ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಮುಗಿದಿದೆ. ಇನ್ನು, ಎರಡನೇ ಹಂತದಲ್ಲಿ ಸಿದ್ದಾಪುರ, ಸಿರಸಿ, ಮುಂಡಗೊಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾಗಳಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮವನ್ನು ಕೈಗೊಂಡಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಅವಿರೋಧ ಆಯ್ಕೆ; ಹದ್ದಿನ ಕಣ್ಣು ಇನ್ನು, ನಾಮಪತ್ರ ಪರಿಶೀಲನೆ ನಂತರ ಒಂದು ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದಲ್ಲಿ ಚುನಾವಣೆಯ ಎಲ್ಲ ಪ್ರಕ್ರಿಯೆಗಳ ಮುಗಿದ ನಂತರ ಅವಿರೋಧ ಆಯ್ಕೆ ಮಾಡಲಾಗುತ್ತದೆ. ಆದರೆ ಚುನಾವಣಾ ಆಯೋಗವು ರಾಜ್ಯದ ಕೆಲವು ಭಾಗಗಳಲ್ಲಿ ಅವಿರೋಧ ಆಯ್ಕೆ ಸಂಬಂಧ ನಡೆಯುತ್ತಿರುವ ಎಲ್ಲಾ ಚಟುವಟಿಕೆಗಳನ್ನು...
Top Stories
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಗ್ರಾ.ಪಂ ಚುನಾವಣೆ; ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣು: ಡಿಸಿ ಡಾ.ಹರೀಶ್ ಕುಮಾರ್
ಹುನಗುಂದ ಬಳಿ ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಗಡಿ ಮಹಿಳೆ
ಮುಂಡಗೋಡ- ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ 108 ಅಂಬುಲೆನ್ಸ್ ನಲ್ಲಿಯೇ ಗರ್ಭಿಣಿಯೊಬ್ರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ಮುಂಡಗೋಡ ತಾಲೂಕಿನ ಅಗಡಿ ಗ್ರಾಮದ 22 ವರ್ಷ ವಯಸ್ಸಿನ ಲಕ್ಷ್ಮೀ ಸುನಿಲ್ ಲಮಾಣಿ ಎಂಬುವರಿಗೆ ಇವತ್ತು ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ 108 ಅಂಬುಲೆನ್ಸ್ ಮೂಲಕ ಮುಂಡಗೋಡ ಆಸ್ಪತ್ರೆಗೆ ಗರ್ಭಿಣಿಯನ್ನು ಸಾಗಿಸುವ ಮದ್ಯೆ ಹುನಗುಂದ ಕ್ರಾಸ್ ಬಳಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಇದು ಇವ್ರಿಗೆ ಎರಡನೇಯ ಹೆರಿಗೆಯಾಗಿದ್ದು ಮಗು ಆರೋಗ್ಯವಾಗಿದೆ.. ಈ ವೇಳೆ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸೂಕ್ತ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿಕೊಂಡರು.. ಚಾಲಕ ಭೀಮಪ್ಪ ಬಾರಕೇರ್, ಆಶಾ ಕಾರ್ಯಕರ್ತೆ ನೀಲವ್ವ ಲಮಾಣಿ ಇದ್ದರು.
ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್
ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು ನೀಡಿದ್ದರು.. ಹೀಗಾಗಿ ಕಾರ್ಯಾಚರಣೆಗಿಳಿದಿದ್ದ ಡಿವೈಎಸ್ಪಿ ವಿಜಯಕುಮಾರ್ ಮತ್ತು ಸಿಪಿಐ ಮಂಜಣ್ಣ ನೇತೃತ್ವದ ಕ್ರೈಂ ತಂಡ ಆರೋಪಿಯ ಹೆಡೆಮುರಿ ಕಟ್ಟಿದೆ.. ಅಂದಹಾಗೆ, ಮುಸುಕುದಾರಿಯಾಗಿ ಅತ್ಯಾಚಾರ ಎಸಗಿರೋ ಕಾಮುಕ ಆರೋಪಿ ತಸ್ಲೀಮ್ ಸೆರವಾಡ್, ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ.. ಹಾವೇರಿ ಸಿಟಿಯಲ್ಲಿ ಆಟೋ ಚಾಲಕನಾಗಿದ್ದ ಆರೋಪಿ ರಾತ್ರಿ ಸಮಯದಲ್ಲಿ ಆಟೋ ಚಾಲನೆ ಮಡುತ್ತಿದ್ದ.. ಈ ವೇಳೆ ಅನಾಥ ಬುದ್ದಿಮಾಂದ್ಯ ಮಹಿಳೆಯನ್ನ ಕಂಡು ಊಟ...
ನಾಳೆಯೂ ಬಸ್ ಗಳು ರಸ್ತೆಗಿಳಿಯಲ್ಲ; ಕುಟುಂಬಸ್ಥರೊಂದಿಗೆ ಪ್ರತಿಭಟನೆಗೆ ಸಜ್ಜಾದ ಸಾರಿಗೆ ನೌಕರರು
ಬೆಂಗಳೂರು- ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣ್ತಿವೆ.. ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಅಂತಾ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸ್ತಿರೋ ಸಾರಿಗೆ ಸಂಸ್ಥೆಯ ಚಾಲಕರು ಹಾಗೂ ನಿರ್ವಾಹಕರು ಎರಡು ದಿನದಿಂದ ಯಾವುದೇ ಸರ್ಕಾರಿ ಬಸ್ ಗಳನ್ನು ರಸ್ತೆಗಿಳಿಸಿಲ್ಲ.. ಪರಿಣಾಮ ನಿನ್ನೆಯಿಂದ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಇನ್ನು, ಸರ್ಕಾರ ಪ್ರತಿಭಟನಾನಿರತರ ಜೊತೆಗೆ ನಡೆಸುತ್ತಿರೊ ಸಂಧಾನಗಳು ಯಶಸ್ವಿಯಾಗಿಲ್ಲ.. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ ಮೇಲಂತೂ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ಪ್ರಬಲವಾಗಿದೆ.. ಇನ್ನು, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಾಳೆಯೂ ಮುಷ್ಕರ ಮುಂದುವರೆದ್ರೆ ಖಾಸಗಿ ಚಾಲಕರನ್ನು ಕರೆತಂದು ಬಸ್ ಓಡಿಸುವುದಾಗಿ ತಿಳಿಸಿದ್ದಾರೆ.. ಹೀಗಾಗಿ, ಮತ್ತಷ್ಟು ಕೆರಳಿರೋ ಪ್ರತಿಭಟನಾಕಾರರು, ನಾಳೆ ತಮ್ಮ ಕುಟುಂಬಗಳೊಂದಿಗೆ ಪ್ರತಿಭಟನೆ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.. ಅಲ್ದೇ ನಾಳೆ ಬೆಳಿಗ್ಗೆ 10 ಗಂಟೆಗೆ ಮತ್ತೊಮ್ಮೆ ಸಭೆ ಕರೆದಿರೋ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಂದು ಸಂಧಾನದ ಸೂತ್ರ ಹೆಣೆದಿದ್ದಾರೆ.. ಸರ್ಕಾರಿ ನೌಕರಿ ಅಂತಾ ಪರಿಗಣಿಸೋ...
ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮುಂಡಗೋಡ- ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ 108 ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರೋ ಘಟನೆ ಮಳಗಿ ಸಮೀಪ ಶಿರಸಿ ರಸ್ತೆಯಲ್ಲಿ ನಡೆದಿದೆ.. ಗೋಟಗೋಡಿಕೊಪ್ಪದ ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಗೊಟಗೋಡಿಕೊಪ್ಪದಿಂದ ಶಿರಸಿ ಗೆ ಹೋಗುವ ಮಾರ್ಗ ಮದ್ಯೆ ಹೆರಿಗೆಯಾಗಿದ್ದು ತಾಯಿ ಮಗು ಆರೋಗ್ಯವಾಗಿದೆ..
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ
ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ ಬಣವೆಯನ್ನು ಒಟ್ಟಲಾಗಿತ್ತು. ಕಳೆದ ಬುಧವಾರ ರಾತ್ರಿ ಸಮಯದಲ್ಲಿ ಕಾಡಾನೆಗಳು ದಾಳಿ ಮಾಡಿ ಕಾಳಿನ ಭತ್ತದ ಬಣವೆಯನ್ನು ಹಾಗೂ ಭತ್ತದ ರಾಶಿಯನ್ನು ತಿಂದು ತುಳಿದು ಹಾಳು ಮಾಡಿದ್ದನ್ನು ಕಂಡ ರೈತ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ತನ್ನ ಹೊಲದ ಅಂಚಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ರೈತನ ಪತ್ನಿ ವಿಜಯಾ ಕೊರ್ಸಿ ಮುಂಡಗೋಡ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ....
ಕಾಲುವೆಯಲ್ಲೂ ಅಕ್ರಮದ ವಾಸನೆ.?; ತನಿಖೆ ಕೋರಿ ತಹಶೀಲ್ದಾರರಿಗೆ ಅಟ್ಟಣಗಿ ಗ್ರಾಮಸ್ಥರ ಮನವಿ
ಮುಂಡಗೋಡ-ತಾಲೂಕಿನ ಅಟ್ಟಣಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯವರು ಕೈಗೊಂಡ ಕಾಲುವೆ ಕಾಮಗಾರಿ ಕಳಪೆಯಾಗಿದೆ, ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಬೇಕೆಂದು ಅಟ್ಟಣಗಿ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ನಾಗನೂರ( ಹನುಮಾಪುರ) ಗ್ರಾಮ ಪಂಚಾಯತ ವ್ಯಾಪ್ತಿಯ ಅಟ್ಟಣಗಿ ಕೆರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಈ ಕಾಮಗಾರಿ ಅಂದಾಜು ಮೊತ್ತ 50 ಲಕ್ಷ ಇದ್ದು ಕಾಮಗಾರಿ ಸಂಪೂರ್ಣ ಕಳಪೆ ಮಾಡಿದ್ದಾರೆ. ಈ ಕಾಮಗಾರಿಯಿಂದ ಅಟ್ಟಣಗಿ ಭಾಗದ ಸುಮಾರು 400 ರಿಂದ 500 ಎಕರೆ ಜಮೀನಿಗೆ ನೀರು ಹಾಯಲು ಈ ಕಾಲುವೆ ಕಾಮಗಾರಿ ಮಾಡಬೇಕಾಗಿತ್ತು. ಗುತ್ತಿಗೆದಾರ ರಾಘವೇಂದ್ರ ಮೂಲಿಮನಿ ಅವರಿಗೆ ಈ ಕಾಮಾಗಾರಿ ಟೆಂಡರ್ ಆಗಿತ್ತು, ಆದ್ರೆ ಸಹ ಗುತ್ತಿಗೆದಾರರು ಸೇರಿ ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೇ 50 ಲಕ್ಷ ರೂಪಾಯಿ ಕಾಮಗಾರಿಯನ್ನು ಕೇವಲ 5 ಲಕ್ಷಕ್ಕೆ ಮುಗಿಸಿದ್ದಾರೆ. 6-8 ದಿನಕಾಲ ಜೆ.ಸಿಬಿ ಯಂತ್ರದಿಂದ ಕಳಪೆ ಕಾಮಗಾರಿ ಮಾಡಿ 42 ಲಕ್ಷದ ಬಿಲ್ ಪಡೆದಿದ್ದಾರೆ ಅಂತಾ ಆರೋಪಿಸಿರೋ ಗ್ರಾಮಸ್ಥರು, ಅಧಿಕಾರಿಗಳು ಹಾಗೂ ಇಂಜಿನಿಯರ್ ಎಲ್ಲಾ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಸಿಡ್ಲಗುಂಡಿಯಲ್ಲಿ 1 ಎಕರೆ ಕಬ್ಬು ಭಸ್ಮ
ಮುಂಡಗೋಡ- ಗದ್ದೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ, 1 ಎಕರೆ ಕಬ್ಬು ಸುಟ್ಟು ಕರಕಲಾದ ಘಟನೆ ತಾಲೂಕಿನ ಸಿಡ್ಲಗುಂಡಿಯಲ್ಲಿ ನಡೆದಿದೆ.. ಸಿಡ್ಲಗುಂಡಿಯ ರೈತ ಶಾಮು ದಾಕ್ಲು ಶಿಂಧೆ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯ ಮೇಲೆ ಹಾದು ಹೋಗಿರೋ ಕೆಇಬಿ ವಿದ್ಯತ್ ಕಂಬದ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕಿಡಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.. ಘಟನೆಯಲ್ಲಿ ಸುಮಾರು 1 ಲಕ್ಷ ಮೌಲ್ಯದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯವಾಗಿದೆ.. ಹೀಗಾಗಿ ಸುಮಾರು 2 ಲಕ್ಷ ರೂ. ಮೌಲ್ಯದ ಕಬ್ಬಿನ ಬೆಳೆ ರಕ್ಷಿಸಲಾಗಿದೆ.. ಮುಂಡಗೋಡ ಅಗ್ನಿಶಾಮಕ ಠಾಣಾಧಿಕಾರಿ ನಾರಾಯಣ ತಳೇಕರ್, ಸಿಬ್ಬಂದಿಗಳಾದ ಅಭಿ ಕುರುವಿನಕೊಪ್ಪ, ಮಂಜುನಾಥ ಪಟಗಾರ, ಗುರುಪ್ರಸಾದ್, ಪರಶುರಾಮ, ಮಾಲತೇಶ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು..
ಗ್ರಾಮ ಪಂಚಾಯತಿ ಚುನಾವಣೆ ಸಚಿವ ಹೆಬ್ಬಾರಗೆ ಪ್ರತಿಷ್ಠೆ..! ಕಾಂಗ್ರೆಸ್ಸಿಗೆ ಆಕ್ಸಿಜನ್..?
ಮುಂಡಗೋಡ- ಸದ್ಯ ಗ್ರಾಮ ಪಂಚಾಯತಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ.. ಹೀಗಾಗಿ ತಾಲೂಕಿನಾಧ್ಯಂತ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.. ಅಧಿಕೃತ ಪಕ್ಷದ ಚಿನ್ಹೆಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸದೇ ಇದ್ದರೂ, ಆಯಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸೋದಂತೂ ಸತ್ಯ.. ಅದ್ರಲ್ಲೂ ಮುಂಡಗೋಡ ತಾಲೂಕಿನ ಅಷ್ಟೂ ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲೇ ಬೇಕು, ಸಂಪೂರ್ಣ ಗ್ರಾಮ ಪಂಚಾಯತಿಗಳು ಕೇಸರಿಮಯವಾಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿರೋ ಹೆಬ್ಬಾರ್ ಪಡೆಗೆ ತಾಲೂಕಿನಲ್ಲಿ ಒಂದಿಷ್ಟು ಪಕ್ಷದ ತಳಮಟ್ಟದ ಗೊಂದಲಗಳು ತೊಡರಾಗೋದು ಗ್ಯಾರಂಟಿ.. ಮೂಲ- ವಲಸಿಗರ ಕಿತ್ತಾಟ ಅಸಲು, ಮುಂಡಗೋಡ ತಾಲೂಕಿನ ಬಿಜೆಪಿಯಲ್ಲಿ ಮೂಲ ವರ್ಸೆಸ್ ವಲಸಿಗರ ಕಿತ್ತಾಟ ಒಳಗೊಳಗೆ ಕುದಿಯುತ್ತಿರೋದು ಬಹಿರಂಗ ಸತ್ಯ.. ಅದ್ರಲ್ಲೂ ಕೆಲವು ಹಳ್ಳಿಗಳಲ್ಲಿ ತಲತಲಾಂತರದಿಂದ ಹಾವು ಮುಂಗುಸಿಯಂತಿದ್ದ ಕಾಂಗ್ರೆಸ್ ಬಿಜೆಪಿ ತಳಮಟ್ಟದ ಕಾರ್ಯಕರ್ತರು ಅಂತಹದ್ದೊಂದು ಜಿದ್ದನ್ನು ಇವತ್ತಿಗೂ ಉಳಿಸಿಕೊಂಡೇ ಬಂದಿದ್ದಾರೆ.. ಅಂತದ್ದರಲ್ಲಿ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ನಿಂದ ಬಿಜೆಪಿಗೆ ಏಕಾಏಕಿ ಜಂಪ್ ಆದಮೇಲೂ ಅವರನ್ನೇ ನಂಬಿದ್ದ...
ಲೆಫ್ಟಿನೆಂಟ್ ಅಭಯ್ ಪಂಡಿತ್ ಸಾಧನೆ; ಕನಸಿನ ಮುಂಡಗೋಡ ತಂಡದಿಂದ ಸನ್ಮಾನ
ಮುಂಡಗೋಡ- ಮುಂಡಗೋಡಿನ ಯುವಕ ಅಭಯ್ ಪಂಡಿತ್ ಚೆನ್ನೈನ ಭಾರತೀಯ ಸೇನೆಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ನವೆಂಬರ್ 21 ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಸಾಧನೆಗೈದಿದ್ದಾರೆ. ಮುಂದೆ ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸಲು ಹೊರಟಿದ್ದಾರೆ. ಈ ಮೂಲಕ ಮುಂಡಗೋಡಿನ ಮೊದಲ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ನಮ್ಮ ಕನಸಿನ ಮುಂಡಗೋಡ ವೇದಿಕೆ ವತಿಯಿಂದ ಲೆಫ್ಟಿನೆಂಟ್ ಅಭಯ್ ಪಂಡಿತ್ ಅವರಿಗೆ ಮುಂಡಗೋಡಿನ ಪರವಾಗಿ ಅಭಿನಂದಿಸಿ ,ಗೌರವಿಸಲಾಯಿತು.