Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..! ಚಿರತೆ ರಸ್ತೆ ಬಳಿ ಕುಳಿತ ಹಿನ್ನಲೆ ವಾಹನ ಸವಾರರು ಭಯದಿಂದ ಸಂಚರಿಸದೇ ರಸ್ತೆಯಲ್ಲೇ ನಿಂತಿದ್ದಾರೆ. ಇದರಿಂದಾಗಿ ಕುಮಟಾ ಸಿದ್ದಾಪುರ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಂಡರು.
Top Stories
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!
Mankalu Vaidya: ಭಟ್ಕಳ: ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ಅವಮಾನ, ತೇಜೋವಧೆ ಮಾಡುವ ದೃಷ್ಟಿಯಲ್ಲಿ ಸುಳ್ಳು ವಿಡಿಯೋವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ಸಾರಿದ ಇಬ್ಬರು ಆರೋಪಿಗಳನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ನೆಮ್ಮದಿ ವಿರುದ್ಧ ಅಪರಾಧ ಎಸಗುವಂತೆ ಮಾಡುವ ಉದ್ದೇಶವುಳ್ಳ ಮತ್ತು ಒಂದು ಪಕ್ಷದ ಕಾರ್ಯಕರ್ತರು ಅಪರಾಧವನ್ನು ಮಾಡುವಂತೆ ಪ್ರಚೋದಿಸುವ ಉದ್ದೇಶವುಳ್ಳ ಹೇಳಿಕೆಯನ್ನು ಸುಳ್ಳು ಮಾಹಿತಿಯನ್ನು ಅಥವಾ ಗಾಳಿಸುದ್ದಿಯನ್ನು ಸಾಮಾಜಿಕ ಜಾಲತಾಣವಾದ ಫೆಸ್ಟುಕ್ ಖಾತೆಯಿಂದ ಇರರರಿಗೆ ಶೇರ್ ಮಾಡಿದ್ದಾರೆ.ಬೈಲೂರಿನ ದೊಡ್ಡಬಟ್ಟೆಯ ನಾಗರಾಜ ಮಾದೇವ ನಾಯ್ಕ ಮತ್ತು ಬೈಲೂರಿನ ಸಣ್ಣಬಲ್ಲೆಯ ಭಾಸ್ಕರ ನಾರಾಯಣ ದೇವಾಡಿಗ ಪೊಲೀಸರ ವಶದಲ್ಲಿರುವ ಆರೋಪಿಗಳು. ಇವರು “ಭಟ್ಕಳಕ್ಕೆ ಬದಲಾವಣೆ” ಎಂಬ ಫೇಸ್ ಬುಕ್ ಖಾತೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಿಗೆ ಉದ್ದೇಶ ಪೂರ್ವಕವಾಗಿ ಅವಮಾನ ಆಗುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 1 ನಿಮಿಷ 29 ಸೆಕೆಂಡ್ ಇರುವ ವಿಡಿಯೋವನ್ನು ಹರಿಬಿಟ್ಟು...
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಅಣ್ಣಪ್ಪ ಕಬ್ಬೂರು ಎಂಬಾತ ತಲೆಮರೆಸಿಕೊಂಡಿದ್ದಾನೆ. ಅಪ್ರಾಪ್ತೆ ಮೇಲೆ ಯುವಕರು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಆಕೆಯ ತಾಯಿ ಬಂಕಾಪುರ ಠಾಣೆಯಲ್ಲಿ ಜೂನ್ 2ರಂದು ದೂರು ನೀಡಿದ್ದರು. ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ”ಬಾಲಕಿಯು ತನ್ನ ಪ್ರಿಯಕರನ ಜೊತೆಗಿನ ದೈಹಿಕ ಸಂಪರ್ಕದಿಂದ ಗರ್ಭಿಣಿಯಾಗಿದ್ದಳು. ಬಳಿಕ ಪ್ರಿಯಕರನೇ ಆಕೆಗೆ...
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್ಲೈನ್ ಅರ್ಜಿ ಆಹ್ವಾನ..!
Education news: ಕಾರವಾರ: ಪ್ರಸುತ್ತ ಸಾಲಿನ ಐ.ಟಿ.ಐ ಪ್ರವೇಶದ ಆನ್ಲೈನ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು.ಪ್ರಥಮ ಸುತ್ತಿನ ಆಯ್ಕೆ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.ಆಯ್ಕೆ ಪ್ರಕ್ರಿಯೆಗೊಂಡ ನಂತರ ವೃತ್ತಿವಾರು ಬಾಕಿ ಉಳಿದಿರುವ ಸ್ಥಾನಗಳನ್ನು ಸೂಚನಾ ಫಲಕ್ಕೆ ಅಳವಡಿಸಲಾಗುವುದು. ಈಗಾಗಲೇ ಆನ್ಲೈನ್ ಅರ್ಜಿ ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ಮಾಡದೇ ಇರುವವರು ಆನ್ಲೈನ್ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡರೂ ಪ್ರಥಮ ಸುತ್ತಿನ ಪ್ರಕ್ರಿಯೆಯಲ್ಲಿ ಆಯ್ಕೆಗೊಳ್ಳದೇ ಇರುವವರು ಹಾಗೂ ಇದುವರೆಗೂ ಯಾವುದೇ ಅರ್ಜಿ ಸಲ್ಲಿಸದೇ ಇರುವವರಿಗೆ ಆಫ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ👉ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..! ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾರವಾರದಲ್ಲಿ ಆಫ್ಲೈನ್ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಎಲ್ಲಾ ದಾಖಲಾತಿಯ ಝೇರಾಕ್ಸ ದೃಢೀಕೃತ ಪ್ರತಿಯೊಂದಿಗೆ ಸಲ್ಲಿಸಿ ದಾಖಲೆ ಪರಿಶೀಲನೆ ಮಾಡಿಸಿಕೊಂಡು ದಾಖಲೆ ಪರಿಶೀಲನೆ ಫೀ ರೂ.50 ನ್ನು ಕಚೇರಿಯಲ್ಲಿ ಪಾವತಿಸಿ ಅರ್ಜಿ ಸಲ್ಲಿಸುವುದು. ಜೂ.12 ರವರೆಗೆ ಸ್ವೀಕರಿಸಿದ ಅರ್ಜಿಗಳನ್ನು ಮೇರಿಟ್ ಆಧಾರದ ಮೇಲೆ ಕ್ರೋಢಿಕರಿಸಿ ಮೇರಿಟ್ ಆಧಾರದ ಮೇಲೆ...
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ವಿಚಾರಣೆ ಸಮಯದಲ್ಲಿ ಈತ, ಕೆಲ ದಿನಗಳ ಹಿಂದೆ ತನ್ನ ಪತ್ನಿಗೆ ಬೇರೊಬ್ಬರ ಜೊತೆ ಸಂಬಂಧ ಇರುವುದು ಗೊತ್ತಾಗಿದೆ, ಇದರಿಂದಾಗಿ ನಮ್ಮ ನಡುವೆ ಜಗಳವಾಗಿತ್ತು. ನಂತರ ಆಕೆ ತನ್ನ ತಾಯಿಯ ಮನೆಗೆ ಹೋಗಿದ್ದಳು. ತಮ್ಮ ಮಗಳಿಗಾಗಿ ರಾಜಿ ಮಾಡಿಕೊಳ್ಳಲು ಆಕೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ, ಮನೆಗೆ ಮರಳಿದ್ದಳು ಎಂದು ಪೊಲೀಸರಿಗೆ...
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!
Business News ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.9 ರಿಂದ ಜೂ.21 ವರೆಗೆ ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ 13 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ,ರೇಶನ್ ಕಾರ್ಡ,ಆಧಾರ್ ಕಾರ್ಡ, ಬ್ಯಾಂಕ್ ಪಾಸ್ಬುಕ್,ಪಾನ್ ಕಾರ್ಡ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಇದನ್ನೂ ಓದಿ👉ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..! ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ...
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
Political News : ಚಿಕ್ಕಮಗಳೂರು : ಆರ್ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ , ಆರ್ಸಿಬಿ ವಿಜಯೋತ್ಸವದಲ್ಲಿ ರಾಜ್ಯ ಸರ್ಕಾರ ಸೂಕ್ತ ಬಂದೋಬಸ್ತ್ ಮಾಡದೇ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿರುವ ಪರಿಣಾಮ 11 ಮಂದಿ ಕ್ರೀಡಾಭಿಮಾನಿ ಗಳು ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದು ಆ ಕುಟುಂಬಗಳು ನೋವಿನ ಸಾಗರದಲ್ಲಿ ಮುಳುಗಲು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು. ಕುಂಭ ಮೇಳದ ಬಗ್ಗೆ ಟೀಕಿಸುವ ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಗುಪ್ತಚರ ಮಾಹಿತಿಗಳಿದ್ದರೂ ಸಮಾರಂಭ ನಡೆಸಿದ್ದಾರೆ....
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!
Gold Price Today: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕು ದಿನ ಏರಿಕೆ ಬಳಿಕ ವೀಕೆಂಡ್ನಲ್ಲಿ ಭಾರೀ ಕುಸಿತಗೊಂಡಿದೆ. ಈ ವಾರದ ಮೊದಲ ನಾಲ್ಕು ವಹಿವಾಟುಗಳಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾದ ಬಳಿಕ ಶುಕ್ರವಾರ ಬೆಲೆ ವ್ಯತ್ಯಾಸವಾಗಿರಲಿಲ್ಲ. ಆದ್ರೆ ಇಂದು ಅಂದ್ರೆ ಶನಿವಾರ 22 & 24 ಕ್ಯಾರೆಟ್ ಬಂಗಾರ ದಿಢೀರ್ ಇಳಿಕೆಗೊಂಡಿದೆ. ಇದೇ ವೇಳೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಗೊಂಡಿದೆ. 6 ದಿನದಲ್ಲಿ ಬೆಳ್ಳಿ ಬೆಲೆ 7,200 ರೂಪಾಯಿ ಜಿಗಿತ! ಚಿನ್ನದ ಬೆಲೆ ಏರಿಳಿತ ಸಾಧಿಸಿದ್ದರೂ, ಬೆಳ್ಳಿ ಬೆಲೆ ಮಾತ್ರ ಜಿಗಿತ ಮುಂದುವರೆಸಿದೆ. ಶುಕ್ರವಾರ ಬೆಳ್ಳಿ ಬೆಲೆ ಕೆಜಿಗೆ 3,000 ರೂಪಾಯಿ ಹೆಚ್ಚಳದ ಬಳಿಕ ಇಂದು ಶನಿವಾರ 100 ರೂಪಾಯಿ ಏರಿಕೆಗೊಂಡಿದೆ. ಈ ಮೂಲಕ ಒಟ್ಟು 6 ದಿನಗಳಲ್ಲಿ ಬರೋಬ್ಬರಿ 7,200 ರೂಪಾಯಿ ಬೆಲೆ ಹೆಚ್ಚಾಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ ಕುಸಿತ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ...
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ ಎಂದು ಹೇಳಿದೆ. ಜೂನ್ 8 ರಿಂದ ಮುಂಗಾರು ಮಳೆ ಚುರುಕುಗೊಳ್ಳಲಿದೆ, ಜೂನ್ 10 ರಿಂದ ಮತ್ತೆ ಮಳೆ ಹೆಚ್ಚಾಗಲಿದೆ. ಜೂನ್ 10 ರಿಂದ 12 ರವರೆಗೆ ತುಸು ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ ಜೂನ್ 11ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್...
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
Virat Kohli News: ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್ಸಿಬಿ, ಕೆಎಸ್ಸಿಎ ಹಾಗೂ ಡಿಎನ್ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ ವಿರುದ್ಧ ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ.ವೆಂಕಟೇಶ್ ಎಂಬವರು ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಎಫ್ಐಆರ್ ಜೊತೆಗೆ ಕೊಹ್ಲಿ ವಿರುದ್ಧ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದು, ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆ ಇದನ್ನು ಪರಿಗಣಿಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ಹೇಳಲಾಗಿದೆ. ಏತನ್ಮಧ್ಯೆ, ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು...