ಮುಂಡಗೋಡ-ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿತ್ತು. ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಮಳೆಯ ಕಾರಣಕ್ಕೆ ಕೆಲವು ಗ್ರಾಮಸ್ಥರು ರಾತ್ರಿಯಿಡಿ ನಿದ್ದೆಗೆಡುವಂತಾಯಿತು. ಸನವಳ್ಳಿ ಗ್ರಾಮದಲ್ಲಿ ವ್ಯವಸ್ಥಿತವಾದ ಗಟಾರಗಳು ಇಲ್ಲದ ಕಾರಣ, ಗ್ರಾಮದ ಹಲವು ಮನೆಗಳಿಗೆ ಮಳೆಯ ನೀರು ಒಳಗೆ ನುಗ್ಗಿತ್ತು. ಹೀಗಾಗಿ, ಮನೆ ಮಂದಿಯೆಲ್ಲ ಮಳೆ ನೀರು ಹೊರಹಾಕಲು ಹರಸಾಹಸ ಪಡಬೇಕಾಯ್ತು. ಪುಟ್ಟ ಪುಟ್ಟ ಮಕ್ಕಳು ಸೇರಿದಂತೆ ಮನೆಯ ಮಂದಿಯೆಲ್ಲ ಮಳೆ ನೀರು ಹೊರ ಹಾಕುವಲ್ಲಿ ನಿರತರಾಗಿದ್ರು. ಇನ್ನು ಮಳೆ ನೀರು ಮನೆಯ ಒಳಗೆ ಹೊಕ್ಕ ಕಾರಣ ಮನೆಯಲ್ಲಿನ ಹಲವು ವಸ್ತುಗಳು ಮಳೆಯ ನೀರಲ್ಲಿ ನೆನೆದು ಹಾಳಾಗಿವೆ. ಹೀಗಾಗಿ ಸಮರ್ಪಕ ಗಟಾರು ವ್ಯವಸ್ಥೆ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುವಂತಾಗಿದೆ.
Top Stories
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಹುಲಿಹೊಂಡ ಗ್ರಾಮದಲ್ಲಿ ಮರಕ್ಕೆ ಬಡಿದ ಸಿಡಿಲು: ಮರದ ಕೆಳಗೆ ನಿಂತಿದ್ದ 9 ಜನರಿಗೆ ಗಾಯ..!
ಮುಂಡಗೋಡ- ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿದೆ. ಶುಕ್ರವಾರ ತಾಲೂಕಿನ ಹುಲಿಹೊಂಡ ಗ್ರಾಮದ ಗದ್ದೆಯಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ, ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದ 9 ಜನರಿಗೆ ಸಿಡಿಲಿನ ಶಾಖ ತಟ್ಟಿ ಚಿಕ್ಕ ಪುಟ್ಟ ಗಾಯವಾದ ಘಟನೆ ನಡೆದಿದೆ. ಹುಲಿಹೊಂಡ ಗ್ರಾಮದ ರಾಮಪ್ಪ ಬಸಪ್ಪ ಕಬ್ಬೇರ್ ಎಂಬುವವರು ತಮ್ಮ ಜಮೀನಿನಲ್ಲಿ ನಿನ್ನೆ ಶುಕ್ರವಾರ ಗೋವಿನ ಜೋಳ ಬೀಜ ಬಿತ್ತನೆ ಮಾಡುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಮಳೆಯ ಹನಿಯಿಂದ ತಪ್ಪಿಸಿಕೊಳ್ಳಲು ಬೀಜ ಬಿತ್ತನೆಯಲ್ಲಿ ತೊಡಗಿದ್ದ 9 ಜನರು ಮರದ ಕೆಳಗೆ ಆಶ್ರಯ ಪಡೆದಿದ್ದಾರೆ. ಆದ್ರೆ ಅದೇ ವೇಳೆ ನಿಂತಿದ್ದ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲಿನ ರಭಸಕ್ಕೆ ಬಹುತೇಕರು ಮೂರ್ಚೆ ಹೋಗಿದ್ದಾರೆ. ಹೀಗಾಗಿ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಘಟನೆಯಲ್ಲಿ ಅನಿತಾ ಪರಸಪ್ಪ ಕಬ್ಬೇರ್ ಎಂಬುವವರಿಗೆ ಹೆಚ್ಚಿನ ಗಾಯವಾಗಿದ್ದು, ಸಮೀಪದ ಬಮ್ಮಿಗಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರದೊಯ್ಯಲಾಗಿತ್ತು. ಅವ್ರು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಡಗೋಡ ಕಂದಾಯ ಇಲಾಖೆ ಅಧಿಕಾರಿಗಳು...
VRDM ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸೆಪ್ಟಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದೇಶಪಾಂಡೆ ರೂಡ್ ಸೆಟಿ ವತಿಯಿಂದ ಇಂದು ಮೆಡಿಕಲ್ ಸೆಪ್ಟಿ ಕಿಟ್ ವಿತರಿಸಲಾಯಿತು. ತಾಲೂಕಿನ ಹುನಗುಂದ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ಉದ್ಘಾಟಿಸಿ ಮಾತನಾಡಿದ್ರು. ಹುನಗುಂದ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕುನ್ನೂರ್, ಉಪಾಧ್ಯಕ್ಷ ತುಕಾರಾಮ್ ಹೊನ್ನಳ್ಳಿ, ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ನಡಗೇರಿ, ಗ್ರಾಪಂ ಸದಸ್ಯರಾದ ಈಶ್ವರಗೌಡ ಅರಳಿಹೊಂಡ ಸೇರಿ ದೇಶಪಾಂಡೆ ರೂಡಸೆಟಿಯ ಸಂಚಾಲಕರು ಉಪಸ್ತಿತರಿದ್ದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: SSLC ಪರೀಕ್ಷೆ ಇರತ್ತೆ: ಸಚಿವ ಸುರೇಶ್ ಕುಮಾರ್ ಮಹತ್ವದ ನಿರ್ಧಾರ..!
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ SSLC ಪರೀಕ್ಷೆ ನಡೆಯಲಿದೆ. 120 ಅಂಕಗಳಿಗೆ 3 ಗಂಟೆಯ ಪರೀಕ್ಷೆ ನಡೆಸಲಾಗುವುದು. ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಹು ಆಯ್ಕೆ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. ಕನ್ನಡ , ಇಂಗ್ಲೀಷ್, ಹಿಂದಿಗೆ 1 ಪರೀಕ್ಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನಕ್ಕೆ ಒಂದು ಪರೀಕ್ಷೆ ನಡೆಸಲಾಗುವುದು. ಯಾರನ್ನೂ ಫೇಲ್ ಮಾಡುವುದಿಲ್ಲ. ವ್ಯಾಕ್ಸಿನೇಟೆಡ್ ಟೀಚರ್ಸ್ ಗಳಿಗೆ ಮಾತ್ರ ಎಕ್ಸಾಂ ಡ್ಯೂಟಿ ಇರಲಿದೆ ಎಂದು ಹೇಳಿದ್ದಾರೆ. ವಲಸೆ ಹೋಗಿರುವ ವಿದ್ಯಾರ್ಥಿಗಳಿಗೆ ಇರುವಲ್ಲೇ ಪರೀಕ್ಷೆ ಬರೆಯುವ ಅವಕಾಶ ಕೊಡಲಾಗುವುದು. ಜುಲೈ ಮೂರನೇ ವಾರದಲ್ಲಿ ಪರೀಖ್ಷೆ ನಡೆಸಲಾಗುವುದು. 20 ದಿನದ ಮುಂಚೆ ಪರೀಕ್ಷಾ ದಿನಾಂಕ ತಿಳಿಸಲಾಗುವುದು ಎಂದರು. ಜುಲೈ ಕೊನೆಯ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ...
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!
ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಜಿ ಗಾಂವ್ಕರ್, ಯುವ ನಾಯಕ ವಿವೇಕ್ ಹೆಬ್ಬಾರ್, ಪ್ರಮುಖರಾದ ವಿಜಯ ಮಿರಾಶಿ, ಗಣಪತಿ ಮುದ್ದೆಪಾಲ ಹಾಗೂ ತಹಶೀಲ್ದಾರರಾದ ಕೃಷ್ಣ ಕಾಮ್ಕರ್ ಹಾಗೂ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೇಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್..!
ಕರ್ನಾಟಕದಲ್ಲಿ 2ನೇ ಅಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಸಂಕಷ್ಟಕ್ಕೊಳಗಾಗಿರೋ ವಿವಿಧ ವರ್ಗಗಳಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಸಿಎಂ ಯಡಿಯೂರಪ್ಪ ಇಂದು ಮತ್ತೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ಇವತ್ತು ಘೋಷಣೆ ಮಾಡಿರೋ ಪ್ಯಾಕೇಜ್ ನಲ್ಲಿ ಯಾರ್ಯಾರ ಪಾಲು ಎಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್. 1. ಪವರ್ ಲೂಮ್ ನೇಕಾರರು ಪ್ರತಿ ಪವರ್ ಲೂಮ್ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ ರೂ 3,000ದಂತೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಸುಮಾರು 59 ಸಾವಿರ ಪವರ್ ಲೂಮ್ಗಳಿಗೆ 35 ಕೋಟಿ ವೆಚ್ಚವಾಗಲಿದೆ. 2. ಚಲನಚಿತ್ರ ಮತ್ತುದೂರದರ್ಶನ ಮಾಧ್ಯಮದಲ್ಲಿನ ಅಸಂಘಟಿತ ಕಾರ್ಮಿಕರು ಚಲನಚಿತ್ರೋದ್ಯಮ ಹಾಗೂ ದೂರದರ್ಶನ ಮಾಧ್ಯಮದಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ (ಕಲಾವಿದರು, ತಂತ್ರಜ್ಞರು) ತಲಾರೂ 3,000ದಂತೆ ಪರಿಹಾರ ನೀಡಲು ನಿರ್ಧರಿಸಿದೆ. ಇದರಿಂದ ಸುಮಾರು 22 ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದ್ದು ರೂ 6.6 ಕೋಟಿ ವೆಚ್ಚವಾಗಲಿದೆ....
ನಕ್ಕು ನಗಿಸಿದ್ದ ಹಿರಿಯ ಪೋಷಕ ನಟಿ ಬಿ.ಜಯಾ ವಿಧಿವಶ..! ಕಂಬನಿ ಮಿಡಿದ ಚಿತ್ರರಂಗ..!!
ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಇಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ನಟಿಸಿದ್ದ ನಟಿಯ ನಿಧನಕ್ಕೆ ಚಿತ್ರರಂಗವೇ ಕಣ್ಣೀರು ಸುರಿಸಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಅಣ್ಣಾವ್ರ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. 6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿಿ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ. ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಹಲವಾರು ದಿಗ್ಗಜ ನಟರ ಜತೆ ಅಭಿನಯಸಿದ್ದ ಹಿರಿಯ ನಟಿಯನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ.
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ ಬೀಜ ಕುರಿತಂತೆ ರಾಜ್ಯ ಸರ್ಕಾರ ದಿಟ್ಟ ಕ್ರಮಕೈಗೊಳ್ಳಲಾಗಿದೆ. ಹಾವೇರಿ, ರಾಣೇಬೆನ್ನೂರ, ಕೊಪ್ಪಳ, ಬೀದರಗಳಲ್ಲಿ ಬಿಡಿ ಬಿತ್ತನೆ ಬೀಜ ಮಾರಾಟ, ಅನಧಿಕೃತ ಬಿತ್ತನೆ ಬೀಜಗಳ ದಾಸ್ತಾನು, ನಕಲಿ ಬಿತ್ತನೆ ಬೀಜ ಹಾಗೂ ನಕಲಿ ಗೊಬ್ಬರಗಳ ಪತ್ತೆಮಾಡಿ ಕಠಿಣ ಕ್ರಮಕೈಗೊಳ್ಳಲಾಗಿದೆ. ಈ ವರ್ಷವೂ ಈ ಅಭಿಯಾನ ಮುಂದುವರೆದಿದೆ ಎಂದು ಹೇಳಿದರು. ಬಿಡಿ ಬಿತ್ತನೆ ಬೀಜಗಳ ಮಾರಾಟ, ಅಕ್ರಮ ದಾಸ್ತಾನುಗಳ ಕುರಿತಂತೆ ಮಾಹಿತಿಗಳು ಬರುತ್ತಿವೆ. ದೂರುಗಳನ್ನು ಆಧರಿಸಿ...
ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ: ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಣೆ..!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ ಒಂದು ವಾರಗಳ ಕಾಲ ಮುಂದುವರಿಯಲಿದೆ. ಹೋಟೆಲ್ ಗಳಲ್ಲಿ ಸಂಜೆಯ ವರೆಗೂ ಪಾರ್ಸೆಲ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಲಾಕ್ ಡೌನ್ ಘೋಷಣೆಯ ಜೊತೆಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.