ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

 ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು ಹರಿಸಿದವನ್ನ ಅಕ್ಷರಶಃ ಮೂಲೆಗುಂಪು ಮಾಡಲಾಗ್ತಿದೆ ಅಂತಾ ಆರೋಪಿಸಿರೋ ಸಂತೋಷ ರಾಯ್ಕರ್, ಸಚಿವ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಗಳಿಗೆಯಿಂದಲೇ ಇಲ್ಲಿನ ಬಿಜೆಪಿಯ ಮೂಲ ಕುಳಗಳಿಗೆ ಇನ್ನಿಲ್ಲದ ಬೇಸರ ಉಂಟಾಗಿದೆ. ನಮಗೆ ಉಸಿರಾಡಲೂ ಸಾಧ್ಯವಾಗಿಲ್ಲ. ಹೀಗಾಗಿ ನಾನು ಬಿಜೆಪಿ ಪಕ್ಷ ತೊರೆಯುತ್ತಿದ್ದೇನೆ, ಈ ಮೂಲಕ ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಏನಿಲ್ಲವೆಂದ್ರೂ 25 ರಿಂದ 30...

ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!

ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!

ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು ಒಪ್ಪಿಸಿದ್ದಾರೆ.

ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?

ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?

ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇ‌ಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ‌. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ ಅಕ್ಕಿಯ ಕಾಳುಗಳು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಬಡವರು ಈ ಸಾರಿ ಪಡಿತರ ಅಂಗಡಿಗಳಲ್ಲಿ ಪಡೆದಿರೋ ಅಕ್ಕಿಯನ್ನು ಊಟ ಮಾಡಲು ಹಿಂದೇಟು ಹಾಕುವಂತಾಗಿದೆ. ವಿಚಿತ್ರವಾಗಿದೆ ಅಕ್ಕಿ ಕಾಳು..! ಅಸಲು, ಈ ಸಾರಿ ಸರ್ಕಾರ ನೀಡಿರೋ ಪಡಿತರ ಅಕ್ಕಿಯಲ್ಲಿ ಪತ್ತೆಯಾಗಿರೋ ವಿಚಿತ್ರ ಮಾದರಿಯ ಅಕ್ಕಿ ಕಾಳು ನೀರಲ್ಲಿ ಹಾಕಿದ್ರೆ ಮಂಡಕ್ಕಿ ಹಾಗೆ ಉಬ್ಬಿಕೊಳ್ಳತ್ತೆ. ತಿನ್ನಲು ಯೋಗ್ಯವಾಗಿಲ್ಲ ಅಂತಿದಾರೆ ಜನ. ಹೀಗಾಗಿ, ಪಡಿತರ ಅಕ್ಕಿಯನ್ನೇ ನಂಬಿಕೊಂಡು...

ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!

ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!

ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು‌. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ ಚಲವಾದಿ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ತಳವಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪಾಟೀಲ್,ವಿಠ್ಠಲ್ ಬಾಳಂಬೀಡ , ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ. ಭುಜಂಗಿ, ಪಟ್ಟಣ ಪಂಚಾಯತ್ ಸದಸ್ಯ ಶ್ರೀಕಾಂತ್ ಸಾನು, , ಮುಖಂಡರಾದ ಉಮೇಶ್ ವಿಜಾಪುರ, ಸಂಜು ಪಿಸೆ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರು ಹಾಗೂ ಪಕ್ಷದ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗುರುರಾಜ ಕಾಮತ್, ಮುಂತಾದವರಿದ್ದರು.

ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!

ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!

ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ, ಅಂತವರ ಕಷ್ಟಗಳಿಗೆ ಒಂದಿಷ್ಟು ಆಸರೆ ಒದಗಿಸಲು ಭಿಕ್ಷೆಗೆ ಇಳಿದಿದ್ದಾರೆ ಯುವಕರು. “ಭವತಿ ಭಿಕ್ಷಾಂದೇಹಿ” ಅಂತಾ ಹಲವು ಪಟ್ಟಣ, ನಗರಗಳ ಗಲ್ಲಿ ಗಲ್ಲಿಗಳಲ್ಲಿ ತಿರುಗಿ ಭಿಕ್ಷೆ ಬೇಡಿ ಹಣ ಕೂಡಿಸಿದ್ದಾರೆ‌. ಹಾಗೆ ಬಂದ ಹಣದಿಂದ ನೊಂದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾರೆ. ವಿಶೇಷ ವೇಷ..! ನಿಜ, ಈ ಯುವಕರ ದಿಟ್ಟತನ ನಿಜಕ್ಕೂ ಮೆಚ್ಚುವಂತದ್ದು, ಯಾಕಂದ್ರೆ ಬಿರು ಬಿಸಿಲಿನಲ್ಲೂ ನೊಂದವರ ಕಣ್ಣಿರು ಒರೆಸಲು, ವಿಶೇಷ...

ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!

ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಕಲ್ಲಿನಿಂದ ಜಜ್ಜಿ ಅಣ್ಣ ಹಾಗೂ ತಂಗಿಯ ಬರ್ಭರ ಹತ್ಯೆ ಮಾಡಿರೊ ಘಟನೆ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕರಗೌಡ ಬಿರಾದಾರ್ (40), ನಾನಾಗೌಡ ಯರಗಲ್ (45) ಕೊಲೆಗೀಡಾದ ಅಣ್ಣ ಹಾಗೂ ತಂಗಿಯಾಗಿದ್ದಾರೆ. ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ‌. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ 4 ದಿನಗಳ ಕಾಲ ಬಾರೀ ಮಳೆ‌ ಮುನ್ಸೂಚನೆ..!

ಮುಂದಿನ 4 ದಿನಗಳ ಕಾಲ ಬಾರೀ ಮಳೆ‌ ಮುನ್ಸೂಚನೆ..!

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ‌. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್‌ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು ಒಳ ನುಗ್ಗಿದ್ದ ಖದೀಮರು, ಅಂಗಡಿಯಲ್ಲಿದ್ದ ರೇಶನ್, ಪ್ರಿಡ್ಜ್, ಸೇರಿ ಅಂದಾಜು 63,465 ರೂಪಾಯಿ ಬೆಲೆಯ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ರು. ಹೀಗಾಗಿ ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಉತ್ತರ ಕನ್ನಡ ಎಸ್ಪಿ ಡಾ.ಸುಮನ್ ಪೆನ್ನೇಕರ್ ಮಾರ್ಗದರ್ಶನದಲ್ಲಿ ಮುಂಡಗೋಡಿನ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!

ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ.. ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು ನಡುವಿನ ಅರಣ್ಯ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ. ಮೇ 23ರಿಂದ 29ರವರೆಗೆ ನಾಲ್ಕು ಪ್ರದೇಶಗಳಲ್ಲಿ ಫೋನ್ ಆಕ್ಟಿವ್ ಆಗಿದ್ದು, 6 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಲ್ಲಿ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಸಂಪರ್ಕ ಸಾಧಿಸಿದ್ದಾರೆ ಎಂದು ಬೇಹುಗಾರಿಕಾ ಏಜೆನ್ಸಿ ಫೋನ್ ಲೊಕೇಷನ್ ಟ್ರೇಸ್ ಮಾಡಿದೆ.

ಸಚಿವ ಶಿವರಾಮ್ ಹೆಬ್ಬಾರ್ ಗೆ ಜನ್ಮ ದಿನದ ಶುಭಾಶಯಗಳು

ಸಚಿವ ಶಿವರಾಮ್ ಹೆಬ್ಬಾರ್ ಗೆ ಜನ್ಮ ದಿನದ ಶುಭಾಶಯಗಳು

ಜಾಹೀರಾತು ಯಲ್ಲಾಪುರ ಕ್ಷೇತ್ರದ ಜನಪ್ರಿಯ ಶಾಸಕರು, ಕಾರ್ಮಿಕ ಸಚಿವರು ಶಿವರಾಮ್ ಹೆಬ್ಬಾರ್ ಇಂದು ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಹೀಗಾಗಿ, ಅಭಿಮಾನಿಗಳು ನಿನ್ನೆಯಿಂದಲೇ ಶುಭಾಶಯಗಳ ಸುರಿಮಳೆ ಸುರಿಸ್ತಿದಾರೆ. ಅದ್ರಂತೆ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಆದ ಹಾಗೂ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ಶುಭಾಶಯ ಕೋರಿದ್ದಾರೆ.  

error: Content is protected !!