ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ. ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು...
Top Stories
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 17 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, ಈ ಗುರಿಗೆ ಎದುರಾಗಿ ಒಟ್ಟೂ 17.46 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 102.73 ರಷ್ಟ್ಟು ಸಾಧನೆ ಮಾಡಲಾಗಿದ್ದು, ಕಳೆದ 2023-24 ನೇ ಸಾಲಿನಲ್ಲಿ 18 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿಗೆ ಎದುರಾಗಿ ಒಟ್ಟೂ 18.29 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ. 101.61 ರಷ್ಟ್ಟು ಸಾಧನೆ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ ಬಿದ್ದು ಹಾನಿಯಾಗಿದೆ.
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ. ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32) ಗದಗ ಮೂಲದ ಮಂಜುನಾಥ ಬೈಲಪ್ಪ ಆಸಂಗಿ(30) ಹಾಗೂ ಮುಂಡಗೋಡ ತಾಲೂಕಿನ ಚಿಗಳ್ಳಿಯ ಹರೀಶ ದೇವಿಂದ್ರಪ್ಪ ಬಾಳೆಮ್ಮನವರ(28) ಎಂಬುವವರೇ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಾಗಿದ್ದು, ಇದ್ರಲ್ಲಿ ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33) ಮಾತ್ರ ಸಿಕ್ಕಿದ್ದು, ಉಳಿದವರು ಪರಾರಿಯಾಗಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಕ್ಕ ಆರೋಪಿಯನ್ನು ಜಪ್ತಿ ಮಾಡಿದಾಗ ನಗದು ಹಣ 2300/-ರೂ, ಲಾವಾ ಕಂಪನಿಯ ಕೀಪ್ಯಾಡ್ ಮೋಬೈಲ್ ಮತ್ತು ಕ್ರಿಕೇಟ್...
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ಕಾರವಾರ: ಮಾದಕ ವಸ್ತುಗಳ ಬಳಕೆಯಿಂದ ಅದನ್ನು ಸೇವನೆ ಮಾಡುವ ವ್ಯಕ್ತಿಯ ಕುಟುಂಬದ ಮೇಲೆ ಮಾತ್ರವಲ್ಲದೇ ಇಡೀ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಸ್.ವಿಜಯ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದರು. ಅವರು ಭಾನುವಾರ ಕ್ರಿಮ್ಸ್ ನ ಕುವೆಂಪು ಕಲಾಭವನದಲ್ಲಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಅವರ ವತಿಯಿಂದ, ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳಿಗೆ, ಸರ್ಕಾರಿ ಅಭಿಯೋಜಕರುಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ತನಿಖಾ ಸಹಾಯಕರುಗಳಿಗೆ ಮತ್ತು ವಿವಿಧ ಇಲಾಖಾ ಅಧಿಕಾರಿಗಳಿಗೆ ಆಯೋಜಿಸಿದ್ದ “ಮಾದಕ ದ್ರವ್ಯಗಳ ಮತ್ತು ಮನೋವಿಕೃತ ವಸ್ತುಗಳ ಅಧಿನಿಯಮ-1985 “ರ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಮನೆಯಲ್ಲಿ ಕಳ್ಳತನ, ಕುಟುಂಬದಲ್ಲಿ ಕೊಲೆಗಳು, ಅಪಘಾತ ಪ್ರಕರಣಗಳು , ಹಿಂಸಾತ್ಮಕ ಕೃತ್ಯಗಳು ಹೆಚ್ಚಾಗುತ್ತಿದ್ದು,...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ ಭೋಸಲೆ, ಸದಸ್ಯರಾದ ರಮೇಶ ನೇಮಣ್ಣವರ್, ಉದಯ ಕವಟೆ, ಸುನಿಲ್ ಬಸವಣ್ಣಪ್ಪ ಕೊಟ್ಟಗೂಣಸಿ, 108 ಅಂಬ್ಯುಲೆನ್ಸ್ ತಂತ್ರಜ್ಞ ಧನರಾಜ್, ಮಂಜು ಕವಟೆ, ಕೇದಾರಿ ಮುಗಳಿ, ಶ್ರೀರಾಮ ಸೇನಾ ನಂದಿಕಟ್ಟಾ ಅಧ್ಯಕ್ಷ ಸಂಜಯ್ ಭೋಸ್ಲೆ . ಉಪಾಧ್ಯಕ್ಷ ಮಹಾಂತೇಶ್ ಹರಿಜನ, ಲಚ್ಚಪ್ಪ ದುರಮುರ್ಗಿ, ನಂದನ್ ಪಾಟೀಲ್, ಪಕ್ಕಿರೇಶ್ ಮಳಲಿ, ಆನಂದ್ ಪಾಟೀಲ್, ಸಂದೀಪ್ ಬೋಸಲೆ, ಅಭಿ, ಚೇತನ್, ಕೃಷ್ಣಾ, ಶಿವಾನಂದ, ಪಕ್ಕೀರೇಶ್,...
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ ಜಂಟಿ ತನಿಖಾ ತಂಡ ರಚಿಸಿದ್ದರು. ಈ ತಂಡದಲ್ಲಿ ಜಿಲ್ಲಾ ಕಾರ್ಯ ನಿರ್ವಾಹಕ ಅಭಿಯಂತರ ಎ ರವಿಕುಮಾರ, ಜಿಲ್ಲಾ ನಗರಕೋಶ ಎಇಇ ಕೆಎಸ್ ಕಮ್ಮಾರ್, ಸ್ಲಂ ಬೋರ್ಡ್ ಅಧಿಕಾರಿ ಪ್ರತೀಕ್ ದಳವಾಯಿ, ಜಿಲ್ಲಾ ನಗರಸಭೆ ತಹಶೀಲ್ದಾರ್ ರವಿರಾಜ್ ದೀಕ್ಷತ್, ಇಲ್ಲಿನ ಉಪತಹಶೀಲ್ದಾರ ಚಂದ್ರಶೇಖರ ಹೊಸಮನಿ ಮತ್ತು ಪ.ಪಂ ಮುಖ್ಯಾಧಿಕಾರಿ ಚಂದ್ರಶೇಖರ ಒಳಗೊಂಡಂತೆ ಸಮಿತಿ ರಚಿಸಿ. 15 ದಿನಗಳವೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಅದರಂತೆ...
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಉತ್ತಮ ಕಾಮಗಾರಿ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು ಅಲ್ದೆ, ತಾಲೂಕಿನಲ್ಲಿರುವ ಹದಿನಾರು ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕರಿಗೆ ಕೆಲಸ ನೀಡಿದ್ದು ಮುಂದಿನ ದಿನಗಳಲ್ಲಿಯೂ ಇದೆ ರೀತಿಯಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ಅಂಗನವಾಡಿಗೆ ಭೇಟಿ..! ಆರಂಭದಲ್ಲಿ ಮೈನಳ್ಳಿ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆ, ಅಂಗನವಾಡಿ ಕೆಂದ್ರಗಳಿಗೆ ಭೇಟಿ ನೀಡಿ...