ದೇಶಪಾಂಡೆಯವರೇ, ನಾನು ನಿಮ್ಮ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ಆದ್ರೆ ತಮ್ಮ ಮೂವತ್ತು ವರ್ಷದ ಸಾಧನೆ ಏನು ಅಂತಾ ಜನ್ರಿಗೆ ಗೊತ್ತಿದೆ, ಕ್ಷೇತ್ರದಲ್ಲಿ ಸೊರಗಿ ಹೋದ ಕೆರೆ, ಕಟ್ಟೆಗಳೇಲ್ಲ ನಿಮ್ಮ ಸಾಧನೆಯ ಕತೆ ಹೇಳ್ತಿವೆ ಅಂತಾ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆಯವ್ರಿಗೆ ನಾಜೂಕಿನಿಂದ್ಲೇ ಹರಿತ ಬಾಣ ಬಿಟ್ಟಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಅನ್ನೋ ಪಕ್ಷ ಸದ್ಯ ಶೂನ್ಯಕ್ಕೆ ಜಾರಿದೆ. ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ನೆಲೆಯೇ ಇಲ್ಲವಾಗಿದೆ. ಹೀಗಾಗಿ, ಬಿಜೆಪಿ ಕಾರ್ಯಕರ್ತರಿಗೆ ಏನೆನೋ ಹೇಳಕೊಂಡು ಪಕ್ಷದ ಶಾಲು ಹಾಕಿ ಪಕ್ಷ ಸೇರ್ಪಡೆ ಅಂತಾ ಬೊಬ್ಬೆ ಹೊಡಿತಿದಾರೆ ಅಂತಾ ವಿವೇಕ್ ಹೆಬ್ಬಾರ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಅನ್ನೋದು ಬಹುದೊಡ್ಡ ಪಕ್ಷ, ಇಲ್ಲಿ ಎಲ್ಲರೂ ಸಮರ್ಥ ಮುಖಂಡರೇ ಇದ್ದಾರೆ. ಸಹಜವಾಗೇ ಒಂದಿಷ್ಟು ಭಿನ್ನಾಭಿಪ್ರಾಯ ಇದೆ. ಅದನ್ನ ನಾವು ಹೇಗೆ ಬಗೆಹರಿಸಿಕೊಳ್ಳಬೇಕೊ ಬಗೆಹರಿಸಿಕೊಳ್ತಿವಿ ಅಂತಾ ವಿವೇಕ್ ಹೆಬ್ಬಾರ್ ತಿಳಿಸಿದ್ರು. ಯುವಕರು ಸಮರ್ಥರಿದ್ದಾರೆ..! ಇನ್ನು, ಪ್ರಶಾಂತ್...
Top Stories
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ದೇಶಪಾಂಡೆ ಸಾಹೇಬ್ರೆ, ಕ್ಷೇತ್ರದ ಕೆರೆಗಳೇಲ್ಲ ನಿಮ್ಮ 30 ವರ್ಷದ ಸಾಧನೆಯ ಕತೆ ಹೇಳ್ತಿವೆ: ವಿವೇಕ್ ಹೆಬ್ಬಾರ್
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!
ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಡೀ ಕ್ಷೇತ್ರದಲ್ಲಿ ಪಕ್ಷದಲ್ಲಿನ ಯುವ ಪಡೆಗೆ ಆಕ್ಸಿಜನ್ ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ, ಕೆಲವೊಂದು ಮನಸ್ತಾಪಗಳು ಸ್ಥಳೀಯ ಮಟ್ಟದಲ್ಲಿ ಇರೋದು ಸಹಜ ಅಂತಲೇ ಫಿಲ್ಡಿಗೆ ಇಳಿದಿರೋ ವಿವೇಕ್, ಎಲ್ಲೆಲ್ಲಿ ಅಸಮಾಧಾನದ ಗಾಳಿ ಗರಮ್ಮಾಗಿದೆಯೋ ಅಲ್ಲಲ್ಲಿ, ಒಂದಿಷ್ಟು ವಿಶೇಷ ಕಾಳಜಿಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಗೆ ಡೋಂಟ್ ಕೇರ್..! ಕ್ಷೇತ್ರದಲ್ಲಿ, ಬಹುತೇಕ ಸೋರಗಿ ಹೋಗಿದ್ದ ಕಾಂಗ್ರೆಸ್ ಗೆ ಜೀವ ತುಂಬಿ, ಹಳ್ಳಿ...
ಗೋಕರ್ಣದ ಸಮುದ್ರದಲ್ಲಿ ಮುಳುಗುತ್ತಿದ್ದ ಹುಬ್ಬಳ್ಳಿ ಹುಡುಗ, ತಕ್ಷಣವೇ ರಕ್ಷಿಸಿದ್ರು ಸ್ಥಳೀಯರು..!
ಗೋಕರ್ಣ: ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಲಾಗಿದೆ. ಕುಮಟಾದ ಗೋಕರ್ಣ ಕಡಲತೀರದಲ್ಲಿ ಘಟನೆ ನಡೆದಿದ್ದು,ರೋಹಿತ್ ಪಾಟೀಲ್(21) ರಕ್ಷಣೆಗೊಳಗಾದ ಪ್ರವಾಸಿಗನಾಗಿದ್ದಾನೆ. ಐವರು ಸ್ನೇಹಿತರು ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈಜಲು ಸಮುದ್ರಕ್ಕೆ ಇಳಿದಿದ್ದ ವೇಳೆ ರೋಹಿತ್ ಅಲೆಗಳಿಗೆ ಸಿಲುಕಿದ್ದ. ಈ ವೇಳೆ ಇನ್ನೇನು ಸಮುದ್ರ ಪಾಲಾಗುತ್ತಿದ್ದ ರೋಹಿತ್ ನನ್ನು ಸ್ಥಳೀಯರು, ಜೀವರಕ್ಷಕ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಬದುಕುಳಿದು ಬಂದ ಯುವಕ ಪ್ರಾಥಮಿಕ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಇಂದಿನಿಂದ ದೇವಿ ದರ್ಶನಕ್ಕೆ ಅವಕಾಶ..!
ಬೆಳಗಾವಿ: ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಇಂದಿನಿಂದ ಸಂಭ್ರಮ ಮತ್ತೆ ಶುರುವಾಗುತ್ತಿದೆ. ಬರೋಬ್ಬರಿ, ಒಂದೂವರೆ ವರ್ಷದ ನಂತರ ಭಕ್ತರ ದರ್ಶನಕ್ಕೆ ಯಲ್ಲಮ್ಮ ದೇವಸ್ಥಾನ ತೆರದುಕೊಳ್ಳುತ್ತಿದೆ. ಇಂದು ಮಂಗಳವಾರ ಬೆಳಿಗ್ಗೆ 6.30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನ ಓಪನ್ ಮಾಡಿದ ಆಡಳಿತ ಮಂಡಳಿ, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಭಕ್ತರ ಸ್ವಾಗತಕ್ಕೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಇಷ್ಟು ದಿನ, ಭಕ್ತರಿಲ್ಲದೇ ಭಣಗುಡುತ್ತಿದ್ದ ಏಳುಕೊಳ್ಳದಲ್ಲಿ ಭಕ್ತರ ಸಂಭ್ರಮ ಇಂದಿನಿಂದ ಕಳೆ ಕಟ್ಟಲಿದೆ. ಇನ್ನು, ಮಹಾರಾಷ್ಟ್ರ- ಕರ್ನಾಟಕ ಸೇರಿ ಹಲವು ಕಡೆಗಳಿಂದ ಭಕ್ತರ ದಂಡೇ ಆಗಮಿಸುವ ಸಾಧ್ಯತೆ ಇದ್ದು, ಕೊರೊನಾ ನಿಯಮದಂತೆ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರ ನಿಯಂತ್ರಣಕ್ಕೆ ಪೋಲಿಸ್ ಬಂದೋಬಸ್ತ್ ಮಾಡಿರುವ ಆಡಳಿತ ಮಂಡಳಿ ಸಂಪೂರ್ಣ ವ್ಯವಸ್ಥೆ ಮಾಡಿಕೊಂಡಿದೆ.
ಅತ್ತಿವೇರಿ ಬಳಿ, ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ, ಬೈಕ್ ನಿಂದ ಕೆಳಗೆ ಬಿದ್ದ ಸವಾರ ಗಂಭೀರ ಗಾಯ..!
ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ. ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮುಂಡಗೋಡಿನಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಯ್ತು ಭಾರತ್ ಬಂದ್..! ಎಂದಿನಂತೆ ಸಹಜ, ಸಹಜ..!!
ಮುಂಡಗೋಡ: ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್, ಮುಂಡಗೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು. ಬಿಟ್ಟರೆ, ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇತ್ತು. ಇಂದು ಬೆಳಗಿನಿಂದಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಓಪನ್ ಆಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಪ್ರಾರಂಭವಾಗಿತ್ತು. ಆಟೋ, ಬಸ್ ಗಳು ಎಂದಿನಂತೆ ರಸ್ತೆಗಿಳಿದಿದ್ದವು. ಆದ್ರೆ, ಇಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯುವಂತೆ ಮನವಿ ಪತ್ರ ನೀಡಿದ್ರು. ಕೆಲಹೊತ್ತು, ತಹಶೀಲ್ದಾರ್ ಕಚೇರಿ ಎದುರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಇನ್ನು, ಇಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೇಚ್ಚರ ವಹಿಸಿದ್ರು.
ಸಿದ್ದಾಪುರದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ; ಒಂದು ಲಾರಿ ವಶಕ್ಕೆ, ಮೂವರ ಮೇಲೆ ಕೇಸ್..!
ಸಿದ್ದಾಪುರ: ಸಿದ್ದಾಪುರದಲ್ಲಿ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ್ದ ಮೂವರು ಲಾರಿ ಸಮೇತ ಸಿಕ್ಕಿಬಿದ್ದಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ತುಂಬಿ ಸಾಗಣೆ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆಯಲಾಗಿದೆ. ಸಿದ್ದಾಪುರದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅನ್ನಭಾಗ್ಯದ ಅಕ್ಕಿಯನ್ನು ಸಿದ್ದಾಪುರ ಪಟ್ಟಣದ ಭಗತ್ ಸಿಂಗ್ ವೃತ್ತದ ಬಳಿ, ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ. ಪರಿಣಾಮ, ಅಂದಾಜು 1,73,952 ರೂಪಾಯಿ ಮೌಲ್ಯದ, 50 ಕೆಜಿ ತೂಕದ 163 ಚೀಲದ, 81.40 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನೂ ವಶಕ್ಕೆ ಪಡೆಯಲಾಗಿದ್ದು, ಬಾವ ಪಕೀರಸಾಬ ಅಮೀನಾ ಸರ್ಕಲ್ ಸಿದ್ದಾಪುರ, ಅರವಿಂದ ಶೇಷಗಿರಿ ಭಟ್ ಸಿದ್ದಾಪುರ, ಶ್ರೀನಿವಾಸ್ ಗೌಡ ಮೈಸೂರು ಅನ್ನೋ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ ಹೆಬ್ಬಾರ ಬಳಗ. ಮತ್ತೆ ಅದಕ್ಕೊಂದು ಪತ್ರಿಕಾ ಪ್ರಕಟಣೆ..! ಇಲ್ಲಿ, ಅಸಲೀ ಕತೆಯೇ ಬೇರೆ ಇದೆ. ಸಣ್ಣ ಸಂಗತಿಗಳಲ್ಲಿ ಸಂತೃಪ್ತಿ ಪಡೆಯುವ ಬದಲು, ಇಡೀ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ಬಿಜೆಪಿಯಲ್ಲಿ ಒಳಗೊಳಗೆ ಏನ್ ನಡೀತಿದೆ ಅನ್ನೋದರ ಒಂದಿಷ್ಟು ಅಸಲೀ ಸಂಗತಿಗಳ ಕಡೆ ಸಾಹೇಬ್ರು ಗಮನ ಕೊಡಬೇಕಿದೆ. ಯುವ ಶಕ್ತಿಗೆ ಬೆಲೆ ಕೊಡಿ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಒಳಗೊಳಗೇ ಕೊತ ಕೊತ...
ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!
ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.