ಶಿಗ್ಗಾವಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾದ ಘಟನೆ ಶಿಗ್ಗಾವಿ ಪಟ್ಟಣದಲ್ಲಿ ನಡದಿದೆ. ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವ ಗೋಡಾನ್ ಮೇಲೆಯೇ ದಾಳಿ ನಡೆಸಿರೋ ಪೊಲೀಸರು, 86 ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ತುಂಬಿಡಲಾಗಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಡ್ನಿ ಎಂಬುವವರಿಗೆ ಸೇರಿದ ಮನೆಯಲ್ಲಿ, 40 ಕ್ವಿಂಟಲ್ 95 ಕೇಜಿ ಅಕ್ಕಿ ದೊರೆತಿದೆ. ಖಚಿತ ಮಾಹಿತಿ ಮೇರೆಗೆ ಶಿಗ್ಗಾವಿ ಪೊಲೀಸರು ದಾಳಿ ಮಾಡಿದ್ದು, ಅಕ್ಕಿ ಸೇರಿದಂತೆ ಒಂದು ಟಾಟಾ ಎಸ್ ವಾಹನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!
ಪಾಕ್ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!
ಜಪಾನ್ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..!
ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!
ದೇಶದಲ್ಲಿ ಮತ್ತೆ ಕೋವಿಡ್ ಆತಂಕ : ರಾಜ್ಯದಲ್ಲಿ 38 ಕೇಸ್, ಬೆಂಗಳೂರಲ್ಲೇ 32 ಸೋಂಕಿತರು..!
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
“ಮಧುಗಿರಿ ಮೋದಿ”ಗೆ ಇದೇಂಥಾ ಸ್ಥಿತಿ..? ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ಯಾಕೆ ಹಿಂದೂ ಹೋರಾಟಗಾರ..?
ತುಮಕೂರು: ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆ ಹೆಸರಿನ ಸಂಘಟನೆ ಮೂಲಕ, ಬ್ರಷ್ಟಾಚಾರ, ಭಯೋತ್ಪಾದನೆ, ಲವ್ ಜಿಹಾದ್, ಅತ್ಯಾಚಾರ, ಗೋಹತ್ಯೆಯ ವಿರುದ್ಧ ಹೋರಾಟ ಮಾಡುತ್ತಿದ್ದ ಆ ವ್ಯಕ್ತಿ ಇಂದು ರಾಜ್ಯಪಾಲರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ಮಧುಗಿರಿ ಮೋದಿ ಅಂತಲೇ ಹೆಸರಾಗಿರೋ ತುಮಕೂರು ಜಿಲ್ಲೆಯ ಅತುಲ್ ಕುಮಾರ್ ಹೀಗೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದೆಲ್ಲೆಡೆ ಕೇಸ್..! ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರೋ ಅತುಲ್ ಕುಮಾರ್ ವಿರುದ್ಧ ರಾಜ್ಯದಲ್ಲಿ ಹಲವೆಡೆ ಪ್ರಕರಣ ದಾಖಲಾಗಿವೆ. ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ಹೋರಾಟ ಮಾಡುವ ಅತುಲ್, ಈಗ ತುಮಕೂರು ಪೊಲೀಸರ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ಕಿರುಕುಳ ಕೊಟ್ರಾ ಪೊಲೀಸರು..? ತುಮಕೂರು ಜಿಲ್ಲಾ ಪೋಲಿಸರಿಂದ ಪದೇ ಪದೇ ವಿಚಾರಣೆ ನೆಪದಲ್ಲಿ ಮಾನಸಿಕ ಕಿರುಕುಳ ಮಾಡಲಾಗುತ್ತಿದೆ. ಅನೇಕ ಬಾರಿ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದು ಪ್ರಕರಣ ದಾಖಲು ಮಾಡುತ್ತಿದ್ದಾರೆ ಅಂತಾ ಅತುಲ್ ಆರೋಪಿಸುತ್ತಿದ್ದಾರೆ. ಆರ್ಥಿಕ ಸ್ಥಿತಿ...
ಆ ನಾಯಿ ಮರಿಗೆ ಮರುಜನ್ಮ ಕೊಟ್ಟಿದ್ದೇ ರೋಚಕ: ಮಾನವೀಯತೆ ಅಂದ್ರೆ ಇದೇ ಅಲ್ವಾ..!
ಉಡುಪಿ: ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ ಈ ನಾಯಿಮರಿಗೆ ಮರುಜೀವ ಸಿಕ್ಕಿದ್ದೇ ಒಂದು ಆಸಕ್ತಿಯ ವಿಚಾರ.ಉಡುಪಿ ಜಿಲ್ಲೆಯ ಗಡಿಭಾಗದಲ್ಲಿರುವ, ಹೊಸಂಗಡಿ ಕೆಪಿಸಿಎಲ್ ಘಟಕದ ಆವರಣದಲ್ಲಿ ಪುಟ್ಟ ನಾಯಿಮರಿಯೊಂದು ಘಾಸಿಕೊಂಡು ಬಿದ್ದಿತ್ತು. ಬೈಕ್ ಚಕ್ರದಲ್ಲಿ ಸಿಲುಕಿ ಕಾಲು ನುಜ್ಜು ಗುಜ್ಜು.! ಯಾರೋ ಬೈಕ್ ಹಾಯಿಸಿದ ಪರಿಣಾಮ ನಾಯಿಮರಿಯ ಹಿಂಬದಿಯ ಎರಡು ಕಾಲುಗಳು ಸಂಪೂರ್ಣ ಜಜ್ಜಿ ಹೋಗಿತ್ತು. ಅಸಹಾಯಕ ಸ್ಥಿತಿಯಲ್ಲಿ ಅಲ್ಲೇ ರಸ್ತೆ ಬದಿಯಲ್ಲಿ 15ದಿನಗಳಿಂದ ಬಿದ್ದುಕೊಂಡಿತ್ತು. ಸ್ಥಳೀಯ ನಿವಾಸಿ ಹಾಗೂ ಕೆಪಿಸಿಎಲ್ ನಲ್ಲಿ ಉದ್ಯೋಗ ಮಾಡುವ ಕೆ.ರಾಮಸ್ವಾಮಿ ಹಾಗೂ ವೀಣಾ ದಂಪತಿ ಪುತ್ರಿಯಾದ ಪ್ರಿಯಾ ಎಂ.ಆರ್ ಈ ಅಸಹಾಯಕ ನಾಯಿಯನ್ನು ಗಮನಿಸಿದ್ದಾರೆ. ಪಕ್ಕಕ್ಕೆ ಹೋದ ಆಕೆ ನಾಯಿಯ ಸ್ಥಿತಿ ನೋಡಿ ಮಮ್ಮಲ ಮರುಗಿದ್ದಾರೆ. ಹಿಂದೆ ಹಿಂದೆ ಬಂದಿತ್ತು..! ಈ ಮರಿ ಕುಂಟು ಕಾಲಿನಲ್ಲೇ ಅವರನ್ನು ಹಿಂಬಾಲಿಸಿಕೊಂಡು...
ಯೋಗ ದಿನಾಚರಣೆ; ಸೋಂದಾ ಸ್ವರ್ಣವಲ್ಲಿ ಶ್ರೀಗಳ ಯೋಗಾಶೀರ್ವಚನ..!
ಶಿರಸಿ: ಜೀವನದ ಸಮತೆ ಪಡೆಯೋಕೆ ಯೋಗಾನುಷ್ಠಾನ ಮಹತ್ವದ್ದು ಅಂತ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ರು. ವಿಶ್ವ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಶಿರಸಿಯ ಸೋಂದಾದಲ್ಲಿ ಯೋಗಾನುಷ್ಠಾನ ನಡೆಸಿದ ಶ್ರೀಗಳು ಆಶೀರ್ವಚನ ನುಡಿದರು. ಆಸನ ಪ್ರಾಣಯಾಮ ತಿಳಿದು ಕೌಶಲ ಮೂಲಕ ಯೋಗ ಸಾಧನೆ ಮಾಡಿದಾಗ ನಮ್ಮಲ್ಲೂ ಸಮತ್ವ ಸಾಧನೆ ಆಗುತ್ತದೆ. ಆದರೆ ಯೋಗ ದಿನಾಚರಣೆಯ ದಿನದಂದು ಮಾತ್ರ ಯೋಗಾಸನ ಮಾಡಿದರೆ ಆಗದು. ಯೋಗ ದಿನಾಚರಣೆಯ ಮರು ದಿನ ಯೋಗ ಮಾಡದೇ ಇದ್ದವರೂ ಇದ್ದಾರೆ. ಇದಾಗದೇ ಜೀವನದಲ್ಲಿ ನಿರಂತರ ಯೋಗ ಅನುಷ್ಠಾನ ಮಾಡಬೇಕು. ಆಸನ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ಪ್ರತಿದಿನವೂ ಮಾಡಬೇಕು. ವಿಶ್ವ ಯೋಗದ ದಿನಾಚರಣೆಯು ಯೋಗದ ಮೂಲಕ ಎಲ್ಲರೂ ಆರೋಗ್ಯ ಪಡೆಯುವಲ್ಲಿ ನೆರವಾಗಲಿ. ಯೋಗದ ಮೂಲಕ ವಿಶ್ವ ಒಂದಾಗಬಹುದು ಎಂಬುದನ್ನು ಮತ್ತೆ ಒಂದಾಗಬಹುದು ಎಂಬುದನ್ನು ತಿಳಿಸಲಿ ಎಂದರು. ಯೋಗ ಸಾಧಕ ಶ್ರೀ..! ಕಳೆದ ನಾಲ್ಕು ದಶಕಗಳಿಂದಲೂ ನಿರಂತರ ಯೋಗಾಭ್ಯಾಸ ನಡೆಸುತ್ತಿರುವ ಸ್ವರ್ಣವಲ್ಲೀ ಶ್ರೀಗಳು ಸ್ವತಃ ಯೋಗ ಸಾಧಕ ಗುರುಗಳೂ...
ಪ್ರಯಾಣಿಕರ ಕೊರತೆಯಲ್ಲೇ ಉತ್ತರ ಕನ್ನಡದಲ್ಲಿ ಬಸ್ ಸಂಚಾರ ಶುರು..!
ಶಿರಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಇದರ ಭಾಗವಾಗಿ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಿದೆ. ಜಿಲ್ಲೆಯ ವಾಯವ್ಯ ಸಾರಿಗೆ ಸಂಸ್ಥೆಯ ಮುಖ್ಯ ಘಟಕವಾದ ಶಿರಸಿಯಿಂದ ಬಸ್ ಗಳು ಕಾರ್ಯ ಆರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಈಗಾಗಲೇ ಬಸ್ ಗಳು ಸಂಚಾರವನ್ನ ಆರಂಭಿಸಿದ್ದು, ಸದ್ಯಕ್ಕೆ ಜಿಲ್ಲೆಯಿಂದ ಜಿಲ್ಲೆಗಳಿಗೆ, ತಾಲೂಕುಗಳಿಂದ ತಾಲೂಕುಗಳಿಗೆ ಮಾತ್ರ ಬಸ್ ಗಳು ಸಂಚಾರ ಪ್ರಾರಂಭಿಸಿವೆ. ಆದ್ರೆ ಪ್ರಯಾಣಿಕರ ಕೊರತೆ ಸಾರಿಗೆ ಸಂಸ್ಥೆಯನ್ನ ಕಾಡುತ್ತಿದೆ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಸದ್ಯಕ್ಕೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಓಡಿಸಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್ ಗಳನ್ನ ಓಡಿಸಲಾಗುತ್ತಿದೆ. ಇನ್ನು, ಗ್ರಾಮೀಣ ಭಾಗಗಳಿಗೆ ಬಸ್ ಸಂಚಾರವನ್ನ ಜನರ ರೆಸ್ಪಾನ್ಸ್ ನೋಡಿಕೊಂಡು ಪ್ರಾರಂಭಿಸಲಾಗುತ್ತೆ ಅಂತಾ KSRTC ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಗೋಡು ಜಲಪಾತದ ದೃಶ್ಯ ವೈಭವ ಕಣ್ತುಂಬಿಕೊಳ್ಳಿ..! ಈಗಲೇ ಒಮ್ಮೆ ಭೇಟಿ ಕೊಡಿ..!!
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿಡುತ್ತಿದ್ದಾನೆ. ಎಲ್ಲೆಂದರಲ್ಲಿ ಮಳೆ ಮಳೆ ಮಳೆ. ಹೀಗಾಗಿ ಮಳೆಯ ಅವಾಂತರಗಳು ಒಂದೆಡೆಯಾದ್ರೆ, ಮತ್ತೊಂದೆಡೆ ಅದೇ ಮಳೆಯಿಂದ ಉತ್ತರ ಕನ್ನಡದ ಮಲೆನಾಡಿನ ಪ್ರಕೃತಿ ಸೌಂದರ್ಯ ಕಣ್ಮನ ಸೆಳೆಯುತ್ತಿದೆ. ಪಶ್ಚಿಮ ಘಟ್ಟದ ರಮಣೀಯತೆ..! ಅಂದಹಾಗೆ, ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳನ್ನ ನೋಡೋದೇ ಒಂದು ರೀತಿಯ ಆನಂದ. ಪಶ್ಚಿಮ ಘಟ್ಟಗಳ ಸಾಲು ಹಸಿರನ್ನು ಹೊದ್ದು ನೋಡುಗರ ಮನ ಸೆಳೆಯುತ್ತದೆ. ಅದೇ ರೀತಿ ಜಲಪಾತಗಳ ಜಿಲ್ಲೆ ಉತ್ತರ ಕನ್ನಡ ಈ ಪಶ್ಚಿಮ ಘಟ್ಟಗಳ ಸಾಲಿನಲ್ಲೇ ಬರೋದ್ರಿಂದ ಜಲಪಾತಗಳ ವೈಭವ ಸವಿಯೋದೇ ಒಂಥರಾ ಖುಷಿ. ಜಲಪಾತಗಳ ಹಾಲುನೊರೆ..! ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿರೋ ಜಲಪಾತಗಳು ರಾಜ್ಯದಲ್ಲೇ ಅಧಿಕ. ಇಲ್ಲಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ರೆ ಒಂದೊಂದು ಜಲಪಾತಗಳು ಒಂದೊಂದು ರೀತಿಯ ವೈಚಿತ್ರ್ಯವನ್ನ ಸೃಷ್ಟಿಸುತ್ತವೆ. ಅದೇ ರೀತಿ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತ ಇದೀಗ ಮೈದುಂಬಿ ಹರಿಯುತ್ತಿದೆ. ಬೇಡ್ತಿ ನದಿಯಿಂದ ನಿರ್ಮಾಣವಾಗಿರೋ ಈ ಜಲಪಾತ ಸುಮಾರು 200 ಮೀಟರ್ ಎತ್ತರದಿಂದ ಧುಮುಕುತ್ತದೆ. ಯಲ್ಲಾಪುರದಿಂದ 17...
ನಾಳೆಯಿಂದ ಬಸ್ ಸಂಚಾರ ಆರಂಭ: ಏನಿದೆ ರೂಲ್ಸ್..?
ಬೆಂಗಳೂರು: ನಾಳೆಯಿಂದ ಅನ್ ಲಾಕ್ ಆರಂಭವಾಗಿತ್ತಿರುವುದರಿಂದ ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ. 3 ಸಾವಿರ ಬಸ್ ಗಳು ರಸ್ತೆಗೆ..! ನಾಳೆಯಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3000 ಬಸ್ ಗಳು ಸಂಚರಿಸಲಿವೆ. ಆದರೆ ಅಂತರಾಜ್ಯಗಳಿಗೆ ಸದ್ಯಕ್ಕೆ ಬಸ್ ಸಂಚಾರ ಲಭ್ಯವಿರುವುದಿಲ್ಲ. ಪ್ರಯಾಣಿಕರು ಹಾಗೂ ಚಾಲಕರು, ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಕೋವಿಡ್ ನಿಯಮ ಕಡ್ಡಾಯ..! ಚಾಲಕರು ಹಾಗೂ ನಿರ್ವಾಹಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಪ್ರಯಾಣಿಕರು ಮಾಸ್ಕ್ ಇಲ್ಲದೇ ಬಸ್ ಹತ್ತುವಂತಿಲ್ಲ. ಶೇ.50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶವಿದ್ದು, ಮೂಗು, ಬಾಯಿ ಮುಚ್ಚಿಕೊಳ್ಳುವಂತೆ ಮಾಸ್ಕ್ ಧರಿಸಿರಬೇಕು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು...
ತಾಲೂಕಿನಲ್ಲಿಂದು 05 ಕೊರೋನಾ ಪಾಸಿಟಿವ್..! 2 ಸಾವು..!!
ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿ 45 ವರ್ಷದ ಮಹಿಳೆ ಕೋವಿಡ್ ಗೆ ಬಲಿಯಾಗಿದ್ದಾರೆ ಅಂತಾ ಮುಂಡಗೋಡ ತಹಶೀಲ್ದಾರರು ಮಾಹಿತಿ ನೀಡಿದ್ದಾರೆ.
ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ: ಉತ್ತರ ಕನ್ನಡದಲ್ಲೂ ಇಂದು ರೆಡ್ ಅಲರ್ಟ್..!
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿಯೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಿಗಾ ವಹಿಸಲು ಸಿಎಂ ಸೂಚನೆ ಮಳೆಯಿಂದ ಕರ್ನಾಟಕದ 20 ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿನ್ನೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಸಿಎಂ ಯಡಿಯೂರಪ್ಪ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಮತ್ತೆ ಪ್ರವಾಹದ ಭೀತಿ..! ಕರ್ನಾಟಕ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದ 1,710...
ಜೂನ್ 21 ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿ: ಸಿಎಂ ಘೋಷಣೆ
ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಎಲ್ಲಿ ಅನ್ ಲಾಕ್..? ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, ಮಂಡ್ಯ, ರಾಮನಗರ, ತುಮಕೂರು, ಗದಗ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೀದರ್, ಕೋಲಾರ ಸೇರಿದಂತೆ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದ್ದು, ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಲಾಕ್ ಡೌನ್..! ಮೈಸೂರಿನಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇದ್ದು, ಈಗಿರುವ ಕಠಿಣ ಕ್ರಮ ಮುಂದುವರೆಯಲಿದೆ. ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ,...