ಶಿವರಾಮ್ ಹೆಬ್ಬಾರ್ ಅಸಲಿ ಆಟ ಶುರು, ಕಾಂಗ್ರೆಸ್ ಸೇರಲ್ವಂತೆ ಸಾಹೇಬ್ರು..!

ಶಿವರಾಮ್ ಹೆಬ್ಬಾರ್ ಅಸಲಿ ಆಟ ಶುರು, ಕಾಂಗ್ರೆಸ್ ಸೇರಲ್ವಂತೆ ಸಾಹೇಬ್ರು..!

ಇದು ನಿಜಕ್ಕೂ ಮುಂಡಗೋಡ ಯಲ್ಲಾಪುರ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾದ ಸುದ್ದಿ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸದ್ಯ ಕಾಂಗ್ರೆಸ್ ಸೇರೋದಿಲ್ಲ‌. ಬದಲಾಗಿ, ಹೆಬ್ಬಾರ್ ರವರ ಸುಪುತ್ರ ವಿವೇಕ್ ಹೆಬ್ಬಾರ್ ಇನ್ನೇನು ಕೆಲವೇ ದಿನಗಳಲ್ಲಿ ಕೈ ಹಿಡಿಯಲಿದ್ದಾರೆ ಅನ್ನೋದು ಕನ್ಪರ್ಮ್ ಆಗ್ತಿದೆ. ಈ ಮೂಲಕ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಅಕ್ಷರಶಃ ತಟಸ್ತರಾಗಿ ಕಮಲ ಪಾಳಯಕ್ಕೆ ಡಿಚ್ಚಿ ಕೊಡುವ ಎಲ್ಲಾ ತಯಾರಿ ಮಾಡಿಕೊಂಡಿದ್ದಾರಂತೆ ಹೆಬ್ಬಾರ್ ಸಾಹೇಬ್ರು..! ಹಳ್ಳಿ ಹಳ್ಳಿಗಳಲ್ಲೂ ಸಭೆ..! ಇಂತಹದ್ದೊಂದು ಕಾರ್ಯತಂತ್ರ ರೂಪಿಸಿಕೊಂಡಿರೋ ಶಿವರಾಮ್ ಹೆಬ್ಬಾರ್, ಸದ್ಯ ಇಡೀ ಯಲ್ಲಾಪುರ ಕ್ಷೇತ್ರದ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡ್ತಿದಾರೆ. ಜೊತೆಗೆ ತಮ್ಮ ಸುಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಚರ್ಚಿಸಿ, ತಮ್ಮ ಬೆಂಬಲಿಗರನ್ನು ಮಗನ ಜೊತೆ ಕಾಂಗ್ರೆಸ್ ಸೇರಲು ಸೂಚನೆ ನೀಡ್ತಿದಾರೆ ಅನ್ನೋ ಮಾಹಿತಿ ಬರ್ತಿದೆ. ಈ ಸಂಬಂಧ ಮುಂಡಗೋಡ ತಾಲೂಕಿನಲ್ಲೂ ಕಳೆದ ಹಲವು ದಿನಗಳಿಂದ ಕಾರ್ಯಕರ್ತರ ಸಭೆ ನಡೆಸ್ತಿದಾರೆ. ಇದ್ರಲ್ಲಿ ಈಗಾಗಲೇ ಬಹುತೇಕರು ಹೆಬ್ಬಾರ್ ರ ಕಾರ್ಯತಂತ್ರಕ್ಕೆ ಜೈ...

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೈ ಅಭ್ಯರ್ಥಿ ವಿನೋದ್ ಅಸೂಟಿಗೆ ಭವ್ಯ ಸ್ವಾಗತ..!

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೈ ಅಭ್ಯರ್ಥಿ ವಿನೋದ್ ಅಸೂಟಿಗೆ ಭವ್ಯ ಸ್ವಾಗತ..!

ಶಿಗ್ಗಾವಿ; ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾವಿಯಲ್ಲಿಂದು ಕಾಂಗ್ರೆಸ್ಸಿನ ಬೃಹತ್ ಶಕ್ತಿ ಪ್ರದರ್ಶನ ನಡೆಯಿತು. ಮೊದಲ ಬಾರಿಗೆ ಶಿಗ್ಗಾವಿಗೆ ಪ್ರಚಾರಕ್ಕೆಂದು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಿಗ್ಗಾವಿಯಲ್ಲಿರುವ ಮಹಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ವಿನೋದ ನಂತರ ವಿವಿಧ ದರ್ಗಾ ಹಾಗೂ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ನಡೆದ ಬಹಿರಂಗ ಸಭೆಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಂಸದ ಐ ಜಿ ಸನದಿ, ಪಠಾಣ, ಅನಿಲ ಪಾಟೀಲ, ಶಾಕೀರ ಸನದಿ, ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗಿದ್ದು, ಇಲ್ಲಿನ ಮತದಾರರು ಮತ ಹಾಕುವ ಮೂಲಕ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುತ್ತಾರೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

ಎದುರಾಳಿ ಬಿಜೆಪಿ ಮನೆ ಬಿಟ್ಟು, ನಮ್ಮ ಮನೆಗೆ ಬರುವವರನ್ನು ಸ್ವಾಗತಿಸೋಣ..!   ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸ್ವಾಗತ..!!

ಎದುರಾಳಿ ಬಿಜೆಪಿ ಮನೆ ಬಿಟ್ಟು, ನಮ್ಮ ಮನೆಗೆ ಬರುವವರನ್ನು ಸ್ವಾಗತಿಸೋಣ..! ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸ್ವಾಗತ..!!

ಮುಂಡಗೋಡ: ಚುನಾವಣೆಯೆಂಬ ಪರೀಕ್ಷೆ ಬಂದಿದೆ. ಎದುರಾಳಿ ಬಿಜೆಪಿ ಮನೆಯನ್ನ ಬಿಟ್ಟು ನಮ್ಮ ಮನೆಗೆ ಬರಲು ಹೊರಟಿರುವವರಿಗೆ ಸ್ವಾಗತ ಮಾಡಬೇಕಿದೆ. ಕಾಂಗ್ರೆಸ್ ಎಂಬುದು ದೊಡ್ಡ ಸಮುದ್ರ. ನಮಗೆ ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ. ಯಾವ ಟೈಮ್ ನಲ್ಲಿ ಯಾವ ಆಪರೇಷನ್ ಮಾಡಬೇಕೆಂಬುದೂ ನನಗೆ ಗೊತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಮುಂಡಗೋಡಿನಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ, ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುತ್ತೀರೆಂಬ ವಿಶ್ವಾಸವಿದೆ. ವಿವಿಧ ಧರ್ಮ- ಸಂಸ್ಕೃತಿಗಳಿದ್ದರೂ ಮುಂಡಗೋಡದಲ್ಲಿ ಎಲ್ಲರೂ ಒಂದಾಗಿ ಬಾಳುತ್ತಿದ್ದಾರೆ. ಕಾಂಗ್ರೆಸ್ ಎಂದರೆ ನನ್ನ ಕುಟುಂಬವಿದ್ದಂತೆ. ಇಲ್ಲಿ ಎಲ್ಲರ ಮಾತಿಗೂ ಬೆಲೆ ಇದೆ. ಪಕ್ಷ ನಿಮ್ಮ ಹಿಂದಿದೆ, ಕಾರ್ಯಕರ್ತರೂ ಪಕ್ಷದೊಂದಿಗೆ ಇರಬೇಕು. ಹಿಂದುಳಿದ ತಾಲೂಕು, ಜಿಲ್ಲೆಯ ಅಭಿವೃದ್ಧಿಗೆ ಸಂಸತ್ ನಲ್ಲಿ ಮಾತನಾಡಲು ಪಕ್ಷದ ಸಂಸದರು ಬೇಕೇ ಬೇಕು. ಇದಕ್ಕಾಗಿ ನನ್ನನ್ನ ನಿಮ್ಮ ಮನೆ ಮಗಳೆಂದು ಆಶೀರ್ವದಿಸಿ ಎಂದು ಮನವಿ ಮಾಡಿದರು. ಮಾಜಿ...

ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!

ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!

 ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು. ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ. ಕಾಂಗ್ರೆಸ್ ‌ನಿಂದ‌ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು ಅಸಮಾಧಾನದ ಕಾರಣ ಕಾಂಗ್ರೆಸ್ ಬಾಗಿಲು‌ ತಟ್ಟುತ್ತಿದ್ದಾರೆ. ಹೀಗಾಗಿ, ಹೆಬ್ಬಾರ್ ಕಾಂಗ್ರೆಸ್ ‌ಸೇರ್ಪಡೆಗೆ ಸದ್ದಿಲ್ಲದೇ ವಿರೋಧ ವ್ಯಕ್ತವಾಗಿದೆ. ಸಚಿವರು, ಶಾಸಕರು ಮಾತ್ರವಲ್ಲದೇ ಕಾರ್ಯಕರ್ತರಿಂದಲೂ ವಿರೋಧ ವ್ಯಕ್ತವಾಗಿದ್ದು, ಇಂದು ಶಿರಸಿಯಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದ್ದು, ಸಭೆಗೆ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೊಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ ಕೈ ಕಾರ್ಯಕರ್ತರು.

ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ‌ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?

ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ‌ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗುತ್ತಿದ್ದಂತೆ ಸಂಸದ, ಹಿಂದು ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ಕ್ಷೇತ್ರದ ಬೆಂಬಲಿಗರಿಗೆ, ಮತದಾರರಿಗೆ ಪತ್ರದ ಮೂಲಕ ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ. ಅನಂತಣ್ಣನ ಪತ್ರದ ಸಾರಾಂಶ..! ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು...

ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!

ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!

ಕೊನೆಗೂ ಅನಂತಕುಮಾರ್ ಹೆಗಡೆಯವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳು ಬಾರಿ ಗೆದ್ದು ಬೀಗಿದ್ದ ಅನಂತಣ್ಣನಿಗೆ ಬಿಜೆಪಿ ಠಕ್ಕರ್ ಕೊಟ್ಟಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಬಾರಿ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನು ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ ಕಾಗೇರಿ ಅವರು ಸೋಲುವಂತಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ. ವಿವಾದಾತ್ಮಕ ಹೇಳಿಕೆಗಳೇ ಮುಳುವಾಯ್ತಾ..? ಅಂದಹಾಗೆ, ಅನಂತಣ್ಣನಿಗೆ ಕ್ಷೇತ್ತದಲ್ಲಿ ಹಿಂದು ಫೈಯರ್ ಬ್ರ್ಯಾಂಡ್ ಹೆಸರಿದ್ದರೂ, ಬರೀ ವಿವಾದಾತ್ಮಕ ಹೇಳಿಕೆ ಮೂಲಕವೇ ಸುದ್ದಿಯಾಗುತ್ತಿದ್ದರು. ಹೀಗಾಗಿ, ಕಳದ ಮೂವತ್ತು ವರ್ಷಗಳ ಕಾಲ ಉತ್ತರ ಕನ್ನಡದ ಲೋಕಸಭಾ ಕ್ಷೇತ್ರದ ಅಧಿಪತಿಯಾಗಿ ಗೆದ್ದು ಬರುತ್ತಿದ್ದರು. ಬರೋಬ್ಬರಿ ಏಳು ಬಾರಿ ಈ ಕ್ಷೇತ್ರವನ್ನ ಪ್ರತಿನಿಧಿಸಿ...

ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ‌. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ ತೇಲುತ್ತಿರೊ ಶವದ ಗುರುತು ಪತ್ತೆಯಾಗಿಲ್ಲ. ಇದು ಆತ್ಮಹತ್ಯೆಯೊ ಅಥವಾ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯೋ ಪೊಲೀಸರ ತನಿಖೆ ನಂತರವಷ್ಟೆ ತಿಳಿದು ಬರಬೇಕಿದೆ.

ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ,   ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!

ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ, ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!

 ಯಲ್ಲಾಪುರ ತಾಲೂಕಿನ ಅರಬೈಲಿನಲ್ಲಿ ಬೆಳ್ಳಂ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಹಿತ್ತಲಿನ ಬಾವಿಯಲ್ಲಿ ಬಿದ್ದಿರೋ ಚಿರತೆ ಬಾವಿಯಿಂದ ಮೇಲೆ ಬರಲು ಪರದಾಡುತ್ತಿದೆ. ಆದ್ರೆ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ತಕ್ಷಣವೇ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದ್ರೆ, ಈ ವಿಷಯ ಯಾರಿಗೂ ಹೆಳಬೇಡಿ ಅಂತಾ ಮನೆಯವರಿಗೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರಂತೆ. ಅಂದಹಾಗೆ, ಯಲ್ಲಾಪುರ ತಾಲೂಕಿನ ಅರೆಬೈಲು ಗ್ರಾಮದ ಕೋವಿಂದ ನಾಯರ್ ಎಂಬುವವರ ಮನೆಯ ಬಾವಿಯಲ್ಲಿ ಘಟನೆ ನಡೆದಿದೆ. ಬಹುಶಃ ನಿನ್ನೆ ರಾತ್ರಿಯೇ ಮನೆಗೆ ದಾಳಿ ಇಟ್ಟಿರೋ ಚಿರತೆ, ಮನೆಯಲ್ಲಿನ ಬೆಕ್ಕಿನ ಮೇಲೆ ದಾಳಿ ಮಾಡಿ ಹಿಡಿದು ತಿಂದಿದೆ. ಬೆಕ್ಕಿನ ಮೇಲೆ ದಾಳಿ ಮಾಡುವ ವೇಳೆ ಆಯತಪ್ಪಿ ಬಾವಿಗೆ ಬಿದ್ದಿರಬಹುದು ಅಂತಾ ಅಂದಾಜಿಸಲಾಗಿದೆ. ಇನ್ನು, ಈ ಮನೆಯಲ್ಲಿ ಪತಿ,ಪತ್ನಿ ಇಬ್ಬರೇ ವಾಸವಾಗಿದ್ದು, ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಭಯಭೀತಗೊಂಡಿದ್ದಾರೆ. ತಕ್ಷಣವೇ ಚಿರತೆಯನ್ನು ರಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲು ಹಂಬಲಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ....

ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು ತಕ್ಷಣವೇ ವಾಹನದ ಮೂಲಕ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ  ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!

ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳ‌ರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ ರವೀಂದ್ರನಾಥ ನಾಯ್ಕ ಹಾಗೂ ಸಿದ್ದಾಪುರ ಮೂಲದ ಕಾರವಾರದಲ್ಲಿ ನ್ಯಾಯವಾದಿಗಳಾಗಿರೋ ಜಿ ಟಿ ನಾಯ್ಕ ಸೇರಿದಂತೆ ಪ್ರಮುಖರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.ಆದರೆ ಪಕ್ಷದ ಹೈಕಮಾಂಡ ಅಂಜಲಿ ನಿಂಬಾಳ್ಳರ್‌ ಅವರನ್ನ ಕಣಕ್ಕಿಳಿಸಿದೆ. ಸದ್ಯ ಕೆನರಾ ಲೋಕಸಭಾಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರೆ ಇರುವುದು ಅಭ್ಯರ್ಥಿಗೆ ಗೆಲುವಿನ ದಡ ಸೇರಿಸತ್ತಾ..? ಜೂನ್ 4 ರಂದೇ ತಿಳಿಯಲಿದೆ.

error: Content is protected !!