ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು ಬದಲಾವಣೆ ಆಗಬೇಕು..? ಇದೇಲ್ಲ ನೂತನ ಪಿಐ ಸಾಹೇಬ್ರು ಗಮನಿಸಲೇಬೇಕಿದೆ. ಇದು FIR..! ಬರಮಪ್ಪ ಲೋಕಾಪುರ, ಈಗಷ್ಟೆ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿಕೊಂಡು ಬಂದಿರೋ ಪಿಐ. ಸದ್ಯ ಮುಂಡಗೋಡಿಗೆ ವರ್ಗವಾಗಿ ಬಂದಿದ್ದಾರೆ. ಹೀಗಾಗಿ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಜವಾಬ್ದಾರಿ ವಹಿಸಿಕೊಂಡ ಸಾಹೇಬ್ರಿಗೆ ಇಲ್ಲಿನ ಕೆಲವೊಂದಿಷ್ಟು ಒಳ ಹೊರಗಿನ ಮಾಹಿತಿಗಳನ್ನು ನೀಡಲೇ ಬೇಕಿದೆ. ತಾಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೂತನ ಪಿಐ ಸಾಹೇಬ್ರು...
Top Stories
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!
ಮುಂಡಗೋಡ ಪಟ್ಟಣದ ಹಳೂರು ಓಣಿಯಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ನೊಂದವರಿಗೆ ಪರಿಹಾರ ವಿತರಿಸಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 7 ಜಾನುವಾರುಗಳು ಸಜೀವ ದಹನಗೊಂಡ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕರಿಗೆ ಶಾಸಕ ಶಿವರಾಮ್ ಹೆಬ್ಬಾರ್ ಚೆಕ್ ವಿತರಿಸಿದ್ರು. ಅಂದಹಾಗೆ, ಬುಧವಾರ ಬೆಳಿಗ್ಗೆ ಹಳೂರಿನ ಹಸುಗಳ ಮಾಲೀಕ ಮಂಜುನಾಥ್ ಶೇಟ್ ಮನೆಗೆ ತೆರಳಿದ ಶಾಸಕರು, ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿ..! ಹೊಸ ಸಿಪಿಐ ಯಾರು ಗೊತ್ತಾ..?
ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿಯಾಗಿದ್ದಾರೆ. ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಆಗಮಿಸುತ್ತಿದ್ದಾರೆ. ಹಾಗಂತ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಮುಂಡಗೋಡ ಲೊಯೋಲಾ ಶಾಲೆಯಲ್ಲಿ ಪಾಲಕ ಸಂತ ಇಗ್ನಾಶಿಯಸ್ ರವರ ಸಂಭ್ರಮದ ಮಹೋತ್ಸವ..!
ಮುಂಡಗೋಡ: ಲೊಯೋಲ ಶಿಕ್ಷಣ ಸಂಸ್ಥೆಯ ಲೊಯೋಲ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಸಂತ ಇಗ್ನಾಶಿಯವರ ಮಹೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ಮಾತನಾಡುತ್ತ, ಈ ಶಿಕ್ಷಣ ಸಂಸ್ಥೆ ಮುಂಡಗೋಡ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದೆ. ಇಂಥಾ ಶಾಲೆಯಲ್ಲಿ ಓದಿದ ನೀವು ಧನ್ಯರು .ಸಾಧನೆ ಮಾಡಲು ನನಗೆ ಈ ಶಾಲೆಯ ವೇದಿಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂಬುದರ ಬಗ್ಗೆ ಪ್ರೌಢಿಮೆ ಇರಬೇಕು ಎಂದರು. ಲಯೋಲದ ಶಿಸ್ತು -ಶಿಕ್ಷಣ- ಸಂಸ್ಕಾರ ವನ್ನು ಕಾರ್ಯಕ್ರಮದ ಅಚ್ಚುಕ್ಕಟ್ಟಿನ ತಯಾರಿಯಿಂದ ಗೊತ್ತಾಗುತ್ತದೆ ಹಾಗೂ ಇನ್ನೊಬ್ಬರಿಗೆ ಮಾದರಿಯಾಗಿದೆ ಅಂತಾ ಶ್ಲಾಘಿಸಿದ್ರು. ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಅಥ್ಲೀಟ್ಸ್ ವಿಭಾಗದಲ್ಲಿ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿನಿ ಕು.ನಯನ ಕೊಕರೆ ಇವರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಮುಂದಿನ ಕ್ರೀಡಾ ಭವಿಷ್ಯಕ್ಕೆ ಶುಭ ಕೋರಲಾಯಿತು. ತಾಲೂಕಿನಲ್ಲಿ ಶಾಲೆಯು ಶೈಕ್ಷಣಿಕ ಚಟುವಟಿಕೆ ಹಾಗೂ ಶೈಕ್ಷಣಿಕೇತರ ಚಟುವಟಿಕೆಗೂ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಬ್ರೀಜಸ್ ಆಫ್ ಸ್ಪೋರ್ಟ್ಸ್ ಸಂಸ್ಥೆಯೊಂದಿಗೆ ಅನ್ಯೋನ್ಯತೆ ಹೊಂದಿರುವ...
ಉಗ್ನಿಕೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಉಗ್ನಿಕೇರಿಯ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಾಮು ಮಾಕು ಕೊಕರೆ (23) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ವಿಷ ಸೇವಿಸಿ ನರಳುತ್ತಿದ್ದ ವೇಳೆ ತಕ್ಷಣವೇ ಕುಟುಂಬಸ್ಥರು 108 ಅಂಬ್ಯಲೆನ್ಸ್ ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಆಗಮಿಸಿದ ಅಂಬ್ಯಲೆನ್ಸ್ ಸಿಬ್ಬಂದಿ ಧನರಾಜ್ ಹಾಗೂ ಚಾಲಕ ವಿಜಯ್ ಪಾಟೀಲ್ ಯುವಕನಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಗೊಟಗೋಡಿಕೊಪ್ಪದಲ್ಲಿ ಹಾಡಹಗಲೇ ತಾಯಿ ಮಗಳ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ..!
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ತಾಯಿ ಮಗಳ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆಯಾಗಿದೆ. ಖುದ್ದು ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಎರ್ರಾಬಿರ್ರಿ ಕೊಚ್ಚಿದ್ದಾನೆ ಅನ್ನೋ ಅರೋಪ ಕೇಳಿ ಬಂದಿದೆ, ಅಕ್ಷರಶಃ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಟಗೋಡಿಕೊಪ್ಪದ ಹೊನ್ನಮ್ಮ ಬಸವರಾಜ್ ಚಿನ್ನಳ್ಳಿ ಹಾಗೂ ಮಗಳು ಅನ್ನಪೂರ್ಣ ಎಂಬುವವರೇ ಕುಡುಗೋಲಿನಿಂದ ಹಲ್ಲೆಗೆ ಒಳಗಾದವರಾಗಿದ್ದಾರೆ. ಘಟನೆ ಏನು..? ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪದಲ್ಲಿ ಅನ್ನಪೂರ್ಣ ಎಂಬುವ ಯುವತಿಯನ್ನು ಅದೇ ಗ್ರಾಮದ ನಾಗರಾಜ್ ವಡಲಣ್ಣವರ್ ಎಂಬುವ ಯುವಕನಿಗೆ ಕಳೆದ 10 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಆದ್ರೆ ಮದುವೆ ಆದಾಗಿನಿಂದ ಗಂಡನ ಕಿರುಕುಳ ವಿಪರೀತವಾಗಿತ್ತಂತೆ. ನಿತ್ಯವೂ ಕುಡಿದು ಬಂದು ಪತ್ನಿಯನ್ನು ಹೊಡೆಯುವ ಹೀನ ಚಾಳಿಯಿತ್ತಂತೆ. ಇದರ ನಡುವೆಯೇ ಅದು ಹೇಗೋ ಹೊಂದಿಕೊಂಡು ಸಂಸಾರ ಮಾಡಿದ್ದರ ಫಲವಾಗಿ ಇಬ್ಬರು ಮುದ್ದಾದ ಗಂಡು ಮಕ್ಕಳು ಹುಟ್ಟಿದ್ದಾರೆ. ಆದ್ರೆ, ಇದರ ಮೇಲೆಯೂ ಗಂಡನ ಕಿರುಕುಳ ನಿರಂತರವಾಗಿಯೇ ಇತ್ತು ಅನ್ನೋ ಆರೋಪ...
ಮುಂಡಗೋಡ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತ, ಏಳು ಆಕಳುಗಳು ಸಜೀವ ದಹನ..!
ಮುಂಡಗೋಡ ಪಟ್ಟಣದ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತವಾಗಿದೆ. ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಬರೋಬ್ಬರಿ 7 ಆಕಳುಗಳು ಸಜೀವ ದಹನವಾಗಿ ಸುಟ್ಟು ಕರಕಲಾಗಿವೆ. ಆದ್ರೆ, ಬೆಂಕಿ ತಗುಲಿದ್ದು ಹೇಗೆ ಅಂತಾ ಇನ್ನು ಖಚಿತತೆ ಸಿಕ್ಕಿಲ್ಲ. ಹಳೂರಿನ ಮಂಜುನಾಥ್ ನಾಗೇಶ್ ಶೇಟ್ ಎಂಬುವವರಿಗೆ ಸೇರಿದ, ದನದ ಕೊಟ್ಟಿಗೆಯಲ್ಲಿ ದುರಂತ ಸಂಭವಿಸಿದೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಇಡೀ ದನದ ಕೊಟ್ಟಿಗೆ ಆಕಳುಗಳ ಸಮೇತವಾಗಿಯೇ ಸುಟ್ಟು ಕರಕಲಾಗಿದೆ. ದುರಂತ ಅಂದ್ರೆ ಘಟನೆ ನಡೆದಾಗ ರಾತ್ರಿ ಯಾರಿಗೂ ಗಮನಕ್ಕೆ ಬಂದಿಲ್ಲ, ಬೆಳಿಗ್ಗೆಯಷ್ಟೇ ಘಟನೆ ಬೆಳಕಿಗೆ ಬಂದಿದೆ. ಈ ಅನಾಹುತದಲ್ಲಿ ಹಾನಿಯಾದ ಅಂದಾಜು ಇನ್ನು ಲಭ್ಯವಾಗಿಲ್ಲ. ಸದ್ಯ ಮುಂಡಗೋಡ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾತೂರು ಬಳಿ ಮಿನಿ ಲಾರಿ ಪಲ್ಟಿ, ಲಾರಿಯಡಿ ಸಿಲುಕಿಕೊಂಡ ಚಾಲಕನ ಹೊರತೆಗೆಯಲು ಹರಸಾಹಸ, ಇಬ್ಬರಿಗೆ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಬಳಿಮಿನಿ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಲಾರಿಯಡಿ ಚಾಲಕ ಸಿಲುಕಿಕೊಂಡಿದ್ದು ಚಾಲಕನ ರಕ್ಷಣಾ ಕಾರ್ಯ ನಡಿತಿದೆ. ಜಿಯೋ ಟವರ್ ಕೆಲಸ ಮಾಡಲು ಮುಂಡಗೋಡಿಗೆ ಬಂದಿದ್ದ ಕೃಷ್ಣ ಸಿಂಗನಳ್ಳಿ ಹಾಗೂ ಚಾಲಕ ಶಶಿ, ಶಿರಸಿ ಕಡೆಗೆ ಹೋಗುತ್ತಿದ್ದಾಗ ಮಳೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಮಿನಿ ಲಾರಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಾಲಕ ಲಾರಿಯಡಿಯಲ್ಲೇ ಸಿಲುಕಿಕೊಂಡಿದ್ದು, ನರಳುತ್ತಿದ್ದಾನೆ. ಹೀಗಾಗಿ, ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಕಟ್ಟರ್ ಸಹಾಯದಿಂದ ಚಾಲಕನನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ. ಕಟ್ಟರ್ ನಿಂದ ಕಾರ್ಯಾಚರಣೆ ಮಾಡುವ ವೇಳೆ ಯುವಕನೊಬ್ಬನಿಗೆ ಕಟ್ಟರ್ ತಾಗಿ ಗಾಯವಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿ ಧನರಾಜ್ ಹಾಗೂ ಚಾಲಕ ವಿಜಯ್ ಪಾಟೀಲ್ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಲು ಸ್ಥಳಕ್ಕೆ ಧಾವಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ, ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳಿಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.