ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್ ಸಚಿನ್ ಟೇಕಬಹುದ್ದೂರ್ ಗೋರ್ಖಾ(26) ಎಂಬುವ ಆರೋಪಿಯನ್ನ ಹೆಡೆಮುರಿ ಕಟ್ಟಲಾಗಿದೆ. ಈತ ಮುಂಡಗೋಡಿ‌ನ ಹುಬ್ಬಳ್ಳಿ ರಸ್ತೆಯ ಬಸ್ ಡೀಪೋ ಹತ್ತಿರ ತನ್ನ ಬೈಕಿನಲ್ಲಿ ಚರಸ್ ಎಂಬುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಹೀಗಾಗಿ, ಖಚಿತ ಮಾಹಿತಿ ಆಧಾರದಲ್ಲಿ ತಡರಾತ್ರಿಯೇ ದಾಳಿ ಮಾಡಿರೋ ಮುಂಡಗೋಡ ಪೊಲೀಸ್ರು ಆರೋಪಿಯನ್ನು ಬಲೆಗೆ ಕೆವಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ ಮುಧೋಳ, ಶಿವಾನಂದ ದಾನಣ್ಣನವರ, ಅನ್ವರ್...

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಪ್ರಮುಖ ಸುದ್ದಿ👉 ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ KVG ಬ್ಯಾಂಕ್ ದರೋಡೆಗೆ ವಿಫಲ ಯತ್ನ ಮಾಡಿ, ಬೆಳಗಾವಿಯಲ್ಲಿ ಅಡಗಿ ಕುಳಿತಿತ್ತು ಅದೊಂದು ನಟೋರಿಯಸ್ ಗ್ಯಾಂಗ್.. ಆ ಗ್ಯಾಂಗ್ ನ ಬೆನ್ನತ್ತಿದ್ದ ಯಲ್ಲಾಪುರ ಪೊಲೀಸ್ರು ಸೋಮವಾರ ಚಾಣಾಕ್ಷತನದಿಂದಲೇ ಗ್ಯಾಂಗಿಗೆ ಬಲೆ ಬೀಸ್ತಾರೆ. ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಟೆಂಟು ಹಾಕೊಂಡು ಮತ್ತೊಂದು ಭಯಾನಕ ಕೃತ್ಯಗಳಿಗೆ ಸ್ಕೆಚ್ ಹಾಕ್ತಿದ್ದ ಆ ಗ್ಯಾಂಗ್ ಮೇಲೆ ದಾಳಿ ಮಾಡ್ತಾರೆ. ಅಷ್ಟೊತ್ತಿಗಾಗಲೇ ಪೊಲೀಸ್ರ ದಾಳಿಯ ಖಚಿತತೆ ಸಿಕ್ಕ ಕೂಡಲೇ, ಆ...

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ. ಹನುಮಾಪುರದ ಮನೆಯಲ್ಲಿ ಆ ವೃದ್ದೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಆದ್ರೆ ನಿನ್ನೆ ರಾತ್ರಿ ಮನೆಗೆ ಬೆಂಕಿ ಹೇಗೆ ತಗುಲಿತೊ ಗೊತ್ತಿಲ್ಲ, ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

 Student Problem; ಮುಂಡಗೋಡ ತಾಲೂಕಿನ ಪಾಳಾದ ಇಂದಿರಾಗಾಂದಿ ವಸತಿ ನಿಲಯದ ವಿದ್ಯಾರ್ಥಿಗಳು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಇಲ್ಲಿನ ಸಿಬ್ಬಂದಿಗಳು ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಕಳಪೆ ಆಹಾರ ಸೇವಿಸುವ ಅನಿವಾರ್ಯತೆಗೆ ಸಿಲುಕಿದ್ದಾರಾ..? ಅದೇಂತದ್ದೇ ಆಹಾರ ಸೇವಿಸಿದ್ರೂ ಅದನ್ನೇ ಅಮೃತವೆಂದು ಭಾವಿಸಿ ಯಾರಿಗೂ ತುಟಿ ಬಿಚ್ಚದೇ ಒಳಗೊಳಗೇ ತಮಗಾದ ನೋವುಗಳನ್ನು ಅದುಮಿಕೊಂಡಿದ್ದಾರಾ..? ಇದೇಲ್ಲ ಪ್ರಶ್ನೆಗಳೂ ಅಲ್ಲಿನ ಆ ರಾಶಿ ರಾಶಿ ನುಸಿಗಳ ಸಾಮ್ರಾಜ್ಯ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ.. ಹೌದು, ಬಡ ಹಿಂದುಳಿದ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸರ್ಕಾರ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯನ್ನು ಸ್ಥಾಪಿಸಿದೆ. ಅದ್ರಂತೆ ಮುಂಡಗೋಡ ತಾಲೂಕಿನ ಪಾಳಾದಲ್ಲೂ ಇಂತಹದ್ದೊಂದು ವಸತಿ ಸೇರಿ ಎಲ್ಲಾ ಸೌಲಭ್ಯಗಳೊಂದಿಗೆ ಶಾಲೆ ತೆರೆದುಕೊಂಡಿದೆ. ಆದ್ರೆ, ಇಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳ ನಿರ್ಲಕ್ಷದಿಂದ ಈ ವಸತಿ ಶಾಲೆಯ ಮಕ್ಕಳಿಗೆ ಆಹಾರವಾಗಬೇಕಿದ್ದ ಕ್ವಿಂಟಾಲುಗಟ್ಟಲೇ ಗೋದಿ ನುಸಿಗಳ ಪಾಲಾಗಿದೆ. ದುರಂತ ಅಂದ್ರೆ ನುಸಿಗಳು ತಿಂದುಳಿಸಿದ ಗೋದಿಯನ್ನೇ ವಿದ್ಯಾರ್ಥಿಗಳಿಗೆ ಉಣ ಬಡಿಸ್ತಿದಾರಾ ಅನ್ನೋ ಅನುಮಾನ...

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಸೇಲ್ಸ್ ಹೆಡ್ ಮತ್ತು ಮ್ಯಾನೇಜರ್ ಗೆ ಸೊಸೈಟಿಯ ವಿರುದ್ದ ಸುಳ್ಳು ಆರೋಪ ಮಾಡಿ ಗದಗಿನ ಮಂಜುನಾಥ ಬೆಟಗೇರಿ ಹಾಗೂ ಮುಂಡಗೋಡಿನ ಮಹದೇಶ್ವರ ಲಿಂಗದಾಳ ಸೇರಿ ಮಾಹಿತಿ ಹಕ್ಕು ನಿಯಮದಡಿ ಮಾಹಿತಿ ನೀಡುವಂತೆ ಅರ್ಜಿ ಹಾಕಿದ್ದರು, ಮಾಹಿತಿ ನೀಡದಿದ್ದರೆ ಬರೋಬ್ಬರಿ 1.5 ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಸೊಸೈಟಿಯವರು ಪೊಲೀಸರಿಗೆ ದೂರು...

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಮುಖ ಸುದ್ದಿ; ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

Sad News; ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ದಾವಣಗೆರೆಯ ಹೈಸ್ಪೀಡ್ ಮಣಿ ನಾಮಾಂಕಿತದ ಟಗರು ಅಕಾಲಿಕವಾಗಿ ಸಾವನ್ನಪ್ಪಿದೆ. ನೆಚ್ಚಿನ ಟಗರಿನ ಸಾವಿನಿಂದ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದಾವಣಗೆರೆಯ ಹೊಸ ಕುಂದುವಾಡ ಗ್ರಾಮದ ಹೈಸ್ಪೀಡ್ ಮಣಿ ಎನ್ನುವ ಟಗರು ರಾಜ್ಯಾದ್ಯಂತ ವಿವಿಧ ಟಗರು ಕಾಳಗದಲ್ಲಿ ಸ್ಪರ್ಧಿಸಿ ಹೆಸರು ಮಾಡಿತ್ತು.‌ ಟ್ರೋಫಿ, ಬೈಕ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಹೊಸ ಕುಂದುವಾಡ ಗ್ರಾಮದ ಹಾಲೇಶ್ ಎಂಬುವರು ಪ್ರೀತಿಯಿಂದ ಈ ಹೈಸ್ಪೀಡ್ ಮಣಿ ಟಗರನ್ನು ಸಾಕಿದ್ದರು.‌ ಭಾನುವಾರ ಟಗರು ಕಾಳಗ ಮುಗಿಸಿ ವಾಪಸಾಗುವಾಗ ಇದ್ದಕ್ಕಿದ್ದಂತೆ ಟಗರು ಕುಸಿದು ಬಿದ್ದು ಸಾವನಪ್ಪಿದೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ. ಪ್ರೀತಿಯಿಂದ ಸಾಕಿದ್ದ ಟಗರನ್ನು ಮಾಲೀಕ ಹಾಲೇಶ್ ಇಡೀ ಕುಂದವಾಡದಲ್ಲಿ ಮೆರವಣಿಗೆ ಮಾಡಿದ್ದು, ಸಾವಿರಾರು ಅಭಿಮಾನಿಗಳು ಹೆಜ್ಜೆ ಹಾಕಿದರು. ಹೊಸ ಕುಂದವಾಡ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಬಳಿಕ ಹೈಸ್ಪೀಡ್ ಮಣಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಟಗರು ಮಾಲೀಕ ಹಾಲೇಶ್ ಮನೆ ಮುಂಭಾಗವೇ ಅಂತ್ಯಸಂಸ್ಕಾರ ಮಾಡಿದ್ದು ವಿಶೇಷವಾಗಿತ್ತು. ಇಡೀ ರಾಜ್ಯದಲ್ಲಿ ನೂರಾರು ಕಡೆ...

ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

Suicide Attempted; ಕಾರವಾರ ನಗರದ ಮಾರುತಿ ಗಲ್ಲಿಯ ನಿವಾಸಿ ಪ್ರಜ್ಞೇಶ್ ಪ್ರಕಾಶ ಶೇಟ (45) ಅವರು ಮದುವೆಯಾಗದಿರುವ ನೋವಿನಿಂದ ಖಿನ್ನಗೊಂಡು ಚಾಕುವಿನಿಂದ ಸ್ವತಃಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮನೆಯಲ್ಲೇ ಚಾಕು ಬಳಸಿ ತಮ್ಮ ದೇಹದ ಭಾಗಕ್ಕೆ ಇರಿತ ಮಾಡಿಕೊಂಡು ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಪ್ರಜ್ಞೇಶ್ ಅವರನ್ನು ತಕ್ಷಣ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಸಮಯೋಚಿತ ಚಿಕಿತ್ಸೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಆಗಿಲ್ಲ ಎಂಬ ವಿಷಯವನ್ನು ಪ್ರಜ್ಞೇಶ್ ಹತ್ತಿರದವರಿಗೆ ಹಲವು ಬಾರಿ ಬೇಸರದಿಂದ ಹೇಳಿಕೊಂಡಿದ್ದರು ಎಂದು ಮಾಹಿತಿ ತಿಳಿದುಬಂದಿದೆ. ಈ ಖಿನ್ನತೆಯ ಹಿನ್ನೆಲೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಮುಖ ಸುದ್ದಿ ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ್ದ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿಯವರು ತಕ್ಷಣಕ್ಕೆ ಜಾರಿಗೆ ಬರುವಂತೆ ಕಿರಣ್ ಸಾಳುಂಕೆಗೆ, ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಇಂದಿರಾನಗರದ ನಿವಾಸಿ ಕಿರಣ ಸಾಳುಂಕೆಯ ಮೇಲೆ ಕೊಲೆ, ಸುಲಿಗೆ, ಸೇರಿದಂತೆ ವಿವಿಧ ಪ್ರಕರಣಗಳು ಇದ್ದು ಸೋಮವಾರ ಶಿರಸಿ ಸಹಾಯಕ ಆಯುಕ್ತರಾದ ಕಾವ್ಯಾರಾಣಿ ಅವರು ಕಿರಣನನ್ನು ಮೂರು ತಿಂಗಳವರೆಗೆ ಕಾರವಾರ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ....

error: Content is protected !!