ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..
Top Stories
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ
ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದಾರಾಗಿದ್ದಾರೆ. 2018ರಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿ ಪ್ರೇಕ್ಷಕರನ್ನು ಗಮನಸೆಳೆದ ಕೆಲವು ದಿನಗಳ ನಂತರ ಎನ್ನುವ ಸಿನಿಮಾದ ನಿರ್ದೇಶಕ ಶ್ರೀನಿ ಇದೀಗ ಹೊಸತೊಂದು ಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶ್ರೀನಿ ಭರವಸೆಯ ಯುವ ನಿರ್ದೇಶಕ ಎನ್ನುವುದನ್ನು ಕೆಲವು ದಿನಗಳ ನಂತರ ಸಿನಿಮಾದಲ್ಲಿ ಸಾಬೀತು ಮಾಡಿದ್ದಾರೆ, ಕಣ್ಣಿಗೆ ಕಟ್ಟುವ ಕಥೆಯನ್ನು ಸೃಷ್ಟಿ ಮಾಡುವುದರಲ್ಲಿ ಶ್ರೀನಿ ಎತ್ತಿದ ಕೈ ಹೊಸ ಆಲೋಚನೆಯ ಜೊತೆಗೆ ಭಿನ್ನತೆಯನ್ನು ಪ್ರೇಕ್ಷಕರಿಗೆ ನೀಡಬೇಕು ಎನ್ನುವ ಹಂಬಲ ಹೊತ್ತ ಭರವಸೆಯ ನಿರ್ದೇಶಕನ ಹೊಸ ಸಿನಿಮಾ ಅಂಬುಜದ ಪಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ. ಶುಭಾಪುಂಜಾ ಅಂಬುಜ ಚಿತ್ರದಲ್ಲಿ ಒಂದು ವಿಶೇಷ ಗೆಟಪ್ ನಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಲ್ಕಿದ್ದಾರೆ ಹಾಗೂ ಇವರ ಜೊತೆಗೆ ಪದ್ಮಜಾರಾವ್, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿಕಿಲಾಡಿ ನಿರ್ದೇಶಕ ಶರಣಯ್ಯ, ಸಂದೇಶ್ ಶೆಟ್ಟಿ ಅಜ್ರಿ, ಮಜಾಭಾರತದ...
ಅಗಡಿಯಲ್ಲಿ ತಮ್ಮ ನೆಚ್ಚಿನ ಹೋರಿಗೆ ಹುಟ್ಟು ಹಬ್ಬ ಆಚರಿಸಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.
ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್ ಭದ್ರಾಪುರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ. 1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡೀಸ್, ಕೇಂದ್ರ ಸಾರಿಗೆ, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸೋನಿಯಾ ಗಾಂಧಿ ಕುಟುಂಬದ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಂಗಳೂರು ಮಹಿಳೆಯ ದರೋಡೆ ಯತ್ನ ಕೇಸ್ ಅಸಲೀ ಅಲ್ಲ ಕಣ್ರಿ..! ಹಾಗಾದ್ರೆ ಏನದು..?
ಮಂಗಳೂರಿನಲ್ಲಿ ಮಹಿಳೆಯ ದರೋಡೆಗೆ ಯತ್ನ ಪ್ರಕರಣ ಅಸಲೀ ಅಲ್ಲ ಬದಲಾಗಿ ಮಂಗಳೂರು ಪೊಲೀಸರು ನಡೆಸಿದ ಅಣಕು ಪ್ರದರ್ಶನವಂತೆ. ಹಾಗಂತ, ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಇದು ನಿಜವಾದ ಘಟನೆ ಅಲ್ಲ, ಪೊಲೀಸ್ ಇಲಾಖೆಯಿಂದ ಮಾಡಲಾದ ಅಣಕು ಕಾರ್ಯಾಚರಣೆಯಂತೆ. ಇಂತಹ ಘಟನೆ ಆದಾಗ ಸಾರ್ವಜನಿಕರು ಹೇಗೆ ಪ್ರತಿಕ್ರಿಯಿಸುತ್ತಾರೆ..? ಪೊಲೀಸರು ಎಷ್ಟು ಬೇಗ ಸ್ಪಂಧಿಸುತ್ತಾರೆ..? ಈ ಎಲ್ಲದರ ಬಗ್ಗೆ ತಿಳಿದುಕೊಳ್ಳಲು ಮಾಡಲಾದ ಅಣಕು ಕಾರ್ಯಾಚರಣೆಯಾಗಿತ್ತು ಅಂತಾ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇತ್ತಿಚೆಗೆ ಇಂತಹ ಪ್ರಕರಣಗಳು ನಡೆಯುತ್ತಿವೆ. ಇದರ ಬಗ್ಗೆ ಜನರಿಗೆ ಅರಿವು ಬರಬೇಕು. ದಾಳಿಗೊಳಗಾದ ಸಂತ್ರಸ್ಥರು ದೈರ್ಯವಾಗಿ ಎದುರಿಸಬೇಕು. ಪೊಲೀಸರೂ ಕೂಡ ತಕ್ಷಣ ಪ್ರತಿಕ್ರಿಯಿಸಬೇಕು. ಈ ಎಲ್ಲಾ ಉದ್ದೇಶದಿಂದ ಆ ಅಣುಕು ಪ್ರದರ್ಶನ ಮಾಡಲಾಗಿದೆ ಅಂತಾ ಕಮೀಶನರ್ ತಿಳಿಸಿದ್ದಾರೆ. ಅಂದಹಾಗೆ, ಆ ದೃಶ್ಯದಲ್ಲಿರೋ ಮಹಿಳೆ ಸೌರಕ್ಷಾ ವುಮೆನ್ ಟ್ರಸ್ಟ್ ನ ಶೋಭಲತಾ ಕಟೀಲ್ ಎನ್ನುವವರಾಗಿದ್ದಾರೆ. **************** ಜಾಹೀರಾತು
ಹಾಡಹಗಲೇ ಮಹಿಳೆಯ ದರೋಡೆಗೆ ಯತ್ನ: ದರೋಡೆಕೋರರನ್ನು ಆ ಮಹಿಳೆ ಹೇಗೆ ಹಿಮ್ಮೆಟ್ಟಿಸಿದ್ರು ಗೊತ್ತಾ..?
ಮಂಗಳೂರಿನಲ್ಲಿ ಹಾಡುಹಗಲೇ ಮಹಿಳೆಯ ದರೋಡೆಗೆ ಯತ್ನಿಸಿದ ಭಯಾನಕ ಘಟನೆ ನಡೆದಿದೆ. ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಮಹಿಳೆಯ ಬ್ಯಾಗ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಬ್ಯಾಗ್ ಕಸಿಯಲು ಬಿಡದೆ ತನ್ನ ರಕ್ಷಣೆಗೆ ಮಹಿಳೆ ತಾನೇ ಮುಂದಾಗಿದ್ದಾರೆ. ದರೋಡೆಗಾಗಿ ಕಾರಿನಿಂದ ಇಳಿದ ವ್ಯಕ್ತಿಗೆ ಮಹಿಳೆಯೇ ಥಳಿಸಿ ಆತ್ಮರಕ್ಷಣೆ ಮಾಡಿಕೊಂಡಿದ್ದಾರೆ. ಆದರೂ, ಮಹಿಳೆಯನ್ನು ಬೀಳಿಸಿ ಬ್ಯಾಗ್ ಕಸಿಯಲು ಆರೋಪಿ ಯತ್ನಿಸಿ ವಿಫಲವಾಗಿದ್ದಾನೆ. ಮಹಿಳೆಯ ಪ್ರತಿರೋಧದಿಂದ ಬ್ಯಾಗ್ ಕಸಿಯಲು ಆಗದೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ದೃಷ್ಯಗಳೇಲ್ಲ ಸಿಸಿಟಿವಿ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ. ********************* ಜಾಹೀರಾತು
ನಂದಿಕಟ್ಟಾ ಪ್ಲಾಟ್ ನಲ್ಲಿ ಕುಡಿಯಲು ನೀರಿಲ್ಲ, ಗದ್ದೆಗಳಿಗೆ ಅಲೆದಾಡಿ ನೀರು ತರದೇ ಗತಿಯಿಲ್ಲ; ಎಲ್ಲಿದೆ ಆಡಳಿತ..?
ನಂದಿಕಟ್ಟಾ ಗ್ರಾಮದ ನವನಗರ ಪ್ಲಾಟ್ ನ ಜನರು ನಿತ್ಯವೂ ಪರದಾಡುತ್ತಿದ್ದಾರೆ. ಯಾಕಂದ್ರೆ, ಇವ್ರಿಗೆ ಕುಡಿಯಲು ನೀರೇ ಸಿಗುತ್ತಿಲ್ಲ. ನಿತ್ಯವೂ ಕುಡಿಯುವ ನೀರಿಗಾಗಿ ಮಕ್ಕಳು, ಮರಿಗಳೊಂದಿಗೆ ಕೊಡಹೊತ್ತು ಗದ್ದೆಗಳಲ್ಲಿ ತಿರುಗಾಡುವ ಪರಿಸ್ಥಿತಿ ಇಲ್ಲಿನ ಜನ್ರದ್ದು.. ಹೀಗಾಗಿ, ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸ್ತಿದಾರೆ ನಿವಾಸಿಗಳು. ಏನಿದು ಸಮಸ್ಯೆ..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾರ್ಡ ನಂಬರ್ 2 ರಲ್ಲಿ ಬರೋ ನವನಗರ ಪ್ಲಾಟ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ, ಪ್ರತಿದಿನ ಇಲ್ಲಿನ ಜನ ಬಹುತೇಕ ಪಕ್ಕದ ಗದ್ದೆಗಳ ಬೋರವೆಲ್ ಗಳಿಗೆ ಕುಡಿಯುವ ನೀರು ತರಲು ತಿರುಗಾಡುವ ಸ್ಥಿತಿ ಇದೆ. ಮಕ್ಕಳು ಮರಿಗಳೊಂದಿಗೆ, ಕೊಡ ಹೊತ್ತು ನೀರು ತರುವ ಭೀಕರತೆ ಇದೆ. ಹೀಗಾಗಿ, ಸದ್ಯ ಮಳೆಗಾಲ ಆಗಿರೋ ಕಾರಣಕ್ಕೆ ಜನ ಗದ್ದೆಗಳಿಗೆ ತೆರಳಿ ನೀರು ತರಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ಗದ್ದೆಯ ಮಾಲೀಕರು ನೀರು ಕೊಡದೇ ಇದ್ರೆ ಮುಗೀತು, ಮತ್ತೊಂದು ಗದ್ದೆಯ ಕಡೆಗೆ ತಿರುಗೋದು ಅನಿವಾರ್ಯವಾಗಿದೆ. ಹೀಗಾಗಿ ಮಕ್ಕಳು ಮರಿಗಳೊಂದಿಗೆ...
ಸಚಿವ ಹೆಬ್ಬಾರ್ ಅಂದ್ರೆ ರೈತರ ಪಾಲಿನ ಭಗೀರಥ: ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ
ಮುಂಡಗೋಡ; ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದ ರೈತರ ಮನಸಲ್ಲಿ ಭಗೀರಥರ ಸ್ಥಾನ ಪಡೆದಿದ್ದಾರೆ ಅಂತಾ ಹಿರಿಯ ಪತ್ರಕರ್ತ, ಸಂಪಾದಕ ಹರಿಪ್ರಕಾಶ್ ಕೋಣೆಮನೆ ಸಚಿವ ಹೆಬ್ಬಾರ್ ರವರನ್ನು ಹಾಡಿಹೊಗಳಿದ್ರು. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್ (ಸೆಲ್ಕೋ) ಸಂಸ್ಥೆಗಳು ನೀಡಿದ ಡಯಾಲಿಸಿಸ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಚಿವರ ಪ್ರಯತ್ನದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಇನ್ನು, ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಡಯಾಲಿಸಿಸ್ ವಾರ್ಡ್ ಅನ್ನು ನಿರ್ಮಾಣ ಮಾಡಿದ್ದು ಶ್ಲಾಘನೀಯ ಅಂತಾ ಮೆಚ್ಚುಗೆ ವ್ಯಕ್ತ ಪಡಿಸಿದ ಅವ್ರು, ಸಚಿವರ ಜನಪರ ನಿಲುವುಗಳನ್ನು ಕೊಂಡಾಡಿದರು. **************************** ಜಾಹೀರಾತು
ಸೈಕ್ಲಿಂಗ್ ಮಾಡುವಾಗಲೇ ಸಾವನ್ನಪ್ಪಿದ ಸೈಕ್ಲಿಸ್ಟ್..!
ಹುಬ್ಬಳ್ಳಿಯ ಸೈಕ್ಲಿಸ್ಟ್ ಒಬ್ಬರು ಸೈಕ್ಲಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿಗ್ಗಾಂವ ಸಮೀಪ ನಡೆದಿದೆ. ಬಸವಗೌಡ ಶಂಕರಗೌಡ ಶಿವಳ್ಳಿ (35) ಮೃತರಾಗಿದ್ದು, ಬಿವ್ಹಿಬಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಅಲ್ಲದೇ ಹಲವಾರು ವರ್ಷಗಳಿಂದ ಸೈಕ್ಲಿಸ್ಟ್ ಆಗಿದ್ದು, ವಿವಿಧ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದರು. ಇಂದು ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಶಿಗ್ಗಾಂವ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ******************* ಜಾಹೀರಾತು