ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದ್ರೆ ಮಹಾಮಾರಿ ನಿತ್ಯವೂ ಮರಣ ಮೃದಂಗವನ್ನು ಬಾರಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೂ ಲಾಕ್ ಡೌನ್ ಫಿಕ್ಸ್ ಆಗುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.. ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅರ್ಧ ಲಕ್ಷದಷ್ಟು ಸೋಂಕು ಪತ್ತೆಯಾಗುತ್ತಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿತ್ತು. ಲಾಕ್ ಡೌನ್ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕೊಂಚ ಇಳಿಕೆ ಕಾಣುತ್ತಿದೆ. ರಾಜ್ಯದಲ್ಲೀಗ ಸರಿಸುಮಾರು 25 ಸಾವಿರದಷ್ಟು ಸೋಂಕು ಪತ್ತೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಮಾತ್ರ 600ರ ಗಡಿ ದಾಟುತ್ತಿದೆ. ಅದ್ರಲ್ಲೂ ಕೊರೊನಾ ಹೆಮ್ಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಹಾವಳಿ ಹೆಚ್ಚುತ್ತಿದ್ದು, ಸೋಂಕಿನ ಪ್ರಮಾಣದಲ್ಲಿಯೂ ಭಾರೀ ಏರಿಕೆಯನ್ನು ಕಾಣುತ್ತಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24,99,784 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4,09,924 ಸಕ್ರೀಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ ಇದುವರೆಗೆ ಒಟ್ಟು 26,929 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅದ್ರಲ್ಲೂ ಬೆಂಗಳೂರು, ಬೆಳಗಾವಿ, ಬೆಂಗಳೂರು ಗ್ರಾಮಾಂತರ,...
Top Stories
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಇನ್ನು ಜಿಲ್ಲೆಯಲ್ಲಿ ವಾರದ 4 ದಿನ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ..!
ಕಾರವಾರ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆಯಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ವಾರದ ಎರಡು ದಿನಗಳಿಗೆ ಸೀಮಿತವಾಗಿದ್ದ ಅಗತ್ಯ ವಸ್ತುಗಳ ಖರೀದಿಯ ಅವಕಾಶವನ್ನು, ನಾಳೆಯಿಂದ ಜಿಲ್ಲೆಯಲ್ಲಿ ವಾರದ ನಾಲ್ಕು ದಿನಗಳಿಗೆ, ಅಂದರೆ, ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರಗಳಿಗೂ ವಿಸ್ತರಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಿಂದ ರವಿವಾರದವರೆಗೆ ಮೂರುದಿನ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಯಾರೂ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.. ಹಾಗಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ..
ಅಗಡಿ ಗ್ರಾಮಕ್ಕೆ ಸಂಪೂರ್ಣ ಸ್ಯಾನಿಟೈಸ್..!
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಡಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.. ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು.. ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು…
ಕೊಪ್ಪ ಗ್ರಾಮದಲ್ಲಿ ಕೊರೋನಾ ಸೋಂಕಿತೆ ಸಾವು; ಕೋವಿಡ್ ನಿಯಮದಂತೆ ಅಂತ್ಯಸಂಸ್ಕಾರ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೊವಿಡ್ ನಿಂದ ಮೃತಪಟ್ಟ 55 ವರ್ಷದ ಮಹಿಳೆಯ ಅಂತಿಮ ಸಂಸ್ಕಾರವನ್ನು ಕೋವಿಡ್ ಮಾರ್ಗಸೂಚಿಯ ಅನ್ವಯ ಇಂದು ಕೊಪ್ಪ ಗ್ರಾಮದ ಹೊರವಲಯದಲ್ಲಿ ನೆರವೇರಿಸಲಾಯಿತು.. ಇಂದೂರು ಗ್ರಾಮ ಪಂಚಾಯತಿ ಸದಸ್ಯರು, ಮುಂಡಗೋಡ ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರ ನೇತೃತ್ವದಲ್ಲಿ ಕೋವಿಡ್ ನಿಯಮದ ಅನ್ವಯ ಅಂತ್ಯ ಸಂಸ್ಕಾರ ಮಾಡಲಾಯಿತು.. ಇಂದು ಬೆಳಿಗ್ಗೆ ಉಸಿರಾಟದ ತೊಂದರೆಯಿಂದ ಕೊಪ್ಪ ಗ್ರಾಮದ ಮಹಿಳೆ ಮೃತಪಟ್ಟಿದ್ದರು..
ಲಾಕ್ ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿವೆ ಬಡ ಕಾರ್ಮಿಕ ಕುಟುಂಬಗಳು..!
ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿವೆ.. ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬಗಳು, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು ಆಗದೇ ಸಂಕಷ್ಟಕ್ಕೆ ಸಿಲುಕಿವೆ.. ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ದರೂ ಈ ಕಾರ್ಮಿಕರ ಕುಟುಂಬದಲ್ಲಿದ್ದು ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ.. ಲಾಕ್ ಡೌನ್ ಗೂ ಮುಂಚೆ ದುಡಿದು ಶೇಖರಿಸಿಟ್ಟುಕೊಂಡಿದ್ದ ದಿನಸಿ ಖಾಲಿಯಾಗಿ ಈಗ ಕುಟುಂಬ ಪರದಾಡುವಂತಾಗಿದೆ.. ಕೈಯಲ್ಲಿ ಹಣವಿಲ್ಲ, ಮಾಡಲು ಕೆಲಸವಿಲ್ಲ, ಹೇಗಾದ್ರೂ ಸರಿ ಪುಟ್ಟ ಮಕ್ಕಳಿಗೆ ಒಂದೊತ್ತಿನ ಊಟ ನೀಡಬೇಕು ಅಂತಾ ಕುಟುಂಬದ ಯಜಮಾನ ಪರದಾಡುತ್ತಿದ್ದಾನೆ.. ಆದ್ರೆ ಲಾಕ್ ಡೌನ್ ಹಿನ್ನೆಲೆ ಎಲ್ಲೂ ಏನೂ ಸಿಗುತ್ತಿಲ್ಲ.. ಕೆಲವು ದಾನಿಗಳು ಅಲ್ಪ ಸ್ವಲ್ಪ ದಿನಸಿ ತಂದು ಕೊಟ್ಟಿದ್ದಾರೆ.. ಆದ್ರೆ ಸುಮಾರು 25 ಕ್ಕೂ ಹೆಚ್ಚು ಜನ ಇರುವ ಕುಟುಂಬಕ್ಕೆ ದಿನಸಿ ಸಾಕಾಗುತ್ತಿಲ್ಲ.. ಹೀಗಾಗಿ ದಾನಿಗಳು ಈ ಕುಟುಂಬಗಳ ಸಂಕಷ್ಟಕ್ಕೆ ಸ್ಪಂಧಿಸಬೇಕಿದೆ.. ತಾಲೂಕಾಡಳಿತ ಗಮನ ಹರಿಸಬೇಕಿದೆ..
ನಂದಿಕಟ್ಟಾ ಗ್ರಾಮದಲ್ಲಿ ಸಂಪೂರ್ಣ ಸ್ಯಾನಿಟೈಸ್ ಸಿಂಪಡಣೆ..!
ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಇಂದು ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಸಿಂಪಡಣೆ ಮಾಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ವಾಹನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷೆ, ಗ್ರಾಮದಲ್ಲಿ ಸ್ಯಾನಿಟೈಸ್ ಕಾರ್ಯ ಸಂಪೂರ್ಣಗೊಳಿಸುವಂತೆ ಸೂಚಿಸಿದ್ರು.. ಆನಂತರದಲ್ಲಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸ್ಯಾನಿಟೈಸ್ ಮಾಡಲಾಯಿತು.. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು..
ಚೌಡಳ್ಳಿ ಗ್ರಾಮಕ್ಕೆ ಸಂಪೂರ್ಣ ಸ್ಯಾನಿಟೈಸ್..!
ಮುಂಡಗೋಡ- ತಾಲೂಕಿನ ಚವಡಳ್ಳಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.. ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು.. ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು.
ತಾಲೂಕಿನಲ್ಲಿ ಮುಂಗಾರು ಹಂಗಾಮು ಜೋರು; ಭೂಮಿ ಹದಗೊಳಿಸಿ ಬಿತ್ತನೆ ಕಾರ್ಯ ಮಾಡುತ್ತಿರೋ ಅನ್ನದಾತರು..!
ಮುಂಡಗೋಡ- ತಾಲೂಕಿನಲ್ಲಿ ಮುಂಗಾರು ಹಂಗಾಮು ಶುರುವಾಗಿದೆ.. ಈಗಾಗಲೇ ತಾಲೂಕಿನ ರೈತರು ತಮ್ಮ ಗದ್ದೆಗಳನ್ನು ಸ್ವಚ್ಚಗೊಳಿಸಿದ್ದಾರೆ.. ಸಾಕಷ್ಟು ಮಳೆಯಾದ ಕಾರಣ ಭೂಮಿ ರಂಟೆ ಕುಂಟೆ ಹೊಡೆದು ಹದಗೊಳಿಸಿದ್ದಾರೆ.. ಅಲ್ದೇ ಸಾಕಷ್ಟು ಭಾಗಗಳಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಚುರಿಕುಗೊಂಡಿದೆ.. ತಾಲೂಕಿನ ಸನವಳ್ಳಿ, ಬಾಚಣಕಿ, ಕಾತೂರು, ಪಾಳಾ ಸೇರಿದಂತೆ ಹಲವು ಕಡೆ ಈಗಾಗಲೇ ಗೋವಿನ ಜೋಳ, ಭತ್ತ ಸೇರಿದಂತೆ ಹಲವು ತಳಿಯ ಬೀಜಗಳ ಬಿತ್ತನೇ ಕಾರ್ಯ ಶುರುವಾಗಿದ್ದು ರೈತ ಲಾಕ್ ಡೌನ್ ಮದ್ಯೆಯೂ ಬ್ಯುಸಿಯಾಗಿದ್ದಾನೆ. ಇನ್ನು, ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರಗಳ ಖರೀದಿಯೂ ಜೋರಾಗಿದ್ದು ತಾಲೂಕಾಡಳಿತ ರೈತರಿಗೆ ಬೀಜ ರಸಗೊಬ್ಬರಗಳ ಪೂರೈಕೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದೆ..
ಲಾಕ್ ಡೌನ್ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ದಿನಸಿ ವಿತರಣೆ..!
ಮುಂಡಗೋಡ-ತಾಲೂಕಿನ ಇಂದೂರಿನಲ್ಲಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆಂದು ಮಹಾರಾಷ್ಟ್ರದಿಂದ ಜೋಕಾಲಿ ಪ್ರದರ್ಶನಕ್ಕೆ ಬಂದಿದ್ದ ಕೂಲಿಕಾರ್ಮಿಕರಿಗೆ ಕೊಡುಗೈ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ.. ಇಂದೂ ಕೂಡ ಇಂದೂರಿನ ಅಂಗನವಾಡಿ ಹಾಗೂ ಆಶಾ ಕರ್ಯಕರ್ತರು ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು.. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸುರಕೋಡ್, ಆಶಾ ಕಾರ್ಯಕರ್ತೆ ಲಕ್ಮೀ ಕೊಮ್ಮರಿಸಿಕೊಪ್ಪ ಸೇರಿ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು..
ಅರಟಾಳದಲ್ಲಿ ಸುಬ್ರಮ್ಮಣ್ಯ ಸ್ವಾಮಿಯ ಸನ್ನಿಧಾನ..!
ವಿಶೇಷ ವರದಿ ಕಾಳ ಸರ್ಪ ದೋಷ, ನಾಗದೋಷಗಳ ಪರಿಹಾರಕ್ಕಾಗಿ ಸಾಕಷ್ಟು ಜನ ಕುಕ್ಕೆ ಸುಬ್ರಮ್ಮಣ್ಯ ಕ್ಷೇತ್ರಕ್ಕೆ ಹೋಗ್ತಾರೆ.. ಆದ್ರೆ ಕುಕ್ಕೆ ಶ್ರೀ ಕ್ಷೇತ್ರದ ದಿವ್ಯ ಸನ್ನಿಧಾನದಂತೆಯೇ ಮತ್ತೊಂದು ಸನ್ನಿಧಾನ ನಮ್ಮ ಸಮೀಪದಲ್ಲೇ ಇದೆ.. ಹೌದು, ಶಿಗ್ಗಾವಿ ತಾಲೂಕಿನ ಅರಟಾಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯ ಲದ ಆವರಣದಲ್ಲಿ ಶ್ರೀ ಸುಬ್ರಮ್ಮಣ್ಯ ಸ್ವಾಮಿ ನೆಲೆ ನಿಂತಿದ್ದಾರೆ.. ಭವ್ಯವಾದ ಆಲದ ಮರದ ಕೆಳಗೆ ವಿರಾಜಮಾನವಾಗಿರೋ ಸುಭ್ರಮ್ಮಣ್ಯ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರತ್ತೆ.. ಇನ್ನು ಸರ್ಪದೋಷ, ಕಾಳಸರ್ಪದೋಷ ಮುಂತಾದ ದೋಷಗಳಿಂದ ಮುಕ್ತಿ ಪಡೆಯಲು ಇಲ್ಲಿ ಪ್ರತೀ ಗುರುವಾರ ಹಾಗೂ ಅಮವಾಸ್ಯೆ ದಿನಗಳಲ್ಲಿ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ಭಕ್ತರು ಬರ್ತಾರೆ.. ಸುಬ್ರಮ್ಮಣ್ಯ ಶ್ರೀ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗದೇ ಇರೋ ಬಹುತೇಕರು ಅರಟಾಳದ ದಿವ್ಯ ಸನ್ನಿಧಾನದಲ್ಲೇ ತಮ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಳ್ತಾರೆ. ಅಲ್ದೇ ಇಲ್ಲಿಯೇ ತಮ್ಮ ದೋಷ ನಿವಾರಣೆಯ ವೃತಗಳನ್ನು ಮಾಡ್ತಾರೆ.. ಅರಟಾಳಕ್ಕೆ ಹೋಗೋದು ಹೇಗೆ..? ನೀವು ಹುಬ್ಬಳ್ಳಿಯಿಂದ ತಡಸ ಮಾರ್ಗವಾಗಿ, ಹಾನಗಲ್ ಗೆ ಹೊರಟಿರುವಿರಿ...