Robot News:ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಕಿಕ್-ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಾನವರೂಪಿ ರೋಬೋಟ್ಗಳ (humanoid robots) ಬಾಕ್ಸಿಂಗ್ ಸ್ಪರ್ಧೆಯ ವೀಡಿಯೊ ಈಗ ಗಮನ ಸೆಳೆಯುತ್ತಿದೆ. ಯುನಿಟ್ರೀ ರೊಬೊಟಿಕ್ಸ್ ಕಂಪನಿ ಅಭಿವೃದ್ಧಿಪಡಿಸಿದ ಈ ರೋಬೋಟ್ಗಳು ರೋಮಾಂಚಕ ಬಾಕ್ಸಿಂಗ್ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾದವು. ಚೀನಾ ಮೀಡಿಯಾ ಗ್ರೂಪ್ ವರ್ಲ್ಡ್ ರೋಬೋಟ್ ಸ್ಪರ್ಧೆಯ ಭಾಗವಾಗಿ, ರೋಬೋಟ್ಗಳು ಪ್ರದರ್ಶನ ಪಂದ್ಯಗಳು ಮತ್ತು ಸ್ಪರ್ಧಾತ್ಮಕ ಪಂದ್ಯಗಳಲ್ಲಿ ತಮ್ಮ ಚುರುಕುತನ ಮತ್ತು ಪಂಚಿಂಗ್ ಸಾಮರ್ಥ್ಯಗಳನ್ನು ಪ್ರದರ್ಶಿಸಿದವು. ಈ ಸ್ಪರ್ಧೆಯು ಒಂದು ಐತಿಹಾಸಿಕ ಕ್ಷಣವನ್ನು ಗುರುತಿಸುತ್ತದೆ ಏಕೆಂದರೆ ಇದು ಹುಮನಾಯ್ಡ್ ರೋಬೋಟ್ಗಳ ಸುತ್ತ ಕೇಂದ್ರೀಕೃತವಾಗಿರುವ ವಿಶ್ವದ ಮೊದಲ ಕಿಕ್ ಬಾಕ್ಸಿಂಗ್ ಕ್ರೀಡಾಕೂಟವಾಗಿದ್ದು, ಯುದ್ಧ ಕ್ರೀಡೆಗಳಲ್ಲಿ ಕೃತಕ ಬುದ್ಧಿಮತ್ತೆ (AI)ಯ ಕ್ರಮೇಣ ತೊಡಗಿಕೊಳ್ಳುವುದನ್ನು ಇದು ಸಂಕೇತಿಸುತ್ತದೆ ಎಂದು ಸಿಎಂಜಿ (CMG) ವರದಿ ತಿಳಿಸಿದೆ. ಸ್ಪರ್ಧೆಯು ಪ್ರದರ್ಶನ ಮತ್ತು ಸ್ಪರ್ಧಾತ್ಮಕ ಪಂದ್ಯಗಳನ್ನು ಒಳಗೊಂಡಿದೆ, ಹುಮನಾಯ್ಡ್ ರೋಬೋಟ್ಗಳು ಯುದ್ಧ ಚಲನೆಗಳನ್ನು ಪ್ರದರ್ಶಿಸುತ್ತವೆ ಮತ್ತು ಕಣದಲ್ಲಿ ನೈಜ-ಸಮಯದ ಹೋರಾಟದಲ್ಲಿ ಮಾನವರಿಂದ ನಿಯಂತ್ರಿಸಲ್ಪಡುವ ರೋಬೋಟ್ಗಳನ್ನು ಪ್ರದರ್ಶಿಸುತ್ತವೆ ಎಂದು ಆಯೋಜಕರು ತಿಳಿಸಿದ್ದಾರೆ. ರೋಬೋಟ್ಗಳು...
Top Stories
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
ಮಹೀಂದ್ರಾ ಗ್ರೂಪ್ನ ಈ ಸ್ಟಾಕ್ನಲ್ಲಿ HDFC ಮ್ಯೂಚುವಲ್ ಫಂಡ್ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ಪತ್ನಿಯಿಂದ ಕಪಾಳ ಮೋಕ್ಷ..?
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್..! ಯಾರು ಗೊತ್ತೆ..?
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್ ಅಮಾನತು..!
Police News:ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಪೊಲೀಸರು ಮೂವರಿಗೆ ನಡು ರಸ್ತೆಯಲ್ಲಿ ಸಾರ್ವಜನಿಕವಾಗಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವೀಡಿಯೊ ವೈರಲ್ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದ್ದು, ಅದಕ್ಕೆ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ತೆನಾಲಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆಯ ಮಧ್ಯದಲ್ಲಿ ಮೂವರನ್ನು ಕುಳ್ಳಿರಿಸಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಬಿಗಿದುಕೊಂಡು ಕುಳಿತ ಮೂವರನ್ನು ಪೊಲೀಸರು ಹಾಗೂ ಸಾರ್ವಜನಿಕರು ಸುತ್ತುವರೆದಿದ್ದಾರೆ. ಪೊಲೀಸರು ಅವರಿಗೆ ಪಾಠ ಕಲಿಸಲು ಸಾರ್ವಜನಿಕವಾಗಿ ಥಳಿಸಿದ್ದಾರೆ. ವಿಕ್ಟರ್, ಬಾಬುಲಾಲ ಮತ್ತು ರಾಕೇಶ ಎಂಬ ಮೂವರು ವ್ಯಕ್ತಿಗಳು ಒಂದು ತಿಂಗಳ ಹಿಂದೆ ಐತಾನಗರದಲ್ಲಿ ಮಾದಕ ದ್ರವ್ಯಗಳ ಪ್ರಭಾವದಿಂದ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿದೆ. ಇವರು ಸ್ಥಳೀಯ ರೌಡಿಯ ಅನುಯಾಯಿಗಳಂತೆ. ಇದರಿಂದ ಪೊಲೀಸರು ಈ ಮೂವರನ್ನು...
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?
Suicide News:ಹರಿಯಾಣದ ಪಂಚಕುಲದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. “ಪ್ರಾಥಮಿಕವಾಗಿ ನೋಡಿದರೆ ಇದು ಆತ್ಮಹತ್ಯೆಯ ವಿಷಯವೆಂದು ತೋರುತ್ತದೆ. ಆದಾಗ್ಯೂ, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ ಅವರು ಹೇಳಿದ್ದಾರೆ. ಪಂಚಕುಲದ ಸೆಕ್ಟರ್ 27 ರ ವಸತಿ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಲಾಗಿತ್ತು ಮತ್ತು ಸೋಮವಾರ ತಡರಾತ್ರಿ ದಾರಿಹೋಕರೊಬ್ಬರು ಅದನ್ನು ನೋಡಿದರು. ಮೃತರಲ್ಲಿ ಒಬ್ಬರನ್ನು ಪ್ರವೀಣ ಮಿತ್ತಲ್ (41) ಎಂದು ಪೊಲೀಸರು ಗುರುತಿಸಿದ್ದಾರೆ, ಉಳಿದವರನ್ನು ಅವರ ಪತ್ನಿ, ದಂಪತಿಯ ಮೂವರು ಅಪ್ರಾಪ್ತ ಮಕ್ಕಳು, ಅವರಲ್ಲಿ ಇಬ್ಬರು ಹೆಣ್ಣುಮಕ್ಕಳು ಮತ್ತು ಅವರ ತಂದೆ-ತಾಯಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಡೆಹ್ರಾಡೂನ್ನಲ್ಲಿ ನೋಂದಾಯಿತ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ, ಅದರ ಬಾಗಿಲಿನಿಂದ ಟವಲ್ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಯುವಕನೊಬ್ಬ, ಕಾರಿನ ಹತ್ತಿರ ಹೋಗಿ ನೋಡಿದಾಗ ಕಾರಿನಲ್ಲಿ ಆರು ಜನರು ಚಲನರಹಿತರಾಗಿ ಒಬ್ಬರ ಮೇಲೆ ಒಬ್ಬರು...
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
Tyer Stocks Price:2024-25ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಸಿಯೆಟ್, ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್, ಎಂಆರ್ಎಫ್ ಷೇರುಗಳು ಭರ್ಜರಿ ಏರಿಕೆ ದಾಖಲಿಸಿವೆ. ಈ ಕಂಪನಿಗಳ ಬಲವಾದ ಹಣಕಾಸು ಕಾರ್ಯಕ್ಷಮತೆ, ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಮಾರುಕಟ್ಟೆ ವಿಶ್ಲೇಷಕರಿಂದ ನಿರಂತರವಾದ ಬುಲಿಶ್ ಭಾವನೆ ಹೂಡಿಕೆದಾರರನ್ನು ಟೈರ್ ವಲಯದಲ್ಲಿ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸಿದೆ. ಶೇಕಡಾ 20ಕ್ಕಿಂತ ಹೆಚ್ಚು ಜಿಗಿದ ಟೈರ್ ಷೇರುಗಳು. ಸಿಇಎಟಿ, ಜೆಕೆ ಟೈರ್ಸ್ ಮತ್ತು ಇಂಡಸ್ಟ್ರೀಸ್ ಮತ್ತು ಎಂಆರ್ಎಫ್ ಷೇರುಗಳು ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಶೇಕಡಾ 20ಕ್ಕಿಂತ ಹೆಚ್ಚು ಏರಿಕೆ ದಾಖಲಿಸಿವೆ. ಮಾರುಕಟ್ಟೆಯಲ್ಲಿನ ಬದಲಾವಣೆಗಳು ಮತ್ತು ವಿಶ್ಲೇಷಕರ ವಿಶ್ವಾಸವು ಟೈರ್ ಕಂಪನಿಗಳ ಷೇರುಗಳ ಏರಿಕೆಗೆ ಕಾರಣವಾಗಿದೆ. ಸಿಯೆಟ್ ಟೈರ್ ಬೆಲೆ ಎಷ್ಟು ಏರಿಕೆ? ಸಿಯೆಟ್ ಷೇರು ಬೆಲೆಯು ಏಪ್ರಿಲ್ 30 ರಂದು ತನ್ನ ಮಾರ್ಚ್ ತ್ರೈಮಾಸಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಿದ ನಂತರ 16 ವಹಿವಾಟು ಅವಧಿಗಳಲ್ಲಿ ₹3,060 ರಿಂದ ₹3,728 ಕ್ಕೆ ಏರಿತು, ಇದು 22% ರಷ್ಟು...
ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?
Ayushman Yojana: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗುವಂತೆ, ಕೇಂದ್ರ ಸರ್ಕಾರವು ಆಯುಷ್ಮಾನ್ ಆ್ಯಪ್ ಮೂಲಕ ಆಯುಷ್ಮಾನ್ ವಯೋ ವಂದನಾ ಕಾರ್ಡ್ ಅನ್ನು ನೀಡುತ್ತಿದೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ (PM-JAY), 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಭಾರತ ಸರ್ಕಾರವು ನೀಡುತ್ತಿದೆ. ಈ ಯೋಜನೆಯ ಪ್ರಾರಂಭ ಮತ್ತು ಹಿನ್ನೆಲೆ ಏನು? ಆಯುಷ್ಮಾನ್ ವಯೋ ವಂದನಾ ಯೋಜನೆಯು ಸೆಪ್ಟೆಂಬರ್ 23, 2018 ರಂದು ಪ್ರಾರಂಭವಾಯಿತು ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದಿಂದ (NHA) ಅನುಷ್ಠಾನಗೊಳ್ಳುತ್ತಿದೆ. ಆಯುಷ್ಮಾನ್ ವಯೋ ವಂದನಾ ಕಾರ್ಡ್ ಪಡೆಯಲು ಆಯುಷ್ಮಾನ್ ಆ್ಯಪ್ನಲ್ಲಿ ನೋಂದಾಯಿಸಿಕೊಳ್ಳುವುದು ಹೇಗೆ ಮತ್ತು ಈ ಯೋಜನೆಯ ಅರ್ಹತೆಗಳೇನು ಎಂಬುದನ್ನು ಈ ಕೆಳಗೆ ತಿಳಿಯಿರಿ. ಆಯುಷ್ಮಾನ್ ವಯೋ ವಂದನಾ ಕಾರ್ಡ್ನ ಪ್ರಮುಖ ಉಪಯೋಗವೇನು? ಯಾವುದೇ ಆದಾಯದ ಮಿತಿಯಿಲ್ಲದೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು...
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು ನಿಂದಿಸುವ ಮೂಲಕ ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದರು. ಕಳೆದ ವಿಧಾನ ಸಭಾ ಪರಿಷತ್ ಸದಸ್ಯರ ಚುನಾವಣೆ ವೇಳೆಯೂ ಸಹ ಇಬ್ಬರೂ ವಿಪ್ ಉಲ್ಲಂಘಿಸಿ ಕಾಂಗ್ರೆಸ್ಗೆ ಮತ ಹಾಕಿದ್ದರು. ಹೀಗಾಗಿ ಇವರ ವಿರುದ್ದ ರಾಜ್ಯ ಬಿಜೆಪಿ ಹೈಕಮಾಂಡ್ಗೆ ದೂರು ನೀಡಿತ್ತು. ದೂರು ನೀಡಿದ ಒಂದು ವರ್ಷದ ನಂತರ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ.
ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ
Job fair News: ಶಿಗ್ಗಾವಿ: ನಮ್ಮ ತಾಲೂಕಿನಲ್ಲಿ ಪ್ರತಿ ವರ್ಷ ನೂರಾರು ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗಕ್ಕಾಗಿ ಹೊರ ಹೋಗುತ್ತಿದ್ದಾರೆ. ನೈಪುಣ್ಯತೆ ಹೊಂದಿರುವ ವಿದ್ಯಾವಂತ ಯುವಕ-ಯುವತಿಯರು ಉದ್ಯೋಗ ಒದಗಿಸುವ ಸಲುವಾಗಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು. ಶಿಗ್ಗಾಂವಿ ತಾಲೂಕು ಬನ್ನೂರ ಗ್ರಾಮದಲ್ಲಿ ಎಜುಕೇಶನ್ ವೆಲ್ವೇರ್ ಫೌಂಡೇಶನ್ ಬನ್ನೂರು ಹಾಗೂ ಜಿ.ಆರ್.ಜಿ. ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ.ಲಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಳ್ಳಿ ಹೈದರಿಗಾಗಿ ಉದ್ಯೋಗ ಉತ್ಸವ-2025ರ ಕಾರ್ಯಕ್ರಮದ ‘ಹಳ್ಳಿ ಹೈದರಿಗಾಗಿ ಉದ್ಯೋಗ’ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ👉 ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..! ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತವಾದ ಬದುಕನ್ನು ಕಟ್ಟಿಕೊಳ್ಳಲು ನಾವೆಲ್ಲರೂ ಶ್ರಮಿಸಬೇಕು. ಆ ದಿಕ್ಕಿನಲ್ಲಿ ನಾವೆಲ್ಲರೂ ಹೆಜ್ಜೆ ಇಡೋಣ ಎಂದರು. ಬನ್ನೂರ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ಉದ್ಯೋಗ...
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. Rain Alert News: ಮಂಗಳವಾರ ಪ್ರಮುಖವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು,...
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್
Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ವಿಶೇಷವಾಗಿ ಮಕ್ಕಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಹೀಗಾಗಿ ಪೋಷಕರು ಜ್ವರ, ಶೀತ ಇರುವವರನ್ನು ಶಾಲೆಗೆ ಕಳುಹಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಅಂತಹ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಗಳು ರಜೆ ನೀಡುವಂತೆ ಅಧಿಕೃತವಾಗಿ ನಿರ್ದೇಶನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು. ಪರೀಕ್ಷಾ ಕಿಟ್ ವಿತರಣೆ..! ಕೊರೋನಾ ಮುನ್ನೆಚ್ಚರಿಕೆ...
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!
Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್ ಸೋಂಕಿರತರಿದ್ದು, ಇದರಲ್ಲಿ 752 ಪ್ರಕರಣಗಳು ಇತ್ತೀಚಿನದ್ದಾಗಿವೆ. ಕೇರಳದಲ್ಲಿ ಅತಿಹೆಚ್ಚು 430 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮಹಾರಾಷ್ಟ್ರದಲ್ಲಿ 209, ದೆಹಲಿಯಲ್ಲಿ 104, ಕರ್ನಾಟಕದಲ್ಲಿ 47 ಸೋಂಕಿತರಿದ್ದಾರೆ. ಇದನ್ನೂ ಓದಿ👉ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..! ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರಗಳಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳು ವರದಿಯಾಗಿಲ್ಲ’ ಎಂದು ತಿಳಿಸಿದೆ. ಇದನ್ನೂ...