ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ ಚಾಲಕರು ಹಾಗೂ ಮಾಲೀಕರು, ಈ ಕೇಸಿನಲ್ಲಿ ನಮ್ಮದೇನೂ ತಪ್ಪಿಲ್ಲ. ಡೀಪೋದಲ್ಲಿ ನಾವು ಬಾಡಿಗೆ ಸಲುವಾಗಿ ಅಧಿಕಾರಿಗಳು ಹೇಳಿದಂತೆ ಲೋಡ್ ಸಾಗಿಸುತ್ತೇವೆ. ಡೀಪೋದಲ್ಲಿ ಅಧಿಕಾರಿಗಳೇ ನಿಂತು ನಾಟಾಗಳ ಲೋಡ್ ಮಾಡಿಸಿರ್ತಾರೆ. ಹೀಗಾಗಿ, ಇದ್ರಲ್ಲಿ ನಮಗೇನೂ ಗೊತ್ತೆ ಇರಲ್ಲ. ನಮ್ಮನ್ನು ಬಲಿ ಮಾಡಬೇಡಿ ಅಂತಾ ಮನವಿ ಮಾಡಿದ್ದಾರೆ. ಇನ್ನು, ಸಾಲಸೋಲ ಮಾಡಿ ಲಾರಿ ಖರೀಧಿಸಿದ್ದು, ನಮ್ಮ ಯಜಮಾನರಿಗೆ ಗೊತ್ತಿಲ್ಲದಂತೆ ಇಷ್ಟೇಲ್ಲ ನಡೆದು ಹೋಗಿದೆ. ನಮಗೆ ಅನ್ಯಾಯವಾಗಿದೆ...
Top Stories
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ ಎರಡು ಲಾರಿಗಳ ಮೂಲಕ ಅಕ್ರಮ ಕಟ್ಟಿಗೆ ಸಾಗಿಸಲಾಗಿತ್ತು. ಹಾಗೆ ಸಾಗಿಸಲಾಗಿದ್ದ ಬೆಲೆಬಾಳುವ “ಮಾಲು” ಖುದ್ದು ಖಾಕಿ ತೊಟ್ಟು ಅರಣ್ಯ ರಕ್ಷಣೆಗೆ ನಿಯೋಜನೆ ಗೊಂಡಿದ್ದವರೇ ಮಾಡಿದ್ದು ಅಂತಾ ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿ, ಆರು ಜನ ಅಧಿಕಾರಿಗಳ ಮೇಲೆ ಇವಾಗ ತೂಗುಕತ್ತಿ ನೇತಾಡುತ್ತಿದ್ದು, ಮೊದಲ ಹಂತವಾಗಿ ಆ ಆರೂ ಜನ ಅಧಿಕಾರಿಗಳನ್ನು ಕಡ್ಡಾಯ ರಜೆ ನೀಡಿ ಹೊರಗಟ್ಟಲಾಗಿದೆ. ಹಾಗಂತ ಇಲಾಖೆಯ ಉನ್ನತ ಮೂಲಗಳು ಪಬ್ಲಿಕ್...
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?
ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ ಇದೆ..! ಶಿರಸಿಯ ಸಮೀಪ ರಾತ್ರೊ ರಾತ್ರಿ..! ಅಸಲು, ಮುಂಡಗೋಡಿನ ಸರ್ಕಾರಿ ಟಿಂಬರ್ ಡೀಪೋದಿಂದ ಪಾಸ್ ಹೊಂದಿದ್ದ ಸಾಗವಾನಿ ನಾಟಾಗಳನ್ನು ಶಿರಸಿಯ ಅಡ್ಡೆಯೊಂದರ ಹೆಸರಲ್ಲಿ ಸಾಗಾಟ ಮಾಡಲಾಗುತ್ತಿತ್ತು. ನಿನ್ನೆ ಅಂದ್ರೆ ಶುಕ್ರವಾರ ರಾತ್ರಿ ಸರಿಸುಮಾರು ಒಂಬತ್ತು ಗಂಟೆಯಷ್ಟೊತ್ತಿಗೆ ಎರಡು ಲಾರಿಗಳಲ್ಲಿ ಭರ್ತಿಗೊಳಿಸಿದ ಮಾಲು ರವಾನೆಯಾಗಿತ್ತು. ಹೀಗಿದ್ದಾಗ, ಆ ಮಾಲಿನ ಜೊತೆ ಜೊತೆಯಲ್ಲೇ ಸರ್ಕಾರಿ ಟಿಂಬರ್ ಡೀಪೋದಲ್ಲಿದ್ದ ಲಕ್ಷಾಂತರ ಮೌಲ್ಯದ ನಾಟಾಗಳನ್ನೂ ತುರುಕಲಾಗಿತ್ತು. ಹೀಗಾಗಿ, ಇಂತಹದ್ದೊಂದು...
ಮುಂಡಗೋಡಿನ ಯುವಕ ಕಣ್ಮರೆ, ಎಲ್ಲಾದ್ರೂ ಸಿಕ್ಕರೆ ಮಾಹಿತಿ ನೀಡಿ..!
ಮುಂಡಗೋಡಿನ ಯುವಕನೋರ್ವ ನಾಪತ್ತೆಯಾಗಿದ್ದಾನೆ. 23 ವರ್ಷದ ಯುವಕ ಜೂನ್ 3 ರಿಂದಲೇ ನಾಪರ್ತೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ, ನಾಪತ್ತೆಯಾಗಿರೋ ಯುವಕನನ್ನು ಹುಡುಕಿಕೊಡಿ ಅಂತಾ ಪೋಷಕರು ಮನವಿ ಮಾಡಿದ್ದಾರೆ. ಅಂದಹಾಗೆ, ಯುವಕನ ಹೆಸರು ಸಿದ್ದಾರೂಢ ಗೌಳಿ (23) ಈತ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿಯಾಗಿದ್ದು ಕಳೆದ ಜೂನ್ 3 ರಂದು ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವನು ಎರಡು ದಿನ ಕಳೆದರೂ ವಾಪಸ್ ಮನೆಗೆ ಬಂದಿಲ್ಲ. ಹೀಗಾಗಿ, ಕುಟುಂಬಸ್ಥರು ಪರಿಚಯವಿರುವ ಎಲ್ಲಾ ಕಡೆ ತಿರುಗಾಡಿ ಯುವಕನನ್ನು ಹುಡುಕಿದ್ದಾರೆ. ಆದ್ರೆ ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ, ಆತಂಕದಲ್ಲಿರೋ ಪೋಷಕರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದಯವಿಟ್ಟು ಈ ಮೇಲೆ ಕಾಣಿಸಿದ ಪೋಟೋದಲ್ಲಿರೊ ಯುವಕ ಕಂಡರೆ ಈ ನಂಬರಿಗೆ ಕಾಲ್ ಮಾಡಿ ಮಾಹಿತಿ ನೀಡಿ 8197524063
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!
ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಕೊಲೆಯಾಗಿದ್ದ ಯುವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದಿದ್ದರು. ಆದ್ರೆ ಈ ಪ್ರಕರಣ ಸಾಕಷ್ಟು ಕುತೂಹಲ ಮೂಡಿಸಿತ್ತು. ಇದೇ 7ರಂದು ಯುವಕ ಹಸೆಮಣೆ ಏರಬೇಕಿದ್ದ. ಇಷ್ಟರಲ್ಲಿ ಯುವಕನನ್ನು ಕೊಲೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿದ್ದ ಕಲಘಟಗಿ ಠಾಣೆ ಪೊಲೀಸರು ಕೊಲೆಗೆ ಕಾರಣ ಹಾಗೂ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವಕ...
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!
ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!
ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ ತಾವಗೇರಿ ಯುವತಿಯ ಜೊತೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ, ಮದುವೆಯ ಸಂಭ್ರಮಕ್ಕೆ ಅಣಿಯಾಗಿದ್ದ ಯುವಕ. ಆದ್ರೆ, ಅದರೊಳಗೆ ಭೀಕರವಾಗಿ ಹತ್ಯೆಯಾಗಿದ್ದು ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಜಿನ್ನೂರು ಗ್ರಾಮ ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸನವಳ್ಳಿಗಷ್ಟೇ ಸೀಮಿತವಾಯ್ತಾ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧದ ಸಮರ..? ಸಾಹೇಬ್ರೆ, ತಾಲೂಕಿನೆಲ್ಲೆಡೆ ಇದೆ ಅಕ್ರಮ ಭಟ್ಟಿಗಳು..! ಕ್ರಮ ಯಾವಾಗ..?
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಹೆಜ್ಜೆಗೊಂದರಂತೆ ಇರೋ ಅಕ್ರಮ ಇಟ್ಟಿಗೆ ಭಟ್ಟಿಗಳ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಸಾಹೇಬ್ರು ಸಮರ ಸಾರಿದ್ದಾರೆ. ನಿನ್ನೆ ಇಡೀ ಸನವಳ್ಳಿಯ ಅಕ್ರಮ ಇಟ್ಟಿಗೆ ಭಟ್ಟಿ ಮಾಲೀಕರಿಗೆ ಛಳಿ ಬಿಡಿಸಿದ್ದಾರೆ. ಹೀಗಾಗಿ, ತಾಲೂಕಿನ ಮಂದಿ ತಹಶೀಲ್ದಾರರ ಖಡಕ್ ಕ್ರಮಕ್ಕೆ ಶ್ಲಾಘನೆ ವ್ಯಕ್ತ ಪಡಿಸ್ತಿದಾರೆ. ನಿಜ..! ತಾಲೂಕಿನ ಸನವಳ್ಳಿಯಲ್ಲಿ ಇಟ್ಟಿಗೆ ಭಟ್ಟಿಗಳ ರಾಜಾರೋಶತನಕ್ಕೆ ಕಡಿವಾಣ ಹಾಕುವ ಅವಶ್ಯಕತೆ ಇದ್ದೇ ಇದೆ. ಅದನ್ನ ಇಡೀ ತಾಲೂಕಿನ ಜನ ಬಯಸಿದ್ರು. ಕಾರಣವೆಂದ್ರೆ, ಅಲ್ಲಿ ಸಾಕಷ್ಟು ಕಾನೂನುಗಳ ಉಲ್ಲಂಘನೆ ಆಗ್ತಿತ್ತು. ಆದ್ರೆ, ಇದೇಲ್ಲ ಈ ಹಿಂದಿನ ಎಲ್ಲಾ ಅಧಿಕಾರಿಗಳಿಗೂ ತಿಂಗಳಿಗೆ ಒಂದಿಷ್ಟು ಕೈ ಬಿಸಿ ಮಾಡಿದ್ರೆ ಮುಗೀತು ನಮ್ಮನ್ನ ಕೇಳೋರ್ಯಾರು ಅನ್ನೋ ಮನಸ್ಥಿತಿ ಅಕ್ರಮ ಇಟ್ಟಿಗೆ ಅಡ್ಡೆಗಳ ಮಾಲೀಕರಿಗೆ ಗಟ್ಟಿ ದೈರ್ಯ ತುಂಬಿತ್ತು. ಹೀಗಾಗಿ, ಎಲ್ಲೆಂದರಲ್ಲಿ ನಾಯಿ ಕೊಡೆಗಳಂತೆ ಭಟ್ಟಿಗಳು ಹೊಗೆ ಉಗುಳುತ್ತಿದ್ದವು. ಅದೇಷ್ಟೋ ಅರಣ್ಯ ಸಂಪತ್ತು ಲೂಟಿಯಾಗ್ತಿತ್ತು. ಪರಿಸರಕ್ಕೆ ಧಕ್ಕೆ ಯಾಗ್ತಿತ್ತು. ಆದ್ರೆ, ಸಧ್ಯ ತಹಶೀಲ್ದಾರ್ ಸಾಹೇಬ್ರು ಇಂತಹ ಅಕ್ರಮಿಗಳ ಬೆನ್ನು ಬಿದ್ದಿದ್ದಾರೆ...
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ ಬೆಟಾಲಿಯನ್ ಜೊತೆ ಫಿಲ್ಡಿಗೆ ಇಳಿದು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲು ಮುಂದಾಗಿದ್ರು. ನಾಲ್ಕೈದು ಇಟ್ಟಿಗೆ ಭಟ್ಟಿಗಳನ್ನು ತೆರವುಗೊಳಿಸುತ್ತಿದ್ದಾಗ ಮಾಲೀಕರು ಎಚ್ಚೆತ್ತುಕೊಂಡು ನಾವೇ ತೆರವು ಮಾಡ್ತಿವಿ ಅಂತಾ ಭರವಸೆ ನೀಡಿದ ಕೂಡಲೇ ಕಾರ್ಯಾಚರಣೆಗೆ ವಿರಾಮ ನೀಡಲಾಯ್ತು. ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಸೇರಿದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು. ಒಟ್ನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಶಂಕರ್...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ 16.05.2023 ರಂದು ಹಾಡಹಗಲೇ ಎತ್ತಂಗಡಿ ಮಾಡಿದ್ದರು. ಹೀಗಾಗಿ ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಮುಂಡಗೋಡ ಪೊಲೀಸರು, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ, ಜಯಕುಮಾರ್, ಶಿರಸಿ ಡಿವೈಎಸ್ಪಿ ಗಣೇಶ ಕೆ.ಎಲ್. ರವರ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದಪ್ಪ ಎಸ್.ಸಿಮಾನಿ, ಪಿಎಸ್ಐ ಯಲ್ಲಾಲಿಂಗ ಕುನ್ನೂರು ರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಹೀಗಾಗಿ ಈ...