಿಯಲ್ಲಿ ರೆಡ್ ಹ್ಯಾಂಡಾಗೇ ಹಿಡಿದ್ರು ರೈತರು..!

ಗೋಂಜ್ಯಾಳ ಬೆಳೆದ ರೈತನಿಗೆ ಮಹಾಮೋಸ, ಅರಶಿಣಗೇರಿಯಲ್ಲಿ ರೆಡ್ ಹ್ಯಾಂಡಾಗೇ ಹಿಡಿದ್ರು ರೈತರು..!

  ಮುಂಡಗೋಡ ತಾಲೂಕಿನ ಅರಶಿಣಗೇರಿಯ ಗೋವಿನಜೋಳ ಬೆಳೆದ ರೈತರು ಭಾರೀ ಮೋಸಕ್ಕೆ ಬಲಿಯಾಗ್ತಿದಾರಾ..? ತೀವ್ರ ಬರದ ಮದ್ಯೆಯೂ ಸಾಲಸೋಲ ಮಾಡಿ ಗೋವಿನಜೋಳ ಬೆಳೆದ ರೈತನಿಗೆ ಸದ್ಯ ವ್ಯಾಪಾರದ ಹೆಸ್ರಲ್ಲಿ ಮೋಸ ಮಾಡ್ತಿದಾರೆ ಜನ. ಅರಶಿಣಗೇರಿಯಲ್ಲಿ ಇವತ್ತು ಅಂತಹ ಹಲಾಲುಕೋರ ವ್ಯಾಪಾರಿಗಳ ಏಜೆಂಟರುಗಳನ್ನು ರೈತರೇ ಹಿಡಿದು ಜಾಡಿಸಿದ್ದಾರೆ. ಅಂದಹಾಗೆ, ಬರೋಬ್ಬರಿ ಒಂಬತ್ತು ಜನ ದಂಧೆಕೋರರು ರೆಡ್ ಹ್ಯಾಂಡಾಗೇ ರೈತರಿಗೆ ಸಿಕ್ಕು, ಮೋಸ ಬಯಲಿಗೆ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ. ಅಸಲು, ಇವ್ರೇಲ್ಲ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರಂತೆ…! ಅಂದಹಾಗೆ, ಭಾರಿ ವ್ಯವಸ್ಥಿತವಾಗಿ ನಡಿಯೋ ಈ ಮಹಾಮೋಸದಿಂದ ಅನ್ನದಾತ ಕಂಗೆಟ್ಟು ಹೋಗಿದ್ದಾನೆ. ಕ್ವಿಂಟಾಲುಗಟ್ಟಲೇ ಗೋವಿನಜೋಳವನ್ನು ಮೋಸದಿಂದಲೇ ಕದಿಯುವ ವ್ಯಾಪಾರಿಗಳು ಸದ್ಯ ಅರಶಿಣಗೇರಿ ರೈತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಂದಹಾಗೆ, ಈ ಖತರ್ನಾಕ ದಂಧೆಕೋರರು ಹೇಗೇಲ್ಲ ಮೋಸ ಮಾಡ್ತಾರೆ ಗೊತ್ತಾ..? ಹಮಾಲರಿಂದಲೇ ಕೃತ್ಯ..? ಅಸಲು, ಮುಂಡಗೋಡ ತಾಲೂಕಿನಾದ್ಯಂತ ಸದ್ಯ ಗೋವಿನಜೋಳ ಬೆಳೆದ ರೈತ ತಾನು ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಾರಾಟ ಮಾಡಿ ಅಷ್ಟೊ ಇಷ್ಟೊ ಬದುಕು ಕಟ್ಟಿಕೊಳ್ಳುವ ಧಾವಂತದಲ್ಲಿದ್ದಾನೆ. ಮೊದಲೇ...

ಟಿಬೇಟಿಯನ್ ಕ್ಯಾಂಪ್ ನಂ.1 ಕ್ರಾಸ್ ಬಳಿ ಮೊಬೈಲ್ ಶಾಪ್ ಕಳ್ಳತನ, ಬೆಲೆ ಬಾಳುವ ಮೊಬೈಲ್ ಎಗರಿಸಿದ ಕಳ್ಳರು..!

ಟಿಬೇಟಿಯನ್ ಕ್ಯಾಂಪ್ ನಂ.1 ಕ್ರಾಸ್ ಬಳಿ ಮೊಬೈಲ್ ಶಾಪ್ ಕಳ್ಳತನ, ಬೆಲೆ ಬಾಳುವ ಮೊಬೈಲ್ ಎಗರಿಸಿದ ಕಳ್ಳರು..!

 ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಕ್ರಾಸ್ ಬಳಿ ಮೊಬೈಲ್ ಅಂಗಡಿ ಕಳ್ಳತನವಾಗಿದೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಮೊಬೈಲ್ ಅಂಗಡಿ ಮೇಲಿನ ಸೀಟ್ ಕೊರೆದು ಕಳ್ಳರು ಒಳ ನುಗ್ಗಿದ್ದು ಬೆಲೆಬಾಳುವ ಮೊಬೈಲ್ ಗಳನ್ನು ಎಗರಿಸಿಕೊಂಡು ಹೋಗಿದ್ದಾರೆ‌. ಸುರೇಶ್ ಶೇಟ್ ಎಂಬುವವರಿಗೆ ಸೇರಿದ ಮೊಬೈಲ್ ಶಾಪ್ ನಲ್ಲಿ ಹತ್ತಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಏನಿಲ್ಲವೆಂದರೂ ಈ ಮೊಬೈಲ್ ಗಳ‌ ಮೌಲ್ಯ ಒಂದು ಲಕ್ಷ ರೂ. ಗೂ ಹೆಚ್ಚು ಅಂತಾ ಅಂಗಡಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಇನ್ನು ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!

ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ‌ ಮಗನಿಗೆ ಗಂಭೀರ ಗಾಯವಾಗಿದೆ. ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ ಧಾವಿಸಿ ರೋಗಿಗಳಿಗೆ ಪ್ರಥಮ ಚಿಕಿತ್ಸೆ ಕೊಟ್ಟು ತಾಲ್ಲೂಕು ಆಸ್ಪತ್ರೆ ಮುಂಡಗೋಡಿಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿಗ್ಗಾವಿ ಪುರಸಭೆಯಲ್ಲಿ ಗೋಲಮಾಲ್ ಆರೋಪ, ಸಚಿವ ಶಿವಾನಂದ ಪಾಟೀಲ್ ದಿಢೀರ್ ಭೇಟಿ, ಮುಖ್ಯಾಧಿಕಾರಿಗೆ ತರಾಟೆ..!

ಶಿಗ್ಗಾವಿ ಪುರಸಭೆಯಲ್ಲಿ ಗೋಲಮಾಲ್ ಆರೋಪ, ಸಚಿವ ಶಿವಾನಂದ ಪಾಟೀಲ್ ದಿಢೀರ್ ಭೇಟಿ, ಮುಖ್ಯಾಧಿಕಾರಿಗೆ ತರಾಟೆ..!

 ಶಿಗ್ಗಾವಿ ಪುರಸಭೆಗೆ ಇಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ದೀಡೀರ್ ಭೇಟಿ ನೀಡಿದ್ರು. ಶಿಗ್ಗಾವಿ ಪುರಸಭೆಯಲ್ಲಿನ ಅವಾಂತರಗಳ ಬಗ್ಗೆ ಪರಿಶೀಲನೆ ನಡೆಸಿದ್ರು. ಅಲ್ದೆ ಮುಖ್ಯಾಧಿಕಾರಿ ಸೇರಿದಂತೆ ಇನ್ನುಳಿದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಸಮಸ್ಯೆಗಳ ಸರಮಾಲೆ..! ಇನ್ನು ಸಚಿವ್ರು ಪುರಸಭೆಯ ಅಂಗಳಕ್ಕೆ ಕಾಲಿಡುತ್ತಿದ್ದಂತೆ, ಸಾರ್ವಜನಿಕರಿಂದ ಪುರಾಭೆಯ ದುರಾಡಳಿತದ ಬಗ್ಗೆ ಸಮಸ್ಯೆಗಳ ಸುರಿಮಳೆಯೇ ಸುರಿಸಲಾಯಿತು. ಇನ್ನು ಸ್ಟ್ರೀಟ್ ಲೈಟ್ ಅಳವಡಿಕೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಪುರಸಭೆಯ ಮುಖ್ಯಾಧಿಕಾರಿ ಸಂಗನಬಸಯ್ಯರನ್ನು ತೀವ್ರ ತರಾಟೆಗೆ ಪಡೆದ ಸಚಿವ್ರು ಗರಂ ಆದ್ರು. ಒಟ್ನಲ್ಲಿ, ಮಾಜಿ ಸಿಎಂ ಬೊಮ್ಮಾಯಿ ತವರು ಕ್ಷೇತ್ರದ ಶಿಗ್ಗಾವಿ ಪುರಸಭೆಯಲ್ಲಿ ಭಾರೀ ಬ್ರಷ್ಟಾಚಾರ, ದುರಾಡಳಿತದ ಆರೋಪಗಳು ಬಂದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ದಿಢೀರ್ ಭೇಟಿ ನೀಡಿದ್ದು ಸಂಚಲನ ಸೃಷ್ಟಿಸಿದೆ.

ಮುಂಡಗೋಡ PWD ಇಂಜಿನೀಯರ್ ಆಗಿದ್ದ ಎಂ.ರಾಮರಾವ್ ಹೃದಯಾಘಾತದಿಂದ ವಿಧಿವಶ..!

ಮುಂಡಗೋಡ PWD ಇಂಜಿನೀಯರ್ ಆಗಿದ್ದ ಎಂ.ರಾಮರಾವ್ ಹೃದಯಾಘಾತದಿಂದ ವಿಧಿವಶ..!

ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಎಂ.ರಾಮರಾವ್ ರವರ ಅಂತಿಮ‌ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು ಮಾಹಿತಿ ನೀಡಿದ್ದಾರೆ.

ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!

ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!

 ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಪುತ್ತೂರು : ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಮನನೊಂದು, ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿ ನಿಶಾ(17) ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ. ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದು ಬೇಸರದಲ್ಲಿದ್ದಳು. ಆದ್ರೆ, ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಳು. ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ...

error: Content is protected !!