ಕುಮಟಾ- ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದೆ. ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜ್ ಹಿಂಬದಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಂಜೆ ವಾಯುವಿಹಾರಕ್ಕೆ ತೆರಳಿದ್ದವರ ಕಣ್ಣಿಗೆ ಬಿದ್ದಿದ್ದ ಬಾಂಬ್ ಮಾದರಿ ವಸ್ತು ಗಮನಿಸಿದ ಸ್ತಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸ್ ದೌಡಾಯಿಸಿ, ಪರಿಶೀಲನೆ ಕೈಗೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡು ಬಿಟ್ಟಿದೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಆಗಮಿಸೋ ಸಾಧ್ಯತೆಯಿದೆ. ಬಾಂಬ್ ಮಾದರಿಯ ವಸ್ತು ಸಿಕ್ಕಿದ್ದು ಕುಮಟಾ ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.
Top Stories
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾಲೇಜು ಆವರಣದಲ್ಲೇ ಬಾಂಬ್ ಮಾದರಿಯ ವಸ್ತು ಪತ್ತೆ, ಆತಂಕದಲ್ಲಿದೆ ತಾಲೂಕಿನ ಜನತೆ..!
5 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದ ಪೊಲೀಸರು..!
ಶಿರಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೋಟಿ ಕೋಟಿ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇಬ್ಬರನ್ನು ಬಂದಿಸಿದ್ದಾರೆ. ಬೆಳಗಾವಿಯಿಂದ ತಂದು ಶಿರಸಿಯಲ್ಲಿ ಮಾರಾಟಕ್ಕೆ ಯತ್ನ ಮಾಡುತ್ತಿದ್ದ, ಪ್ರಮುಖ ಆರೋಪಿ ಬೆಳಗಾವಿಯ ಸಂತೋಷ್ ಕಾಮತ್ ಮತ್ತು ಶಿರಸಿಯ ರಾಜೇಶ್ ಪೂಜಾರಿಯನ್ನು ತಡರಾತ್ರಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ, ನಿಷೇಧಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ ) ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಇದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಮೊಟ್ಟ ಮೊದಲ ಪ್ರಕರಣವಾಗಿದೆ.
ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ ಕೆಂಚೇಶ್ ಈ ವೇಳೆ ಇದ್ದರು.
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!
ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ ಸಾಧಿಸ್ತೀವಿ, ಅದ್ರಲ್ಲೂ ಹಾನಗಲ್ ನಲ್ಲಿ ಹೆಚ್ಚು ಅಂತರದಿಂದ ಜಯ ಸಾಧಿಸುತ್ತೇವೆ ಅಂತಾ ಹೆಬ್ಬಾರ್ ತಿಳಿಸಿದ್ರು.
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!
ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ ಯುವ ಮೋರ್ಚಾ ತಾಲೂಕಾ ಘಟಕದ ಅಧ್ಯಕ್ಷ ಗಣೇಶ್ ಶಿರಾಲಿ, ಸಂಜೀವ ಪೀಸೆ, ಮಂಜುನಾಥ್ ಹಿರೇಮಠ, ಶಿವಯೋಗಿ ಕೂಡಲಮಠ ಸೇರಿದಂತೆ ಹಲವು ಯುವ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ರು.
ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!
ಶಿರಸಿ: ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಹೀರಾತು ಪ್ರಶ್ನಿಸಿ ಸಿಎಟ್ ಟೈಯರ್ ಕಂಪನಿ ಮಾಲೀಕ ಅನಂತ ವರಧನ್ ಗೆ ಪತ್ರ ಬರೆದಿದ್ದಾರೆ. ಸಿಎಟ್ ಜಾಹೀರಾತಿನಲ್ಲಿ ಹಿಂದುಗಳ ಆಚರಣೆಗಳನ್ನು ನಟ ಅಮೀರ್ ಖಾನ್ ಹೀಯಾಳಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಜಾಹಿರಾತಿನಲ್ಲಿ ಹಿಂದುಗಳ ಭಾವನೆಯನ್ನು ತುಳಿಯುವ ಕ್ಷುಲ್ಲಕ ಕುತಂತ್ರ ಎಂದು ಆರೋಪಿಸಿರುವ ಅನಂತಕುಮಾರ್ ಹೆಗಡೆ, ಆಮೀರ್ ಖಾನ್ ನಟಿಸಿರುವ ಜಾಹಿರಾತಿನಲ್ಲಿ ಹಿಂದುಗಳು ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ ಆದರೆ, ಅಮೀರ್ ಖಾನ್ ಪ್ರತಿಪಾದಿಸುವ ಮುಸ್ಲಿಂ ಧರ್ಮದಲ್ಲಿ ರಸ್ತೆಗಳಲ್ಲಿ ನಮಾಜ್ ಮಾಡುವುದು, ಬೆಳಿಗ್ಗೆ ಧ್ವನಿವರ್ಧಕ ಬಳಸುವುದರ ಬಗ್ಗೆ ಏಕೆ ಮೌನ..? ಎಂದು ಪ್ರಶ್ನಿಸಿದ ಅನಂತಕುಮಾರ್ ಹೆಗಡೆ ತಾವು ಬರೆದಿರುವ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಕಿಮ್ಸ್ ಗೆ ದಾಖಲು..!
ಮುಂಡಗೋಡ: ವಿಷ ಸೇವಿಸಿದ ಮಹಿಳೆಯೋರ್ವಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ನಡೆದಿದೆ. ಪ್ರೇಮಾ ಕೃಷ್ಣಪ್ಪ ಕೊರಗರ್ ಎಂಬುವ ಗೃಹಿಣಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವಳಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಡಗೋಡಿನ 108 ಅಂಬ್ಯುಲೆನ್ಸ್ ಸಿಬ್ಬಂದಿ, ತಾಲ್ಲೂಕು ಆಸ್ಪತ್ರೆ ಮುಂಡಗೋಡಿಂದ ಹುಬ್ಬಳ್ಳಿ ಕಿಮ್ಸ್ ಗೆ,108 ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಿದ್ದಾರೆ. 108 ಅಂಬ್ಯುಲೆನ್ಸ್ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು, ಚಾಲಕ ಕೆಂಚೇಶ್ ಇ. ಎನ್ ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಸೂಕ್ತ ಪ್ರಾಥಮಿಕ ಚಿಕಿತ್ಸೆ ನೀಡಿದರು.. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
72 ರ ಹರೆಯದಲ್ಲೂ ಬತ್ತದ ಕ್ರೀಡೋತ್ಸಾಹ, Y.R.ಗೇಟಿಯವರ್ ಸಾಧನೆಗೆ ಬೇಕಿದೆ ಇನ್ನಷ್ಟು ಪ್ರೋತ್ಸಾಹ..!
ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ. ಹೌದು, ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿಯ, ಸದ್ಯ ಹುಬ್ಬಳ್ಳಿಯಲ್ಲಿ ವಾಸವಾಗಿರೋ, ವಾಯ್ ಆರ್ ಗೇಟಿಯವರ್, ಈ ಹೆಸ್ರು ಉತ್ತರ ಕರ್ನಾಟಕ ಭಾಗದ ಕ್ರೀಡಾಭಿಮಾನಿಗಳಿಗೆ ಅಚ್ಚು ಮೆಚ್ಚು. 72 ವರ್ಷ ವಯಸ್ಸಿನ ಈ ಇಳಿ ವಯಸ್ಸಿನಲ್ಲೂ ಗೇಟಿಯವರ್ ಅದ್ಭುತ ಕ್ರೀಡಾಪಟುವಾಗೇ ನಿರಂತರತೆ ಕಾಯ್ದುಕೊಂಡು, ಥೇಟು 18 ರ ನವಯುವಕನಂತೆ ಮೈದಾನಕ್ಕೀಳಿತಾರೆ. ತಮ್ಮ ಬದುಕಿನ ಅಷ್ಟೂ ಸಮಯವನ್ನು ರಾಜ್ಯ, ದೇಶವನ್ನು ಪ್ರತಿನಿಧಿಸಿ ನೂರಾರು...
ಅಯ್ಯೋ ಕರ್ಮವೇ, ಎಂಥಾ ಕಾಲ ಬಂತಪ್ಪಾ..? ಪೊಲೀಸರೇ ಇಲ್ಲಿ ಗಾಂಜಾ ವ್ಯಾಪಾರಿಗಳಂತೆ..!
ಹುಬ್ಬಳ್ಳಿ: ಇದು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಾನೂನನ್ನು ರಕ್ಷಣೆ ಮಾಡಬೇಕಿದ್ದವರೆ ಇಲ್ಲಿ ಕಾನೂನನ್ನೇ ಮರೆತಂತೆ ಕಾಣುತ್ತೆ.. ಗಾಂಜಾ ಗಮ್ಮತ್ತು ಇದೀಗ ಎಲ್ಲೆಡೆ ಜೋರಾಗಿದ್ದು ಅದನ್ನ ತಡೆಹಿಡಿಯಬೇಕಾದವರೆ ಇದೀಗ ಅವರೇ ಮಾರಾಟ ಮಾಡಿ ತಗಲಾಕ್ಕೊಂಡಿದಾರೆ. ಸಸ್ಪೆಂಡ್ ಆಗಿ ಆಗಿದ್ದಾರೆ. ವಾಣಿಜ್ಯ ನಗರಿ, ಛೋಟಾ ಮುಂಬೈ ಅಂತೆಲ್ಲ ಕರೆಸಿಕೊಳ್ಳುವ ಹುಬ್ಬಳ್ಳಿ, ಇದೀಗ ಗಾಂಜಾ ನಗರಿಯಾಗುವತ್ತ ಸಾಗುತ್ತಿದೆ.. ವಿದ್ಯಾರ್ಥಿಗಳು, ಯುವಕರ ಗುಂಪು ಸದ್ದಿಲ್ಲದೆ ಗಾಂಜಾ ಗಮ್ಮತ್ತಿಗೆ ಒಳಗಾಗುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಬೇಕು. ಯುವಕರನ್ನು ಸರಿದಾರಿಗೆ ತರಬೇಕಾದ ಖಾಕಿಯೇ ಇದೀಗ ಗಾಂಜಾ ಮಾರಾಟಕ್ಕೆ ಹೊರಟಿದೆ.. ಹೌದು ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಸಿಬ್ಬಂದಿ ಸೇರಿದಂತೆ ಗೋಕುಲ ರಸ್ತೆಯ ಠಾಣೆಯ ಸಿಬ್ಬಂದಿ ಗಾಂಜಾ ಮಾರಾಟಕ್ಕೆ ಇಳಿದಿದ್ದು ಅವರೆಲ್ಲರನ್ನ ಸಸ್ಪೆಂಡ್ ಮಾಡುವ ಮೂಲಕ ಖಡಕ್ ಎಚ್ಚರಿಕೆಯನ್ನ ನಗರ ಪೊಲೀಸ್ ಕಮಿಷನರ್ ಕೊಟ್ಟಿದ್ದಾರೆ. ಗಾಂಜಾ ಮಾರಾಟ ಗಾರರನ್ನ ಬಂಧಿಸಿ ಅವರಿಂದಲೇ ಹಣ ಪಡೆದು ಬಿಟ್ಟ ಆರೋಪ ಕೇಳಿ ಬಂದ ಬೆನ್ನಲ್ಲೇ ಕಮಿಷನರ್ ರಿಂದ ಅಮಾನತ್ತು ಆದೇಶ ಹೊರಡಿಸಿದ್ದಾರೆ....