ಮುಂಡಗೋಡ- ತಾಲೂಕಿನಲ್ಲಿ ಮುಂಗಾರು ಹಂಗಾಮು ಶುರುವಾಗಿದೆ.. ಈಗಾಗಲೇ ತಾಲೂಕಿನ ರೈತರು ತಮ್ಮ ಗದ್ದೆಗಳನ್ನು ಸ್ವಚ್ಚಗೊಳಿಸಿದ್ದಾರೆ.. ಸಾಕಷ್ಟು ಮಳೆಯಾದ ಕಾರಣ ಭೂಮಿ ರಂಟೆ ಕುಂಟೆ ಹೊಡೆದು ಹದಗೊಳಿಸಿದ್ದಾರೆ.. ಅಲ್ದೇ ಸಾಕಷ್ಟು ಭಾಗಗಳಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಚುರಿಕುಗೊಂಡಿದೆ.. ತಾಲೂಕಿನ ಸನವಳ್ಳಿ, ಬಾಚಣಕಿ, ಕಾತೂರು, ಪಾಳಾ ಸೇರಿದಂತೆ ಹಲವು ಕಡೆ ಈಗಾಗಲೇ ಗೋವಿನ ಜೋಳ, ಭತ್ತ ಸೇರಿದಂತೆ ಹಲವು ತಳಿಯ ಬೀಜಗಳ ಬಿತ್ತನೇ ಕಾರ್ಯ ಶುರುವಾಗಿದ್ದು ರೈತ ಲಾಕ್ ಡೌನ್ ಮದ್ಯೆಯೂ ಬ್ಯುಸಿಯಾಗಿದ್ದಾನೆ. ಇನ್ನು, ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರಗಳ ಖರೀದಿಯೂ ಜೋರಾಗಿದ್ದು ತಾಲೂಕಾಡಳಿತ ರೈತರಿಗೆ ಬೀಜ ರಸಗೊಬ್ಬರಗಳ ಪೂರೈಕೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದೆ..
Top Stories
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್..!
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ತಾಲೂಕಿನಲ್ಲಿ ಮುಂಗಾರು ಹಂಗಾಮು ಜೋರು; ಭೂಮಿ ಹದಗೊಳಿಸಿ ಬಿತ್ತನೆ ಕಾರ್ಯ ಮಾಡುತ್ತಿರೋ ಅನ್ನದಾತರು..!
ಲಾಕ್ ಡೌನ್ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ದಿನಸಿ ವಿತರಣೆ..!
ಮುಂಡಗೋಡ-ತಾಲೂಕಿನ ಇಂದೂರಿನಲ್ಲಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆಂದು ಮಹಾರಾಷ್ಟ್ರದಿಂದ ಜೋಕಾಲಿ ಪ್ರದರ್ಶನಕ್ಕೆ ಬಂದಿದ್ದ ಕೂಲಿಕಾರ್ಮಿಕರಿಗೆ ಕೊಡುಗೈ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ.. ಇಂದೂ ಕೂಡ ಇಂದೂರಿನ ಅಂಗನವಾಡಿ ಹಾಗೂ ಆಶಾ ಕರ್ಯಕರ್ತರು ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು.. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸುರಕೋಡ್, ಆಶಾ ಕಾರ್ಯಕರ್ತೆ ಲಕ್ಮೀ ಕೊಮ್ಮರಿಸಿಕೊಪ್ಪ ಸೇರಿ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು..
ಅರಟಾಳದಲ್ಲಿ ಸುಬ್ರಮ್ಮಣ್ಯ ಸ್ವಾಮಿಯ ಸನ್ನಿಧಾನ..!
ವಿಶೇಷ ವರದಿ ಕಾಳ ಸರ್ಪ ದೋಷ, ನಾಗದೋಷಗಳ ಪರಿಹಾರಕ್ಕಾಗಿ ಸಾಕಷ್ಟು ಜನ ಕುಕ್ಕೆ ಸುಬ್ರಮ್ಮಣ್ಯ ಕ್ಷೇತ್ರಕ್ಕೆ ಹೋಗ್ತಾರೆ.. ಆದ್ರೆ ಕುಕ್ಕೆ ಶ್ರೀ ಕ್ಷೇತ್ರದ ದಿವ್ಯ ಸನ್ನಿಧಾನದಂತೆಯೇ ಮತ್ತೊಂದು ಸನ್ನಿಧಾನ ನಮ್ಮ ಸಮೀಪದಲ್ಲೇ ಇದೆ.. ಹೌದು, ಶಿಗ್ಗಾವಿ ತಾಲೂಕಿನ ಅರಟಾಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯ ಲದ ಆವರಣದಲ್ಲಿ ಶ್ರೀ ಸುಬ್ರಮ್ಮಣ್ಯ ಸ್ವಾಮಿ ನೆಲೆ ನಿಂತಿದ್ದಾರೆ.. ಭವ್ಯವಾದ ಆಲದ ಮರದ ಕೆಳಗೆ ವಿರಾಜಮಾನವಾಗಿರೋ ಸುಭ್ರಮ್ಮಣ್ಯ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರತ್ತೆ.. ಇನ್ನು ಸರ್ಪದೋಷ, ಕಾಳಸರ್ಪದೋಷ ಮುಂತಾದ ದೋಷಗಳಿಂದ ಮುಕ್ತಿ ಪಡೆಯಲು ಇಲ್ಲಿ ಪ್ರತೀ ಗುರುವಾರ ಹಾಗೂ ಅಮವಾಸ್ಯೆ ದಿನಗಳಲ್ಲಿ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ಭಕ್ತರು ಬರ್ತಾರೆ.. ಸುಬ್ರಮ್ಮಣ್ಯ ಶ್ರೀ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗದೇ ಇರೋ ಬಹುತೇಕರು ಅರಟಾಳದ ದಿವ್ಯ ಸನ್ನಿಧಾನದಲ್ಲೇ ತಮ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಳ್ತಾರೆ. ಅಲ್ದೇ ಇಲ್ಲಿಯೇ ತಮ್ಮ ದೋಷ ನಿವಾರಣೆಯ ವೃತಗಳನ್ನು ಮಾಡ್ತಾರೆ.. ಅರಟಾಳಕ್ಕೆ ಹೋಗೋದು ಹೇಗೆ..? ನೀವು ಹುಬ್ಬಳ್ಳಿಯಿಂದ ತಡಸ ಮಾರ್ಗವಾಗಿ, ಹಾನಗಲ್ ಗೆ ಹೊರಟಿರುವಿರಿ...
ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!
ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ ಬರ್ಬಾದಾಗಿ ಹೋಗಿ, ಇನ್ನು ಹೇಗಪ್ಪಾ ಸಾಲ ತೀರಿಸೋದು ಅಂತಾ ಅನ್ನದಾತ ಚಿಂತೆಗೀಡಾಗಿದ್ದಾನೆ.. ಅಂದಹಾಗೆ, ಇದು ಮುಂಡಗೋಡ ತಾಲೂಕಿನ ಹುನಗುಂದ, ಇಂದೂರು, ಕೊಪ್ಪ, ನಂದಿಕಟ್ಟಾ, ಅರಶಿಣಗೇರಿ, ಬಾಚಣಕಿ ಗ್ರಾಮಗಳ ರೈತರ ಗೋಳು. ಈ ವರ್ಷ ಬೇಸಿಗೆ ಬೆಳೆಯಾಗಿ ಶೇಂಗಾ ಬೆಳೆದಿದ್ದ ರೈತರು ಕಣ್ಣೀರು ಹಾಕುತ್ತಿದ್ದಾರೆ.. ಇತ್ತೀಚೆಗೆ ಸುರಿದ ಭಾರೀ ಮಳೆ ಈ ರೈತರ ಬದುಕನ್ನೇ ಕಿತ್ತುಕೊಂಡಿದೆ.. ಹುಲುಸಾಗಿ ಬೆಳೆದಿದ್ದ ಶೇಂಗಾ ಬೆಳೆಯೇಲ್ಲ, ಅಕಾಲಿಕ ಮಳೆಯ...
ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣ ದೇವಾಲಯ ಈಗ ನವನವೀನ..!
ವಿಶೇಷ ವರದಿ.. ಮುಂಡಗೋಡ ತಾಲೂಕು ಅಂದ್ರೆ ಪುಟ್ಟದೊಂದು ಪ್ರಪಂಚ ಇದ್ದಂಗೆ.. ಒಮ್ಮೆ ನೀವು ಮುಂಡಗೋಡ ತಾಲೂಕನ್ನು ಸುತ್ತಿ ಬಂದ್ರೆ ಸಾಕು ಇಡೀ ವಿಶ್ವವನ್ನೇ ಸುತ್ತಿ ಬಂದಷ್ಟು ಜ್ಙಾನ ಸಿಗೋದು ಗ್ಯಾರಂಟಿ.. ಇಲ್ಲಿನ ವೈವಿದ್ಯತೆ ಅನ್ನೋದೇ ಹಾಗಿದೆ.. ಯಾಕಂದ್ರೆ ಇಲ್ಲಿ ಜಗತ್ತಿನಾದ್ಯಂತ ಇರೋ ಬಹುತೇಕ ಜನಾಂಗಗಳು ನೆಲೆ ನಿಂತಿವೆ.. ಟಿಬೇಟಿಗರು, ಸಿದ್ದಿಗಳು, ಲಂಬಾಣಿಗರು, ಗೌಳಿಗರು ಹೀಗೆ ವಿವಿಧ ಜನಾಂಗಗಳು ಇಲ್ಲಿ ನೆಲೆ ನಿಂತಿವೆ.. ಹೀಗಾಗಿ ವಿಶ್ವದ ಬಹುತೇಕ ಜನಾಂಗಗಳನ್ನು ಮುಂಡಗೋಡ ತಾಲೂಕಿನಲ್ಲಿ ಕಾಣಬಹುದು… ಇದು ನಮ್ಮೇಲ್ಲರ ಹೆಮ್ಮೆ.. ಇನ್ನು ಇಲ್ಲಿನ ಜನಾಂಗಗಳ ವಿವಿಧ ಪ್ರಕಾರದ ಪಾರಂಪರಿಕ ಸೊಗಡು ಒಂದೆಡೆಯಾದ್ರೆ, ಮತ್ತೊಂದೆಡೆ ಐತಿಹಾಸಿಕ ತಾಣಗಳ ಸೊಬಗೂ ಕಣ್ಮನ ಸೆಳೆಯುತ್ತವೆ.. ಅದ್ರಲ್ಲೂ ತಾಲೂಕಿನ ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣನ ದೇವಾಲಯ ಕಣ್ಮನ ಸೆಳೆಯುತ್ತಿದೆ.. ಇನ್ನು ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣನ ದೇವಾಲಯಕ್ಕೆ ರಾಜ್ಯಾದೆಲ್ಲೆಡೆಯಿಂದ ನಿತ್ಯವೂ ನೂರಾರು ಭಕ್ತರು ಬಂದು ದರ್ಶನ ಪಡಿತಾರೆ.. ಇನ್ನು ಈ ದೇವಾಲಯದ ಗೋಡೆಯ ಮೇಲೆ ವಿಶೇಷ ಮೀನಿನ ಉಬ್ಬು ಶಿಲ್ಪವಿದ್ದು ದೇವಸ್ಥಾನಕ್ಕೆ...
ಲಾಕ್ ಡೌನ್ ಎಫೆಕ್ಟ್- ಶುಂಠಿ ಬೆಳೆದ ರೈತನ ಬದುಕೇ ಕಗ್ಗಂಟು..!
ಮುಂಡಗೋಡ- ತಾಲೂಕಿನಲ್ಲಿ ಶುಂಠಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶುಂಠಿ ಬೆಲೆ ದಿಢೀರನೆ ಕುಸಿದ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದ ರೈತನಿಗೆ ಸದ್ಯ ಲಾಕ್ ಡೌನ್ ಇರೋ ಕಾರಣಕ್ಕೆ, ಶುಂಠಿ ಖರೀದಿಸುವ ವ್ಯಾಪಾರಸ್ಥರು ಬರುತ್ತಿಲ್ಲ.. ಹೀಗಾಗಿ ಇಲ್ಲಿನ ಕೆಲವು ಸ್ಥಳೀಯ ವ್ಯಾಪಾರಿಗಳು 60 ಕೆಜಿಯ ಶುಂಠಿ ಚೀಲಕ್ಕೆ 600 ರಿಂದ 700 ರೂಪಾಯಿ ದರಕ್ಕೆ ಕೇಳುತ್ತಿದ್ದಾರೆ. ಹೀಗಾಗಿ, ಶುಂಠಿ ಬೆಳೆಯಲು ಮಾಡಿದ್ದ ಖರ್ಚೂ ಸಹ ಬರದಾಗಿದೆ ಅಂತಾ ರೈತರು ಚಿಂತೆಗೀಡಾಗಿದ್ದಾರೆ. ಲಕ್ಷಾಂತರ ರುಇಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿರೊ ರೈತರು ಈಗ ಕೈ ಚೆಲ್ಲಿ ಕುಳಿತಿದ್ದಾರೆ. ಹೀಗಾಗಿ ಶುಂಠಿ ಖರೀಧಿಗಾಗಿ ಸರ್ಕಾರ ವ್ಯವಸ್ಥೆ ಮಾಡಬೇಕು ಅಂತಾ ರೈತರು ಆಗ್ರಹಿಸ್ತಿದಾರೆ..
ಲಾಕ್ ಡೌನ್ ಹಿನ್ನೆಲೆ- ಮುಂಡಗೋಡ ಸಂಪೂರ್ಣ ಸ್ತಬ್ದ; ಫಿಲ್ಡಿಗಿಳಿದ ಪೊಲೀಸ್ರು..!
ಮುಂಡಗೋಡ-ತಾಲೂಕಿನಲ್ಲಿ ಮತ್ತೆ ಕಠಿಣ ಲಾಕ್ ಡೌನ್ ಜಾರಿಯಾದ ಎರಡನೇ ದಿನದ ಹಿನ್ನೆಲೆಯಲ್ಲಿ ಪೊಲೀಸ್ರು ಫಿಲ್ಡಿಗಿಳಿದಿದ್ರು. ಮುಂಡಗೋಡ ಪಟ್ಟಣದ ಎಲ್ಲಾ ರಸ್ತೆಗಳಿಗೂ ಬ್ಯಾರಿಕೇಡ್ ಹಾಕಿ ಪಟ್ಟಣದ ಒಳಗೆ ಅಥವಾ ಹೊರ ಹೋಗುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.. ಈ ಮೂಲಕ ಅನಗತ್ಯವಾಗಿ ತಿರುಗಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.. ಮುಂಡಗೋಡ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲಾ ಮಾರ್ಗಗಳಲ್ಲೂ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿರೋ ಪೊಲೀಸ್ರು, ಅನಗತ್ಯ ಸಂಚರಿಸೊ ವಾಹನಗಳು ಬಂದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.. ವಾಹನ ಸವಾರರ ಜೊತೆ ಕೂಲಂಕುಶವಾಗಿ ಚರ್ಚಿಸಿ ಒಂದುವೇಳೆ ಅಗತ್ಯವಿದ್ದಲ್ಲಿ ಮಾತ್ರ ಬಿಡುತ್ತಿದ್ದಾರೆ.. ಹೀಗಾಗಿ ಪಟ್ಟಣದಲ್ಲಿ ಅನಗತ್ಯ ಓಡಾಡುವವರ ಹಾವಳಿ ಕೊಂಚ ತಣ್ಣಗಾಗಿದೆ.
ಮುಂಡಗೋಡ ಕೃಷಿ ಇಲಾಖೆ ಬೇಜವಾಬ್ದಾರಿ; ಕೋವಿಡ್ ನಿಯಮ ಪಾಲಿಸದ ರೈತರು..!
ಮುಂಡಗೋಡ-ಪಟ್ಟಣದಲ್ಲಿರೋ ಕೃಷಿ ಇಲಾಖೆಯಲ್ಲಿ ರೈತರಿಗೆ ಬಿತ್ತನೆಗೆ ಬೀಜ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ತಾಲೂಕಿನ ರೈತರು ಇಂದು ಬಿತ್ತನೆ ಬೀಜಗಳ ಖರೀದಿಗಾಗಿ ಮುಗಿ ಬಿದ್ದಿದ್ರು.. ಆದ್ರೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರ ಮರೆತು ಬೀಜ ಖರೀಧಿಸುತ್ತಿದ್ದ ರೈತರಿಗೆ ಇಲಾಖೆಯ ಅಧಿಕಾರಿಗಳು ಕೋವಿಡ್ ನಿಯಮ ಪಾಲಿಸುವಂತೆ ಯಾವುದೇ ನಿರ್ದೇಶನ ನೀಡದೇ ಕಣ್ಮುಚ್ವಿ ಕುಳಿತಿದ್ರು.. ಕೃಷಿ ಇಲಾಖೆಯ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ರೈತರು ಯಾವುದೇ ಸಾಮಾಜಿಕ ಅಂತರ ಪಾಲಿಸಲಿಲ್ಲ. ಅಲ್ಲದೇ ಅದೇಷ್ಟೋ ರೈತರು ಮಾಸ್ಕ್ ಕೂಡ ಧರಿಸಿರಲಿಲ್ಲ. ಆದರೂ ಅಂತಹ ರೈತರಿಗೆ ತಿಳುವಳಿಕೆ ನೀಡದೆ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದು ಮಾತ್ರ ವಿಪರ್ಯಾಸ..
ಪುಟ್ಟ ಬಾಲಕಿಗೂ ಬಿಡಲಿಲ್ಲ ಹೆಮ್ಮಾರಿ; ಆಸ್ಪತ್ರೆಗೆ ಕರೆದೊಯ್ಯುವಾಗ ಕಣ್ಣೀರು ಹಾಕಿದ ಬಾಲಕಿ..!
ಮುಂಡಗೋಡ- ತಾಲೂಕಿನ ಅಗಡಿ ಗ್ರಾಮದಲ್ಲಿ ಪುಟ್ಟ ಕಂದಮ್ಮನಿಗೂ ಪಾಸಿಟಿವ್ ದೃಡಪಟ್ಟಿದ್ದು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನದ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಯಿತು.. ಈ ವೇಳೆ ತನ್ನ ಕುಟುಂಬವನ್ನು ಬಿಟ್ಟು ಕೋವಿಡ್ ಕೇರ್ ಸೆಂಟರ್ ಗೆ ಹೋಗುವಾಗ ಪುಟ್ಟ ಮಗು ಕಣ್ಣೀರು ಹಾಕಿದೆ.. ಅಂದಹಾಗೆ ಅಗಡಿ ಗ್ರಾಮದಲ್ಲಿ ಪುಟ್ಟ ಬಾಲಕಿಯೂ ಸೇರಿ ಒಂದೇ ಕುಟುಂಬದ ಮೂವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರೆಲ್ಲರನ್ನೂ ಇಂದು ಕೋವಿಡ್ ಸೆಂಟರ್ ಗೆ ದಾಖಲಿಸಲು ಅಧಿಕಾರಿಗಳ ತಂಡ ಹಾಗೂ ಹುನಗುಂದ ಗ್ರಾಮ ಪಂಚಾಯತಿ ಸಮಿತಿಯವರು ಸೋಂಕಿತರ ಮನೆಗೆ ತೆರಳಿದ್ರು.. ಈ ವೇಳೆ ಅವ್ರ ಕುಟುಂಬದವರು ಸೋಂಕಿತರನ್ನು ಒಲ್ಲದ ಮನಸ್ಸಿನಿಂದಲೇ ಕಳಿಸಿ ಕೊಟ್ರು, ಈ ವೇಳೆ ಕುಟುಂಬದ ಸದಸ್ಯರೇಲ್ಲರೂ ಕಣ್ಣೀರು ಹಾಕಿದ್ರು.. ಇನ್ನು ಪುಟ್ಟ ಸೋಂಕಿತ ಬಾಲಕಿ ವಾಹನ ಹತ್ತುವಾಗ ತೀರ ಭಯಗೊಂಡಿದ್ಲು, ಜೊತೆಗೆ ಕಣ್ಣೀರು ಹಾಕುತ್ತ ವಾಹನ ಹತ್ತಿದ್ದು ನಿಜಕ್ಕೂ ಎಲ್ಲರಿಗೂ ಒಂದು ಕ್ಷಣ ಕಣ್ಣಾಲೆಗಳು ತುಂಬಿ ಬರುವಂತೆ ಮಾಡಿತ್ತು. ಅಧಿಕಾರಿಗಳು ಕುಟುಂಬಸ್ಥರಿಗೆ ದೈರ್ಯ...
ನಂದಿಕಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೌಡಿ ಮಂಗನ ಹಾವಳಿ..!
ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೌಡಿ ಮಂಗವೊಂದು ಹಾವಳಿ ಮಾಡುತ್ತಿದೆ.. ಕಳೆದ ಎರಡು ದಿನದ ಹಿಂದೆಯಷ್ಟೇ ಈ ರೌಡಿ ಮಂಗ ತನ್ನ ಜೊತೆಗಿದ್ದ ಎರಡು ಮಂಗಗಳನ್ನೇ ಬಲಿ ಪಡದಿತ್ತು.. ಅಲ್ಲದೇ ಮತ್ತೆ ಈಗಲೂ ತನ್ನ ಜೊತೆಗಿರೋ ಮಂಗಗಳನ್ನೇ ಅಟ್ಟಾಡಿಸಿ ಕಡಿಯುತ್ತಿದೆ.. ಹೀಗಾಗಿ, ನಿತ್ಯವೂ ಒಂದಿಲ್ಲೊಂದು ಕಿರಿಕ್ ಮಾಡುತ್ತ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.. ಇನ್ನು ಎಲ್ಲೆಂದರಲ್ಲಿ ಜಿಗಿದು ಬರುವ ರೌಡಿ ಮಂಗ, ಮನೆಯ ಒಳಗೂ ಬಂದು ದಾಂಧಲೆ ಮಾಡುತ್ತಿದೆ.. ಇನ್ನು, ಯಾರಾದ್ರೂ ಇದರ ತಂಟೆಗೆ ಹೋದ್ರೆ ಮುಗೀತು, ಒಮ್ಮೆಲೆ ಅಟ್ಯಾಕ್ ಮಾಡುತ್ತಿದೆ.. ಈ ಕಾರಣಕ್ಕಾಗಿ ಇಲ್ಲಿನ ಗ್ರಾಮಗಳಲ್ಲಿ ಪುಟ್ಟ ಮಕ್ಕಳು ಮನೆಯಿಂದ ಹೊರಗೆ ಬರುವುದೇ ಅಪಾಯ ಎನ್ನುವಂತಾಗಿದ್ದು ಎಲ್ಲರನ್ನೂ ಭಯಭೀತಗೊಳಿಸಿದೆ.. ಹೀಗಾಗಿ ಅರಣ್ಯ ಇಲಾಖೆಯವರು ಈ ರೌಡಿ ಮಂಗನಿಂದ ಗ್ರಾಮಸ್ಥರನ್ನು ರಕ್ಷಿಸಬೇಕಿದೆ..