ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರು ಬ್ಯುಸಿಯಾಗಿದ್ದ ಕಾರಣಕ್ಕೆ ಪಕ್ಷ ಸೇರುವ ದಿನಾಂಕ ಮಾತ್ರ ಬಾಕಿ ಉಳಿಸಿಕೊಳ್ಳಲಾಗಿತ್ತು. ಇವತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಹಲವು ಮುಖಂಡರ ಜೊತೆ ಡಿಕೆಶಿ ನಿವಾಸದಲ್ಲೇ ಭೇಟಿಮಾಡಿದ ವಿ.ಎಸ್.ಪಾಟೀಲ್, ಕಾಂಗ್ರೆಸ್ ಸೇರ್ಪಡೆಯ ದಿನಾಂಕ ಪಿಕ್ಸ್ ಮಾಡಿಕೊಂಡಿದ್ದಾರೆ. ಮೊದಲು ಸೇರ್ಪಡೆ ನಂತ್ರ ಸಮಾವೇಶ..! ಬೆಂಗಳೂರಿನಲ್ಲಿ ನಡೆದ ಡಿಕೆಶಿ ಭೇಟಿ ವೇಳೆ ಚರ್ಚಿತವಾದಂತೆ, ನವೆಂಬರ್ 4 ರಂದು ಕೆಪಿಸಿಸಿ ಕಚೇರಿಯಲ್ಲೇ ಪಕ್ಷ ಸೇರ್ಪಡೆ ಕಾರ್ಯಕ್ರಮ...
Top Stories
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!
ಮುಂಡಗೋಡ ಅಜಾದ್ ಬ್ಯಾಂಕ್ ಅಧ್ಯಕ್ಷರಾಗಿ ಮಹ್ಮದ್ ಗೌಸ್ ಧುಂಡಸಿ ಆಯ್ಕೆ..!
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ಪರವಾಗಿ ಸಾಧಕ ಸಹದೇವಪ್ಪ ನಡಗೇರಿಯವರಿಗೆ ಅಭಿನಂದನೆಗಳು
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ ಇಟ್ಟಿದ್ದ ಸುಮಾರು 30 ಸಾವಿರ ಹಣವನ್ನು ಕಳ್ಳತನ ಮಾಡಿಕೊಂಡಿದ್ದಾರೆ. ಈ ವೇಳೆ ಮನೆಯಲ್ಲಿನ ಪಾತ್ರೆಗಳ ಶಬ್ಧವಾಗಿದೆ. ಹೀಗಾಗಿ, ಅಕ್ಕಪಕ್ಕದ ಜನ ಈ ಮನೆಲಿ ಯಾರೋ ಒಳನುಗ್ಗಿದ್ದಾರೆ ಅಂತ ಅನುಮಾನಿಸಿ ಮನೆಯ ಮಾಲೀಕರಿಗೆ ತಿಳಿಸಿದ್ದಾರೆ. ಅಲ್ಲದೇ ಮನೆಯ ಬಾಗಿಲು ತೆರೆದು ನೋಡಿದಾಗ ಇಬ್ಬರು ಬಾಲಕರು ಕೃತ್ಯದಲ್ಲಿ ಭಾಗಿಯಾಗಿರೋದು ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಅವ್ರನ್ನ ಹಿಡಿಯಲು ಗ್ರಾಮಸ್ಥರು ಬೆನ್ನತ್ತಿದ್ದಾರೆ. ಆದ್ರೆ ತಕ್ಷಣವೇ ಆ ಇಬ್ಬರು ಬಾಲಕರು...
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನೀಲ್ ಕುನುಗೋಲು ನೀಡಿರುವ ವರದಿ ಆಧರಿಸಿ ಚರ್ಚೆ ಮಾಡಿದ ನಾಯಕರು ಸುಲಭವಾಗಿ ಗೆಲುವು ಸಾಧಿಸಬಹುದಾದ ಕ್ಷೇತ್ರಗಳನ್ನು ಎ ಕೆಟಗೆರಿಗೆ ಸೇರಿಸಿ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲು ಪ್ಲ್ಯಾನ್ ಮಾಡಲಾಗಿದೆ. “ಬಿ” ಕೆಟೆಗರಿ ಗೆಲ್ಲುವ ಅವಕಾಶಗಳು ಹೆಚ್ಚಿರುವ ಕ್ಷೇತ್ರಗಳನ್ನು ಬಿ ಕೆಟಗೆರಿಯಲ್ಲಿ ಸೇರಿಸಿದ್ದು, ಎರಡನೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಮತ್ತು ಗೆಲುವು ಕಷ್ಟ ಎನಿಸಿಕೊಳ್ಳುವ ಕ್ಷೇತ್ರಗಳನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ....
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ, ಸವದತ್ತಿಯಲ್ಲಿ ಮಡುಗಟ್ಟಿದ ಮೌನ
ಬೆಳಗಾವಿ: ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ(56) ವಿಧಿವಶರಾಗಿದ್ದಾರೆ. ಹೀಗಾಗಿ, ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿರುವ ಆನಂದ ಮಾಮನಿ ನಿವಾಸದಲ್ಲಿ ಮೌನ ಮಡುಗಟ್ಟಿದೆ. ಬೆಳಗ್ಗೆ 10 ಗಂಟೆಯ ಹೊತ್ತಿಗೆ ಸವದತ್ತಿಯ ನಿವಾಸಕ್ಕೆ ಆಗಮಿಸಲಿರುವ ಆನಂದ ಮಾಮನಿ ಪಾರ್ಥಿವ ಶರೀರ, ಮನೆಯಲ್ಲಿ ಒಂದು ಗಂಟೆ ಕಾಲ ಪೂಜೆ ಹಾಗೂ ಕುಟುಂಬಸ್ಥರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತಾಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಮಧ್ಯಾಹ್ನ 3 ಗಂಟೆಗೆ ಯಡ್ರಾವಿ ರಸ್ತೆಯ ಚಂದ್ರಮಾ ಫಾರ್ಮ್ಹೌಸ್ನಲ್ಲಿ ಲಿಂಗಾಯತ ಧರ್ಮದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಲಿದೆ.
ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?
ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ ಪ್ರೌಢಶಾಲೆ ದಶಕಗಳ ಇತಿಹಾಸ ಹೊಂದಿರೋ ಪ್ರೌಢಶಾಲೆ. ಇದೇ ಶಾಲೆಯಲ್ಲಿ ಕಲಿತು ಇವತ್ತು ಅದೇಷ್ಟೋ ಪ್ರತಿಭಾನ್ವಿತರು ಉನ್ನತ ಹುದ್ದೆಗಳಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ಎಂ.ಸಿ.ಕಲಾಲರು ಈ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಬೇಕಾಗಿದ್ದ ಜಾಗವನ್ನು ದಾನ ನೀಡಿ ಉಧಾರತೆ ತೋರಿದ್ದರು. ಹೀಗಾಗಿನೇ ಕಳೆದ ಕೆಲ ದಿನಗಳ ಹಿಂದೆ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡು ದಾನಿಗಳು ಸೇರಿದಂತೆ ಹಲವರಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಈಗ ಅದೇ ಪ್ರೌಢಶಾಲೆಯ ಅಂಗಳದಲ್ಲಿ...
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ ಸಾಕು ಸಾಂತ್ವನ ನೀಡುವ ಸ್ನೇಹಮಯ ಮನಸ್ಸುಗಳು ಇವೆ. ಮೊದಲಿನ ಹಾಗೆ, ವಿನಾಕಾರಣ ಪೊಲೀಸುಗಿರಿ ತೋರಿಸಿ ರಾತ್ರಿಯಾದ್ರೆ ಕ್ಚಾಟರ್ ಗಾಗಿ ಕಾಯುವ ವಸೂಲಿವೀರ ಖಾಕಿಗಳು ಬಹುಶಃ ಯಾರೂ ಉಳಿದಿಲ್ಲ. ಹೀಗಾಗಿ, ಅದೇನೇ ಸಮಸ್ಯೆ ಹೊತ್ತೊಯ್ದರು ಕುಳಿತು ಬಗೆಹರಿಸುವ ಹೃದಯವಂತ ಹುಡುಗ್ರು ಠಾಣೆಯಲ್ಲಿದ್ದಾರೆ. ಆದ್ರೆ, ಅವ್ರಿಗೇಲ್ಲ ಅದೊಂದೇ ಪಿಡುಗು ಜೀವ ಹಿಂಡ್ತಿದೆ. ಬ್ರೋಕರ್ ಗಳ ಹಾವಳಿ ಹೆಜ್ಜೆ ಹೆಜ್ಜೆಗೂ ಕಟ್ಟಿ ಹಾಕ್ತಿದೆ. ಬ್ರೋಕರ್ ಗಳ ಅಡ್ಡ...
ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!
ಬೆಳಗಾವಿ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಎದುರು ನಡೆಯುತ್ತಿದ್ದ ಧರಣಿ ವಾಪಸ್ ಪಡೆದಿದ್ದಾರೆ ರೈತರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿನ್ನೆ ತಡರಾತ್ರಿ ವಾಪಸ್ ಪಡೆದಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ರೈತರು, ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಮನವೊಲಿಸಿದ ಬಳಿಕ ವಾಪಸ್ಬ ಪಡೆದಿದ್ದಾರೆ. ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಇದೇ ತಿಂಗಳು 15 ರಂದು ಕಬ್ಬಿನ ದರ ನಿಗದಿಗಾಗಿ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಬೆಳಗಾವಿಯಿಂದ ಚೂನಪ್ಪ ಪೂಜಾರಿ ಸೇರಿ 10 ಜನರು ರೈತ ಮುಖಂಡರು ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿಗಳ ಸಭೆಯಲ್ಲಿ ತಮ್ಮ ಬೇಡಿಕೆ ಗಮನಕ್ಕೆ ತರುವಂತೆ ಡಿಸಿ ನಿತೇಶ್ ಪಾಟೀಲ್ ರೈತರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ ನಿನ್ನೆ ತಡರಾತ್ರಿ ಹೋರಾಟವನ್ನು ರೈತರು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದಾರೆ. ಅಂದಹಾಗೆ, ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನಿಗದಿ ಪಡಿಸಲು ರೈತರು ಹೋರಾಟ ಆರಂಭಿಸಿದ್ರು. ಹೀಗಾಗಿ,...