ಮುಂಡಗೋಡ: ಕೊರೋನಾ ಅನ್ನೋದು ಈಗ ಇಡೀ ದೇಶದ ಜನರ ಜೀವ ಹಿಂಡ್ತಿದೆ. ಅದ್ರಲ್ಲೂ ಕೊರೋನಾ ಸೋಂಕು ದೃಢಪಟ್ಟರೆ ಮುಗಿತು ಎಷ್ಟೊ ಸೋಂಕಿತರು ಭಯದಿಂದಲೇ ಪ್ರಾಣ ಕಳೆದುಕೊಳ್ತಿದಾರೆ. ಆದ್ರೆ ಇಲ್ಲೊಬ್ಬ ಸೋಂಕಿತ ಯುವಕ ಕೋವಿಡ್ ಕೇರ್ ಸೆಂಟರ್ ನಲ್ಲೇ ಕುಣಿದು ಕುಪ್ಪಳಿಸ್ತಿದಾನೆ. ಕೋವಿಡ್ ಅಂದ್ರೆ ಭಯ ಪಡೋ ಜನ್ರಿಗೆ ಧೈರ್ಯ ತುಂಬಿದ್ದಾನೆ. ತನ್ನ ಜೊತೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಡ್ಮಿಟ್ ಆಗಿದ್ದ ಇನ್ನಿತರ ರೋಗಿಗಳಿಗೂ ಆತ್ಮ ಸ್ಥೈರ್ಯ ತುಂಬಿದ್ದಾನೆ. ನಕ್ಕು ನಲಿಸಿದ್ದಾನೆ. ಕೊರೋನಾ ಅಂದ್ರೆ ಯಾರೂ ಭಯ ಪಡಬೇಡಿ ಅಂತಾ ಎಲ್ರಿಗೂ ತಿಳಿ ಹೇಳಿದ್ದಾನೆ.. ಅಂದಹಾಗೆ, ಈತನ ಹೆಸ್ರು ಮಹೇಂದ್ರ ಬಾಬು ಪಾಟೀಲ್ ಅಂತಾ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದವನು.. ಕಳೆದ ನಾಲ್ಕು ದಿನದ ಹಿಂದೆ ಕೊರೋನಾ ಸೋಂಕು ಪೀಡಿತನಾಗಿ ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದಾನೆ.. ಆದ್ರೆ ಈತ ಇಲ್ಲಿ ಅಡ್ಮಿಟ್ ಆದ ನಂತರ ಇಲ್ಲಿನ ಇನ್ನಿತರ ಸೋಂಕಿತರಿಗೂ ಮನರಂಜನೆ ನೀಡ್ತಿದಾನೆ. ನಕ್ಕು ನಗಿಸ್ತಿದಾನೆ. ಈ ಮೂಲಕ ಸೋಂಕಿತರ...
Top Stories
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!
ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು. ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು. ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಅಭೂಬಕರ ನದಾಪ ತಿಳಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂಚಾಯತ ಸದಸ್ಯರಾದ ಶ್ರೀಮತಿ ಇಮಾಂಬಿ ನದಾಫ, ಗ್ರಾ.ಪಂ ಕಾರ್ಯದರ್ಶಿ ಷಣ್ಮುಖ ಸುಳಗೇಕರ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು , ಬಸವರಾಜ ಇನಾಮದಾರ್, ದಾವಲ್, ತಹಶೀಲ್ದಾರ ಮಲ್ಲಿಕಾರ್ಜುನ ಕಲ್ಲೂರ, ಜಮಾಲ ಮುನವಳ್ಳಿ ಸದ್ದಾಂ ಬೋಗುರ, ಇಸ್ಮಾಯಿಲ್ ಪಠಾಣ್, ಶಕೀಲ್ ಗೌಂಡಿ, ಸಂತೋಷ ಹರಿಜನ, ಶಿಂದಬಹಾದ, ಹುಸೇನ್ ಹಾಜರಿದ್ದರು.
ಸೋಂದಾ ಸ್ವರ್ಣವಲ್ಲಿ ಮಠದಿಂದ ಅಶಕ್ತರಿಗೆ ದಿನಸಿ ಕಿಟ್ ವಿತರಣೆ..!
ಶಿರಸಿ: ಆಧ್ಯಾತ್ಮ ಸಾಧನೆಯ ಜೊತೆಗೆ ಸಮಾಜಮುಖಿ ಮಠವಾಗಿಯೂ ಗುರುತಿಸಿಕೊಂಡಿರೋ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನವು ಮಠದ ಸುತ್ತಲಿನ ಅಗತ್ಯವುಳ್ಳ ಜನರಿಗೆ ಉಚಿತವಾಗಿ ದಿನಸಿ ಸಾಮಗ್ರಿ ವಿತರಿಸಿತು. ಲಾಕ್ ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರೋ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದವನ್ನ ಕೂಡ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿದರು. ಇದೇ ವೇಳೆ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ ಧಾರಣೆ ಮಾಡಬೇಕು. ಆಂತರಿಕ ಧೈರ್ಯಕ್ಕಾಗಿ ದೇವರ ಜಪ ಧ್ಯಾನ ಮಾಡಬೇಕು ಅಂತ ಸ್ವಾಮೀಜಿ ಆಶಿಸಿದರು. ಈ ವೇಳೆ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ, ಸೋಂದಾ ಗ್ರಾ.ಪಂ.ಅಧ್ಯಕ್ಷೆ ಮಮತಾ ಜೈನ್, ಮಠದ ವ್ಯವಸ್ಥಾಪಕ ಎಸ್.ಎನ್. ಗಾಂವಕರ ಇತರರು ಇದ್ದರು.
ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿ ಭರಾಟೆ ಜೋರು..!
ಮುಂಡಗೋಡ- ಪಟ್ಟಣದಲ್ಲಿ ಇಂದಿನಿಂದ ವಾರದ 4 ದಿನಗಳ ಕಾಲ ಬೆಳಿಗ್ಗೆ 8 ಗಂಟೆಯಿಂದ ಮದ್ಯಾನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಿರೋ ಹಿನ್ನೆಲೆಯಲ್ಲಿ ತಾಲೂಕಿನೆಲ್ಲೆಡೆಯಿಂದ ಪಟ್ಟಣಕ್ಕೆ ಬೆಳಗಿನಿಂದಲೇ ಜನ ಬಂದಿದ್ರು. ಅಗತ್ಯ ವಸ್ತುಗಳ ಖರೀಧಿಗೆ ಬಂದ ಜನ ಅಗತ್ಯ ವಸ್ತಗಳಿಗಾಗಿ ಮುಗಿಬೀಳುತ್ತಿರೊ ದೃಷ್ಯಗಳು ಸಾಮಾನ್ಯವಾಗಿತ್ತು. ಹೀಗಾಗಿ ಪೊಲೀಸ್ರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸಿದ್ರು. ಇನ್ನು ದಿನಸಿ ಅಂಗಡಿಗಳ ಮಾಲೀಕರಿಗೂ ಅಂಗಡಿಗಳ ಮುಂದೆ ಗ್ರಾಹಕರಿಗೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸುವಂತೆ ಸೂಚಿಸಲು ಎಚ್ಚರಿಸಿದ್ರು.
ಮುಂಡಗೋಡ ಪಟ್ಟಣದಲ್ಲಿ ಅನಗತ್ಯ ತಿರುಗಾಡುವವರ ವಿರುದ್ಧ ಪೊಲೀಸರ ಕಠಿಣ ಕ್ರಮ..!
ಮುಂಡಗೋಡ- ಪಟ್ಟಣದಲ್ಲಿ ಅನಗತ್ಯ ತಿರುಗಾಡುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪರಿಶೀಲನೆಗೆ ಇಳಿದಿರೋ ಪೊಲೀಸ್ರು ಅನಗತ್ಯವಾಗಿ ತಿರುಗಾಡುವ ವಾಹನಗಳ ಬಗ್ಗೆ ಕಣ್ಣಿಟ್ಟಿದ್ರು. ಬೈಕ್ ಸವಾರರು, ಕಾರ್ ಸವಾರರು ಪಟ್ಟಣದ ಒಳಗೆ ಅಥವಾ ಪಟ್ಟಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಂತವರನ್ನು ಪೊಲೀಸರು ಪರಿಶೀಲಿಸುತ್ತಿದ್ದರು. ಇನ್ನು ಮಾಸ್ಕ್ ಧರರಿಸದೇ ತಿರುಗಾಡುವ ಸವಾರರ ವಿರುದ್ಧ ಸಮರ ಸಾರಿರೋ ಪೊಲೀಸ್ರು, ಮಾಸ್ಕ್ ಧರಿಸದವರನ್ನು ತಡೆದು ಕ್ಲಾಸ್ ತೆಗೆದುಕೊಂಡರು, ಅಲ್ದೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ರು.
ಮುಂಡಗೋಡದ ಶಿವಾಜಿ ಸರ್ಕಲ್ ನಲ್ಲಿ ಜನವೋ ಜನ..! ಸಾಮಾಜಿಕ ಅಂತರ ಮಾಯ..!!
ಮುಂಡಗೋಡ- ಪಟ್ಟಣದಲ್ಲಿ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ, ಮುಂಡಗೋಡ ಪಟ್ಟಣದ ಹೃದಯಭಾಗ ಶಿವಾಜಿ ಸರ್ಕಲ್ ನಲ್ಲಿ ಜನಸಂದಣಿ ಸೇರಿತ್ತು. ಅಗತ್ಯ ವಸ್ತುಗಳ ಖರೀಧಿಗೆ ತಾಲೂಕಿನ ಗ್ರಾಮೀಣ ಭಾಗಗಳಿಂದ ಬಂದಿದ್ದ ಜನ ಅಗತ್ಯ ವಸ್ತುಗಳ ಖರೀಧಿಯಲ್ಲಿ ಮುಳುಗಿದ್ರು. ಪಟ್ಟಣದ ಬಹುತೇಕ ದಿನಸಿ ಅಂಗಡಿಗಳು ಫುಲ್ ಆಗಿದ್ದವು. ಹೀಗಾಗಿ ಕೆಲವು ಕಡೆ ಸಾಮಾಜಿಕ ಅಂತರ ಅನ್ನೋದು ಮಂಗಮಾಯವಾಗಿತ್ತು. ಪೊಲೀಸರು ಎಷ್ಟೇ ಎಚ್ಚರಿಸಿದ್ರೂ ಜನ ಕ್ಯಾರೇ ಅನ್ನದೇ ಸಾಮಾಜಿಕ ಅಂತರ ಮರೆತು ಖರೀಧಿಯಲ್ಲಿ ಬ್ಯುಸಿಯಾಗಿದ್ರು.
LVK ಯಿಂದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಕಿಟ್, ದಿನಸಿ ಕಿಟ್ ವಿತರಣೆ..!
ಮುಂಡಗೋಡ- ತಾಲೂಕಿನ ಹುನಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ LVK ಮುಂಡಗೋಡ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸ್ಯಾನಿಟೈಸ್, ಮಾಸ್ಕ್ ಸೇರಿ ಆರೋಗ್ಯ ರಕ್ಷಕ ಕಿಟ್ ವಿತರಣೆ ಮಾಡಲಾಯಿತು. ಹಾಗೇ ಆಶಾ ಕರ್ಯಕರ್ತರಿಗೆ ದಿನಸಿ ಸಾಮಗ್ರಿಗಳ ಕಿಟ್ ನೀಡಲಾಯಿತು. ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿಯ ಕಾರ್ಯಗಳನ್ನು ಮಾಡುತ್ತಿರೋ LVK ತಾಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಇಂತಹದ್ದೊಂದು ಸೇವೆ ಮಾಡುತ್ತಿದೆ. ಇನ್ನು ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಸ್.ವಿ. ಸುಳ್ಳದ, LVK ಸಂಚಾಲಕರು, ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ, ನಡೆಯತ್ತಾ..? ರದ್ದಾಗತ್ತಾ..? ಸುಪ್ರೀಂ ನಲ್ಲಿ ಇಂದು ಭವಿಷ್ಯ..!!
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಅಬ್ಬರ ಜೋರಾಗಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಗೊಂದಲ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿಂದು ಸುಪ್ರೀಂ ಕೋರ್ಟ್ ಪರೀಕ್ಷೆಯ ಭವಿಷ್ಯ ನಿರ್ಧಾರ ಮಾಡಲಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ ಬೇಡವೇ ಅನ್ನೋ ಕುರಿತು ಕೇಂದ್ರ ಸರಕಾರ ಕಳೆದ ವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಇಲಾಖೆ ಜೂನ್ ತಿಂಗಳಿನಲ್ಲಿಯೇ ಸಿಬಿಎಸ್ಇ ಹಾಗೂ ಐಸಿಎಸ್ಇ ಸಿಲೆಬಸ್ ನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಘೋಷಣೆಯನ್ನು ಮಾಡಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಮಿತಿಮೀರಿರುವ ಹೊತ್ತಲ್ಲೇ ಪರೀಕ್ಷೆ ನಡೆಸುವುದಕ್ಕೆ ಕೇಂದ್ರ ಸರಕಾರ ಮುಂದಾಗುತ್ತಿದ್ದಂತೆಯೇ ವಕೀಲರಾದ ಮಮತಾ ಶರ್ಮಾ ಎಂಬವರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಮುಂಡಗೋಡ ತಾಲೂಕಿನಲ್ಲಿಂದು 53 ಕೊರೋನಾ ಪಾಸಿಟಿವ್, 18 ಗುಣಮುಖ, ಓರ್ವ ಸಾವು..!
ಮುಂಡಗೋಡ ತಾಲೂಕಿನಲ್ಲಿ ಇಂದು 53 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 18 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ, ಹಾಗೇ 68 ವರ್ಷದ ಇಂದೂರಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಅಂತಾ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಶ್ಚಾರ್ಜ್ ಆದವರಿಗೆ ಕೋವಿಡ್ ಕೇರ್ ಸೆಂಟರ್ ನ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಶುಭ ಹಾರೈಸಿ ಬಿಳ್ಕೊಟ್ಟರು..
ಅಕ್ರಮ ಮದ್ಯ ಕುಡಿಯಲು ಅವಕಾಶ, ಚಹಾ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ..!
ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ನ್ಯಾಸರ್ಗಿ ಕ್ರಾಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ, ತನ್ನ ಅಂಗಡಿಯಲ್ಲೆ ಮದ್ಯ ಕುಡಿಯಲು ಅನುವು ಮಾಡಿಕೊಟ್ಟು ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಚಣಕಿ ಗ್ರಾಮದ ನಾಗರಾಜ್ ದೊಡ್ಡ ಹನ್ಮಂತಪ್ಪ ವಡ್ಡರ ಎಂಬುವವನೇ ಆರೋಪಿಯಾಗಿದ್ದಾನೆ.. ಈತ ತನ್ನ ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ, ಅಲ್ಲದೇ ಅಲ್ಲಿಯೇ ಮಧ್ಯ ಕುಡಿಯಲು ಜನರಿಗೆ ಅವಕಾಶ ನೀಡುತ್ತಿದ್ದ. ಹೀಗಾಗಿ ಮುಂಡಗೋಡ ಕ್ರೈಂ ಪಿಎಸ್ ಐ ಎನ್.ಡಿ.ಜಕ್ಕಣ್ಣವರ್ ದಾಳಿ ನಡೆಸಿ ಚಹಾ ಅಂಗಡಿಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ವಿವಿಧ ಕಂಪನಿಯ ಮದ್ಯ ಹಾಗೂ 215 ರೂ ನಗದು ಜಪ್ತಿ ಮಾಡಿ, ಪ್ರಕರಣ ದಾಖಲಿಸಿದ್ದಾರೆ.