ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಬಗಡಗೇರಿ ಗ್ರಾ. ಪಂಚಾಯತಿ ಸದಸ್ಯನ ಕೊಲೆ- ಇಬ್ಬರ ಬಂಧನ, ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ ನಲ್ಲಿ ಸಾಧನೆ, ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಇಬ್ಬರು ಆಯ್ಕೆ..!
ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು ಚಿನ್ನದ ಪದಕ ಗಳಿಸಿದ್ದಾರೆ. ಹಾಗೂ ಇವರು ಕಬ್ಬಡಿಯ ಯುನಿವರ್ಸಿಟಿ ಬ್ಲೂ ನ್ಯಾಷನಲ್ ಕಬಡ್ಡಿ ಆಟಗಾರ ಆಗಿರುತ್ತಾರೆ. ಈ ಸಾಧನೆಗೈದ ಕ್ರೀಡಾಪಟುಗಳಿಗೆವಹಲವು ಗಣ್ಯರು ಶುಭ ಹಾರೈಸಿದ್ದಾರೆ.
ವಾಹನ ಬಿಡುಗಡೆಗೆ ಹಣದ ಬೇಡಿಕೆ, ಶಿಗ್ಗಾವಿ ಠಾಣೆ ಪೊಲೀಸಪ್ಪ ಸಸ್ಪೆಂಡ್..!
ಶಿಗ್ಗಾವಿ: ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸಪ್ಪನೊಬ್ಬ ಅಮಾನತು ಗೊಂಡಿದ್ದಾನೆ. ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ರಮೇಶ್ ಭಜಂತ್ರಿ ಎಂಬುವವರನ್ನು ಅಮಾನತು ಮಾಡಿ ಹಾವೇರಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾತಿ ಅಂಶುಕುಮಾರ್, ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ರಮೇಶ ಭಜಂತ್ರಿ ಪ್ರಕರಣವೊಂದರಲ್ಲಿ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕವಾಗಿ ಚರ್ಚಿಯಾಗಿತ್ತು. ಜವಾಬ್ದಾರಿಯುತ ಹುದ್ದೆಯಲ್ಲಿರುವ ಸದರಿ ಸಿಹೆಚ್ ಸಿ ರಮೇಶ ಭಜಂತ್ರಿ ಗಂಭೀರ ದುರ್ನಡತೆಯನ್ನು ಪ್ರದರ್ಶಿಸಿರುತ್ತಾರೆ. ಆದ್ದರಿಂದ ರಮೇಶ ಭಜಂತ್ರಿ, ಸಿಹೆಚ್ ಸಿ-631, ಶಿಗ್ಗಾವಿ ಪೊಲೀಸ್ ಠಾಣೆ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಇಲಾಖಾ ವಿಚಾರಣಾ ನಡೆಸಿ ಅವರ ಮೇಲೆ ಮುಂದಿನಕಾನೂನು ಕ್ರಮ ಜರುಗಿಸಲಾಗುವದು ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮಿಗಳ ಸಾನಿದ್ಯದಲ್ಲಿ ಹಾಗೂ ಶ್ರೀ ನಿಜಗುಣಾನಂದ ಸ್ವಾಮಿಗಳ ಸಮ್ಮುಖದಲ್ಲಿ ಜರುಗಲಿದೆ ಅಂತಾ ಮಾತೆ ಬಸವೇಶ್ವರಿ ಮಾಹಿತಿ ನೀಡಿದ್ರು. ಶರಣರ ವಚನ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಸಹಕಾರಿಯಾಗಲಿದೆ. ಹೀಗಾಗಿ, ಶರಣರ ವಚನ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.
ಮಂಜೂರಾದ ಮನೆ GPS ಮಾಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸದಸ್ಯ..!
ಸವಣೂರು: ಸರ್ಕಾರದಿಂದ ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಗ್ರಾಮ ಪಂಚಾಯತಿ ಸದಸ್ಯ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರಡಗಿ ಗ್ರಾಮದ ದಾದಾಪೀರ ಮಹ್ಮದಗೌಸ್ ಲೋಹಾರ ಎಂಬುವವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ 5 ಲಕ್ಷ ಹಣ ಮಂಜೂರಾಗಿತ್ತು. ಹೀಗಾಗಿ, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹ್ಮದ್ ಜಾಫರ್ ಸಂಶಿ, ಫಲಾನುಭವಿ ದಾದಪೀರನ ಮನೆಯ ಜಿಪಿಎಸ್ ಮಾಡಿಸಿಕೊಡಲು ರೂ 40 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 20 ಸಾವಿರ ರೂ. ಲಂಚದ ಹಣವನ್ನು ಪಡೆದುಕೊಳ್ಳುವಾಗ ಯಶಸ್ವಿಯಾಗಿ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಿ. ಪಿ. ಚಂದ್ರಶೇಖರ ನೇತೃತ್ವದಲ್ಲಿ ತನಿಖಾಧಿಕಾರಿಗಳಾದ ಆಂಜನೇಯ ಎನ್.ಎಚ್, ಮುಸ್ತಾಕ್ ಅಹ್ಮದ್ ಶೇಖ, ಮಂಜುನಾಥ ಪಂಡಿತ್ ಪಿ. ಎನ್, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಎಮ್ ಕೆ ನದಾಫ, ಟಿ ಇ ತಿರುಮಲೆ, ಬಿ ಎಮ್ ಕರ್ಜಗಿ, ಎಮ್ ಕೆ ಲಕ್ಷ್ಮೀಶ್ವರ,...
ಬಗಡಗೇರಿಯಲ್ಲಿ ಗ್ರಾಪಂ ಸದಸ್ಯನ ಭೀಕರ ಹತ್ಯೆ, ಗ್ರಾಮದ ನಡುಬೀದಿಯಲ್ಲೇ ಕೊಂದು ಬೀಸಾಕಿದ ದುಷ್ಕರ್ಮಿಗಳು..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆಯಾಗಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇನ್ನು ನಡುಬೀದಿಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು. ಇನ್ನು ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ, ಮೋದಿ ಅಲೆ ಕೆಲಸ ಮಾಡಲಿದೆ- ಟಿಬೇಟಿಯನ್ ಕ್ಯಾಂಪ್ ಗೆ ಆಗಮಿಸಿದ ಅರುಣಾಚಲ ಸಿಎಂ ಪೇಮಾ ಖಂಡು ಹೇಳಿಕೆ
ಮುಂಡಗೋಡ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ, ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಅಂತಾ ಅರುಣಾಚಲ ಸಿಎಂ ಪೇಮಾ ಖಂಡು ಭವಿಷ್ಯ ನುಡಿದ್ರು. ಎರಡು ದಿನಗಳ ಕಾಲ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ಗೆ ಭೇಟಿ ನೀಡಿರೋ ಅವ್ರು ಮಾತನಾಡಿದರು. ಇನ್ನು ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾತನಾಡಿದ ಅವ್ರು, ಅಲ್ಲಿ ಗಲಭೆ ನಡೆಯುತ್ತಿರುವುದು ಇದೇ ಮೊದಲ ಅಲ್ಲ. ಅಲ್ಲಿ ಆಗಾಗ ನಡದೆ ಇರುತ್ತದೆ, ಇದೊಂದು ದುರದೃಷ್ಟಕರ ಸಂಗತಿ ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿನ ಬೆಳವಣಿಗೆ ಮೇಲೆ ನಿಗಾ ಇಟ್ಟಿವೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವತ್ತ ಹೆಜ್ಜೆ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಂದಿದ್ದೇನೆ ಎಂದ ಅವರು, ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವೆ. ಎರಡು...
ಮುಂಡಗೋಡಿನಲ್ಲಿ ಖತರ್ನಾಕ ATM ವಂಚಕಿಯ ಬಂಧನ, ಹಣ ಡ್ರಾ ಮಾಡಿ ಕೊಡುವುದಾಗಿ ವಂಚಿಸಿದ್ದ ಲೇಡಿ..!
ಮುಂಡಗೋಡ: ಎಟಿಎಂ ನಿಂದ ಹಣ ಡ್ರಾ ಮಾಡಿ ಕೊಡುವುದಾಗಿ ಹೇಳಿ, ಬರೋಬ್ಬರಿ 69 ಸಾವಿರ ರೂ. ವಂಚಿಸಿದ್ದ ಖತರ್ನಾಕ ವಂಚಕಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕಳೆದ ಸೆಪ್ಟೆಂಬರ್ 29 ರಂದು ನಡೆದಿದ್ದ ಎಟಿಎಂ ವಂಚನೆ ಪ್ರಕರಣವನ್ನು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಖಾರಿಪುರ ತಾಲೂಕಿನ ಶಿರಾಳಕೊಪ್ಪದ ಆರೋಪಿ ಮಹಿಳೆ ಕೌಸರಬಾನು ನಜೀರಸಾಬ ಹಿರೇಕರೂರು(35) ಎಂಬುವವಳನ್ನು ಬಂಧಿಸಿ, 12 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಮೈನಳ್ಳಿಯ ಸಹೀನಾಜ್ ಮಹಮ್ಮದ್ ಸಲೀಂ ಎಂಬುವವರು ಮುಂಡಗೋಡ ಠಾಣೆಗೆ ದೂರು ನೀಡಿದ್ದರು. ಕಳೆದ ಸೆಪ್ಟೆಂಬರ್ 25 ರಂದು ಸಾಯಂಕಾಲ ಮುಂಡಗೋಡಿನ ಬಸ್ ನಿಲ್ದಾಣದ ಎದುರಿನಲ್ಲಿರೋ ಎಟಿಎಂ ನಲ್ಲಿ ಹಣ ತೆಗೆಯಲು ಹೋಗಿದ್ದರು. ಈ ವೇಳೆ ಸರತಿ ಸಾಲಿನಲ್ಲಿ ಹಿಂದೆ ನಿಂತಿದ್ದ ಅಪರಿಚಿತ ಮಹಿಳೆ ಎಟಿಎಂ ನಿಂದ ಹಣ ತೆಗೆದು ಕೊಡುವುದಾಗಿ ನಂಬಿಸಿದ್ದಳು. ಅದೇ ವೇಳೆ ಎಟಿಎಂ ಪಾಸ್ ವರ್ಡ್ ಪಡೆದುಕೊಂಡಿದ್ದಳು. ಹಾಗೇ ದೂರುದಾರಳ ಎಟಿಎಂ ಕಾರ್ಡ್ ಎಗರಿಸಿ ಬೇರೆ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೇಗೆ ಸಾವು..? ಅಂದಹಾಗೆ, ರಸ್ತೆ ಪಕ್ಕದ ಗದ್ದೆಯಲ್ಲಿ ಚಿರತೆ ಸಾವು ಕಂಡಿದೆ. ಆದ್ರೆ, ಯಾವ ಕಾರಣಕ್ಕೆ ಸಾವು ಕಂಡಿದೆ ಅನ್ನೋ ಮಾಹಿತಿಯನ್ನು ಅರಣ್ಯ ಅಧಿಕಾರಿಗಳು ನೀಡಬೇಕಿದೆ. ಬಹುಶಃ ರಸ್ತೆ ದಾಟುವಾಗ ವಾಹನಗಳಿಗೆ ಡಿಕ್ಕಿಯಾಗಿ ಸಾವುಜ ಕಂಡಿತಾ..? ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಸಾವು ಕಂಡಿದೆಯಾ ವೈದ್ಯರ ವದಿಯ ಬಳಿಕವಷ್ಟೇ ಮಾಹಿತಿ ದೊರೆಯಬೇಕಿದೆ. ಸದ್ಯ...