ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ (68) ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ನಲ್ಲಿ ವಾಸಿಸುತ್ತಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ಓಂ ಪ್ರಕಾಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ ಆಸ್ಪತ್ರೆಗೆ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ
Top Stories
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆಂದು ಜನ ಮಾತಾಡಿ ಕೊಳ್ಳುತ್ತಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತೀಶ್ ಕೊಳಂಕರ್ ನನ್ನು ಪೊಲೀಸರು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್ ಬಡಿಗೇರ ಹಾಗೂ ಅತನ ಜೀಪ್ ಡ್ರೈವರ್ ವಶಕ್ಕೆ ಪಡೆಯಲಾಗಿದ್ದು ಮತ್ತೋರ್ವ ಲಂಚಬಾಕ ಶಿಕ್ಷಕ ಪರಾರಿಯಾಗಿದ್ದಾನೆ.
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡದ್ದು ಸಂವಿಧಾನಾತ್ಮಕ ಮೌಲ್ಯಗಳ ವಿರೋಧವಾಗಿದೆ. ನಾನು ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ವೈಯಕ್ತಿಕ ಮತ್ತು ಧಾರ್ಮಿಕ ಗೌರವವನ್ನು ಕಾಪಾಡಬೇಕು, ಅವರು ಬೆಳೆದ ಸಂಸ್ಕೃತಿಯನ್ನು ಗೌರವಿಸಬೇಕು. ಯಾವುದೇ ರೂಪದ ಜಾತಿ ಅಥವಾ ಧಾರ್ಮಿಕ ಭೇದಭಾವ ಶಿಕ್ಷಣ ಕ್ಷೇತ್ರಕ್ಕೆ ಗೌರವ ನೀಡುವುದಿಲ್ಲ. ಸರಕಾರ ತಕ್ಷಣ ಈ ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪರೀಕ್ಷಾಧಿಕಾರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ...
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ ಫೈರ್ ಮಾಡಿದ ಪೊಲೀಸರು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ತಂದಿದ್ದರು. ಆರೋಪಿ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ರಕ್ತಸ್ರಾವವಾಗಿ ಆತ ಮೃತಪಟ್ಟಿದ್ದಾನೆ.
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ ಭೇಟಿ ನೀಡಿದ್ದಾರೆ.
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಜಾತಿ ತಾನೊಂದೆ ವಲಂ ಎಂದ ಕನ್ನಡದ ಆದಿ ಕವಿ ಪಂಪ ನ ನೆನಪಿನಲ್ಲಿ ಬನವಾಸಿಯಲ್ಲಿ ಪಂಪ ಭವನ ನಿರ್ಮಾಣ ಮಾಡುವ ಕುರಿತಂತೆ ಜಿಲ್ಲಾಡಳಿತದ ಮೂಲಕ ಪ್ರಸ್ತಾವನೆ ಸಲ್ಲಿಕೆಯಾದಲ್ಲಿ ಈ ಬಗ್ಗೆ ಖಂಡಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಬನವಾಸಿಯಲ್ಲಿ ಪಂಪ ವನ ಅಭಿವೃದ್ಧಿಗಾಗಿ 50 ಲಕ್ಷ ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕದಂಬ ಉತ್ಸವಕ್ಕೆ ಪ್ರತಿ ವರ್ಷ 2...
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್ ಪೈಲಟ್ ತಾಲೂಕುಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ತಹಶೀಲ್ದಾರ ಕಚೇರಿಯ ಅಭಿಲೇಖಾಲಯದಲ್ಲಿರುವ ಎ ಮತ್ತು ಬಿ ವರ್ಗದ (ಎ ವರ್ಗದ ದಾಖಲೆಗಳು ಶಾಶ್ವತವಾಗಿರುತ್ತದೆ ಹಾಗೂ ಬಿ ವರ್ಗದ ದಾಖಲೆಗಳು 30 ವರ್ಷಗಳ ಕಾಲ ಸಂರಕ್ಷಿಸಲ್ಪಡುತ್ತದೆ.) ದಾಖಲೆಗಳಾದ ಕೈಬರಹ ಪಹಣಿ ,ಮ್ಯುಟೇಶನ್ ವಹಿ, ಭೂಮಂಜೂರಾತಿ ಕಡತಗಳು, ಭೂಪರಿವರ್ತನೆ ಕಡತಗಳು, ಭೂಸುಧಾರಣೆ ಕಡತಗಳನ್ನು ನವೀನ ತಂತ್ರಜ್ಞಾನ...
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ಸ್ತ್ರೀ ಚೇತನ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ಮನರೇಗಾ ಯೋಜನೆಯಡಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನವನ್ನು ನೀಡುವುದಲ್ಲದೇ ಮಹಿಳೆಯರಿಗೆ ಪ್ರಥಮ ಆದ್ಯತೆಯಲ್ಲಿ ಕೆಲಸ ನೀಡಲಾಗುತ್ತಿದೆ. ಏಪ್ರಿಲ್ 01 ರಿಂದ ಅನ್ವಯವಾಗುವಂತೆ ಕೂಲಿ ಮೊತ್ತವನ್ನು ರೂ. 349 ರಿಂದ ರೂ. 370ಕ್ಕೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಏಪ್ರಿಲ್ ಮತ್ತು...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ 14 ವರ್ಷ(8 ನೇ ತರಗತಿ)ಮತ್ತು (ಪ್ರಥಮ ಪಿ.ಯು.ಸಿ) ಮೀರಿರಬಾರದು. ಜನನ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ಪೋಟ್ ಸೈಜ್ ಫೋಟೋ ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಮೊ.ಸಂ:78991404699, ಕುಸ್ತಿ ತರಬೇತುದಾರರಾದ ಶಿವಾನಂದ ಆರ್ ಮೊ.ಸಂ:7019565606, ತುಕರಾಮ ಗೌಡ ಮೊ.ಸಂ: 9945489193, ಅರ್ಚರಿ ತರಬೇತಿದಾರ ರಾಘು...