ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿವೆ.. ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬಗಳು, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು ಆಗದೇ ಸಂಕಷ್ಟಕ್ಕೆ ಸಿಲುಕಿವೆ.. ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ದರೂ ಈ ಕಾರ್ಮಿಕರ ಕುಟುಂಬದಲ್ಲಿದ್ದು ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ.. ಲಾಕ್ ಡೌನ್ ಗೂ ಮುಂಚೆ ದುಡಿದು ಶೇಖರಿಸಿಟ್ಟುಕೊಂಡಿದ್ದ ದಿನಸಿ ಖಾಲಿಯಾಗಿ ಈಗ ಕುಟುಂಬ ಪರದಾಡುವಂತಾಗಿದೆ.. ಕೈಯಲ್ಲಿ ಹಣವಿಲ್ಲ, ಮಾಡಲು ಕೆಲಸವಿಲ್ಲ, ಹೇಗಾದ್ರೂ ಸರಿ ಪುಟ್ಟ ಮಕ್ಕಳಿಗೆ ಒಂದೊತ್ತಿನ ಊಟ ನೀಡಬೇಕು ಅಂತಾ ಕುಟುಂಬದ ಯಜಮಾನ ಪರದಾಡುತ್ತಿದ್ದಾನೆ.. ಆದ್ರೆ ಲಾಕ್ ಡೌನ್ ಹಿನ್ನೆಲೆ ಎಲ್ಲೂ ಏನೂ ಸಿಗುತ್ತಿಲ್ಲ.. ಕೆಲವು ದಾನಿಗಳು ಅಲ್ಪ ಸ್ವಲ್ಪ ದಿನಸಿ ತಂದು ಕೊಟ್ಟಿದ್ದಾರೆ.. ಆದ್ರೆ ಸುಮಾರು 25 ಕ್ಕೂ ಹೆಚ್ಚು ಜನ ಇರುವ ಕುಟುಂಬಕ್ಕೆ ದಿನಸಿ ಸಾಕಾಗುತ್ತಿಲ್ಲ.. ಹೀಗಾಗಿ ದಾನಿಗಳು ಈ ಕುಟುಂಬಗಳ ಸಂಕಷ್ಟಕ್ಕೆ ಸ್ಪಂಧಿಸಬೇಕಿದೆ.. ತಾಲೂಕಾಡಳಿತ ಗಮನ ಹರಿಸಬೇಕಿದೆ..
Top Stories
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
ಮಹೀಂದ್ರಾ ಗ್ರೂಪ್ನ ಈ ಸ್ಟಾಕ್ನಲ್ಲಿ HDFC ಮ್ಯೂಚುವಲ್ ಫಂಡ್ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ಪತ್ನಿಯಿಂದ ಕಪಾಳ ಮೋಕ್ಷ..?
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್..! ಯಾರು ಗೊತ್ತೆ..?
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್ ಅಮಾನತು..!
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
ನಂದಿಕಟ್ಟಾ ಗ್ರಾಮದಲ್ಲಿ ಸಂಪೂರ್ಣ ಸ್ಯಾನಿಟೈಸ್ ಸಿಂಪಡಣೆ..!
ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಇಂದು ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಸಿಂಪಡಣೆ ಮಾಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ವಾಹನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷೆ, ಗ್ರಾಮದಲ್ಲಿ ಸ್ಯಾನಿಟೈಸ್ ಕಾರ್ಯ ಸಂಪೂರ್ಣಗೊಳಿಸುವಂತೆ ಸೂಚಿಸಿದ್ರು.. ಆನಂತರದಲ್ಲಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸ್ಯಾನಿಟೈಸ್ ಮಾಡಲಾಯಿತು.. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು..
ಚೌಡಳ್ಳಿ ಗ್ರಾಮಕ್ಕೆ ಸಂಪೂರ್ಣ ಸ್ಯಾನಿಟೈಸ್..!
ಮುಂಡಗೋಡ- ತಾಲೂಕಿನ ಚವಡಳ್ಳಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.. ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು.. ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು.
ತಾಲೂಕಿನಲ್ಲಿ ಮುಂಗಾರು ಹಂಗಾಮು ಜೋರು; ಭೂಮಿ ಹದಗೊಳಿಸಿ ಬಿತ್ತನೆ ಕಾರ್ಯ ಮಾಡುತ್ತಿರೋ ಅನ್ನದಾತರು..!
ಮುಂಡಗೋಡ- ತಾಲೂಕಿನಲ್ಲಿ ಮುಂಗಾರು ಹಂಗಾಮು ಶುರುವಾಗಿದೆ.. ಈಗಾಗಲೇ ತಾಲೂಕಿನ ರೈತರು ತಮ್ಮ ಗದ್ದೆಗಳನ್ನು ಸ್ವಚ್ಚಗೊಳಿಸಿದ್ದಾರೆ.. ಸಾಕಷ್ಟು ಮಳೆಯಾದ ಕಾರಣ ಭೂಮಿ ರಂಟೆ ಕುಂಟೆ ಹೊಡೆದು ಹದಗೊಳಿಸಿದ್ದಾರೆ.. ಅಲ್ದೇ ಸಾಕಷ್ಟು ಭಾಗಗಳಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಚುರಿಕುಗೊಂಡಿದೆ.. ತಾಲೂಕಿನ ಸನವಳ್ಳಿ, ಬಾಚಣಕಿ, ಕಾತೂರು, ಪಾಳಾ ಸೇರಿದಂತೆ ಹಲವು ಕಡೆ ಈಗಾಗಲೇ ಗೋವಿನ ಜೋಳ, ಭತ್ತ ಸೇರಿದಂತೆ ಹಲವು ತಳಿಯ ಬೀಜಗಳ ಬಿತ್ತನೇ ಕಾರ್ಯ ಶುರುವಾಗಿದ್ದು ರೈತ ಲಾಕ್ ಡೌನ್ ಮದ್ಯೆಯೂ ಬ್ಯುಸಿಯಾಗಿದ್ದಾನೆ. ಇನ್ನು, ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರಗಳ ಖರೀದಿಯೂ ಜೋರಾಗಿದ್ದು ತಾಲೂಕಾಡಳಿತ ರೈತರಿಗೆ ಬೀಜ ರಸಗೊಬ್ಬರಗಳ ಪೂರೈಕೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದೆ..
ಲಾಕ್ ಡೌನ್ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ದಿನಸಿ ವಿತರಣೆ..!
ಮುಂಡಗೋಡ-ತಾಲೂಕಿನ ಇಂದೂರಿನಲ್ಲಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆಂದು ಮಹಾರಾಷ್ಟ್ರದಿಂದ ಜೋಕಾಲಿ ಪ್ರದರ್ಶನಕ್ಕೆ ಬಂದಿದ್ದ ಕೂಲಿಕಾರ್ಮಿಕರಿಗೆ ಕೊಡುಗೈ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ.. ಇಂದೂ ಕೂಡ ಇಂದೂರಿನ ಅಂಗನವಾಡಿ ಹಾಗೂ ಆಶಾ ಕರ್ಯಕರ್ತರು ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು.. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸುರಕೋಡ್, ಆಶಾ ಕಾರ್ಯಕರ್ತೆ ಲಕ್ಮೀ ಕೊಮ್ಮರಿಸಿಕೊಪ್ಪ ಸೇರಿ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು..
ಅರಟಾಳದಲ್ಲಿ ಸುಬ್ರಮ್ಮಣ್ಯ ಸ್ವಾಮಿಯ ಸನ್ನಿಧಾನ..!
ವಿಶೇಷ ವರದಿ ಕಾಳ ಸರ್ಪ ದೋಷ, ನಾಗದೋಷಗಳ ಪರಿಹಾರಕ್ಕಾಗಿ ಸಾಕಷ್ಟು ಜನ ಕುಕ್ಕೆ ಸುಬ್ರಮ್ಮಣ್ಯ ಕ್ಷೇತ್ರಕ್ಕೆ ಹೋಗ್ತಾರೆ.. ಆದ್ರೆ ಕುಕ್ಕೆ ಶ್ರೀ ಕ್ಷೇತ್ರದ ದಿವ್ಯ ಸನ್ನಿಧಾನದಂತೆಯೇ ಮತ್ತೊಂದು ಸನ್ನಿಧಾನ ನಮ್ಮ ಸಮೀಪದಲ್ಲೇ ಇದೆ.. ಹೌದು, ಶಿಗ್ಗಾವಿ ತಾಲೂಕಿನ ಅರಟಾಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯ ಲದ ಆವರಣದಲ್ಲಿ ಶ್ರೀ ಸುಬ್ರಮ್ಮಣ್ಯ ಸ್ವಾಮಿ ನೆಲೆ ನಿಂತಿದ್ದಾರೆ.. ಭವ್ಯವಾದ ಆಲದ ಮರದ ಕೆಳಗೆ ವಿರಾಜಮಾನವಾಗಿರೋ ಸುಭ್ರಮ್ಮಣ್ಯ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರತ್ತೆ.. ಇನ್ನು ಸರ್ಪದೋಷ, ಕಾಳಸರ್ಪದೋಷ ಮುಂತಾದ ದೋಷಗಳಿಂದ ಮುಕ್ತಿ ಪಡೆಯಲು ಇಲ್ಲಿ ಪ್ರತೀ ಗುರುವಾರ ಹಾಗೂ ಅಮವಾಸ್ಯೆ ದಿನಗಳಲ್ಲಿ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ಭಕ್ತರು ಬರ್ತಾರೆ.. ಸುಬ್ರಮ್ಮಣ್ಯ ಶ್ರೀ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗದೇ ಇರೋ ಬಹುತೇಕರು ಅರಟಾಳದ ದಿವ್ಯ ಸನ್ನಿಧಾನದಲ್ಲೇ ತಮ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಳ್ತಾರೆ. ಅಲ್ದೇ ಇಲ್ಲಿಯೇ ತಮ್ಮ ದೋಷ ನಿವಾರಣೆಯ ವೃತಗಳನ್ನು ಮಾಡ್ತಾರೆ.. ಅರಟಾಳಕ್ಕೆ ಹೋಗೋದು ಹೇಗೆ..? ನೀವು ಹುಬ್ಬಳ್ಳಿಯಿಂದ ತಡಸ ಮಾರ್ಗವಾಗಿ, ಹಾನಗಲ್ ಗೆ ಹೊರಟಿರುವಿರಿ...
ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!
ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ ಬರ್ಬಾದಾಗಿ ಹೋಗಿ, ಇನ್ನು ಹೇಗಪ್ಪಾ ಸಾಲ ತೀರಿಸೋದು ಅಂತಾ ಅನ್ನದಾತ ಚಿಂತೆಗೀಡಾಗಿದ್ದಾನೆ.. ಅಂದಹಾಗೆ, ಇದು ಮುಂಡಗೋಡ ತಾಲೂಕಿನ ಹುನಗುಂದ, ಇಂದೂರು, ಕೊಪ್ಪ, ನಂದಿಕಟ್ಟಾ, ಅರಶಿಣಗೇರಿ, ಬಾಚಣಕಿ ಗ್ರಾಮಗಳ ರೈತರ ಗೋಳು. ಈ ವರ್ಷ ಬೇಸಿಗೆ ಬೆಳೆಯಾಗಿ ಶೇಂಗಾ ಬೆಳೆದಿದ್ದ ರೈತರು ಕಣ್ಣೀರು ಹಾಕುತ್ತಿದ್ದಾರೆ.. ಇತ್ತೀಚೆಗೆ ಸುರಿದ ಭಾರೀ ಮಳೆ ಈ ರೈತರ ಬದುಕನ್ನೇ ಕಿತ್ತುಕೊಂಡಿದೆ.. ಹುಲುಸಾಗಿ ಬೆಳೆದಿದ್ದ ಶೇಂಗಾ ಬೆಳೆಯೇಲ್ಲ, ಅಕಾಲಿಕ ಮಳೆಯ...
ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣ ದೇವಾಲಯ ಈಗ ನವನವೀನ..!
ವಿಶೇಷ ವರದಿ.. ಮುಂಡಗೋಡ ತಾಲೂಕು ಅಂದ್ರೆ ಪುಟ್ಟದೊಂದು ಪ್ರಪಂಚ ಇದ್ದಂಗೆ.. ಒಮ್ಮೆ ನೀವು ಮುಂಡಗೋಡ ತಾಲೂಕನ್ನು ಸುತ್ತಿ ಬಂದ್ರೆ ಸಾಕು ಇಡೀ ವಿಶ್ವವನ್ನೇ ಸುತ್ತಿ ಬಂದಷ್ಟು ಜ್ಙಾನ ಸಿಗೋದು ಗ್ಯಾರಂಟಿ.. ಇಲ್ಲಿನ ವೈವಿದ್ಯತೆ ಅನ್ನೋದೇ ಹಾಗಿದೆ.. ಯಾಕಂದ್ರೆ ಇಲ್ಲಿ ಜಗತ್ತಿನಾದ್ಯಂತ ಇರೋ ಬಹುತೇಕ ಜನಾಂಗಗಳು ನೆಲೆ ನಿಂತಿವೆ.. ಟಿಬೇಟಿಗರು, ಸಿದ್ದಿಗಳು, ಲಂಬಾಣಿಗರು, ಗೌಳಿಗರು ಹೀಗೆ ವಿವಿಧ ಜನಾಂಗಗಳು ಇಲ್ಲಿ ನೆಲೆ ನಿಂತಿವೆ.. ಹೀಗಾಗಿ ವಿಶ್ವದ ಬಹುತೇಕ ಜನಾಂಗಗಳನ್ನು ಮುಂಡಗೋಡ ತಾಲೂಕಿನಲ್ಲಿ ಕಾಣಬಹುದು… ಇದು ನಮ್ಮೇಲ್ಲರ ಹೆಮ್ಮೆ.. ಇನ್ನು ಇಲ್ಲಿನ ಜನಾಂಗಗಳ ವಿವಿಧ ಪ್ರಕಾರದ ಪಾರಂಪರಿಕ ಸೊಗಡು ಒಂದೆಡೆಯಾದ್ರೆ, ಮತ್ತೊಂದೆಡೆ ಐತಿಹಾಸಿಕ ತಾಣಗಳ ಸೊಬಗೂ ಕಣ್ಮನ ಸೆಳೆಯುತ್ತವೆ.. ಅದ್ರಲ್ಲೂ ತಾಲೂಕಿನ ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣನ ದೇವಾಲಯ ಕಣ್ಮನ ಸೆಳೆಯುತ್ತಿದೆ.. ಇನ್ನು ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣನ ದೇವಾಲಯಕ್ಕೆ ರಾಜ್ಯಾದೆಲ್ಲೆಡೆಯಿಂದ ನಿತ್ಯವೂ ನೂರಾರು ಭಕ್ತರು ಬಂದು ದರ್ಶನ ಪಡಿತಾರೆ.. ಇನ್ನು ಈ ದೇವಾಲಯದ ಗೋಡೆಯ ಮೇಲೆ ವಿಶೇಷ ಮೀನಿನ ಉಬ್ಬು ಶಿಲ್ಪವಿದ್ದು ದೇವಸ್ಥಾನಕ್ಕೆ...
ಲಾಕ್ ಡೌನ್ ಎಫೆಕ್ಟ್- ಶುಂಠಿ ಬೆಳೆದ ರೈತನ ಬದುಕೇ ಕಗ್ಗಂಟು..!
ಮುಂಡಗೋಡ- ತಾಲೂಕಿನಲ್ಲಿ ಶುಂಠಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶುಂಠಿ ಬೆಲೆ ದಿಢೀರನೆ ಕುಸಿದ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದ ರೈತನಿಗೆ ಸದ್ಯ ಲಾಕ್ ಡೌನ್ ಇರೋ ಕಾರಣಕ್ಕೆ, ಶುಂಠಿ ಖರೀದಿಸುವ ವ್ಯಾಪಾರಸ್ಥರು ಬರುತ್ತಿಲ್ಲ.. ಹೀಗಾಗಿ ಇಲ್ಲಿನ ಕೆಲವು ಸ್ಥಳೀಯ ವ್ಯಾಪಾರಿಗಳು 60 ಕೆಜಿಯ ಶುಂಠಿ ಚೀಲಕ್ಕೆ 600 ರಿಂದ 700 ರೂಪಾಯಿ ದರಕ್ಕೆ ಕೇಳುತ್ತಿದ್ದಾರೆ. ಹೀಗಾಗಿ, ಶುಂಠಿ ಬೆಳೆಯಲು ಮಾಡಿದ್ದ ಖರ್ಚೂ ಸಹ ಬರದಾಗಿದೆ ಅಂತಾ ರೈತರು ಚಿಂತೆಗೀಡಾಗಿದ್ದಾರೆ. ಲಕ್ಷಾಂತರ ರುಇಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿರೊ ರೈತರು ಈಗ ಕೈ ಚೆಲ್ಲಿ ಕುಳಿತಿದ್ದಾರೆ. ಹೀಗಾಗಿ ಶುಂಠಿ ಖರೀಧಿಗಾಗಿ ಸರ್ಕಾರ ವ್ಯವಸ್ಥೆ ಮಾಡಬೇಕು ಅಂತಾ ರೈತರು ಆಗ್ರಹಿಸ್ತಿದಾರೆ..
ಲಾಕ್ ಡೌನ್ ಹಿನ್ನೆಲೆ- ಮುಂಡಗೋಡ ಸಂಪೂರ್ಣ ಸ್ತಬ್ದ; ಫಿಲ್ಡಿಗಿಳಿದ ಪೊಲೀಸ್ರು..!
ಮುಂಡಗೋಡ-ತಾಲೂಕಿನಲ್ಲಿ ಮತ್ತೆ ಕಠಿಣ ಲಾಕ್ ಡೌನ್ ಜಾರಿಯಾದ ಎರಡನೇ ದಿನದ ಹಿನ್ನೆಲೆಯಲ್ಲಿ ಪೊಲೀಸ್ರು ಫಿಲ್ಡಿಗಿಳಿದಿದ್ರು. ಮುಂಡಗೋಡ ಪಟ್ಟಣದ ಎಲ್ಲಾ ರಸ್ತೆಗಳಿಗೂ ಬ್ಯಾರಿಕೇಡ್ ಹಾಕಿ ಪಟ್ಟಣದ ಒಳಗೆ ಅಥವಾ ಹೊರ ಹೋಗುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.. ಈ ಮೂಲಕ ಅನಗತ್ಯವಾಗಿ ತಿರುಗಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.. ಮುಂಡಗೋಡ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲಾ ಮಾರ್ಗಗಳಲ್ಲೂ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿರೋ ಪೊಲೀಸ್ರು, ಅನಗತ್ಯ ಸಂಚರಿಸೊ ವಾಹನಗಳು ಬಂದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.. ವಾಹನ ಸವಾರರ ಜೊತೆ ಕೂಲಂಕುಶವಾಗಿ ಚರ್ಚಿಸಿ ಒಂದುವೇಳೆ ಅಗತ್ಯವಿದ್ದಲ್ಲಿ ಮಾತ್ರ ಬಿಡುತ್ತಿದ್ದಾರೆ.. ಹೀಗಾಗಿ ಪಟ್ಟಣದಲ್ಲಿ ಅನಗತ್ಯ ಓಡಾಡುವವರ ಹಾವಳಿ ಕೊಂಚ ತಣ್ಣಗಾಗಿದೆ.